Homeಕರ್ನಾಟಕಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! - ಕಾರಣ ಏನು?

ಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! – ಕಾರಣ ಏನು?

ಆರೋಗ್ಯ ಕಾರ್ಯಕರ್ತರ ಮೇಲೆ ಕೋವಾಕ್ಸಿನ್ ಅನ್ನು "ಪ್ರಾಯೋಗಿಕ ಆಧಾರದ ಮೇಲೆ" ಬಳಸುವುದು ಖಂಡನೀಯ ಎಂದು ಕೆಎಆರ್‌ಡಿ (ಕರ್ನಾಟಕ ಅಸೋಷಿಯೇಷನ್ ಆಫ್ ರೆಸಿಡೆನ್ಸಿಯಲ್ ಡಾಕ್ಟರ್‍ಸ್) ಅಧ್ಯಕ್ಷ ಡಾ. ದಯಾನಂದ್ ಸಾಗರ್ ಹೇಳಿದ್ದಾರೆ.

- Advertisement -
- Advertisement -

ತಮಗೆ ನೀಡುವ ಕೊವಿಡ್ ಲಸಿಕೆ ಯಾವುದಿರಬೇಕು (ಸದ್ಯ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಎರಡೇ ಆಯ್ಕೆ) ಎಂಬ ಆಯ್ಕೆಯನ್ನು ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕು ಎಂದು ಕರ್ನಾಟಕ ಅಸೋಷಿಯೇಷನ್ ಆಫ್ ರೆಸಿಡೆನ್ಸಿಯಲ್ ಡಾಕ್ಟರ್‍ಸ್ (KARD) ಸರ್ಕಾರವನ್ನು ಆಗ್ರಹಿಸಿದೆ.

KARD, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರಿಗೆ ಬರೆದ ಪತ್ರದಲ್ಲಿ, “ರಾಜ್ಯದ ಹಲವಾರು ಜಿಲ್ಲೆಗಳ ನಿವಾಸಿ (ರೆಸಿಡೆಂಟ್) ವೈದ್ಯರು ಲಸಿಕೆ ವಿಷಯದಲ್ಲಿ ತಮಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಭಾವಿಸಿದ್ದಾರೆ. ಪ್ರಸ್ತುತ, ಕೊವ್ಯಾಕ್ಸಿನ್ ಅನ್ನು ಚಿಕ್ಕಮಗಳೂರು, ಹಾಸನ, ಬಳ್ಳಾರಿ, ಶಿವಮೊಗ್ಗ, ಚಿಕ್ಕಬಳ್ಳಾಪುರ ಮತ್ತು ದಾವಣಗೆರೆಯ ಜಿಲ್ಲಾ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತಿದೆ” ಎಂದು ಬರೆದಿದ್ದಾರೆ.

ಈ ಜಿಲ್ಲೆಗಳ ನಿವಾಸಿ ವೈದ್ಯರಿಗೆ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ಕರ್ನಾಟಕದ ಇತರ ಕೇಂದ್ರಗಳು ಕೋವಿಶೀಲ್ಡ್ ಪಡೆಯುತ್ತಿವೆ.

“ಕೊವಾಕ್ಸಿನ್ ಸ್ವೀಕರಿಸುವ ಮೊದಲು ಕೋವಾಕ್ಸಿನ್‌ನ ವೈದ್ಯಕೀಯ ಪರಿಣಾಮಕಾರಿತ್ವವನ್ನು ಇನ್ನೂ ಸ್ಥಾಪಿಸಲಾಗಿಲ್ಲ ಎಂದು ತಿಳಿಸುವ ಜವಾಬ್ದಾರಿಯನ್ನು ನಮ್ಮ ಮೇಲೆ ಹೊರಿಸಲಾಗಿದ್ದು, ಆ ರೀತಿಯ ಪತ್ರವನ್ನು ನಮ್ಮಿಂದ ಬರೆಸಿಕೊಳ್ಳಲಾಗಿದೆ” ಎಂದು ವೈದ್ಯಕೀಯ ಸಚಿವರಿಗೆ ಬರೆದ ಪತ್ರದಲ್ಲಿ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು: ಸಾವಿಗೆ ಲಸಿಕೆ ಕಾರಣವಲ್ಲ ಎಂದ ಸಚಿವ ಸುಧಾಕರ್

ಲಸಿಕೆ ವಿತರಣೆಯಲ್ಲಿನ ಜವಾಬ್ದಾರಿ ಮತ್ತು ವ್ಯತ್ಯಾಸಗಳು ಬಹಳ ಅನುಮಾನಾಸ್ಪದವೆನಿಸುತ್ತದೆ. ಮತ್ತು ಕೊವ್ಯಾಕ್ಸಿನ್ ಲಸಿಕೆ ಪಡೆಯುವಲ್ಲಿ ನಿವಾಸಿ ವೈದ್ಯರು (ರೆಸಿಡೆಂಟ್ ಡಾಕ್ಟರ್‍ಸ್) ಹಿಂಜರಿಯುತ್ತಿದ್ದಾರೆ. ಶಿವಮೊಗ್ಗ, ಹಾಸನ, ಚಾಮರಾಜನಗರ ಮತ್ತು ಬಳ್ಳಾರಿಯಲ್ಲಿನ ವೈದ್ಯಕೀಯ ಕಾಲೇಜುಗಳ ನಿವಾಸಿ ವೈದ್ಯರು (ರೆಸಿಡೆಂಟ್ ಡಾಕ್ಟರ್‍ಸ್), “ಮೂರನೇ ಹಂತದ ಟ್ರಯಲ್ಸ್ ಪೂರ್ಣಗೊಳಿಸದ ಲಸಿಕೆಯನ್ನು ನೀಡಲು ತೀರ್ಮಾನಿಸಿದ ಸರ್ಕಾರದ ಕ್ರಮ ಕಳವಳಕಾರಿಯಾಗಿದೆ” ಎಂದು ದೂರಿದ್ದಾರೆ.

