Homeಕರ್ನಾಟಕರಾಜ್ಯ ಬಜೆಟ್ | 'ಫಾಕ್ಸ್‌ಕಾನ್' ಕಂಪನಿಗೆ ₹6,900 ಕೋಟಿ ಪ್ರೋತ್ಸಾಹಕ ಘೋಷಿಸಿದ ಸಿದ್ದರಾಮಯ್ಯ ಸರ್ಕಾರ!

ರಾಜ್ಯ ಬಜೆಟ್ | ‘ಫಾಕ್ಸ್‌ಕಾನ್’ ಕಂಪನಿಗೆ ₹6,900 ಕೋಟಿ ಪ್ರೋತ್ಸಾಹಕ ಘೋಷಿಸಿದ ಸಿದ್ದರಾಮಯ್ಯ ಸರ್ಕಾರ!

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.7) 4 ಲಕ್ಷ ಕೋಟಿ ರೂಪಾಯಿ (409549) ಮೊತ್ತದ ರಾಜ್ಯ ಬಜೆಟ್ ಮಂಡಿಸಿದ್ದಾರೆ.

ಬಜೆಟ್‌ನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ಘೋಷಣೆಗಳನ್ನು ಮಾಡಲಾಗಿದೆ. ಈ ಪೈಕಿ ದೇವನಹಳ್ಳಿ ಕೈಗಾರಿಕಾ ಪ್ರದೇಶದ ‘ಫಾಕ್ಸ್‌ಕಾನ್’ (Foxconn) ಕಂಪನಿಯ ಮೊಬೈಲ್ ಫೋನ್ ಉತ್ಪಾದನಾ ಘಟಕಕ್ಕೆ ಇಎಸ್‌ಡಿಎಂನ ನೀತಿಯಡಿ 6,970 ಕೋಟಿ ರೂಪಾಯಿಗಳ ಪ್ರೋತ್ಸಾಹವನ್ನು ನೀಡುವುದು ಒಂದು.

“ಫಾಕ್ಸ್‌ಕಾನ್ ಕಂಪನಿಯ ಮೊಬೈಲ್ ಫೋನ್‌ಗಳ ಉತ್ಪಾದನಾ ಘಟಕವು 21,911 ಕೋಟಿ ರೂಪಾಯಿ ಬಂಡವಾಳ ಹೂಡಿಕೆಯೊಂದಿಗೆ ಪ್ರಾರಂಭಗೊಂಡಿದೆ. ಇದರಿಂದ 50,000 ಉದ್ಯೋಗ ಸೃಜನೆಯನ್ನು ನಿರೀಕ್ಷಿಸಲಾಗಿದೆ” ಎಂದು ಸರ್ಕಾರ ಬಜೆಟ್ ಪ್ರತಿಯಲ್ಲಿ ಹೇಳಿದೆ.

ಸರ್ಕಾರ ಭಾರೀ ಮೊತ್ತದ ಪ್ರೋತ್ಸಾಹಕ ಘೋಷಣೆ ಮಾಡಿರುವ ಈ ಫಾಕ್ಸ್‌ಕಾನ್ ಕಂಪನಿ ಮೇಲೆ ಭಾರತ ಸೇರಿದಂತೆ ಜಾಗತಿಕವಾಗಿ ಹಲವು ಆರೋಪಗಳಿವೆ. ವಿಶೇಷವಾಗಿ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿದ ಆರೋಪಗಳು ಈ ಕಂಪನಿ ಮೇಲಿದೆ.

ಉದ್ಯೋಗಿಗಳ ಆತ್ಮಹತ್ಯೆ : 

ಚೀನಾದಾದ್ಯಂತ ಕಂಪನಿಯ ಘಟಕಗಳಲ್ಲಿ ಕೆಲಸದ ಒತ್ತಡ, ಕಂಪನಿಯ ಕಿರುಕುಳ ಇತ್ಯಾದಿ ಕಾರಣಗಳಿಗೆ ಹಲವು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

ವಿವಿಧ ಮೂಲಗಳಿಂದ ನಮಗೆ ಲಭ್ಯವಾದ ಮಾಹಿತಿ ಪ್ರಕಾರ, 2010 ಮತ್ತು ಅದರ ನಂತರ ಫಾಕ್ಸ್‌ಕಾನ್‌ ಕಂಪನಿಯಲ್ಲಿ ಉದ್ಯೋಗಿಗಳ ಆತ್ಮಹತ್ಯೆ ಪ್ರಕರಣಗಳು ಉಲ್ಬಣಿಸಿವೆ.

