Homeಕರ್ನಾಟಕUnion Budget 2025 | ರಾಜ್ಯಕ್ಕೆ ಚೊಂಬು ಕೊಡುವ ಅಭಿಯಾನ ಕೇಂದ್ರ ಮುಂದುವರೆಸಿದೆ - ಸಿಎಂ...

Union Budget 2025 | ರಾಜ್ಯಕ್ಕೆ ಚೊಂಬು ಕೊಡುವ ಅಭಿಯಾನ ಕೇಂದ್ರ ಮುಂದುವರೆಸಿದೆ – ಸಿಎಂ ಅಸಮಾಧಾನ

- Advertisement -
- Advertisement -

ಬಜೆಟ್ ಪೂರ್ವ ಸಭೆಯಲ್ಲಿ ನಾವಿಟ್ಟ ಬೇಡಿಕೆಗಳಲ್ಲಿ ಕೇಂದ್ರ ಸರ್ಕಾರ ಒಂದನ್ನೂ ಈಡೇರಿಸಿಲ್ಲ. ರಾಜ್ಯದ ಜನರಿಗೆ ಚೊಂಬು ಕೊಡುವ ಅಭಿಯಾನವನ್ನು ಕೇಂದ್ರ ಮುಂದುವರೆಸಿದ್ದು, ಇದು ರಾಜ್ಯದ ಹಿತಕ್ಕೆ ಮಾರಕವಾದ ನಿರಾಶದಾಯಕ ಬಜೆಟ್ ಎಂದು ಶನಿವಾರ ಕೇಂದ್ರ ಸರ್ಕಾರ ಮಂಡಿಸಿದ 2025ರ ಬಜಟ್‌ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮ್ಯಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. Union Budget 2025

ದೆಹಲಿಯಲ್ಲೇ ರೈತರ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರದ ಬಜೆಟ್ MSP ಬಗ್ಗೆ ಉಸಿರೇ ಬಿಟ್ಟಿಲ್ಲ. ರೈತ ಸಮುದಾಯಕ್ಕೆ ಅತ್ಯಂತ ದೊಡ್ಡ ದ್ರೋಹವನ್ನು ಕೇಂದ್ರ ಎಸಗಿದೆ. ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರಲ್ಲಿ ಒಬ್ಬರೂ ರಾಜ್ಯದ ಹಿತಾಸಕ್ತಿ ಬಗ್ಗೆ ನೆಪಕ್ಕೂ ಬಾಯಿ ಬಿಟ್ಟಿಲ್ಲ ಎಂದು ಅವರು ಹರಿಹಾಯ್ದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್ಯಕ್ಕೆ ಏಕೆ ಚೊಂಬು ಕೊಟ್ಟಿದ್ದೀರಿ ಎಂದು ಬಿಜೆಪಿ-ಜೆಡಿಎಸ್ ಸಂಸದರು ಮತ್ತು ಕೇಂದ್ರ ಸಚಿವರು ಪ್ರಧಾನಿ ಮೋದಿಯವರಿಗೆ ಕೇಳಬೇಕಿದೆ. ಅಲ್ಲದೆ, ಆಂಧ್ರ ಮತ್ತು ಬಿಹಾರ ಬಿಟ್ಟು ಎಲ್ಲಾ ರಾಜ್ಯಗಳಿಗೂ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ. ಜೆಡಿಎಸ್-ಬಿಜೆಪಿ ದೋಸ್ತಿಯಿದ್ದರೂ ರಾಜ್ಯಕ್ಕೆ ಚೊಂಬು ಸಿಕ್ಕಿದೆ. ಮನುಸ್ಮೃತಿ ವಿರೋಧಿಸುವ ಮತ್ತು ಸಂವಿಧಾನ ಪರವಾಗಿರುವ ರಾಜ್ಯಗಳ ವಿರುದ್ಧ ಬಿಜೆಪಿ ಸರ್ಕಾರ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. Union Budget 2025

ಆದಾಯ ತೆರಿಗೆಯ ಮಿತಿ 12 ಲಕ್ಷ ರೂಪಾಯಿಗಳಿಗೆ ಏರಿಸಿರುವುದನ್ನು ಕೊಂಡಾಡಲಾಗುತ್ತಿದೆ. ನಮ್ಮಲ್ಲಿ ಕಳೆದ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಪಾವತಿ ಮಾಡಿದವರು ಕೇವಲ 8.09 ಕೋಟಿ ಜನ. ಇದು ನಮ್ಮ ಒಟ್ಟು ಜನಸಂಖ್ಯೆಯ ಶೇಕಡಾ 6.64ರಷ್ಟಾಗತ್ತದೆ. ಅವರಲ್ಲಿ 4.90 ಕೋಟಿ ಜನ ಸೊನ್ನೆ ತೆರಿಗೆ ಪಾವತಿದಾರರು. ಆದ್ದರಿಂದ ಆದಾಯ ತೆರಿಗೆ ಮಿತಿಯ ಹೆಚ್ಚಳ ಮೇಲು ಮಧ್ಯಮ ವರ್ಗದ ಕೆಲವೇ ಕುಟುಂಬಗಳಿಗೆ ನೆರವಾಗಬಹುದೇ ವಿನಃ, ದಿನದ ಆದಾಯ 100-150 ರೂಪಾಯಿಯಷ್ಟೆ ಹೊಂದಿದ ಶೇಕಡಾ 70ರಷ್ಟು ಜನಸಂಖ್ಯೆಗೆ ಇದರಿಂದ ಯಾವ ಲಾಭವೂ ಇಲ್ಲ ಎಂದು ಸಿಎಂ ವಿಶ್ಲೇಷಣೆ ಮಾಡಿದ್ದಾರೆ.

