Homeಕರ್ನಾಟಕರಾಜ್ಯ ಬಜೆಟ್ | 'ಫಾಕ್ಸ್‌ಕಾನ್' ಕಂಪನಿಗೆ ₹6,900 ಕೋಟಿ ಪ್ರೋತ್ಸಾಹಕ ಘೋಷಿಸಿದ ಸಿದ್ದರಾಮಯ್ಯ ಸರ್ಕಾರ!

ರಾಜ್ಯ ಬಜೆಟ್ | ‘ಫಾಕ್ಸ್‌ಕಾನ್’ ಕಂಪನಿಗೆ ₹6,900 ಕೋಟಿ ಪ್ರೋತ್ಸಾಹಕ ಘೋಷಿಸಿದ ಸಿದ್ದರಾಮಯ್ಯ ಸರ್ಕಾರ!

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.7) 4 ಲಕ್ಷ ಕೋಟಿ ರೂಪಾಯಿ (409549) ಮೊತ್ತದ ರಾಜ್ಯ ಬಜೆಟ್ ಮಂಡಿಸಿದ್ದಾರೆ.

ಬಜೆಟ್‌ನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ಘೋಷಣೆಗಳನ್ನು ಮಾಡಲಾಗಿದೆ. ಈ ಪೈಕಿ ದೇವನಹಳ್ಳಿ ಕೈಗಾರಿಕಾ ಪ್ರದೇಶದ ‘ಫಾಕ್ಸ್‌ಕಾನ್’ (Foxconn) ಕಂಪನಿಯ ಮೊಬೈಲ್ ಫೋನ್ ಉತ್ಪಾದನಾ ಘಟಕಕ್ಕೆ ಇಎಸ್‌ಡಿಎಂನ ನೀತಿಯಡಿ 6,970 ಕೋಟಿ ರೂಪಾಯಿಗಳ ಪ್ರೋತ್ಸಾಹವನ್ನು ನೀಡುವುದು ಒಂದು.

“ಫಾಕ್ಸ್‌ಕಾನ್ ಕಂಪನಿಯ ಮೊಬೈಲ್ ಫೋನ್‌ಗಳ ಉತ್ಪಾದನಾ ಘಟಕವು 21,911 ಕೋಟಿ ರೂಪಾಯಿ ಬಂಡವಾಳ ಹೂಡಿಕೆಯೊಂದಿಗೆ ಪ್ರಾರಂಭಗೊಂಡಿದೆ. ಇದರಿಂದ 50,000 ಉದ್ಯೋಗ ಸೃಜನೆಯನ್ನು ನಿರೀಕ್ಷಿಸಲಾಗಿದೆ” ಎಂದು ಸರ್ಕಾರ ಬಜೆಟ್ ಪ್ರತಿಯಲ್ಲಿ ಹೇಳಿದೆ.

ಸರ್ಕಾರ ಭಾರೀ ಮೊತ್ತದ ಪ್ರೋತ್ಸಾಹಕ ಘೋಷಣೆ ಮಾಡಿರುವ ಈ ಫಾಕ್ಸ್‌ಕಾನ್ ಕಂಪನಿ ಮೇಲೆ ಭಾರತ ಸೇರಿದಂತೆ ಜಾಗತಿಕವಾಗಿ ಹಲವು ಆರೋಪಗಳಿವೆ. ವಿಶೇಷವಾಗಿ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿದ ಆರೋಪಗಳು ಈ ಕಂಪನಿ ಮೇಲಿದೆ.

ಉದ್ಯೋಗಿಗಳ ಆತ್ಮಹತ್ಯೆ : 

ಚೀನಾದಾದ್ಯಂತ ಕಂಪನಿಯ ಘಟಕಗಳಲ್ಲಿ ಕೆಲಸದ ಒತ್ತಡ, ಕಂಪನಿಯ ಕಿರುಕುಳ ಇತ್ಯಾದಿ ಕಾರಣಗಳಿಗೆ ಹಲವು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

ವಿವಿಧ ಮೂಲಗಳಿಂದ ನಮಗೆ ಲಭ್ಯವಾದ ಮಾಹಿತಿ ಪ್ರಕಾರ, 2010 ಮತ್ತು ಅದರ ನಂತರ ಫಾಕ್ಸ್‌ಕಾನ್‌ ಕಂಪನಿಯಲ್ಲಿ ಉದ್ಯೋಗಿಗಳ ಆತ್ಮಹತ್ಯೆ ಪ್ರಕರಣಗಳು ಉಲ್ಬಣಿಸಿವೆ.

