Homeಕರ್ನಾಟಕಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! - ಕಾರಣ ಏನು?

ಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! – ಕಾರಣ ಏನು?

ಆರೋಗ್ಯ ಕಾರ್ಯಕರ್ತರ ಮೇಲೆ ಕೋವಾಕ್ಸಿನ್ ಅನ್ನು "ಪ್ರಾಯೋಗಿಕ ಆಧಾರದ ಮೇಲೆ" ಬಳಸುವುದು ಖಂಡನೀಯ ಎಂದು ಕೆಎಆರ್‌ಡಿ (ಕರ್ನಾಟಕ ಅಸೋಷಿಯೇಷನ್ ಆಫ್ ರೆಸಿಡೆನ್ಸಿಯಲ್ ಡಾಕ್ಟರ್‍ಸ್) ಅಧ್ಯಕ್ಷ ಡಾ. ದಯಾನಂದ್ ಸಾಗರ್ ಹೇಳಿದ್ದಾರೆ.

- Advertisement -
- Advertisement -

ತಮಗೆ ನೀಡುವ ಕೊವಿಡ್ ಲಸಿಕೆ ಯಾವುದಿರಬೇಕು (ಸದ್ಯ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಎರಡೇ ಆಯ್ಕೆ) ಎಂಬ ಆಯ್ಕೆಯನ್ನು ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕು ಎಂದು ಕರ್ನಾಟಕ ಅಸೋಷಿಯೇಷನ್ ಆಫ್ ರೆಸಿಡೆನ್ಸಿಯಲ್ ಡಾಕ್ಟರ್‍ಸ್ (KARD) ಸರ್ಕಾರವನ್ನು ಆಗ್ರಹಿಸಿದೆ.

KARD, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರಿಗೆ ಬರೆದ ಪತ್ರದಲ್ಲಿ, “ರಾಜ್ಯದ ಹಲವಾರು ಜಿಲ್ಲೆಗಳ ನಿವಾಸಿ (ರೆಸಿಡೆಂಟ್) ವೈದ್ಯರು ಲಸಿಕೆ ವಿಷಯದಲ್ಲಿ ತಮಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಭಾವಿಸಿದ್ದಾರೆ. ಪ್ರಸ್ತುತ, ಕೊವ್ಯಾಕ್ಸಿನ್ ಅನ್ನು ಚಿಕ್ಕಮಗಳೂರು, ಹಾಸನ, ಬಳ್ಳಾರಿ, ಶಿವಮೊಗ್ಗ, ಚಿಕ್ಕಬಳ್ಳಾಪುರ ಮತ್ತು ದಾವಣಗೆರೆಯ ಜಿಲ್ಲಾ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತಿದೆ” ಎಂದು ಬರೆದಿದ್ದಾರೆ.

ಈ ಜಿಲ್ಲೆಗಳ ನಿವಾಸಿ ವೈದ್ಯರಿಗೆ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ಕರ್ನಾಟಕದ ಇತರ ಕೇಂದ್ರಗಳು ಕೋವಿಶೀಲ್ಡ್ ಪಡೆಯುತ್ತಿವೆ.

“ಕೊವಾಕ್ಸಿನ್ ಸ್ವೀಕರಿಸುವ ಮೊದಲು ಕೋವಾಕ್ಸಿನ್‌ನ ವೈದ್ಯಕೀಯ ಪರಿಣಾಮಕಾರಿತ್ವವನ್ನು ಇನ್ನೂ ಸ್ಥಾಪಿಸಲಾಗಿಲ್ಲ ಎಂದು ತಿಳಿಸುವ ಜವಾಬ್ದಾರಿಯನ್ನು ನಮ್ಮ ಮೇಲೆ ಹೊರಿಸಲಾಗಿದ್ದು, ಆ ರೀತಿಯ ಪತ್ರವನ್ನು ನಮ್ಮಿಂದ ಬರೆಸಿಕೊಳ್ಳಲಾಗಿದೆ” ಎಂದು ವೈದ್ಯಕೀಯ ಸಚಿವರಿಗೆ ಬರೆದ ಪತ್ರದಲ್ಲಿ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು: ಸಾವಿಗೆ ಲಸಿಕೆ ಕಾರಣವಲ್ಲ ಎಂದ ಸಚಿವ ಸುಧಾಕರ್

ಲಸಿಕೆ ವಿತರಣೆಯಲ್ಲಿನ ಜವಾಬ್ದಾರಿ ಮತ್ತು ವ್ಯತ್ಯಾಸಗಳು ಬಹಳ ಅನುಮಾನಾಸ್ಪದವೆನಿಸುತ್ತದೆ. ಮತ್ತು ಕೊವ್ಯಾಕ್ಸಿನ್ ಲಸಿಕೆ ಪಡೆಯುವಲ್ಲಿ ನಿವಾಸಿ ವೈದ್ಯರು (ರೆಸಿಡೆಂಟ್ ಡಾಕ್ಟರ್‍ಸ್) ಹಿಂಜರಿಯುತ್ತಿದ್ದಾರೆ. ಶಿವಮೊಗ್ಗ, ಹಾಸನ, ಚಾಮರಾಜನಗರ ಮತ್ತು ಬಳ್ಳಾರಿಯಲ್ಲಿನ ವೈದ್ಯಕೀಯ ಕಾಲೇಜುಗಳ ನಿವಾಸಿ ವೈದ್ಯರು (ರೆಸಿಡೆಂಟ್ ಡಾಕ್ಟರ್‍ಸ್), “ಮೂರನೇ ಹಂತದ ಟ್ರಯಲ್ಸ್ ಪೂರ್ಣಗೊಳಿಸದ ಲಸಿಕೆಯನ್ನು ನೀಡಲು ತೀರ್ಮಾನಿಸಿದ ಸರ್ಕಾರದ ಕ್ರಮ ಕಳವಳಕಾರಿಯಾಗಿದೆ” ಎಂದು ದೂರಿದ್ದಾರೆ.

