Homeಕರ್ನಾಟಕಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! - ಕಾರಣ ಏನು?

ಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! – ಕಾರಣ ಏನು?

ಆರೋಗ್ಯ ಕಾರ್ಯಕರ್ತರ ಮೇಲೆ ಕೋವಾಕ್ಸಿನ್ ಅನ್ನು "ಪ್ರಾಯೋಗಿಕ ಆಧಾರದ ಮೇಲೆ" ಬಳಸುವುದು ಖಂಡನೀಯ ಎಂದು ಕೆಎಆರ್‌ಡಿ (ಕರ್ನಾಟಕ ಅಸೋಷಿಯೇಷನ್ ಆಫ್ ರೆಸಿಡೆನ್ಸಿಯಲ್ ಡಾಕ್ಟರ್‍ಸ್) ಅಧ್ಯಕ್ಷ ಡಾ. ದಯಾನಂದ್ ಸಾಗರ್ ಹೇಳಿದ್ದಾರೆ.

- Advertisement -
- Advertisement -

ತಮಗೆ ನೀಡುವ ಕೊವಿಡ್ ಲಸಿಕೆ ಯಾವುದಿರಬೇಕು (ಸದ್ಯ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಎರಡೇ ಆಯ್ಕೆ) ಎಂಬ ಆಯ್ಕೆಯನ್ನು ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕು ಎಂದು ಕರ್ನಾಟಕ ಅಸೋಷಿಯೇಷನ್ ಆಫ್ ರೆಸಿಡೆನ್ಸಿಯಲ್ ಡಾಕ್ಟರ್‍ಸ್ (KARD) ಸರ್ಕಾರವನ್ನು ಆಗ್ರಹಿಸಿದೆ.

KARD, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರಿಗೆ ಬರೆದ ಪತ್ರದಲ್ಲಿ, “ರಾಜ್ಯದ ಹಲವಾರು ಜಿಲ್ಲೆಗಳ ನಿವಾಸಿ (ರೆಸಿಡೆಂಟ್) ವೈದ್ಯರು ಲಸಿಕೆ ವಿಷಯದಲ್ಲಿ ತಮಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಭಾವಿಸಿದ್ದಾರೆ. ಪ್ರಸ್ತುತ, ಕೊವ್ಯಾಕ್ಸಿನ್ ಅನ್ನು ಚಿಕ್ಕಮಗಳೂರು, ಹಾಸನ, ಬಳ್ಳಾರಿ, ಶಿವಮೊಗ್ಗ, ಚಿಕ್ಕಬಳ್ಳಾಪುರ ಮತ್ತು ದಾವಣಗೆರೆಯ ಜಿಲ್ಲಾ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತಿದೆ” ಎಂದು ಬರೆದಿದ್ದಾರೆ.

ಈ ಜಿಲ್ಲೆಗಳ ನಿವಾಸಿ ವೈದ್ಯರಿಗೆ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ಕರ್ನಾಟಕದ ಇತರ ಕೇಂದ್ರಗಳು ಕೋವಿಶೀಲ್ಡ್ ಪಡೆಯುತ್ತಿವೆ.

“ಕೊವಾಕ್ಸಿನ್ ಸ್ವೀಕರಿಸುವ ಮೊದಲು ಕೋವಾಕ್ಸಿನ್‌ನ ವೈದ್ಯಕೀಯ ಪರಿಣಾಮಕಾರಿತ್ವವನ್ನು ಇನ್ನೂ ಸ್ಥಾಪಿಸಲಾಗಿಲ್ಲ ಎಂದು ತಿಳಿಸುವ ಜವಾಬ್ದಾರಿಯನ್ನು ನಮ್ಮ ಮೇಲೆ ಹೊರಿಸಲಾಗಿದ್ದು, ಆ ರೀತಿಯ ಪತ್ರವನ್ನು ನಮ್ಮಿಂದ ಬರೆಸಿಕೊಳ್ಳಲಾಗಿದೆ” ಎಂದು ವೈದ್ಯಕೀಯ ಸಚಿವರಿಗೆ ಬರೆದ ಪತ್ರದಲ್ಲಿ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು: ಸಾವಿಗೆ ಲಸಿಕೆ ಕಾರಣವಲ್ಲ ಎಂದ ಸಚಿವ ಸುಧಾಕರ್

ಲಸಿಕೆ ವಿತರಣೆಯಲ್ಲಿನ ಜವಾಬ್ದಾರಿ ಮತ್ತು ವ್ಯತ್ಯಾಸಗಳು ಬಹಳ ಅನುಮಾನಾಸ್ಪದವೆನಿಸುತ್ತದೆ. ಮತ್ತು ಕೊವ್ಯಾಕ್ಸಿನ್ ಲಸಿಕೆ ಪಡೆಯುವಲ್ಲಿ ನಿವಾಸಿ ವೈದ್ಯರು (ರೆಸಿಡೆಂಟ್ ಡಾಕ್ಟರ್‍ಸ್) ಹಿಂಜರಿಯುತ್ತಿದ್ದಾರೆ. ಶಿವಮೊಗ್ಗ, ಹಾಸನ, ಚಾಮರಾಜನಗರ ಮತ್ತು ಬಳ್ಳಾರಿಯಲ್ಲಿನ ವೈದ್ಯಕೀಯ ಕಾಲೇಜುಗಳ ನಿವಾಸಿ ವೈದ್ಯರು (ರೆಸಿಡೆಂಟ್ ಡಾಕ್ಟರ್‍ಸ್), “ಮೂರನೇ ಹಂತದ ಟ್ರಯಲ್ಸ್ ಪೂರ್ಣಗೊಳಿಸದ ಲಸಿಕೆಯನ್ನು ನೀಡಲು ತೀರ್ಮಾನಿಸಿದ ಸರ್ಕಾರದ ಕ್ರಮ ಕಳವಳಕಾರಿಯಾಗಿದೆ” ಎಂದು ದೂರಿದ್ದಾರೆ.