ಚೀನಾನ ಶೆನ್‌ಝೆನ್‌ನಲ್ಲಿರುವ ಫಾಕ್ಸ್‌ಕಾನ್‌ ಸಿಟಿ ಇಂಡಸ್ಟ್ರಿಯಲ್ ಪಾರ್ಕ್‌ನಲ್ಲಿ ಕಡಿಮೆ ವೇತನ, ಅತ್ಯಂತ ಕ್ರೂರ ಕೆಲಸದ ವಾತಾವರಣದಿಂದ ಮಾನಸಿ ಖಿನ್ನತೆ ಮತ್ತು ಅವಮಾನಕ್ಕೆ ಒಳಗಾಗಿ ಹೆಚ್ಚಿನ ಉದ್ಯೋಗಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕೇವಲ ಶೆನ್‌ಝೆನ್‌ ಘಟಕ ಮಾತ್ರವಲ್ಲದೆ, ಚೀನಾದ ಇತರ ಫಾಕ್ಸ್‌ಕಾನ್‌ ಘಟಕಗಳಲ್ಲೂ ಉದ್ಯೋಗಿಗಳು ಸಾವಿಗೆ ಶರಣಾದ ವರದಿಗಳಿವೆ. ಈ ಕುರಿತು ಫಾಕ್ಸ್‌ಕಾನ್ ಕಂಪನಿಯ ಗ್ರಾಹಕರಾದ ಆಪಲ್ ಮತ್ತು ಹೆವ್ಲೆಟ್ ಪ್ಯಾಕರ್ಡ್ (ಹೆಚ್‌ಪಿ) ತನಿಖೆಯನ್ನೂ ಕೈಗೊಂಡಿವೆ.

2010ರ ಮುನ್ನ ಅಂದರೆ, 2007ರಲ್ಲಿ ಒಬ್ಬರು ಮತ್ತು 2009ರಲ್ಲಿ ಒಬ್ಬರು ಫಾಕ್ಸ್‌ಕಾನ್ ಉದ್ಯೋಗಿ ಚೀನಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. 2007ರಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಶವ ಕಂಪನಿಯ ಸ್ನಾನಗೃಹದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

2009ರಲ್ಲಿ, ತನ್ನ ಬಳಿ ಇದ್ದ ಐಫೋನ್ ಮೂಲಮಾದರಿ ಕಳೆದುಹೋದ ನಂತರ ಅಪಾರ್ಟ್‌ಮೆಂಟ್ ಕಟ್ಟಡದಿಂದ ಜಿಗಿದು ಫಾಕ್ಸ್‌ಕಾನ್ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಯುವ ಮೊದಲು, ಫಾಕ್ಸ್‌ಕಾನ್ ಉದ್ಯೋಗಿಗಳು ತನ್ನನ್ನು ಥಳಿಸಿ ಮನೆಯನ್ನು ಶೋಧಿಸಿದ್ದಾರೆ ಎಂದು ಅವರು ಹೇಳಿಕೊಂಡಿದ್ದರು ಎಂದು ವರದಿಯಾಗಿದೆ.

2010ರಲ್ಲಿ ಸುಮಾರು 15 ಜನರು ಫಾಕ್ಸ್‌ಕಾನ್ ಉದ್ಯೋಗಿಗಳು ಕಟ್ಟಡಗಳಿಂದ ಹಾರಿದ್ದಾರೆ. ಈ ಪೈಕಿ ಒಬ್ಬರು ಸೊಂಟದ ಕೆಳಗಿನ ಪಾರ್ಶವಾಯುಗೆ ಒಳಗಾಗಿದ್ದಾರೆ. ಇನ್ನಿಬ್ಬರ ಬಗ್ಗೆ ಮಾಹಿತಿಯಿಲ್ಲ. ಉಳಿದವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

2011ರಲ್ಲಿ ಮೂವರು 2012ರಲ್ಲಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಉಲ್ಲೇಖವಿದೆ. ಹೆಚ್ಚುವರಿಯಾಗಿ, ಜನವರಿ 2, 2012 ರಂದು ಪ್ರತಿಭಟನೆಯಲ್ಲಿ 150 ಚೀನೀ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು ಎಂದು ಹೇಳಲಾಗಿದೆ.

ಇನ್ನು 2014, 2016 ಮತ್ತು 2018ರಲ್ಲಿ ತಲಾ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆಉಲ್ಲೇಖವಿದೆ.

ಜನಾಂಗೀಯ ತಾರತಮ್ಯ :

ಚೀನಾದಲ್ಲಿ ಫಾಕ್ಸ್‌ಕಾನ್ ತನ್ನ ನೇಮಕಾತಿ ಪದ್ಧತಿಗಳಲ್ಲಿ ಜನಾಂಗೀಯ ತಾರತಮ್ಯದ ಆರೋಪಗಳು ಕೇಳಿ ಬಂದಿವೆ. ಅಲ್ಲಿ ಉಯ್ಘರ್‌ಗಳು, ಟಿಬೆಟಿಯನ್ನರು, ಯು ಮತ್ತು ಹುಯಿ ಮುಂತಾದ ಜನಾಂಗೀಯ ಅಲ್ಪಸಂಖ್ಯಾತ ಗುಂಪುಗಳನ್ನು ನೇಮಕಾತಿಯಿಂದ ಹೊರಗಿಡಲಾಗಿದೆ ಎಂದು ವರದಿಯಾಗಿದೆ.

