Homeಕರ್ನಾಟಕಇಂದು ರಾಜ್ಯ ಬಜೆಟ್: ಈ ವರ್ಷದ ಆಯವ್ಯಯಕ್ಕೆ ಜನಸಾಮಾನ್ಯರ ನಿರೀಕ್ಷೆಗಳೇನು?

ಇಂದು ರಾಜ್ಯ ಬಜೆಟ್: ಈ ವರ್ಷದ ಆಯವ್ಯಯಕ್ಕೆ ಜನಸಾಮಾನ್ಯರ ನಿರೀಕ್ಷೆಗಳೇನು?

ಈ ಹಿಂದೆ ಪೆಟ್ರೋಲ್ ಬೆಲೆ ಲೀಟರ್‌ಗೆ 94 ರೂ ಆಗುತ್ತದೆ ಎಂದು ಬೊಮ್ಮಾಯಿ ಹೇಳಿದ್ದರು. ಆದರೆ 100 ರೂಗಿಂತ ಕೆಳಗೆ ಇಳಿದಿಲ್ಲ.

- Advertisement -
- Advertisement -

ಇಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಪೂರ್ಣ ಪ್ರಮಾಣದ ಬಜೆಟ್ ಅನ್ನು ಅಧಿವೇಶನದಲ್ಲಿ ಮಂಡಿಸಲಿದ್ದಾರೆ. ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಚುನಾವಣೆ ದೃಷ್ಟಿಕೋನದಿಂದ ಮತ್ತು ಕೊರೊನಾದಿಂದ ಈಗಾಗಲೇ ಪಾತಾಳಕ್ಕೆ ಕುಸಿದಿರುವ ರಾಜ್ಯದ ಆರ್ಥಿಕತೆ ಸುಧಾರಿಸುವ ನಿಟ್ಟಿನಿಂದಲೂ ಈ ವರ್ಷದ ಬಜೆಟ್ ಮೇಲೆ ಜನಸಾಮಾನ್ಯರಿಗೆ ಸಾಕಷ್ಟು ನಿರೀಕ್ಷೆಗಳಿವೆ.

ರೈತರ ಸಂಕಷ್ಟಗಳು

ಕಳೆದ ಹಲವು ವರ್ಷಗಳಿಂದ ರಾಜ್ಯದಲ್ಲಿ ಅಕಾಲಿಕ ಮಳೆ ತೀರಾ ಸಾಮಾನ್ಯವಾದ ಸಂಗತಿ ಎಂಬಂತಾಗಿದೆ. 2021 ರಿಂದ ಈವರೆಗೆ ಅಕಾಲಿಕ ಮಳೆಗೆ ರಾಣಿಬೆನ್ನೂರಿನಲ್ಲಿ 892.3 ಹೆಕ್ಟೇರ್ ಭೂಮಿಯಲ್ಲಿ ಬೆಳೆದಿದ್ದ ಹತ್ತಿ, ಭತ್ತ, ಶೇಂಗಾ, ಜೋಳ ಸೇರಿದಂತೆ ನಾನಾ ಬೆಳೆಗಳು ನಾಶವಾಗಿವೆ. ಧಾರವಾಡ ಜಿಲ್ಲೆಯಲ್ಲಿ 90 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಭಿತ್ತನೆ ಮಾಡಲಾಗಿದ್ದ ನಾನಾ ಬೆಳೆಗಳು ಕೈಗೆಟುಕದಂತಾಗಿದೆ. ಗದಗ, ಲಕ್ಷ್ಮೇಶ್ವರ ಭಾಗದಲ್ಲಿ ನೂರಾರು ಹೆಕ್ಟೇರ್‌ನಲ್ಲಿ ಬೆಳೆಯಲಾಗಿದ್ದ ಶೇಂಗಾ, ಈರುಳ್ಳಿ ಮತ್ತು ಜೋಳವೂ ಮಣ್ಣು ಪಾಲಾಗಿದೆ. ಇನ್ನೂ ಮಲೆನಾಡಿನ ಭಾಗದಲ್ಲಿ ಅಡಿಕೆ ಬೆಳೆಗಾರರು ಕೋಟ್ಯಾಂತರ ರೂ. ನಷ್ಟ ಅನುಭವಿಸಿದ್ದಾರೆ. ರಾಜ್ಯದ ಇತರೆ ಭಾಗದಲ್ಲಿರುವ ರೈತರ ಸಮಸ್ಯೆಯೂ ಇದಕ್ಕಿಂತ ಭಿನ್ನವಾಗೇನು ಇಲ್ಲ.