ಆರೋಗ್ಯ ಕಾರ್ಯಕರ್ತರ ಮೇಲೆ ಕೋವಾಕ್ಸಿನ್ ಅನ್ನು “ಪ್ರಾಯೋಗಿಕ ಆಧಾರದ ಮೇಲೆ” ಬಳಸುವುದು ಖಂಡನೀಯ ಎಂದು ಕೆಎಆರ್‌ಡಿ (ಕರ್ನಾಟಕ ಅಸೋಷಿಯೇಷನ್ ಆಫ್ ರೆಸಿಡೆನ್ಸಿಯಲ್ ಡಾಕ್ಟರ್‍ಸ್) ಅಧ್ಯಕ್ಷ ಡಾ. ದಯಾನಂದ್ ಸಾಗರ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಇದಲ್ಲದೆ, ನಮ್ಮಿಂದ ಸಹಿ ಹಾಕುವ ಕಾರ್ಯವನ್ನು ಅನುಮಾನಾಸ್ಪದವಾಗಿ ಮಾಡಿಸಲಾಗಿದೆ. ಅದರಲ್ಲಿನ ಪದಪುಂಜ ಗೊಂದಲದಿಂದ ಕೂಡಿವೆ. ಇದಕ್ಕೆ ಬದಲಾಗಿ, ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಆಯ್ಕೆ ಮಾಡುವ ಆಯ್ಕೆಯನ್ನು ನೀಡಬೇಕು. ಕನಿಷ್ಟ ಮಧ್ಯಂತರ ವಿಶ್ಲೇಷಣೆಯ ಹಂತವನ್ನು ದಾಟಿದ ಲಸಿಕೆಗಳನ್ನು ಸರ್ಕಾರ ನೀಡಬೇಕು ಎಂದು ಅವರು ಹೇಳಿದ್ದಾರೆ. ಕೋವಾಕ್ಸಿನ್‌ನ ಮಧ್ಯಂತರ ವಿಶ್ಲೇಷಣಾ ವರದಿ ಲಭ್ಯವಿಲ್ಲದ ಕಾರಣ ಕೋವಿಶೀಲ್ಡ್‌ಗೆ ಆದ್ಯತೆ ಹೆಚ್ಚಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಕೊರೊನಾ ಲಸಿಕೆ ಪಡೆದ ಆಸ್ಪತ್ರೆಯ ಉದ್ಯೋಗಿ ಸಾವು

ಆದಾಗ್ಯೂ, ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್ ನೀಡಿದ ಅನುಮತಿಯನ್ನು ಉಲ್ಲೇಖಿಸುತ್ತಿರುವ ಆರೋಗ್ಯ ಸಚಿವ ಸುಧಾಕರ್, “ಎರಡೂ ಲಸಿಕೆಗಳು ವಿಶ್ವಾಸಾರ್ಹ, ಆರೋಗ್ಯ ಕಾರ್ಯಕರ್ತರು ಯಾವುದೇ ಆತಂಕವಿಲ್ಲದೆ ಕೊವಾಕ್ಸಿನ್ ತೆಗೆದುಕೊಳ್ಳಬಹುದು” ಎಂದು ಹೇಳುತ್ತಿದ್ದಾರೆ.

ಇದರ ನಡುವೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯು ಬಹಿರಂಗಪಡಿಸಿದ ಮಾಹಿತಿಯು ವ್ಯಾಕ್ಸಿನೇಷನ್ ಚಾಲನೆಯ ಮೊದಲ ಮೂರು ದಿನಗಳಲ್ಲಿ 55,550 ಫಲಾನುಭವಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕಲಾಗಿದೆ ಎಂದು ಹೇಳಿದೆ.

ಸೋಮವಾರ ನಡೆದ ಕೋವಿಡ್ -19 ವ್ಯಾಕ್ಸಿನೇಷನ್ ಚಾಲನೆಯಲ್ಲಿ ಕರ್ನಾಟಕವು ಒಟ್ಟಾರೆ ಶೇಕಡಾ 47 ರಷ್ಟು ವ್ಯಾಪ್ತಿಯನ್ನು ವರದಿ ಮಾಡಿದೆ, ಇದು ಭಾನುವಾರ ಮತ್ತು ಶನಿವಾರದಂದು ನಡೆದ ವ್ಯಾಕಿನೇಷನ್ (ಕ್ರಮವಾಗಿ ಶೇ. 58.4 ಮತ್ತು ಶೇ, 63) ಪ್ರಮಾಣಕ್ಕಿಂತ ಕಡಿಮೆಯಾಗಿದೆ.


ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಲಸಿಕೆ: 51 ಪ್ರತಿಕೂಲ ಪರಿಣಾಮ ಪ್ರಕರಣ, ಒಬ್ಬರ ಸ್ಥಿತಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...