“2024-25 ರ ಪತಿಷ್ಕೃತ ಬಜೆಟ್ 47,16000 ಕೋಟಿ ಆಗಿತ್ತು. 104000 ಕೋಟಿ ತೆರಿಗೆ ಕಡಿಮೆ ಆಯ್ತು. ತೆರಿಗೆ ಅವರ ನಿರೀಕ್ಷೆಯಂತೆ ಸಂಗ್ರಹ ಆಗಿಲ್ಲ ಅಂತಲೇ ಅರ್ಥ. ಈ ಸಾಲಿನ 50,65,345 ಕೋಟಿ ಬಜೆಟ್ ಗಾತ್ರದಲ್ಲಿ ಸಾಲದ ಪ್ರಮಾಣವೇ 15,68,936 ಕೋಟಿಯಷ್ಟಿದೆ. ಇದರಲ್ಲಿ ಬಡ್ಡಿಗೇ 12,70000 ಕೋಟಿ ಹೋಗುತ್ತಿದೆ. ದೇಶದ ಸಾಲ 202 ಲಕ್ಷ ಕೋಟಿಯಿಂದ 205 ಲಕ್ಷ ಕೋಟಿವರೆಗೂ ಆಗಿದೆ.” ಎಂದು ಅವರು ಹೇಳಿದ್ದಾರೆ.

“ಒಟ್ಟಾರೆ ಬಜೆಟ್ ಗಾತ್ರ 50,65,345 ಕೋಟಿ ರೂಪಾಯಿಗಳು. 2024-25ನೇ ಸಾಲಿಗೆ ಸಂಬಂಧಿಸಿದಂತೆ 48.20 ಲಕ್ಷ ಕೋಟಿ ರೂಪಾಯಿಗಳ ಬಜೆಟ್ಟನ್ನು ಮಂಡಿಸಿದ್ದರು. ಆದರೆ, ಪರಿಷ್ಕೃತ ಅಂದಾಜಿನ ಪ್ರಕಾರ 47.16 ಲಕ್ಷ ಕೋಟಿ ರೂಪಾಯಿಗಳಷ್ಟು ವೆಚ್ಚವಾಗಬಹುದು ಎಂದು ಅಂದಾಜಿಸಿದ್ದಾರೆ. ಅದರಂತೆ ಇದನ್ನು ನೋಡಿದರೆ ಕೇಂದ್ರ ಸರ್ಕಾರಕ್ಕೆ 1.04 ಲಕ್ಷ ಕೋಟಿ ರೂಪಾಯಿಗಳಷ್ಟು ತೆರಿಗೆ ಸಂಗ್ರಹ ಕಡಿಮೆಯಾಗುತ್ತದೆ ಎಂದು ಅಂದಾಜು ಮಾಡಿದ್ದಾರೆ. ಹಾಗಾಗಿ, ದೇಶದ ಆರ್ಥಿಕ ಸ್ಥಿತಿ ಸರಿಯಾಗಿಲ್ಲ ಎಂಬುದನ್ನು ಇದು ಸೂಚಿಸುತ್ತದೆ” ಎಂದು ಸಿಎಂ ಹೇಳಿದ್ದಾರೆ.

ಇದನ್ನೂಓದಿ:  ಅಯೋಧ್ಯೆ | ದಲಿತ ಯುವತಿಯ ನಗ್ನ ಶವ ಪತ್ತೆ; ಸಾಮೂಹಿಕ ಅತ್ಯಾಚಾರ, ಕೊಲೆ ಶಂಕೆ

ಅಯೋಧ್ಯೆ | ದಲಿತ ಯುವತಿಯ ನಗ್ನ ಶವ ಪತ್ತೆ; ಸಾಮೂಹಿಕ ಅತ್ಯಾಚಾರ, ಕೊಲೆ ಶಂಕೆ

ಇದನ್ನೂಓದಿ:  Union Budget 2025 | ಗುಂಡಿನ ಗಾಯಕ್ಕೆ ಬ್ಯಾಂಡ್ ಏಡ್ ಚಿಕಿತ್ಸೆ – ರಾಹುಲ್ ಗಾಂಧಿ

Union Budget 2025 | ಗುಂಡಿನ ಗಾಯಕ್ಕೆ ಬ್ಯಾಂಡ್ ಏಡ್ ಚಿಕಿತ್ಸೆ – ರಾಹುಲ್ ಗಾಂಧಿ

ಇದನ್ನೂಓದಿ:  ನಕಲಿ ಚಿತ್ರ ಹಂಚಿಕೆ | ಬಿಜೆಪಿ ಬೆಂಬಲಿಗ ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ನಟ ಪ್ರಕಾಶ್‌ ರಾಜ್ ದೂರು

ನಕಲಿ ಚಿತ್ರ ಹಂಚಿಕೆ | ಬಿಜೆಪಿ ಬೆಂಬಲಿಗ ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ನಟ ಪ್ರಕಾಶ್‌ ರಾಜ್ ದೂರು

ಇದನ್ನೂಓದಿ:   Union Budget 2025 | ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದ? – ಸಚಿವ ಕೃಷ್ಣಬೈರೇಗೌಡ

Union Budget 2025 | ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದ? – ಸಚಿವ ಕೃಷ್ಣಬೈರೇಗೌಡ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...