Homeಕರ್ನಾಟಕರಾಜ್ಯ ಬಜೆಟ್ | 'ಫಾಕ್ಸ್‌ಕಾನ್' ಕಂಪನಿಗೆ ₹6,900 ಕೋಟಿ ಪ್ರೋತ್ಸಾಹಕ ಘೋಷಿಸಿದ ಸಿದ್ದರಾಮಯ್ಯ ಸರ್ಕಾರ!

ರಾಜ್ಯ ಬಜೆಟ್ | ‘ಫಾಕ್ಸ್‌ಕಾನ್’ ಕಂಪನಿಗೆ ₹6,900 ಕೋಟಿ ಪ್ರೋತ್ಸಾಹಕ ಘೋಷಿಸಿದ ಸಿದ್ದರಾಮಯ್ಯ ಸರ್ಕಾರ!

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.7) 4 ಲಕ್ಷ ಕೋಟಿ ರೂಪಾಯಿ (409549) ಮೊತ್ತದ ರಾಜ್ಯ ಬಜೆಟ್ ಮಂಡಿಸಿದ್ದಾರೆ.

ಬಜೆಟ್‌ನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ಘೋಷಣೆಗಳನ್ನು ಮಾಡಲಾಗಿದೆ. ಈ ಪೈಕಿ ದೇವನಹಳ್ಳಿ ಕೈಗಾರಿಕಾ ಪ್ರದೇಶದ ‘ಫಾಕ್ಸ್‌ಕಾನ್’ (Foxconn) ಕಂಪನಿಯ ಮೊಬೈಲ್ ಫೋನ್ ಉತ್ಪಾದನಾ ಘಟಕಕ್ಕೆ ಇಎಸ್‌ಡಿಎಂನ ನೀತಿಯಡಿ 6,970 ಕೋಟಿ ರೂಪಾಯಿಗಳ ಪ್ರೋತ್ಸಾಹವನ್ನು ನೀಡುವುದು ಒಂದು.

“ಫಾಕ್ಸ್‌ಕಾನ್ ಕಂಪನಿಯ ಮೊಬೈಲ್ ಫೋನ್‌ಗಳ ಉತ್ಪಾದನಾ ಘಟಕವು 21,911 ಕೋಟಿ ರೂಪಾಯಿ ಬಂಡವಾಳ ಹೂಡಿಕೆಯೊಂದಿಗೆ ಪ್ರಾರಂಭಗೊಂಡಿದೆ. ಇದರಿಂದ 50,000 ಉದ್ಯೋಗ ಸೃಜನೆಯನ್ನು ನಿರೀಕ್ಷಿಸಲಾಗಿದೆ” ಎಂದು ಸರ್ಕಾರ ಬಜೆಟ್ ಪ್ರತಿಯಲ್ಲಿ ಹೇಳಿದೆ.

ಸರ್ಕಾರ ಭಾರೀ ಮೊತ್ತದ ಪ್ರೋತ್ಸಾಹಕ ಘೋಷಣೆ ಮಾಡಿರುವ ಈ ಫಾಕ್ಸ್‌ಕಾನ್ ಕಂಪನಿ ಮೇಲೆ ಭಾರತ ಸೇರಿದಂತೆ ಜಾಗತಿಕವಾಗಿ ಹಲವು ಆರೋಪಗಳಿವೆ. ವಿಶೇಷವಾಗಿ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿದ ಆರೋಪಗಳು ಈ ಕಂಪನಿ ಮೇಲಿದೆ.

ಉದ್ಯೋಗಿಗಳ ಆತ್ಮಹತ್ಯೆ : 

ಚೀನಾದಾದ್ಯಂತ ಕಂಪನಿಯ ಘಟಕಗಳಲ್ಲಿ ಕೆಲಸದ ಒತ್ತಡ, ಕಂಪನಿಯ ಕಿರುಕುಳ ಇತ್ಯಾದಿ ಕಾರಣಗಳಿಗೆ ಹಲವು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

ವಿವಿಧ ಮೂಲಗಳಿಂದ ನಮಗೆ ಲಭ್ಯವಾದ ಮಾಹಿತಿ ಪ್ರಕಾರ, 2010 ಮತ್ತು ಅದರ ನಂತರ ಫಾಕ್ಸ್‌ಕಾನ್‌ ಕಂಪನಿಯಲ್ಲಿ ಉದ್ಯೋಗಿಗಳ ಆತ್ಮಹತ್ಯೆ ಪ್ರಕರಣಗಳು ಉಲ್ಬಣಿಸಿವೆ.