ಚೀನಾದಲ್ಲಿ ಕೆಲಸದ ವಾತಾವರಣ

ಚೀನಾದ ಘಟಕಗಳಲ್ಲಿನ ಕೆಲಸದ ವಾತಾವರಣಕ್ಕೆ ಸಂಬಂಧಿಸಿದಂತೆ ಫಾಕ್ಸ್‌ಕಾನ್ ವಿರುದ್ದ ಹಲವು ಆರೋಪಗಳಿವೆ. ಕಂಪನಿ ಈ ಕಾರಣಕ್ಕೆ ಜಾಗತಿಕ ಮಟ್ಟದಲ್ಲಿ ಟೀಕೆಗೆ ಒಳಗಾಗಿದೆ. ವಿರಾಮ ನೀಡದೆ ಸುದೀರ್ಘ ಸಮಯ ಉದ್ಯೋಗಿಗಳನ್ನು ದುಡಿಸಿಕೊಳ್ಳಲಾಗುತ್ತಿದೆ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗುವ ಅವರು ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದಾರೆ ಎನ್ನಲಾಗಿದೆ.

ಕಂಪನಿಯಲ್ಲಿ ದೊಡ್ಡ ಮಟ್ಟದ ಉತ್ಪಾದನಾ ಗುರಿಯನ್ನು ಉದ್ಯೋಗಿಗಳಿಗೆ ನೀಡಲಾಗುತ್ತಿದೆ. ಅದನ್ನು ಸಾಧಿಸಲು ವಿರಾಮವಿಲ್ಲದ ಕೆಲಸ ಮಾಡಿಸಲಾಗುತ್ತಿದೆ. ಕಂಪನಿ ಉದ್ಯೋಗಿಗಳ ಯೋಗಕ್ಷೇಮದ ಬಗ್ಗೆ ಕಾಳಜಿವಹಿಸುತ್ತಿಲ್ಲ. ಕಂಪನಿಯ ಕೆಲಸದ ವಾತಾವರಣ ಒಂದು ರೀತಿಯಲ್ಲಿ ಉದ್ಯೋಗಿಗಳಿಗೆ ‘ನರಕದಂತಿದೆ’ ಎಂದು ಆರೋಪಿಸಲಾಗಿದೆ.

ವಿವಾಹಿತ ಮಹಿಳೆಯರ ನೇಮಕಕ್ಕೆ ನಿರಾಕರಣೆ :

ತಮಿಳುನಾಡಿನ ಚೆನ್ನೈ ಸಮೀಪದ ಶ್ರೀಪೆರಂಬದೂರ್‌ನಲ್ಲಿರುವ ಫಾಕ್ಸ್‌ಕಾನ್‌ ಘಟಕದಲ್ಲಿ ವಿವಾಹಿತರ ಮಹಿಳೆಯರ ನೇಮಕಕ್ಕೆ ನಿರಾಕರಿಸಲಾಗುತ್ತಿದೆ ಎಂದು 2024ರ ಜೂನ್ 25ರಂದು ರಾಯಿಟರ್ಸ್‌ ಸುದ್ದಿ ಸಂಸ್ಥೆ ವರದಿಯೊಂದನ್ನು ಪ್ರಕಟಿಸಿತ್ತು.

ಅವಿವಾಹಿತ ಮಹಿಳೆಯರಿಗೆ ಹೋಲಿಸಿದರೆ ವಿವಾಹಿತರಿಗೆ ಹೆಚ್ಚು ಕೌಟುಂಬಿಕ ಜವಾಬ್ದಾರಿಗಳಿವೆ ಎಂಬ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆ ಎಂದು ರಾಯಟರ್ಸ್‌ ತನಿಖಾ ವರದಿ ಹೇಳಿತ್ತು.

ಫಾಕ್ಸ್‌ಕಾನ್ ಕಂಪನಿಗೆ ಉದ್ಯೋಗ ಕೇಳಿ ಬರುವ ವಿವಾಹಿತ ಮಹಿಳೆಯರಿಗೆ ಸಂಸ್ಥೆಯ ಆವರಣದೊಳಕ್ಕೆ ಪ್ರವೇಶಿಸಲೂ ಅನುಮತಿ ನೀಡುತ್ತಿಲ್ಲ. ಕಂಪನಿಯ ಗೇಟ್ ಒಳಗೆ ಪ್ರವೇಶಿಸುವ ಮುನ್ನವೇ ಅಲ್ಲಿನ ಭದ್ರತಾ ಸಿಬ್ಬಂದಿ ವೈವಾಹಿಕ ಸ್ಥಿತಿಯ ಬಗ್ಗೆ ಕೇಳುತ್ತಾರೆ ಎಂದು ವರದಿ ತಿಳಿಸಿತ್ತು.

