Homeಕರ್ನಾಟಕಇಂದು ರಾಜ್ಯ ಬಜೆಟ್: ಈ ವರ್ಷದ ಆಯವ್ಯಯಕ್ಕೆ ಜನಸಾಮಾನ್ಯರ ನಿರೀಕ್ಷೆಗಳೇನು?

ಇಂದು ರಾಜ್ಯ ಬಜೆಟ್: ಈ ವರ್ಷದ ಆಯವ್ಯಯಕ್ಕೆ ಜನಸಾಮಾನ್ಯರ ನಿರೀಕ್ಷೆಗಳೇನು?

ಈ ಹಿಂದೆ ಪೆಟ್ರೋಲ್ ಬೆಲೆ ಲೀಟರ್‌ಗೆ 94 ರೂ ಆಗುತ್ತದೆ ಎಂದು ಬೊಮ್ಮಾಯಿ ಹೇಳಿದ್ದರು. ಆದರೆ 100 ರೂಗಿಂತ ಕೆಳಗೆ ಇಳಿದಿಲ್ಲ.

- Advertisement -
- Advertisement -

ಇಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಪೂರ್ಣ ಪ್ರಮಾಣದ ಬಜೆಟ್ ಅನ್ನು ಅಧಿವೇಶನದಲ್ಲಿ ಮಂಡಿಸಲಿದ್ದಾರೆ. ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಚುನಾವಣೆ ದೃಷ್ಟಿಕೋನದಿಂದ ಮತ್ತು ಕೊರೊನಾದಿಂದ ಈಗಾಗಲೇ ಪಾತಾಳಕ್ಕೆ ಕುಸಿದಿರುವ ರಾಜ್ಯದ ಆರ್ಥಿಕತೆ ಸುಧಾರಿಸುವ ನಿಟ್ಟಿನಿಂದಲೂ ಈ ವರ್ಷದ ಬಜೆಟ್ ಮೇಲೆ ಜನಸಾಮಾನ್ಯರಿಗೆ ಸಾಕಷ್ಟು ನಿರೀಕ್ಷೆಗಳಿವೆ.

ರೈತರ ಸಂಕಷ್ಟಗಳು

ಕಳೆದ ಹಲವು ವರ್ಷಗಳಿಂದ ರಾಜ್ಯದಲ್ಲಿ ಅಕಾಲಿಕ ಮಳೆ ತೀರಾ ಸಾಮಾನ್ಯವಾದ ಸಂಗತಿ ಎಂಬಂತಾಗಿದೆ. 2021 ರಿಂದ ಈವರೆಗೆ ಅಕಾಲಿಕ ಮಳೆಗೆ ರಾಣಿಬೆನ್ನೂರಿನಲ್ಲಿ 892.3 ಹೆಕ್ಟೇರ್ ಭೂಮಿಯಲ್ಲಿ ಬೆಳೆದಿದ್ದ ಹತ್ತಿ, ಭತ್ತ, ಶೇಂಗಾ, ಜೋಳ ಸೇರಿದಂತೆ ನಾನಾ ಬೆಳೆಗಳು ನಾಶವಾಗಿವೆ. ಧಾರವಾಡ ಜಿಲ್ಲೆಯಲ್ಲಿ 90 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಭಿತ್ತನೆ ಮಾಡಲಾಗಿದ್ದ ನಾನಾ ಬೆಳೆಗಳು ಕೈಗೆಟುಕದಂತಾಗಿದೆ. ಗದಗ, ಲಕ್ಷ್ಮೇಶ್ವರ ಭಾಗದಲ್ಲಿ ನೂರಾರು ಹೆಕ್ಟೇರ್‌ನಲ್ಲಿ ಬೆಳೆಯಲಾಗಿದ್ದ ಶೇಂಗಾ, ಈರುಳ್ಳಿ ಮತ್ತು ಜೋಳವೂ ಮಣ್ಣು ಪಾಲಾಗಿದೆ. ಇನ್ನೂ ಮಲೆನಾಡಿನ ಭಾಗದಲ್ಲಿ ಅಡಿಕೆ ಬೆಳೆಗಾರರು ಕೋಟ್ಯಾಂತರ ರೂ. ನಷ್ಟ ಅನುಭವಿಸಿದ್ದಾರೆ. ರಾಜ್ಯದ ಇತರೆ ಭಾಗದಲ್ಲಿರುವ ರೈತರ ಸಮಸ್ಯೆಯೂ ಇದಕ್ಕಿಂತ ಭಿನ್ನವಾಗೇನು ಇಲ್ಲ.

