Homeಕರ್ನಾಟಕಇಂದು ರಾಜ್ಯ ಬಜೆಟ್: ಈ ವರ್ಷದ ಆಯವ್ಯಯಕ್ಕೆ ಜನಸಾಮಾನ್ಯರ ನಿರೀಕ್ಷೆಗಳೇನು?

ಇಂದು ರಾಜ್ಯ ಬಜೆಟ್: ಈ ವರ್ಷದ ಆಯವ್ಯಯಕ್ಕೆ ಜನಸಾಮಾನ್ಯರ ನಿರೀಕ್ಷೆಗಳೇನು?

ಈ ಹಿಂದೆ ಪೆಟ್ರೋಲ್ ಬೆಲೆ ಲೀಟರ್‌ಗೆ 94 ರೂ ಆಗುತ್ತದೆ ಎಂದು ಬೊಮ್ಮಾಯಿ ಹೇಳಿದ್ದರು. ಆದರೆ 100 ರೂಗಿಂತ ಕೆಳಗೆ ಇಳಿದಿಲ್ಲ.

- Advertisement -
- Advertisement -

ಇಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಪೂರ್ಣ ಪ್ರಮಾಣದ ಬಜೆಟ್ ಅನ್ನು ಅಧಿವೇಶನದಲ್ಲಿ ಮಂಡಿಸಲಿದ್ದಾರೆ. ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಚುನಾವಣೆ ದೃಷ್ಟಿಕೋನದಿಂದ ಮತ್ತು ಕೊರೊನಾದಿಂದ ಈಗಾಗಲೇ ಪಾತಾಳಕ್ಕೆ ಕುಸಿದಿರುವ ರಾಜ್ಯದ ಆರ್ಥಿಕತೆ ಸುಧಾರಿಸುವ ನಿಟ್ಟಿನಿಂದಲೂ ಈ ವರ್ಷದ ಬಜೆಟ್ ಮೇಲೆ ಜನಸಾಮಾನ್ಯರಿಗೆ ಸಾಕಷ್ಟು ನಿರೀಕ್ಷೆಗಳಿವೆ.

ರೈತರ ಸಂಕಷ್ಟಗಳು

ಕಳೆದ ಹಲವು ವರ್ಷಗಳಿಂದ ರಾಜ್ಯದಲ್ಲಿ ಅಕಾಲಿಕ ಮಳೆ ತೀರಾ ಸಾಮಾನ್ಯವಾದ ಸಂಗತಿ ಎಂಬಂತಾಗಿದೆ. 2021 ರಿಂದ ಈವರೆಗೆ ಅಕಾಲಿಕ ಮಳೆಗೆ ರಾಣಿಬೆನ್ನೂರಿನಲ್ಲಿ 892.3 ಹೆಕ್ಟೇರ್ ಭೂಮಿಯಲ್ಲಿ ಬೆಳೆದಿದ್ದ ಹತ್ತಿ, ಭತ್ತ, ಶೇಂಗಾ, ಜೋಳ ಸೇರಿದಂತೆ ನಾನಾ ಬೆಳೆಗಳು ನಾಶವಾಗಿವೆ. ಧಾರವಾಡ ಜಿಲ್ಲೆಯಲ್ಲಿ 90 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಭಿತ್ತನೆ ಮಾಡಲಾಗಿದ್ದ ನಾನಾ ಬೆಳೆಗಳು ಕೈಗೆಟುಕದಂತಾಗಿದೆ. ಗದಗ, ಲಕ್ಷ್ಮೇಶ್ವರ ಭಾಗದಲ್ಲಿ ನೂರಾರು ಹೆಕ್ಟೇರ್‌ನಲ್ಲಿ ಬೆಳೆಯಲಾಗಿದ್ದ ಶೇಂಗಾ, ಈರುಳ್ಳಿ ಮತ್ತು ಜೋಳವೂ ಮಣ್ಣು ಪಾಲಾಗಿದೆ. ಇನ್ನೂ ಮಲೆನಾಡಿನ ಭಾಗದಲ್ಲಿ ಅಡಿಕೆ ಬೆಳೆಗಾರರು ಕೋಟ್ಯಾಂತರ ರೂ. ನಷ್ಟ ಅನುಭವಿಸಿದ್ದಾರೆ. ರಾಜ್ಯದ ಇತರೆ ಭಾಗದಲ್ಲಿರುವ ರೈತರ ಸಮಸ್ಯೆಯೂ ಇದಕ್ಕಿಂತ ಭಿನ್ನವಾಗೇನು ಇಲ್ಲ.