ವಿವಾಹಿತ ಮಹಿಳೆಯರು ಕೌಟುಂಬಿಕ ಕರ್ತವ್ಯಗಳು, ಗರ್ಭಧಾರಣೆ ಮತ್ತು ಹೆಚ್ಚು ಗೈರಾಗುತ್ತಾರೆ ಎಂಬ ಕಾರಣಗಳನ್ನು ನೀಡಿ ಕಂಪನಿಯು ಉದ್ಯೋಗ ನೀಡುತ್ತಿಲ್ಲ ಎಂದು ಅಲ್ಲಿನ ಹಾಲಿ ಮತ್ತು ಮಾಜಿ ಉದ್ಯೋಗಿಗಳನ್ನು ಉಲ್ಲೇಖಿಸಿ ವರದಿ ರಾಯಿಟರ್ಸ್ ವರದಿ ಮಾಡಿತ್ತು.

ಈ ವರದಿ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಒಳಗಾಗಿತ್ತು. ಕೇಂದ್ರ ಸರ್ಕಾರ, ಕೇಂದ್ರ ಮಾನವ ಹಕ್ಕುಗಳ ಆಯೋಗ ಈ ಕುರಿತು ಫಾಕ್ಸ್‌ಕಾನ್‌ ಕಂಪನಿಯಿಂದ ವರದಿ ಕೇಳಿತ್ತು.

ನುಡಿದಂತೆ ನಡೆಯದ ಸರ್ಕಾರ : ಎಸ್‌ ವರಲಕ್ಷ್ಮಿ

“ಸಿದ್ದರಾಮಯ್ಯ ಅವರು ಕಳೆದ ಬಾರಿ ಮಂಡಿಸಿದ ಬಜೆಟ್‌ನಲ್ಲಿ ಜಿಂದಾಲ್ ಸೇರಿದಂತೆ ಇತರ ಕಾರ್ಪೋರೇಟ್ ಕಂಪನಿಗಳಿಗೆ ಹಣ ಮೀಸಲಿಟ್ಟಿದ್ದರು. ಈ ಬಾರಿಯೂ ಕಾರ್ಪೋರೇಟ್ ಪರವಾದ ಬಜೆಟ್ ಮಂಡಿಸಿದ್ದಾರೆ. ಬಡಜನರ, ಶ್ರಮಿಕರ ಹಾಗು ರೈತರಿಗೆ ನಿರಾಶೆ ಮೂಡಿಸಿದ ಬಜೆಟ್ ಇದಾಗಿದೆ. ಉದ್ಯೋಗಿಗಳು, ಕಾರ್ಮಿಕರಿಗೆ ವೇತನ ಕೊಡಲು ಮತ್ತು ಇತರ ಸೌಲಭ್ಯಗಳನ್ನು ಒದಗಿಸಲು ದುಡ್ಡಿಲ್ಲ ಎನ್ನುವ ಸರ್ಕಾರ ಕಾರ್ಪೋರೇಟ್ ಕಂಪನಿಗಳಿಗೆ ಕೇಳದೆ ಕೊಡುತ್ತಿದೆ. ರೈತರು, ಕಾರ್ಮಿಕರು ಮುಂದಿಟ್ಟಿರುವ ಬೇಡಿಕಗಳನ್ನು ಸರ್ಕಾರ ಬಜೆಟ್‌ನಲ್ಲಿ ಈಡೇರಿಸಿಲ್ಲ. ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸುವ ಅವಕಾಶ ರಾಜ್ಯ ಸರ್ಕಾರಕ್ಕೆ ಇಟ್ಟಿಲ್ಲ. ಒಟ್ಟಿನಲ್ಲಿ ಸಾರ್ವಜನಿಕರಿಗೆ ಹಾಗೂ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿ ಖಾಸಗಿ ಕಾರ್ಪೊರೇಟ್ ಕಂಪನಿಗಳಿಗೆ ಲಾಭ ಖಾತರಿ ಪಡಿಸುವ ಬಜೆಟ್ ಇದಾಗಿದೆ” ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ಎಸ್‌. ವರಲಕ್ಷ್ಮಿ ಟೀಕಿಸಿದ್ದಾರೆ.

ಸಿದ್ದರಾಮಯ್ಯ ಮಂಡಿಸಿದ್ದು ‘ಸಾಬ್ರ’ ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...