ಈ ನಡುವೆ ರೈತರಿಗೆ ರಾಜ್ಯ ಸರ್ಕಾರ ಸರಿಯಾದ ಸಮಯಕ್ಕೆ ವಿದ್ಯುತ್ ನೀಡಲಾಗುತ್ತಿಲ್ಲ. ಗೊಬ್ಬರ ಬಿತ್ತನೆ ಬೀಜದ ಬೆಲೆ ಇಳಿಕೆ ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ಸಾಲಮನ್ನಾ ಸೇರಿದಂತೆ ರಾಜ್ಯದ ಬಜೆಟ್ ಮೇಲೆ ರೈತರಿಗೆ ಸಾಕಷ್ಟು ನಿರೀಕ್ಷೆ ಮತ್ತು ಬೇಡಿಕೆಗಳಿವೆ. ಆದರೆ, ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಹೇಗೆ ಸ್ಪಂದಿಸಲಿದೆ ಎಂಬುದು ಬಜೆಟ್ ನಂತರ ಸ್ಪಷ್ಟವಾಗಲಿದೆ.

ಕಾರ್ಮಿಕರ ಕೂಗು

ಕೊರೊನಾ ಕಾರಣದಿಂದಾಗಿ ಅಸಂಘಟಿತ ಕಾರ್ಮಿಕ ವಲಯ ಸಾಕಷ್ಟು ಸಮಸ್ಯೆಯನ್ನು ಸಾಕಷ್ಟು ಸಾವು-ನೋವುಗಳನ್ನು ಎದುರಿಸಿದೆ. ಈ ವಿಭಾಗದಲ್ಲಿನ ನಿರುದ್ಯೋಗ ಸಮಸ್ಯೆ ಈವರೆಗೆ ಬಗೆಹರಿದಂತೆ ಕಂಡುಬಂದಿಲ್ಲ. ಅಲ್ಲದೆ, ಕಾರ್ಮಿಕ ಇಲಾಖೆ ಕೊರೊನಾ ಸಂದರ್ಭದಲ್ಲಿ ಅಸಂಘಟಿತ ವಲಯಕ್ಕೆ ಉತ್ತಮ ನೆರವನ್ನೂ ನೀಡಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.

ಸೂಕ್ತ ಕೆಲಸ ಮತ್ತು ಕೂಲಿ ಇಲ್ಲದೆ ದಿನಗೂಲಿಗಳು ಮತ್ತು ಕಟ್ಟಡ ಕಾರ್ಮಿಕರು ಕಂಗಾಲಾಗಿದ್ದಾರೆ. ನರೇಗ ಕಾರ್ಮಿಕರಿಗೆ ಅನುದಾನ ಸಾಲುತ್ತಿಲ್ಲ. ವಸತಿ ರಹಿತ ಕಾರ್ಮಿಕರಿಗೆ ಸೂರು ನೀಡುವುದಕ್ಕೆಂದೆ ಕೇಂದ್ರ-ರಾಜ್ಯ ಸರ್ಕಾರಗಳ ನಾನಾ ಯೋಜನೆಗಳು ಇವೆ. ಆದರೆ, ಸೂರು ಮಾತ್ರ ಖಚಿತವಾಗುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ಈ ವರ್ಷದ ಬಜೆಟ್‌ನಲ್ಲಿ ಅಸಂಘಟಿತ ವಲಯಕ್ಕೆ ಸರ್ಕಾರದ ಕೊಡುಗೆ ಏನು? ಎಂಬುದರ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ.