ಆರೋಗ್ಯ ಕಾರ್ಯಕರ್ತರ ಮೇಲೆ ಕೋವಾಕ್ಸಿನ್ ಅನ್ನು “ಪ್ರಾಯೋಗಿಕ ಆಧಾರದ ಮೇಲೆ” ಬಳಸುವುದು ಖಂಡನೀಯ ಎಂದು ಕೆಎಆರ್‌ಡಿ (ಕರ್ನಾಟಕ ಅಸೋಷಿಯೇಷನ್ ಆಫ್ ರೆಸಿಡೆನ್ಸಿಯಲ್ ಡಾಕ್ಟರ್‍ಸ್) ಅಧ್ಯಕ್ಷ ಡಾ. ದಯಾನಂದ್ ಸಾಗರ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಇದಲ್ಲದೆ, ನಮ್ಮಿಂದ ಸಹಿ ಹಾಕುವ ಕಾರ್ಯವನ್ನು ಅನುಮಾನಾಸ್ಪದವಾಗಿ ಮಾಡಿಸಲಾಗಿದೆ. ಅದರಲ್ಲಿನ ಪದಪುಂಜ ಗೊಂದಲದಿಂದ ಕೂಡಿವೆ. ಇದಕ್ಕೆ ಬದಲಾಗಿ, ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಆಯ್ಕೆ ಮಾಡುವ ಆಯ್ಕೆಯನ್ನು ನೀಡಬೇಕು. ಕನಿಷ್ಟ ಮಧ್ಯಂತರ ವಿಶ್ಲೇಷಣೆಯ ಹಂತವನ್ನು ದಾಟಿದ ಲಸಿಕೆಗಳನ್ನು ಸರ್ಕಾರ ನೀಡಬೇಕು ಎಂದು ಅವರು ಹೇಳಿದ್ದಾರೆ. ಕೋವಾಕ್ಸಿನ್‌ನ ಮಧ್ಯಂತರ ವಿಶ್ಲೇಷಣಾ ವರದಿ ಲಭ್ಯವಿಲ್ಲದ ಕಾರಣ ಕೋವಿಶೀಲ್ಡ್‌ಗೆ ಆದ್ಯತೆ ಹೆಚ್ಚಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಕೊರೊನಾ ಲಸಿಕೆ ಪಡೆದ ಆಸ್ಪತ್ರೆಯ ಉದ್ಯೋಗಿ ಸಾವು

ಆದಾಗ್ಯೂ, ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್ ನೀಡಿದ ಅನುಮತಿಯನ್ನು ಉಲ್ಲೇಖಿಸುತ್ತಿರುವ ಆರೋಗ್ಯ ಸಚಿವ ಸುಧಾಕರ್, “ಎರಡೂ ಲಸಿಕೆಗಳು ವಿಶ್ವಾಸಾರ್ಹ, ಆರೋಗ್ಯ ಕಾರ್ಯಕರ್ತರು ಯಾವುದೇ ಆತಂಕವಿಲ್ಲದೆ ಕೊವಾಕ್ಸಿನ್ ತೆಗೆದುಕೊಳ್ಳಬಹುದು” ಎಂದು ಹೇಳುತ್ತಿದ್ದಾರೆ.

ಇದರ ನಡುವೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯು ಬಹಿರಂಗಪಡಿಸಿದ ಮಾಹಿತಿಯು ವ್ಯಾಕ್ಸಿನೇಷನ್ ಚಾಲನೆಯ ಮೊದಲ ಮೂರು ದಿನಗಳಲ್ಲಿ 55,550 ಫಲಾನುಭವಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕಲಾಗಿದೆ ಎಂದು ಹೇಳಿದೆ.

ಸೋಮವಾರ ನಡೆದ ಕೋವಿಡ್ -19 ವ್ಯಾಕ್ಸಿನೇಷನ್ ಚಾಲನೆಯಲ್ಲಿ ಕರ್ನಾಟಕವು ಒಟ್ಟಾರೆ ಶೇಕಡಾ 47 ರಷ್ಟು ವ್ಯಾಪ್ತಿಯನ್ನು ವರದಿ ಮಾಡಿದೆ, ಇದು ಭಾನುವಾರ ಮತ್ತು ಶನಿವಾರದಂದು ನಡೆದ ವ್ಯಾಕಿನೇಷನ್ (ಕ್ರಮವಾಗಿ ಶೇ. 58.4 ಮತ್ತು ಶೇ, 63) ಪ್ರಮಾಣಕ್ಕಿಂತ ಕಡಿಮೆಯಾಗಿದೆ.


ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಲಸಿಕೆ: 51 ಪ್ರತಿಕೂಲ ಪರಿಣಾಮ ಪ್ರಕರಣ, ಒಬ್ಬರ ಸ್ಥಿತಿ ಗಂಭೀರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...