ಚೀನಾನ ಶೆನ್‌ಝೆನ್‌ನಲ್ಲಿರುವ ಫಾಕ್ಸ್‌ಕಾನ್‌ ಸಿಟಿ ಇಂಡಸ್ಟ್ರಿಯಲ್ ಪಾರ್ಕ್‌ನಲ್ಲಿ ಕಡಿಮೆ ವೇತನ, ಅತ್ಯಂತ ಕ್ರೂರ ಕೆಲಸದ ವಾತಾವರಣದಿಂದ ಮಾನಸಿ ಖಿನ್ನತೆ ಮತ್ತು ಅವಮಾನಕ್ಕೆ ಒಳಗಾಗಿ ಹೆಚ್ಚಿನ ಉದ್ಯೋಗಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕೇವಲ ಶೆನ್‌ಝೆನ್‌ ಘಟಕ ಮಾತ್ರವಲ್ಲದೆ, ಚೀನಾದ ಇತರ ಫಾಕ್ಸ್‌ಕಾನ್‌ ಘಟಕಗಳಲ್ಲೂ ಉದ್ಯೋಗಿಗಳು ಸಾವಿಗೆ ಶರಣಾದ ವರದಿಗಳಿವೆ. ಈ ಕುರಿತು ಫಾಕ್ಸ್‌ಕಾನ್ ಕಂಪನಿಯ ಗ್ರಾಹಕರಾದ ಆಪಲ್ ಮತ್ತು ಹೆವ್ಲೆಟ್ ಪ್ಯಾಕರ್ಡ್ (ಹೆಚ್‌ಪಿ) ತನಿಖೆಯನ್ನೂ ಕೈಗೊಂಡಿವೆ.

2010ರ ಮುನ್ನ ಅಂದರೆ, 2007ರಲ್ಲಿ ಒಬ್ಬರು ಮತ್ತು 2009ರಲ್ಲಿ ಒಬ್ಬರು ಫಾಕ್ಸ್‌ಕಾನ್ ಉದ್ಯೋಗಿ ಚೀನಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. 2007ರಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಶವ ಕಂಪನಿಯ ಸ್ನಾನಗೃಹದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

2009ರಲ್ಲಿ, ತನ್ನ ಬಳಿ ಇದ್ದ ಐಫೋನ್ ಮೂಲಮಾದರಿ ಕಳೆದುಹೋದ ನಂತರ ಅಪಾರ್ಟ್‌ಮೆಂಟ್ ಕಟ್ಟಡದಿಂದ ಜಿಗಿದು ಫಾಕ್ಸ್‌ಕಾನ್ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಯುವ ಮೊದಲು, ಫಾಕ್ಸ್‌ಕಾನ್ ಉದ್ಯೋಗಿಗಳು ತನ್ನನ್ನು ಥಳಿಸಿ ಮನೆಯನ್ನು ಶೋಧಿಸಿದ್ದಾರೆ ಎಂದು ಅವರು ಹೇಳಿಕೊಂಡಿದ್ದರು ಎಂದು ವರದಿಯಾಗಿದೆ.

2010ರಲ್ಲಿ ಸುಮಾರು 15 ಜನರು ಫಾಕ್ಸ್‌ಕಾನ್ ಉದ್ಯೋಗಿಗಳು ಕಟ್ಟಡಗಳಿಂದ ಹಾರಿದ್ದಾರೆ. ಈ ಪೈಕಿ ಒಬ್ಬರು ಸೊಂಟದ ಕೆಳಗಿನ ಪಾರ್ಶವಾಯುಗೆ ಒಳಗಾಗಿದ್ದಾರೆ. ಇನ್ನಿಬ್ಬರ ಬಗ್ಗೆ ಮಾಹಿತಿಯಿಲ್ಲ. ಉಳಿದವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

2011ರಲ್ಲಿ ಮೂವರು 2012ರಲ್ಲಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಉಲ್ಲೇಖವಿದೆ. ಹೆಚ್ಚುವರಿಯಾಗಿ, ಜನವರಿ 2, 2012 ರಂದು ಪ್ರತಿಭಟನೆಯಲ್ಲಿ 150 ಚೀನೀ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು ಎಂದು ಹೇಳಲಾಗಿದೆ.

ಇನ್ನು 2014, 2016 ಮತ್ತು 2018ರಲ್ಲಿ ತಲಾ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆಉಲ್ಲೇಖವಿದೆ.

ಜನಾಂಗೀಯ ತಾರತಮ್ಯ :

ಚೀನಾದಲ್ಲಿ ಫಾಕ್ಸ್‌ಕಾನ್ ತನ್ನ ನೇಮಕಾತಿ ಪದ್ಧತಿಗಳಲ್ಲಿ ಜನಾಂಗೀಯ ತಾರತಮ್ಯದ ಆರೋಪಗಳು ಕೇಳಿ ಬಂದಿವೆ. ಅಲ್ಲಿ ಉಯ್ಘರ್‌ಗಳು, ಟಿಬೆಟಿಯನ್ನರು, ಯು ಮತ್ತು ಹುಯಿ ಮುಂತಾದ ಜನಾಂಗೀಯ ಅಲ್ಪಸಂಖ್ಯಾತ ಗುಂಪುಗಳನ್ನು ನೇಮಕಾತಿಯಿಂದ ಹೊರಗಿಡಲಾಗಿದೆ ಎಂದು ವರದಿಯಾಗಿದೆ.

