Homeಕರ್ನಾಟಕರಾಜ್ಯ ಬಜೆಟ್-2022: ಜನರ ನಿರೀಕ್ಷೆ ಏನು? ಏನಾಗಲಿದೆ ಈ ವರ್ಷದ ಆಯವ್ಯಯ?

ರಾಜ್ಯ ಬಜೆಟ್-2022: ಜನರ ನಿರೀಕ್ಷೆ ಏನು? ಏನಾಗಲಿದೆ ಈ ವರ್ಷದ ಆಯವ್ಯಯ?

- Advertisement -
- Advertisement -

ಕೇಂದ್ರ ಬಜೆಟ್ ಬೆನ್ನಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ (ಮಾರ್ಚ್ 04) ತಮ್ಮ ಮೊದಲ ಪೂರ್ಣ ಪ್ರಮಾಣದ ಬಜೆಟ್ ಅನ್ನು ಅಧಿವೇಶನದಲ್ಲಿ ಮಂಡಿಸಲಿದ್ದಾರೆ. ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಚುನಾವಣೆ ದೃಷ್ಟಿಕೋನದಿಂದ ಮತ್ತು ಕೊರೊನಾದಿಂದ ಈಗಾಗಲೇ ಪಾತಾಳಕ್ಕೆ ಕುಸಿದಿರುವ ರಾಜ್ಯದ ಆರ್ಥಿಕತೆ ಸುಧಾರಿಸುವ ನಿಟ್ಟಿನಿಂದಲೂ ಈ ವರ್ಷದ ಬಜೆಟ್ ಮೇಲೆ ಜನಸಾಮಾನ್ಯರಿಗೆ ಸಾಕಷ್ಟು ನಿರೀಕ್ಷೆಗಳಿವೆ.

ರೈತರಿಗೆ ನೆರವಾಗಲಿದೆಯೇ ಬಜೆಟ್?

ಕಳೆದ ಹಲವು ವರ್ಷಗಳಿಂದ ರಾಜ್ಯದಲ್ಲಿ ಅಕಾಲಿಕ ಮಳೆ ತೀರಾ ಸಾಮಾನ್ಯವಾದ ಸಂಗತಿ ಎಂಬಂತಾಗಿದೆ. 2021 ರಿಂದ ಈವರೆಗೆ ಅಕಾಲಿಕ ಮಳೆಗೆ ರಾಣಿಬೆನ್ನೂರಿನಲ್ಲಿ 892.3 ಹೆಕ್ಟೇರ್ ಭೂಮಿಯಲ್ಲಿ ಬೆಳೆದಿದ್ದ ಹತ್ತಿ, ಭತ್ತ, ಶೇಂಗಾ, ಜೋಳ ಸೇರಿದಂತೆ ನಾನಾ ಬೆಳೆಗಳು ನಾಶವಾಗಿವೆ. ಧಾರವಾಡ ಜಿಲ್ಲೆಯಲ್ಲಿ 90 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಭಿತ್ತನೆ ಮಾಡಲಾಗಿದ್ದ ನಾನಾ ಬೆಳೆಗಳು ಕೈಗೆಟುಕದಂತಾಗಿದೆ.

ಗದಗ, ಲಕ್ಷ್ಮೇಶ್ವರ ಭಾಗದಲ್ಲಿ ನೂರಾರು ಹೆಕ್ಟೇರ್‌ನಲ್ಲಿ ಬೆಳೆಯಲಾಗಿದ್ದ ಶೇಂಗಾ, ಈರುಳ್ಳಿ ಮತ್ತು ಜೋಳವೂ ಮಣ್ಣು ಪಾಲಾಗಿದೆ. ಇನ್ನೂ ಮಲೆನಾಡಿನ ಭಾಗದಲ್ಲಿ ಅಡಿಕೆ ಬೆಳೆಗಾರರು ಕೋಂಟ್ಯಾಂತರ ರೂ. ನಷ್ಟ ಅನುಭವಿಸಿದ್ದಾರೆ. ರಾಜ್ಯದ ಇತರೆ ಭಾಗದಲ್ಲಿರುವ ರೈತರ ಸಮಸ್ಯೆಯೂ ಇದಕ್ಕಿಂತ ಭಿನ್ನವಾಗೇನು ಇಲ್ಲ.