ಆರೋಗ್ಯ ಕಾರ್ಯಕರ್ತರ ಮೇಲೆ ಕೋವಾಕ್ಸಿನ್ ಅನ್ನು “ಪ್ರಾಯೋಗಿಕ ಆಧಾರದ ಮೇಲೆ” ಬಳಸುವುದು ಖಂಡನೀಯ ಎಂದು ಕೆಎಆರ್‌ಡಿ (ಕರ್ನಾಟಕ ಅಸೋಷಿಯೇಷನ್ ಆಫ್ ರೆಸಿಡೆನ್ಸಿಯಲ್ ಡಾಕ್ಟರ್‍ಸ್) ಅಧ್ಯಕ್ಷ ಡಾ. ದಯಾನಂದ್ ಸಾಗರ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಇದಲ್ಲದೆ, ನಮ್ಮಿಂದ ಸಹಿ ಹಾಕುವ ಕಾರ್ಯವನ್ನು ಅನುಮಾನಾಸ್ಪದವಾಗಿ ಮಾಡಿಸಲಾಗಿದೆ. ಅದರಲ್ಲಿನ ಪದಪುಂಜ ಗೊಂದಲದಿಂದ ಕೂಡಿವೆ. ಇದಕ್ಕೆ ಬದಲಾಗಿ, ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಆಯ್ಕೆ ಮಾಡುವ ಆಯ್ಕೆಯನ್ನು ನೀಡಬೇಕು. ಕನಿಷ್ಟ ಮಧ್ಯಂತರ ವಿಶ್ಲೇಷಣೆಯ ಹಂತವನ್ನು ದಾಟಿದ ಲಸಿಕೆಗಳನ್ನು ಸರ್ಕಾರ ನೀಡಬೇಕು ಎಂದು ಅವರು ಹೇಳಿದ್ದಾರೆ. ಕೋವಾಕ್ಸಿನ್‌ನ ಮಧ್ಯಂತರ ವಿಶ್ಲೇಷಣಾ ವರದಿ ಲಭ್ಯವಿಲ್ಲದ ಕಾರಣ ಕೋವಿಶೀಲ್ಡ್‌ಗೆ ಆದ್ಯತೆ ಹೆಚ್ಚಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಕೊರೊನಾ ಲಸಿಕೆ ಪಡೆದ ಆಸ್ಪತ್ರೆಯ ಉದ್ಯೋಗಿ ಸಾವು

ಆದಾಗ್ಯೂ, ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್ ನೀಡಿದ ಅನುಮತಿಯನ್ನು ಉಲ್ಲೇಖಿಸುತ್ತಿರುವ ಆರೋಗ್ಯ ಸಚಿವ ಸುಧಾಕರ್, “ಎರಡೂ ಲಸಿಕೆಗಳು ವಿಶ್ವಾಸಾರ್ಹ, ಆರೋಗ್ಯ ಕಾರ್ಯಕರ್ತರು ಯಾವುದೇ ಆತಂಕವಿಲ್ಲದೆ ಕೊವಾಕ್ಸಿನ್ ತೆಗೆದುಕೊಳ್ಳಬಹುದು” ಎಂದು ಹೇಳುತ್ತಿದ್ದಾರೆ.

ಇದರ ನಡುವೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯು ಬಹಿರಂಗಪಡಿಸಿದ ಮಾಹಿತಿಯು ವ್ಯಾಕ್ಸಿನೇಷನ್ ಚಾಲನೆಯ ಮೊದಲ ಮೂರು ದಿನಗಳಲ್ಲಿ 55,550 ಫಲಾನುಭವಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕಲಾಗಿದೆ ಎಂದು ಹೇಳಿದೆ.

ಸೋಮವಾರ ನಡೆದ ಕೋವಿಡ್ -19 ವ್ಯಾಕ್ಸಿನೇಷನ್ ಚಾಲನೆಯಲ್ಲಿ ಕರ್ನಾಟಕವು ಒಟ್ಟಾರೆ ಶೇಕಡಾ 47 ರಷ್ಟು ವ್ಯಾಪ್ತಿಯನ್ನು ವರದಿ ಮಾಡಿದೆ, ಇದು ಭಾನುವಾರ ಮತ್ತು ಶನಿವಾರದಂದು ನಡೆದ ವ್ಯಾಕಿನೇಷನ್ (ಕ್ರಮವಾಗಿ ಶೇ. 58.4 ಮತ್ತು ಶೇ, 63) ಪ್ರಮಾಣಕ್ಕಿಂತ ಕಡಿಮೆಯಾಗಿದೆ.


ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಲಸಿಕೆ: 51 ಪ್ರತಿಕೂಲ ಪರಿಣಾಮ ಪ್ರಕರಣ, ಒಬ್ಬರ ಸ್ಥಿತಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...