ಚೀನಾದಲ್ಲಿ ಕೆಲಸದ ವಾತಾವರಣ

ಚೀನಾದ ಘಟಕಗಳಲ್ಲಿನ ಕೆಲಸದ ವಾತಾವರಣಕ್ಕೆ ಸಂಬಂಧಿಸಿದಂತೆ ಫಾಕ್ಸ್‌ಕಾನ್ ವಿರುದ್ದ ಹಲವು ಆರೋಪಗಳಿವೆ. ಕಂಪನಿ ಈ ಕಾರಣಕ್ಕೆ ಜಾಗತಿಕ ಮಟ್ಟದಲ್ಲಿ ಟೀಕೆಗೆ ಒಳಗಾಗಿದೆ. ವಿರಾಮ ನೀಡದೆ ಸುದೀರ್ಘ ಸಮಯ ಉದ್ಯೋಗಿಗಳನ್ನು ದುಡಿಸಿಕೊಳ್ಳಲಾಗುತ್ತಿದೆ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗುವ ಅವರು ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದಾರೆ ಎನ್ನಲಾಗಿದೆ.

ಕಂಪನಿಯಲ್ಲಿ ದೊಡ್ಡ ಮಟ್ಟದ ಉತ್ಪಾದನಾ ಗುರಿಯನ್ನು ಉದ್ಯೋಗಿಗಳಿಗೆ ನೀಡಲಾಗುತ್ತಿದೆ. ಅದನ್ನು ಸಾಧಿಸಲು ವಿರಾಮವಿಲ್ಲದ ಕೆಲಸ ಮಾಡಿಸಲಾಗುತ್ತಿದೆ. ಕಂಪನಿ ಉದ್ಯೋಗಿಗಳ ಯೋಗಕ್ಷೇಮದ ಬಗ್ಗೆ ಕಾಳಜಿವಹಿಸುತ್ತಿಲ್ಲ. ಕಂಪನಿಯ ಕೆಲಸದ ವಾತಾವರಣ ಒಂದು ರೀತಿಯಲ್ಲಿ ಉದ್ಯೋಗಿಗಳಿಗೆ ‘ನರಕದಂತಿದೆ’ ಎಂದು ಆರೋಪಿಸಲಾಗಿದೆ.

ವಿವಾಹಿತ ಮಹಿಳೆಯರ ನೇಮಕಕ್ಕೆ ನಿರಾಕರಣೆ :

ತಮಿಳುನಾಡಿನ ಚೆನ್ನೈ ಸಮೀಪದ ಶ್ರೀಪೆರಂಬದೂರ್‌ನಲ್ಲಿರುವ ಫಾಕ್ಸ್‌ಕಾನ್‌ ಘಟಕದಲ್ಲಿ ವಿವಾಹಿತರ ಮಹಿಳೆಯರ ನೇಮಕಕ್ಕೆ ನಿರಾಕರಿಸಲಾಗುತ್ತಿದೆ ಎಂದು 2024ರ ಜೂನ್ 25ರಂದು ರಾಯಿಟರ್ಸ್‌ ಸುದ್ದಿ ಸಂಸ್ಥೆ ವರದಿಯೊಂದನ್ನು ಪ್ರಕಟಿಸಿತ್ತು.

ಅವಿವಾಹಿತ ಮಹಿಳೆಯರಿಗೆ ಹೋಲಿಸಿದರೆ ವಿವಾಹಿತರಿಗೆ ಹೆಚ್ಚು ಕೌಟುಂಬಿಕ ಜವಾಬ್ದಾರಿಗಳಿವೆ ಎಂಬ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆ ಎಂದು ರಾಯಟರ್ಸ್‌ ತನಿಖಾ ವರದಿ ಹೇಳಿತ್ತು.

ಫಾಕ್ಸ್‌ಕಾನ್ ಕಂಪನಿಗೆ ಉದ್ಯೋಗ ಕೇಳಿ ಬರುವ ವಿವಾಹಿತ ಮಹಿಳೆಯರಿಗೆ ಸಂಸ್ಥೆಯ ಆವರಣದೊಳಕ್ಕೆ ಪ್ರವೇಶಿಸಲೂ ಅನುಮತಿ ನೀಡುತ್ತಿಲ್ಲ. ಕಂಪನಿಯ ಗೇಟ್ ಒಳಗೆ ಪ್ರವೇಶಿಸುವ ಮುನ್ನವೇ ಅಲ್ಲಿನ ಭದ್ರತಾ ಸಿಬ್ಬಂದಿ ವೈವಾಹಿಕ ಸ್ಥಿತಿಯ ಬಗ್ಗೆ ಕೇಳುತ್ತಾರೆ ಎಂದು ವರದಿ ತಿಳಿಸಿತ್ತು.