ಈ ನಡುವೆ ರೈತರಿಗೆ ರಾಜ್ಯ ಸರ್ಕಾರ ಸರಿಯಾದ ಸಮಯಕ್ಕೆ ವಿದ್ಯುತ್ ನೀಡಲಾಗುತ್ತಿಲ್ಲ. ಗೊಬ್ಬರ ಬಿತ್ತನೆ ಬೀಜದ ಬೆಲೆ ಇಳಿಕೆ ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ಸಾಲಮನ್ನಾ ಸೇರಿದಂತೆ ರಾಜ್ಯದ ಬಜೆಟ್ ಮೇಲೆ ರೈತರಿಗೆ ಸಾಕಷ್ಟು ನಿರೀಕ್ಷೆ ಮತ್ತು ಬೇಡಿಕೆಗಳಿವೆ. ಆದರೆ, ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಹೇಗೆ ಸ್ಪಂದಿಸಲಿದೆ ಎಂಬುದು ಬಜೆಟ್ ನಂತರ ಸ್ಪಷ್ಟವಾಗಲಿದೆ.

ಕಾರ್ಮಿಕರ ಕೂಗೇನು?

ಕೊರೊನಾ ಕಾರಣದಿಂದಾಗಿ ಅಸಂಘಟಿತ ಕಾರ್ಮಿಕ ವಲಯ ಸಾಕಷ್ಟು ಸಮಸ್ಯೆಯನ್ನು ಸಾಕಷ್ಟು ಸಾವು-ನೋವುಗಳನ್ನು ಎದುರಿಸಿದೆ. ಈ ವಿಭಾಗದಲ್ಲಿನ ನಿರುದ್ಯೋಗ ಸಮಸ್ಯೆ ಈವರೆಗೆ ಬಗೆಹರಿದಂತೆ ಕಂಡುಬಂದಿಲ್ಲ. ಅಲ್ಲದೆ, ಕಾರ್ಮಿಕ ಇಲಾಖೆ ಕೊರೊನಾ ಸಂದರ್ಭದಲ್ಲಿ ಅಸಂಘಟಿತ ವಲಯಕ್ಕೆ ಉತ್ತಮ ನೆರವನ್ನೂ ನೀಡಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.

ಸೂಕ್ತ ಕೆಲಸ ಮತ್ತು ಕೂಲಿ ಇಲ್ಲದೆ ದಿನಗೂಲಿಗಳು ಮತ್ತು ಕಟ್ಟಡ ಕಾರ್ಮಿಕರು ಕಂಗಾಲಾಗಿದ್ದಾರೆ. ವಸತಿ ರಹಿತ ಕಾರ್ಮಿಕರಿಗೆ ಸೂರು ನೀಡುವುದಕ್ಕೆಂದೆ ಕೇಂದ್ರ-ರಾಜ್ಯ ಸರ್ಕಾರಗಳ ನಾನಾ ಯೋಜನೆಗಳು ಇವೆ. ಆದರೆ, ಸೂರು ಮಾತ್ರ ಖಚಿತವಾಗುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ಈ ವರ್ಷದ ಬಜೆಟ್‌ನಲ್ಲಿ ಅಸಂಘಟಿತ ವಲಯಕ್ಕೆ ಸರ್ಕಾರದ ಕೊಡುಗೆ ಏನು? ಎಂಬುದರ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ.

ಸಣ್ಣ-ಮಧ್ಯಮ ಉದ್ಯಮಗಳ ನಿರೀಕ್ಷೆ ಏನು?