ಈ ನಡುವೆ ರೈತರಿಗೆ ರಾಜ್ಯ ಸರ್ಕಾರ ಸರಿಯಾದ ಸಮಯಕ್ಕೆ ವಿದ್ಯುತ್ ನೀಡಲಾಗುತ್ತಿಲ್ಲ. ಗೊಬ್ಬರ ಬಿತ್ತನೆ ಬೀಜದ ಬೆಲೆ ಇಳಿಕೆ ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ಸಾಲಮನ್ನಾ ಸೇರಿದಂತೆ ರಾಜ್ಯದ ಬಜೆಟ್ ಮೇಲೆ ರೈತರಿಗೆ ಸಾಕಷ್ಟು ನಿರೀಕ್ಷೆ ಮತ್ತು ಬೇಡಿಕೆಗಳಿವೆ. ಆದರೆ, ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಹೇಗೆ ಸ್ಪಂದಿಸಲಿದೆ ಎಂಬುದು ಬಜೆಟ್ ನಂತರ ಸ್ಪಷ್ಟವಾಗಲಿದೆ.

ಕಾರ್ಮಿಕರ ಕೂಗು

ಕೊರೊನಾ ಕಾರಣದಿಂದಾಗಿ ಅಸಂಘಟಿತ ಕಾರ್ಮಿಕ ವಲಯ ಸಾಕಷ್ಟು ಸಮಸ್ಯೆಯನ್ನು ಸಾಕಷ್ಟು ಸಾವು-ನೋವುಗಳನ್ನು ಎದುರಿಸಿದೆ. ಈ ವಿಭಾಗದಲ್ಲಿನ ನಿರುದ್ಯೋಗ ಸಮಸ್ಯೆ ಈವರೆಗೆ ಬಗೆಹರಿದಂತೆ ಕಂಡುಬಂದಿಲ್ಲ. ಅಲ್ಲದೆ, ಕಾರ್ಮಿಕ ಇಲಾಖೆ ಕೊರೊನಾ ಸಂದರ್ಭದಲ್ಲಿ ಅಸಂಘಟಿತ ವಲಯಕ್ಕೆ ಉತ್ತಮ ನೆರವನ್ನೂ ನೀಡಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.

ಸೂಕ್ತ ಕೆಲಸ ಮತ್ತು ಕೂಲಿ ಇಲ್ಲದೆ ದಿನಗೂಲಿಗಳು ಮತ್ತು ಕಟ್ಟಡ ಕಾರ್ಮಿಕರು ಕಂಗಾಲಾಗಿದ್ದಾರೆ. ನರೇಗ ಕಾರ್ಮಿಕರಿಗೆ ಅನುದಾನ ಸಾಲುತ್ತಿಲ್ಲ. ವಸತಿ ರಹಿತ ಕಾರ್ಮಿಕರಿಗೆ ಸೂರು ನೀಡುವುದಕ್ಕೆಂದೆ ಕೇಂದ್ರ-ರಾಜ್ಯ ಸರ್ಕಾರಗಳ ನಾನಾ ಯೋಜನೆಗಳು ಇವೆ. ಆದರೆ, ಸೂರು ಮಾತ್ರ ಖಚಿತವಾಗುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ಈ ವರ್ಷದ ಬಜೆಟ್‌ನಲ್ಲಿ ಅಸಂಘಟಿತ ವಲಯಕ್ಕೆ ಸರ್ಕಾರದ ಕೊಡುಗೆ ಏನು? ಎಂಬುದರ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ.