ಈ ನಡುವೆ ರೈತರಿಗೆ ರಾಜ್ಯ ಸರ್ಕಾರ ಸರಿಯಾದ ಸಮಯಕ್ಕೆ ವಿದ್ಯುತ್ ನೀಡಲಾಗುತ್ತಿಲ್ಲ. ಗೊಬ್ಬರ ಬಿತ್ತನೆ ಬೀಜದ ಬೆಲೆ ಇಳಿಕೆ ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ಸಾಲಮನ್ನಾ ಸೇರಿದಂತೆ ರಾಜ್ಯದ ಬಜೆಟ್ ಮೇಲೆ ರೈತರಿಗೆ ಸಾಕಷ್ಟು ನಿರೀಕ್ಷೆ ಮತ್ತು ಬೇಡಿಕೆಗಳಿವೆ. ಆದರೆ, ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಹೇಗೆ ಸ್ಪಂದಿಸಲಿದೆ ಎಂಬುದು ಬಜೆಟ್ ನಂತರ ಸ್ಪಷ್ಟವಾಗಲಿದೆ.

ಕಾರ್ಮಿಕರ ಕೂಗು

ಕೊರೊನಾ ಕಾರಣದಿಂದಾಗಿ ಅಸಂಘಟಿತ ಕಾರ್ಮಿಕ ವಲಯ ಸಾಕಷ್ಟು ಸಮಸ್ಯೆಯನ್ನು ಸಾಕಷ್ಟು ಸಾವು-ನೋವುಗಳನ್ನು ಎದುರಿಸಿದೆ. ಈ ವಿಭಾಗದಲ್ಲಿನ ನಿರುದ್ಯೋಗ ಸಮಸ್ಯೆ ಈವರೆಗೆ ಬಗೆಹರಿದಂತೆ ಕಂಡುಬಂದಿಲ್ಲ. ಅಲ್ಲದೆ, ಕಾರ್ಮಿಕ ಇಲಾಖೆ ಕೊರೊನಾ ಸಂದರ್ಭದಲ್ಲಿ ಅಸಂಘಟಿತ ವಲಯಕ್ಕೆ ಉತ್ತಮ ನೆರವನ್ನೂ ನೀಡಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.

ಸೂಕ್ತ ಕೆಲಸ ಮತ್ತು ಕೂಲಿ ಇಲ್ಲದೆ ದಿನಗೂಲಿಗಳು ಮತ್ತು ಕಟ್ಟಡ ಕಾರ್ಮಿಕರು ಕಂಗಾಲಾಗಿದ್ದಾರೆ. ನರೇಗ ಕಾರ್ಮಿಕರಿಗೆ ಅನುದಾನ ಸಾಲುತ್ತಿಲ್ಲ. ವಸತಿ ರಹಿತ ಕಾರ್ಮಿಕರಿಗೆ ಸೂರು ನೀಡುವುದಕ್ಕೆಂದೆ ಕೇಂದ್ರ-ರಾಜ್ಯ ಸರ್ಕಾರಗಳ ನಾನಾ ಯೋಜನೆಗಳು ಇವೆ. ಆದರೆ, ಸೂರು ಮಾತ್ರ ಖಚಿತವಾಗುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ಈ ವರ್ಷದ ಬಜೆಟ್‌ನಲ್ಲಿ ಅಸಂಘಟಿತ ವಲಯಕ್ಕೆ ಸರ್ಕಾರದ ಕೊಡುಗೆ ಏನು? ಎಂಬುದರ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ.

