Homeಕರ್ನಾಟಕಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! - ಕಾರಣ ಏನು?

ಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! – ಕಾರಣ ಏನು?

ಆರೋಗ್ಯ ಕಾರ್ಯಕರ್ತರ ಮೇಲೆ ಕೋವಾಕ್ಸಿನ್ ಅನ್ನು "ಪ್ರಾಯೋಗಿಕ ಆಧಾರದ ಮೇಲೆ" ಬಳಸುವುದು ಖಂಡನೀಯ ಎಂದು ಕೆಎಆರ್‌ಡಿ (ಕರ್ನಾಟಕ ಅಸೋಷಿಯೇಷನ್ ಆಫ್ ರೆಸಿಡೆನ್ಸಿಯಲ್ ಡಾಕ್ಟರ್‍ಸ್) ಅಧ್ಯಕ್ಷ ಡಾ. ದಯಾನಂದ್ ಸಾಗರ್ ಹೇಳಿದ್ದಾರೆ.

- Advertisement -
- Advertisement -

ತಮಗೆ ನೀಡುವ ಕೊವಿಡ್ ಲಸಿಕೆ ಯಾವುದಿರಬೇಕು (ಸದ್ಯ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಎರಡೇ ಆಯ್ಕೆ) ಎಂಬ ಆಯ್ಕೆಯನ್ನು ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕು ಎಂದು ಕರ್ನಾಟಕ ಅಸೋಷಿಯೇಷನ್ ಆಫ್ ರೆಸಿಡೆನ್ಸಿಯಲ್ ಡಾಕ್ಟರ್‍ಸ್ (KARD) ಸರ್ಕಾರವನ್ನು ಆಗ್ರಹಿಸಿದೆ.

KARD, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರಿಗೆ ಬರೆದ ಪತ್ರದಲ್ಲಿ, “ರಾಜ್ಯದ ಹಲವಾರು ಜಿಲ್ಲೆಗಳ ನಿವಾಸಿ (ರೆಸಿಡೆಂಟ್) ವೈದ್ಯರು ಲಸಿಕೆ ವಿಷಯದಲ್ಲಿ ತಮಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಭಾವಿಸಿದ್ದಾರೆ. ಪ್ರಸ್ತುತ, ಕೊವ್ಯಾಕ್ಸಿನ್ ಅನ್ನು ಚಿಕ್ಕಮಗಳೂರು, ಹಾಸನ, ಬಳ್ಳಾರಿ, ಶಿವಮೊಗ್ಗ, ಚಿಕ್ಕಬಳ್ಳಾಪುರ ಮತ್ತು ದಾವಣಗೆರೆಯ ಜಿಲ್ಲಾ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತಿದೆ” ಎಂದು ಬರೆದಿದ್ದಾರೆ.

ಈ ಜಿಲ್ಲೆಗಳ ನಿವಾಸಿ ವೈದ್ಯರಿಗೆ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ಕರ್ನಾಟಕದ ಇತರ ಕೇಂದ್ರಗಳು ಕೋವಿಶೀಲ್ಡ್ ಪಡೆಯುತ್ತಿವೆ.

“ಕೊವಾಕ್ಸಿನ್ ಸ್ವೀಕರಿಸುವ ಮೊದಲು ಕೋವಾಕ್ಸಿನ್‌ನ ವೈದ್ಯಕೀಯ ಪರಿಣಾಮಕಾರಿತ್ವವನ್ನು ಇನ್ನೂ ಸ್ಥಾಪಿಸಲಾಗಿಲ್ಲ ಎಂದು ತಿಳಿಸುವ ಜವಾಬ್ದಾರಿಯನ್ನು ನಮ್ಮ ಮೇಲೆ ಹೊರಿಸಲಾಗಿದ್ದು, ಆ ರೀತಿಯ ಪತ್ರವನ್ನು ನಮ್ಮಿಂದ ಬರೆಸಿಕೊಳ್ಳಲಾಗಿದೆ” ಎಂದು ವೈದ್ಯಕೀಯ ಸಚಿವರಿಗೆ ಬರೆದ ಪತ್ರದಲ್ಲಿ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು: ಸಾವಿಗೆ ಲಸಿಕೆ ಕಾರಣವಲ್ಲ ಎಂದ ಸಚಿವ ಸುಧಾಕರ್

ಲಸಿಕೆ ವಿತರಣೆಯಲ್ಲಿನ ಜವಾಬ್ದಾರಿ ಮತ್ತು ವ್ಯತ್ಯಾಸಗಳು ಬಹಳ ಅನುಮಾನಾಸ್ಪದವೆನಿಸುತ್ತದೆ. ಮತ್ತು ಕೊವ್ಯಾಕ್ಸಿನ್ ಲಸಿಕೆ ಪಡೆಯುವಲ್ಲಿ ನಿವಾಸಿ ವೈದ್ಯರು (ರೆಸಿಡೆಂಟ್ ಡಾಕ್ಟರ್‍ಸ್) ಹಿಂಜರಿಯುತ್ತಿದ್ದಾರೆ. ಶಿವಮೊಗ್ಗ, ಹಾಸನ, ಚಾಮರಾಜನಗರ ಮತ್ತು ಬಳ್ಳಾರಿಯಲ್ಲಿನ ವೈದ್ಯಕೀಯ ಕಾಲೇಜುಗಳ ನಿವಾಸಿ ವೈದ್ಯರು (ರೆಸಿಡೆಂಟ್ ಡಾಕ್ಟರ್‍ಸ್), “ಮೂರನೇ ಹಂತದ ಟ್ರಯಲ್ಸ್ ಪೂರ್ಣಗೊಳಿಸದ ಲಸಿಕೆಯನ್ನು ನೀಡಲು ತೀರ್ಮಾನಿಸಿದ ಸರ್ಕಾರದ ಕ್ರಮ ಕಳವಳಕಾರಿಯಾಗಿದೆ” ಎಂದು ದೂರಿದ್ದಾರೆ.