ಸಣ್ಣ-ಮಧ್ಯಮ ಉದ್ಯಮಗಳ ನಿರೀಕ್ಷೆ

ರಾಜ್ಯದಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವ ಕ್ಷೇತ್ರಗಳ ಪೈಕಿ ಸಣ್ಣ-ಮದ್ಯಮ ಉದ್ಯಮಗಳ ಪಾತ್ರ ದೊಡ್ಡದು. ಆದರೆ, ಜಿಎಸ್‌ಟಿ ಜಾರಿಯಿಂದಾಗಿ ಅನೇಕ ಸಣ್ಣ ಉದ್ಯಮಗಳು ಅವನತಿಯೆಡೆಗೆ ದೂಡಿತ್ತು. ಇನ್ನೂ ಕೊರೊನಾದಿಂದ ಉಂಟಾಗಿದ್ದ ಆರ್ಥಿಕ ಸಂಕಷ್ಟದಿಂದ ಈವರೆಗೆ ಅನೇಕ ಉದ್ಯಮಗಳು ಚೇತರಿಸಿಕೊಂಡಿಲ್ಲ. ಹೀಗಾಗಿ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಚೇತರಿಕೆಗೆ ರಾಜ್ಯ ಸರ್ಕಾರ ಯಾವ ಪ್ಯಾಕೇಜ್ ಘೋಷಿಸಲಿದೆ? ಎಂಬುದೂ ಸಹ ಕುತೂಹಲಕ್ಕೆ ಕಾರಣಾಗಿದೆ.

ಜನ ಸಾಮಾನ್ಯರ ಬೇಡಿಕೆ ಏನು?

ರಾಜ್ಯದಲ್ಲಿ ನಿರುದ್ಯೋಗದ ಸಮಸ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಶಿಕ್ಷಿತ ಯುವಕರು ಕೆಲಸವಿಲ್ಲದೆ ಕಂಗಾಲಾಗಿದ್ದಾರೆ. ಮತ್ತೊಂದೆಡೆ ದಿನೋಪಯೋಗಿ ವಸ್ತುಗಳ ಬೆಲೆ ದಿನೇ ದಿನೇ ಏರುತ್ತಿದ್ದು ಕೆಳ ಮತ್ತು ಮಧ್ಯಮ ವರ್ಗದ ಜನ ಬದುಕುವುದೇ ದುಸ್ಥರವಾಗಿದೆ. ಪೆಟ್ರೋಲ್ ಬೆಲೆಯಲ್ಲೂ ಸಹ ಪಂಚರಾಜ್ಯಗಳ ಚುನಾವಣೆ ಬಳಿಕ ಏರಿಕೆ ಕಾಣಲಿದೆ ಎನ್ನಲಾಗುತ್ತಿದೆ. ಇದು ನಿಜವಾದರೆ ಜನ ಸಾಮಾನ್ಯರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವುದು ಖಚಿತ. ಈ ಹಿಂದೆ ಪೆಟ್ರೋಲ್ ಬೆಲೆ ಲೀಟರ್‌ಗೆ 94 ರೂ ಆಗುತ್ತದೆ ಎಂದು ಬೊಮ್ಮಾಯಿ ಹೇಳಿದ್ದರು. ಆದರೆ 100 ರೂಗಿಂತ ಕೆಳಗೆ ಇಳಿದಿಲ್ಲ. ಇದನ್ನು ಹೇಗೆ ಎದುರಿಸುತ್ತಾರೆ ಕಾದು ನೋಡಬೇಕಿದೆ.

ಹೀಗಾಗಿ ರಾಜ್ಯ ಸರ್ಕಾರ ಉದ್ಯೋಗ ಸೃಷ್ಟಿಗೆ ಯಾವ ಕ್ರಮ ತೆಗೆದುಕೊಳ್ಳಲಿದೆ? ಬೆಲೆ ನಿಯಂತ್ರಣಕ್ಕೆ ಮುಂದಾಗಲಿದೆಯೇ? ಪೆಟ್ರೋಲ್ ಮೇಲಿನ ರಾಜ್ಯ ತೆರಿಗೆಯನ್ನು ಇಳಿಸಲಿದೆಯೇ? ಇದರ ಜೊತೆಗೆ ಯಾವೆಲ್ಲಾ ಅಗತ್ಯ ವಸ್ತುಗಳ ಮೇಲಿನ ತೆರಿಗೆಯನ್ನು ಇಳಿಸಲಿದೆ? ಎಂದು ಜನ ಕುತೂಹಲದಿಂದ ಕಾದು ಕುಳಿತಿದ್ದಾರೆ.


ಇದನ್ನೂ ಓದಿ: ‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Nanna nireekshe government aasthi mathe vaapaas barutha antha..,. Aaspathre, vidyasamsthegala fees kadime aagbahuda illa devasthanagalu hechhagbahuda

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...