ವಿವಾಹಿತ ಮಹಿಳೆಯರು ಕೌಟುಂಬಿಕ ಕರ್ತವ್ಯಗಳು, ಗರ್ಭಧಾರಣೆ ಮತ್ತು ಹೆಚ್ಚು ಗೈರಾಗುತ್ತಾರೆ ಎಂಬ ಕಾರಣಗಳನ್ನು ನೀಡಿ ಕಂಪನಿಯು ಉದ್ಯೋಗ ನೀಡುತ್ತಿಲ್ಲ ಎಂದು ಅಲ್ಲಿನ ಹಾಲಿ ಮತ್ತು ಮಾಜಿ ಉದ್ಯೋಗಿಗಳನ್ನು ಉಲ್ಲೇಖಿಸಿ ವರದಿ ರಾಯಿಟರ್ಸ್ ವರದಿ ಮಾಡಿತ್ತು.

ಈ ವರದಿ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಒಳಗಾಗಿತ್ತು. ಕೇಂದ್ರ ಸರ್ಕಾರ, ಕೇಂದ್ರ ಮಾನವ ಹಕ್ಕುಗಳ ಆಯೋಗ ಈ ಕುರಿತು ಫಾಕ್ಸ್‌ಕಾನ್‌ ಕಂಪನಿಯಿಂದ ವರದಿ ಕೇಳಿತ್ತು.

ನುಡಿದಂತೆ ನಡೆಯದ ಸರ್ಕಾರ : ಎಸ್‌ ವರಲಕ್ಷ್ಮಿ

“ಸಿದ್ದರಾಮಯ್ಯ ಅವರು ಕಳೆದ ಬಾರಿ ಮಂಡಿಸಿದ ಬಜೆಟ್‌ನಲ್ಲಿ ಜಿಂದಾಲ್ ಸೇರಿದಂತೆ ಇತರ ಕಾರ್ಪೋರೇಟ್ ಕಂಪನಿಗಳಿಗೆ ಹಣ ಮೀಸಲಿಟ್ಟಿದ್ದರು. ಈ ಬಾರಿಯೂ ಕಾರ್ಪೋರೇಟ್ ಪರವಾದ ಬಜೆಟ್ ಮಂಡಿಸಿದ್ದಾರೆ. ಬಡಜನರ, ಶ್ರಮಿಕರ ಹಾಗು ರೈತರಿಗೆ ನಿರಾಶೆ ಮೂಡಿಸಿದ ಬಜೆಟ್ ಇದಾಗಿದೆ. ಉದ್ಯೋಗಿಗಳು, ಕಾರ್ಮಿಕರಿಗೆ ವೇತನ ಕೊಡಲು ಮತ್ತು ಇತರ ಸೌಲಭ್ಯಗಳನ್ನು ಒದಗಿಸಲು ದುಡ್ಡಿಲ್ಲ ಎನ್ನುವ ಸರ್ಕಾರ ಕಾರ್ಪೋರೇಟ್ ಕಂಪನಿಗಳಿಗೆ ಕೇಳದೆ ಕೊಡುತ್ತಿದೆ. ರೈತರು, ಕಾರ್ಮಿಕರು ಮುಂದಿಟ್ಟಿರುವ ಬೇಡಿಕಗಳನ್ನು ಸರ್ಕಾರ ಬಜೆಟ್‌ನಲ್ಲಿ ಈಡೇರಿಸಿಲ್ಲ. ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸುವ ಅವಕಾಶ ರಾಜ್ಯ ಸರ್ಕಾರಕ್ಕೆ ಇಟ್ಟಿಲ್ಲ. ಒಟ್ಟಿನಲ್ಲಿ ಸಾರ್ವಜನಿಕರಿಗೆ ಹಾಗೂ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿ ಖಾಸಗಿ ಕಾರ್ಪೊರೇಟ್ ಕಂಪನಿಗಳಿಗೆ ಲಾಭ ಖಾತರಿ ಪಡಿಸುವ ಬಜೆಟ್ ಇದಾಗಿದೆ” ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ಎಸ್‌. ವರಲಕ್ಷ್ಮಿ ಟೀಕಿಸಿದ್ದಾರೆ.

ಸಿದ್ದರಾಮಯ್ಯ ಮಂಡಿಸಿದ್ದು ‘ಸಾಬ್ರ’ ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....