ಆರೋಗ್ಯ ಕಾರ್ಯಕರ್ತರ ಮೇಲೆ ಕೋವಾಕ್ಸಿನ್ ಅನ್ನು “ಪ್ರಾಯೋಗಿಕ ಆಧಾರದ ಮೇಲೆ” ಬಳಸುವುದು ಖಂಡನೀಯ ಎಂದು ಕೆಎಆರ್‌ಡಿ (ಕರ್ನಾಟಕ ಅಸೋಷಿಯೇಷನ್ ಆಫ್ ರೆಸಿಡೆನ್ಸಿಯಲ್ ಡಾಕ್ಟರ್‍ಸ್) ಅಧ್ಯಕ್ಷ ಡಾ. ದಯಾನಂದ್ ಸಾಗರ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಇದಲ್ಲದೆ, ನಮ್ಮಿಂದ ಸಹಿ ಹಾಕುವ ಕಾರ್ಯವನ್ನು ಅನುಮಾನಾಸ್ಪದವಾಗಿ ಮಾಡಿಸಲಾಗಿದೆ. ಅದರಲ್ಲಿನ ಪದಪುಂಜ ಗೊಂದಲದಿಂದ ಕೂಡಿವೆ. ಇದಕ್ಕೆ ಬದಲಾಗಿ, ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಆಯ್ಕೆ ಮಾಡುವ ಆಯ್ಕೆಯನ್ನು ನೀಡಬೇಕು. ಕನಿಷ್ಟ ಮಧ್ಯಂತರ ವಿಶ್ಲೇಷಣೆಯ ಹಂತವನ್ನು ದಾಟಿದ ಲಸಿಕೆಗಳನ್ನು ಸರ್ಕಾರ ನೀಡಬೇಕು ಎಂದು ಅವರು ಹೇಳಿದ್ದಾರೆ. ಕೋವಾಕ್ಸಿನ್‌ನ ಮಧ್ಯಂತರ ವಿಶ್ಲೇಷಣಾ ವರದಿ ಲಭ್ಯವಿಲ್ಲದ ಕಾರಣ ಕೋವಿಶೀಲ್ಡ್‌ಗೆ ಆದ್ಯತೆ ಹೆಚ್ಚಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಕೊರೊನಾ ಲಸಿಕೆ ಪಡೆದ ಆಸ್ಪತ್ರೆಯ ಉದ್ಯೋಗಿ ಸಾವು

ಆದಾಗ್ಯೂ, ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್ ನೀಡಿದ ಅನುಮತಿಯನ್ನು ಉಲ್ಲೇಖಿಸುತ್ತಿರುವ ಆರೋಗ್ಯ ಸಚಿವ ಸುಧಾಕರ್, “ಎರಡೂ ಲಸಿಕೆಗಳು ವಿಶ್ವಾಸಾರ್ಹ, ಆರೋಗ್ಯ ಕಾರ್ಯಕರ್ತರು ಯಾವುದೇ ಆತಂಕವಿಲ್ಲದೆ ಕೊವಾಕ್ಸಿನ್ ತೆಗೆದುಕೊಳ್ಳಬಹುದು” ಎಂದು ಹೇಳುತ್ತಿದ್ದಾರೆ.

ಇದರ ನಡುವೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯು ಬಹಿರಂಗಪಡಿಸಿದ ಮಾಹಿತಿಯು ವ್ಯಾಕ್ಸಿನೇಷನ್ ಚಾಲನೆಯ ಮೊದಲ ಮೂರು ದಿನಗಳಲ್ಲಿ 55,550 ಫಲಾನುಭವಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕಲಾಗಿದೆ ಎಂದು ಹೇಳಿದೆ.

ಸೋಮವಾರ ನಡೆದ ಕೋವಿಡ್ -19 ವ್ಯಾಕ್ಸಿನೇಷನ್ ಚಾಲನೆಯಲ್ಲಿ ಕರ್ನಾಟಕವು ಒಟ್ಟಾರೆ ಶೇಕಡಾ 47 ರಷ್ಟು ವ್ಯಾಪ್ತಿಯನ್ನು ವರದಿ ಮಾಡಿದೆ, ಇದು ಭಾನುವಾರ ಮತ್ತು ಶನಿವಾರದಂದು ನಡೆದ ವ್ಯಾಕಿನೇಷನ್ (ಕ್ರಮವಾಗಿ ಶೇ. 58.4 ಮತ್ತು ಶೇ, 63) ಪ್ರಮಾಣಕ್ಕಿಂತ ಕಡಿಮೆಯಾಗಿದೆ.


ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಲಸಿಕೆ: 51 ಪ್ರತಿಕೂಲ ಪರಿಣಾಮ ಪ್ರಕರಣ, ಒಬ್ಬರ ಸ್ಥಿತಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...