ಸಣ್ಣ-ಮಧ್ಯಮ ಉದ್ಯಮಗಳ ನಿರೀಕ್ಷೆ

ರಾಜ್ಯದಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವ ಕ್ಷೇತ್ರಗಳ ಪೈಕಿ ಸಣ್ಣ-ಮದ್ಯಮ ಉದ್ಯಮಗಳ ಪಾತ್ರ ದೊಡ್ಡದು. ಆದರೆ, ಜಿಎಸ್‌ಟಿ ಜಾರಿಯಿಂದಾಗಿ ಅನೇಕ ಸಣ್ಣ ಉದ್ಯಮಗಳು ಅವನತಿಯೆಡೆಗೆ ದೂಡಿತ್ತು. ಇನ್ನೂ ಕೊರೊನಾದಿಂದ ಉಂಟಾಗಿದ್ದ ಆರ್ಥಿಕ ಸಂಕಷ್ಟದಿಂದ ಈವರೆಗೆ ಅನೇಕ ಉದ್ಯಮಗಳು ಚೇತರಿಸಿಕೊಂಡಿಲ್ಲ. ಹೀಗಾಗಿ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಚೇತರಿಕೆಗೆ ರಾಜ್ಯ ಸರ್ಕಾರ ಯಾವ ಪ್ಯಾಕೇಜ್ ಘೋಷಿಸಲಿದೆ? ಎಂಬುದೂ ಸಹ ಕುತೂಹಲಕ್ಕೆ ಕಾರಣಾಗಿದೆ.

ಜನ ಸಾಮಾನ್ಯರ ಬೇಡಿಕೆ ಏನು?

ರಾಜ್ಯದಲ್ಲಿ ನಿರುದ್ಯೋಗದ ಸಮಸ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಶಿಕ್ಷಿತ ಯುವಕರು ಕೆಲಸವಿಲ್ಲದೆ ಕಂಗಾಲಾಗಿದ್ದಾರೆ. ಮತ್ತೊಂದೆಡೆ ದಿನೋಪಯೋಗಿ ವಸ್ತುಗಳ ಬೆಲೆ ದಿನೇ ದಿನೇ ಏರುತ್ತಿದ್ದು ಕೆಳ ಮತ್ತು ಮಧ್ಯಮ ವರ್ಗದ ಜನ ಬದುಕುವುದೇ ದುಸ್ಥರವಾಗಿದೆ. ಪೆಟ್ರೋಲ್ ಬೆಲೆಯಲ್ಲೂ ಸಹ ಪಂಚರಾಜ್ಯಗಳ ಚುನಾವಣೆ ಬಳಿಕ ಏರಿಕೆ ಕಾಣಲಿದೆ ಎನ್ನಲಾಗುತ್ತಿದೆ. ಇದು ನಿಜವಾದರೆ ಜನ ಸಾಮಾನ್ಯರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವುದು ಖಚಿತ. ಈ ಹಿಂದೆ ಪೆಟ್ರೋಲ್ ಬೆಲೆ ಲೀಟರ್‌ಗೆ 94 ರೂ ಆಗುತ್ತದೆ ಎಂದು ಬೊಮ್ಮಾಯಿ ಹೇಳಿದ್ದರು. ಆದರೆ 100 ರೂಗಿಂತ ಕೆಳಗೆ ಇಳಿದಿಲ್ಲ. ಇದನ್ನು ಹೇಗೆ ಎದುರಿಸುತ್ತಾರೆ ಕಾದು ನೋಡಬೇಕಿದೆ.

ಹೀಗಾಗಿ ರಾಜ್ಯ ಸರ್ಕಾರ ಉದ್ಯೋಗ ಸೃಷ್ಟಿಗೆ ಯಾವ ಕ್ರಮ ತೆಗೆದುಕೊಳ್ಳಲಿದೆ? ಬೆಲೆ ನಿಯಂತ್ರಣಕ್ಕೆ ಮುಂದಾಗಲಿದೆಯೇ? ಪೆಟ್ರೋಲ್ ಮೇಲಿನ ರಾಜ್ಯ ತೆರಿಗೆಯನ್ನು ಇಳಿಸಲಿದೆಯೇ? ಇದರ ಜೊತೆಗೆ ಯಾವೆಲ್ಲಾ ಅಗತ್ಯ ವಸ್ತುಗಳ ಮೇಲಿನ ತೆರಿಗೆಯನ್ನು ಇಳಿಸಲಿದೆ? ಎಂದು ಜನ ಕುತೂಹಲದಿಂದ ಕಾದು ಕುಳಿತಿದ್ದಾರೆ.


ಇದನ್ನೂ ಓದಿ: ‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Nanna nireekshe government aasthi mathe vaapaas barutha antha..,. Aaspathre, vidyasamsthegala fees kadime aagbahuda illa devasthanagalu hechhagbahuda

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....