ಚೀನಾನ ಶೆನ್‌ಝೆನ್‌ನಲ್ಲಿರುವ ಫಾಕ್ಸ್‌ಕಾನ್‌ ಸಿಟಿ ಇಂಡಸ್ಟ್ರಿಯಲ್ ಪಾರ್ಕ್‌ನಲ್ಲಿ ಕಡಿಮೆ ವೇತನ, ಅತ್ಯಂತ ಕ್ರೂರ ಕೆಲಸದ ವಾತಾವರಣದಿಂದ ಮಾನಸಿ ಖಿನ್ನತೆ ಮತ್ತು ಅವಮಾನಕ್ಕೆ ಒಳಗಾಗಿ ಹೆಚ್ಚಿನ ಉದ್ಯೋಗಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕೇವಲ ಶೆನ್‌ಝೆನ್‌ ಘಟಕ ಮಾತ್ರವಲ್ಲದೆ, ಚೀನಾದ ಇತರ ಫಾಕ್ಸ್‌ಕಾನ್‌ ಘಟಕಗಳಲ್ಲೂ ಉದ್ಯೋಗಿಗಳು ಸಾವಿಗೆ ಶರಣಾದ ವರದಿಗಳಿವೆ. ಈ ಕುರಿತು ಫಾಕ್ಸ್‌ಕಾನ್ ಕಂಪನಿಯ ಗ್ರಾಹಕರಾದ ಆಪಲ್ ಮತ್ತು ಹೆವ್ಲೆಟ್ ಪ್ಯಾಕರ್ಡ್ (ಹೆಚ್‌ಪಿ) ತನಿಖೆಯನ್ನೂ ಕೈಗೊಂಡಿವೆ.

2010ರ ಮುನ್ನ ಅಂದರೆ, 2007ರಲ್ಲಿ ಒಬ್ಬರು ಮತ್ತು 2009ರಲ್ಲಿ ಒಬ್ಬರು ಫಾಕ್ಸ್‌ಕಾನ್ ಉದ್ಯೋಗಿ ಚೀನಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. 2007ರಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಶವ ಕಂಪನಿಯ ಸ್ನಾನಗೃಹದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

2009ರಲ್ಲಿ, ತನ್ನ ಬಳಿ ಇದ್ದ ಐಫೋನ್ ಮೂಲಮಾದರಿ ಕಳೆದುಹೋದ ನಂತರ ಅಪಾರ್ಟ್‌ಮೆಂಟ್ ಕಟ್ಟಡದಿಂದ ಜಿಗಿದು ಫಾಕ್ಸ್‌ಕಾನ್ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಯುವ ಮೊದಲು, ಫಾಕ್ಸ್‌ಕಾನ್ ಉದ್ಯೋಗಿಗಳು ತನ್ನನ್ನು ಥಳಿಸಿ ಮನೆಯನ್ನು ಶೋಧಿಸಿದ್ದಾರೆ ಎಂದು ಅವರು ಹೇಳಿಕೊಂಡಿದ್ದರು ಎಂದು ವರದಿಯಾಗಿದೆ.

2010ರಲ್ಲಿ ಸುಮಾರು 15 ಜನರು ಫಾಕ್ಸ್‌ಕಾನ್ ಉದ್ಯೋಗಿಗಳು ಕಟ್ಟಡಗಳಿಂದ ಹಾರಿದ್ದಾರೆ. ಈ ಪೈಕಿ ಒಬ್ಬರು ಸೊಂಟದ ಕೆಳಗಿನ ಪಾರ್ಶವಾಯುಗೆ ಒಳಗಾಗಿದ್ದಾರೆ. ಇನ್ನಿಬ್ಬರ ಬಗ್ಗೆ ಮಾಹಿತಿಯಿಲ್ಲ. ಉಳಿದವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

2011ರಲ್ಲಿ ಮೂವರು 2012ರಲ್ಲಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಉಲ್ಲೇಖವಿದೆ. ಹೆಚ್ಚುವರಿಯಾಗಿ, ಜನವರಿ 2, 2012 ರಂದು ಪ್ರತಿಭಟನೆಯಲ್ಲಿ 150 ಚೀನೀ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು ಎಂದು ಹೇಳಲಾಗಿದೆ.

ಇನ್ನು 2014, 2016 ಮತ್ತು 2018ರಲ್ಲಿ ತಲಾ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆಉಲ್ಲೇಖವಿದೆ.

ಜನಾಂಗೀಯ ತಾರತಮ್ಯ :

ಚೀನಾದಲ್ಲಿ ಫಾಕ್ಸ್‌ಕಾನ್ ತನ್ನ ನೇಮಕಾತಿ ಪದ್ಧತಿಗಳಲ್ಲಿ ಜನಾಂಗೀಯ ತಾರತಮ್ಯದ ಆರೋಪಗಳು ಕೇಳಿ ಬಂದಿವೆ. ಅಲ್ಲಿ ಉಯ್ಘರ್‌ಗಳು, ಟಿಬೆಟಿಯನ್ನರು, ಯು ಮತ್ತು ಹುಯಿ ಮುಂತಾದ ಜನಾಂಗೀಯ ಅಲ್ಪಸಂಖ್ಯಾತ ಗುಂಪುಗಳನ್ನು ನೇಮಕಾತಿಯಿಂದ ಹೊರಗಿಡಲಾಗಿದೆ ಎಂದು ವರದಿಯಾಗಿದೆ.