ರಾಜ್ಯದಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವ ಕ್ಷೇತ್ರಗಳ ಪೈಕಿ ಸಣ್ಣ-ಮದ್ಯಮ ಉದ್ಯಮಗಳ ಪಾತ್ರ ದೊಡ್ಡದು. ಆದರೆ, ಜಿಎಸ್‌ಟಿ ಜಾರಿಯಿಂದಾಗಿ ಅನೇಕ ಸಣ್ಣ ಉದ್ಯಮಗಳು ಅವನತಿಯೆಡೆಗೆ ದೂಡಿತ್ತು. ಇನ್ನೂ ಕೊರೊನಾದಿಂದ ಉಂಟಾಗಿದ್ದ ಆರ್ಥಿಕ ಸಂಕಷ್ಟದಿಂದ ಈವರೆಗೆ ಅನೇಕ ಉದ್ಯಮಗಳು ಚೇತರಿಸಿಕೊಂಡಿಲ್ಲ. ಹೀಗಾಗಿ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಚೇತರಿಕೆಗೆ ರಾಜ್ಯ ಸರ್ಕಾರ ಯಾವ ಪ್ಯಾಕೇಜ್ ಘೋಷಿಸಲಿದೆ? ಎಂಬುದೂ ಸಹ ಕುತೂಹಲಕ್ಕೆ ಕಾರಣಾಗಿದೆ.

ಜನ ಸಾಮಾನ್ಯರ ಬೇಡಿಕೆ ಏನು?

ರಾಜ್ಯದಲ್ಲಿ ನಿರುದ್ಯೋಗದ ಸಮಸ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಶಿಕ್ಷಿತ ಯುವಕರು ಕೆಲಸವಿಲ್ಲದೆ ಕಂಗಾಲಾಗಿದ್ದಾರೆ. ಮತ್ತೊಂದೆಡೆ ದಿನೋಪಯೋಗಿ ವಸ್ತುಗಳ ಬೆಲೆ ದಿನೇ ದಿನೇ ಏರುತ್ತಿದ್ದು ಕೆಳ ಮತ್ತು ಮಧ್ಯಮ ವರ್ಗದ ಜನ ಬದುಕುವುದೇ ದುಸ್ಥರವಾಗಿದೆ. ಪೆಟ್ರೋಲ್ ಬೆಲೆಯಲ್ಲೂ ಸಹ ಪಂಚರಾಜ್ಯಗಳ ಚುನಾವಣೆ ಬಳಿಕ ಏರಿಕೆ ಕಾಣಲಿದೆ ಎನ್ನಲಾಗುತ್ತಿದೆ. ಇದು ನಿಜವಾದರೆ ಜನ ಸಾಮಾನ್ಯರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವುದು ಖಚಿತ.

ಹೀಗಾಗಿ ರಾಜ್ಯ ಸರ್ಕಾರ ಉದ್ಯೋಗ ಸೃಷ್ಟಿಗೆ ಯಾವ ಕ್ರಮ ತೆಗೆದುಕೊಳ್ಳಲಿದೆ? ಬೆಲೆ ನಿಯಂತ್ರಣಕ್ಕೆ ಮುಂದಾಗಲಿದೆಯೇ? ಪೆಟ್ರೋಲ್ ಮೇಲಿನ ರಾಜ್ಯ ತೆರಿಗೆಯನ್ನು ಇಳಿಸಲಿದೆಯೇ? ಇದರ ಜೊತೆಗೆ ಯಾವೆಲ್ಲಾ ಅಗತ್ಯ ವಸ್ತುಗಳ ಮೇಲಿನ ತೆರಿಗೆಯನ್ನು ಇಳಿಸಲಿದೆ? ಎಂದು ಜನ ಕುತೂಹಲದಿಂದ ಕಾದು ಕುಳಿತಿದ್ದಾರೆ.


ಇದನ್ನು ಓದಿರಿ:ಕೇಂದ್ರ ಸರ್ಕಾರ ಮತ್ತು ಗೋದಿ ಮಿಡಿಯಾಗಳಿಗೆ ಛೀಮಾರಿ ಹಾಕುತ್ತಿರುವ ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...