ಸಣ್ಣ-ಮಧ್ಯಮ ಉದ್ಯಮಗಳ ನಿರೀಕ್ಷೆ

ರಾಜ್ಯದಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವ ಕ್ಷೇತ್ರಗಳ ಪೈಕಿ ಸಣ್ಣ-ಮದ್ಯಮ ಉದ್ಯಮಗಳ ಪಾತ್ರ ದೊಡ್ಡದು. ಆದರೆ, ಜಿಎಸ್‌ಟಿ ಜಾರಿಯಿಂದಾಗಿ ಅನೇಕ ಸಣ್ಣ ಉದ್ಯಮಗಳು ಅವನತಿಯೆಡೆಗೆ ದೂಡಿತ್ತು. ಇನ್ನೂ ಕೊರೊನಾದಿಂದ ಉಂಟಾಗಿದ್ದ ಆರ್ಥಿಕ ಸಂಕಷ್ಟದಿಂದ ಈವರೆಗೆ ಅನೇಕ ಉದ್ಯಮಗಳು ಚೇತರಿಸಿಕೊಂಡಿಲ್ಲ. ಹೀಗಾಗಿ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಚೇತರಿಕೆಗೆ ರಾಜ್ಯ ಸರ್ಕಾರ ಯಾವ ಪ್ಯಾಕೇಜ್ ಘೋಷಿಸಲಿದೆ? ಎಂಬುದೂ ಸಹ ಕುತೂಹಲಕ್ಕೆ ಕಾರಣಾಗಿದೆ.

ಜನ ಸಾಮಾನ್ಯರ ಬೇಡಿಕೆ ಏನು?

ರಾಜ್ಯದಲ್ಲಿ ನಿರುದ್ಯೋಗದ ಸಮಸ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಶಿಕ್ಷಿತ ಯುವಕರು ಕೆಲಸವಿಲ್ಲದೆ ಕಂಗಾಲಾಗಿದ್ದಾರೆ. ಮತ್ತೊಂದೆಡೆ ದಿನೋಪಯೋಗಿ ವಸ್ತುಗಳ ಬೆಲೆ ದಿನೇ ದಿನೇ ಏರುತ್ತಿದ್ದು ಕೆಳ ಮತ್ತು ಮಧ್ಯಮ ವರ್ಗದ ಜನ ಬದುಕುವುದೇ ದುಸ್ಥರವಾಗಿದೆ. ಪೆಟ್ರೋಲ್ ಬೆಲೆಯಲ್ಲೂ ಸಹ ಪಂಚರಾಜ್ಯಗಳ ಚುನಾವಣೆ ಬಳಿಕ ಏರಿಕೆ ಕಾಣಲಿದೆ ಎನ್ನಲಾಗುತ್ತಿದೆ. ಇದು ನಿಜವಾದರೆ ಜನ ಸಾಮಾನ್ಯರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವುದು ಖಚಿತ. ಈ ಹಿಂದೆ ಪೆಟ್ರೋಲ್ ಬೆಲೆ ಲೀಟರ್‌ಗೆ 94 ರೂ ಆಗುತ್ತದೆ ಎಂದು ಬೊಮ್ಮಾಯಿ ಹೇಳಿದ್ದರು. ಆದರೆ 100 ರೂಗಿಂತ ಕೆಳಗೆ ಇಳಿದಿಲ್ಲ. ಇದನ್ನು ಹೇಗೆ ಎದುರಿಸುತ್ತಾರೆ ಕಾದು ನೋಡಬೇಕಿದೆ.

ಹೀಗಾಗಿ ರಾಜ್ಯ ಸರ್ಕಾರ ಉದ್ಯೋಗ ಸೃಷ್ಟಿಗೆ ಯಾವ ಕ್ರಮ ತೆಗೆದುಕೊಳ್ಳಲಿದೆ? ಬೆಲೆ ನಿಯಂತ್ರಣಕ್ಕೆ ಮುಂದಾಗಲಿದೆಯೇ? ಪೆಟ್ರೋಲ್ ಮೇಲಿನ ರಾಜ್ಯ ತೆರಿಗೆಯನ್ನು ಇಳಿಸಲಿದೆಯೇ? ಇದರ ಜೊತೆಗೆ ಯಾವೆಲ್ಲಾ ಅಗತ್ಯ ವಸ್ತುಗಳ ಮೇಲಿನ ತೆರಿಗೆಯನ್ನು ಇಳಿಸಲಿದೆ? ಎಂದು ಜನ ಕುತೂಹಲದಿಂದ ಕಾದು ಕುಳಿತಿದ್ದಾರೆ.


ಇದನ್ನೂ ಓದಿ: ‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Nanna nireekshe government aasthi mathe vaapaas barutha antha..,. Aaspathre, vidyasamsthegala fees kadime aagbahuda illa devasthanagalu hechhagbahuda

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...