ಚೀನಾದಲ್ಲಿ ಕೆಲಸದ ವಾತಾವರಣ

ಚೀನಾದ ಘಟಕಗಳಲ್ಲಿನ ಕೆಲಸದ ವಾತಾವರಣಕ್ಕೆ ಸಂಬಂಧಿಸಿದಂತೆ ಫಾಕ್ಸ್‌ಕಾನ್ ವಿರುದ್ದ ಹಲವು ಆರೋಪಗಳಿವೆ. ಕಂಪನಿ ಈ ಕಾರಣಕ್ಕೆ ಜಾಗತಿಕ ಮಟ್ಟದಲ್ಲಿ ಟೀಕೆಗೆ ಒಳಗಾಗಿದೆ. ವಿರಾಮ ನೀಡದೆ ಸುದೀರ್ಘ ಸಮಯ ಉದ್ಯೋಗಿಗಳನ್ನು ದುಡಿಸಿಕೊಳ್ಳಲಾಗುತ್ತಿದೆ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗುವ ಅವರು ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದಾರೆ ಎನ್ನಲಾಗಿದೆ.

ಕಂಪನಿಯಲ್ಲಿ ದೊಡ್ಡ ಮಟ್ಟದ ಉತ್ಪಾದನಾ ಗುರಿಯನ್ನು ಉದ್ಯೋಗಿಗಳಿಗೆ ನೀಡಲಾಗುತ್ತಿದೆ. ಅದನ್ನು ಸಾಧಿಸಲು ವಿರಾಮವಿಲ್ಲದ ಕೆಲಸ ಮಾಡಿಸಲಾಗುತ್ತಿದೆ. ಕಂಪನಿ ಉದ್ಯೋಗಿಗಳ ಯೋಗಕ್ಷೇಮದ ಬಗ್ಗೆ ಕಾಳಜಿವಹಿಸುತ್ತಿಲ್ಲ. ಕಂಪನಿಯ ಕೆಲಸದ ವಾತಾವರಣ ಒಂದು ರೀತಿಯಲ್ಲಿ ಉದ್ಯೋಗಿಗಳಿಗೆ ‘ನರಕದಂತಿದೆ’ ಎಂದು ಆರೋಪಿಸಲಾಗಿದೆ.

ವಿವಾಹಿತ ಮಹಿಳೆಯರ ನೇಮಕಕ್ಕೆ ನಿರಾಕರಣೆ :

ತಮಿಳುನಾಡಿನ ಚೆನ್ನೈ ಸಮೀಪದ ಶ್ರೀಪೆರಂಬದೂರ್‌ನಲ್ಲಿರುವ ಫಾಕ್ಸ್‌ಕಾನ್‌ ಘಟಕದಲ್ಲಿ ವಿವಾಹಿತರ ಮಹಿಳೆಯರ ನೇಮಕಕ್ಕೆ ನಿರಾಕರಿಸಲಾಗುತ್ತಿದೆ ಎಂದು 2024ರ ಜೂನ್ 25ರಂದು ರಾಯಿಟರ್ಸ್‌ ಸುದ್ದಿ ಸಂಸ್ಥೆ ವರದಿಯೊಂದನ್ನು ಪ್ರಕಟಿಸಿತ್ತು.

ಅವಿವಾಹಿತ ಮಹಿಳೆಯರಿಗೆ ಹೋಲಿಸಿದರೆ ವಿವಾಹಿತರಿಗೆ ಹೆಚ್ಚು ಕೌಟುಂಬಿಕ ಜವಾಬ್ದಾರಿಗಳಿವೆ ಎಂಬ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆ ಎಂದು ರಾಯಟರ್ಸ್‌ ತನಿಖಾ ವರದಿ ಹೇಳಿತ್ತು.

ಫಾಕ್ಸ್‌ಕಾನ್ ಕಂಪನಿಗೆ ಉದ್ಯೋಗ ಕೇಳಿ ಬರುವ ವಿವಾಹಿತ ಮಹಿಳೆಯರಿಗೆ ಸಂಸ್ಥೆಯ ಆವರಣದೊಳಕ್ಕೆ ಪ್ರವೇಶಿಸಲೂ ಅನುಮತಿ ನೀಡುತ್ತಿಲ್ಲ. ಕಂಪನಿಯ ಗೇಟ್ ಒಳಗೆ ಪ್ರವೇಶಿಸುವ ಮುನ್ನವೇ ಅಲ್ಲಿನ ಭದ್ರತಾ ಸಿಬ್ಬಂದಿ ವೈವಾಹಿಕ ಸ್ಥಿತಿಯ ಬಗ್ಗೆ ಕೇಳುತ್ತಾರೆ ಎಂದು ವರದಿ ತಿಳಿಸಿತ್ತು.

ವಿವಾಹಿತ ಮಹಿಳೆಯರು ಕೌಟುಂಬಿಕ ಕರ್ತವ್ಯಗಳು, ಗರ್ಭಧಾರಣೆ ಮತ್ತು ಹೆಚ್ಚು ಗೈರಾಗುತ್ತಾರೆ ಎಂಬ ಕಾರಣಗಳನ್ನು ನೀಡಿ ಕಂಪನಿಯು ಉದ್ಯೋಗ ನೀಡುತ್ತಿಲ್ಲ ಎಂದು ಅಲ್ಲಿನ ಹಾಲಿ ಮತ್ತು ಮಾಜಿ ಉದ್ಯೋಗಿಗಳನ್ನು ಉಲ್ಲೇಖಿಸಿ ವರದಿ ರಾಯಿಟರ್ಸ್ ವರದಿ ಮಾಡಿತ್ತು.

ಈ ವರದಿ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಒಳಗಾಗಿತ್ತು. ಕೇಂದ್ರ ಸರ್ಕಾರ, ಕೇಂದ್ರ ಮಾನವ ಹಕ್ಕುಗಳ ಆಯೋಗ ಈ ಕುರಿತು ಫಾಕ್ಸ್‌ಕಾನ್‌ ಕಂಪನಿಯಿಂದ ವರದಿ ಕೇಳಿತ್ತು.

ನುಡಿದಂತೆ ನಡೆಯದ ಸರ್ಕಾರ : ಎಸ್‌ ವರಲಕ್ಷ್ಮಿ

“ಸಿದ್ದರಾಮಯ್ಯ ಅವರು ಕಳೆದ ಬಾರಿ ಮಂಡಿಸಿದ ಬಜೆಟ್‌ನಲ್ಲಿ ಜಿಂದಾಲ್ ಸೇರಿದಂತೆ ಇತರ ಕಾರ್ಪೋರೇಟ್ ಕಂಪನಿಗಳಿಗೆ ಹಣ ಮೀಸಲಿಟ್ಟಿದ್ದರು. ಈ ಬಾರಿಯೂ ಕಾರ್ಪೋರೇಟ್ ಪರವಾದ ಬಜೆಟ್ ಮಂಡಿಸಿದ್ದಾರೆ. ಬಡಜನರ, ಶ್ರಮಿಕರ ಹಾಗು ರೈತರಿಗೆ ನಿರಾಶೆ ಮೂಡಿಸಿದ ಬಜೆಟ್ ಇದಾಗಿದೆ. ಉದ್ಯೋಗಿಗಳು, ಕಾರ್ಮಿಕರಿಗೆ ವೇತನ ಕೊಡಲು ಮತ್ತು ಇತರ ಸೌಲಭ್ಯಗಳನ್ನು ಒದಗಿಸಲು ದುಡ್ಡಿಲ್ಲ ಎನ್ನುವ ಸರ್ಕಾರ ಕಾರ್ಪೋರೇಟ್ ಕಂಪನಿಗಳಿಗೆ ಕೇಳದೆ ಕೊಡುತ್ತಿದೆ. ರೈತರು, ಕಾರ್ಮಿಕರು ಮುಂದಿಟ್ಟಿರುವ ಬೇಡಿಕಗಳನ್ನು ಸರ್ಕಾರ ಬಜೆಟ್‌ನಲ್ಲಿ ಈಡೇರಿಸಿಲ್ಲ. ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸುವ ಅವಕಾಶ ರಾಜ್ಯ ಸರ್ಕಾರಕ್ಕೆ ಇಟ್ಟಿಲ್ಲ. ಒಟ್ಟಿನಲ್ಲಿ ಸಾರ್ವಜನಿಕರಿಗೆ ಹಾಗೂ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿ ಖಾಸಗಿ ಕಾರ್ಪೊರೇಟ್ ಕಂಪನಿಗಳಿಗೆ ಲಾಭ ಖಾತರಿ ಪಡಿಸುವ ಬಜೆಟ್ ಇದಾಗಿದೆ” ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ಎಸ್‌. ವರಲಕ್ಷ್ಮಿ ಟೀಕಿಸಿದ್ದಾರೆ.

ಸಿದ್ದರಾಮಯ್ಯ ಮಂಡಿಸಿದ್ದು ‘ಸಾಬ್ರ’ ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...