Homeಕರ್ನಾಟಕಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! - ಕಾರಣ ಏನು?

ಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! – ಕಾರಣ ಏನು?

ಆರೋಗ್ಯ ಕಾರ್ಯಕರ್ತರ ಮೇಲೆ ಕೋವಾಕ್ಸಿನ್ ಅನ್ನು "ಪ್ರಾಯೋಗಿಕ ಆಧಾರದ ಮೇಲೆ" ಬಳಸುವುದು ಖಂಡನೀಯ ಎಂದು ಕೆಎಆರ್‌ಡಿ (ಕರ್ನಾಟಕ ಅಸೋಷಿಯೇಷನ್ ಆಫ್ ರೆಸಿಡೆನ್ಸಿಯಲ್ ಡಾಕ್ಟರ್‍ಸ್) ಅಧ್ಯಕ್ಷ ಡಾ. ದಯಾನಂದ್ ಸಾಗರ್ ಹೇಳಿದ್ದಾರೆ.

- Advertisement -
- Advertisement -

ತಮಗೆ ನೀಡುವ ಕೊವಿಡ್ ಲಸಿಕೆ ಯಾವುದಿರಬೇಕು (ಸದ್ಯ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಎರಡೇ ಆಯ್ಕೆ) ಎಂಬ ಆಯ್ಕೆಯನ್ನು ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕು ಎಂದು ಕರ್ನಾಟಕ ಅಸೋಷಿಯೇಷನ್ ಆಫ್ ರೆಸಿಡೆನ್ಸಿಯಲ್ ಡಾಕ್ಟರ್‍ಸ್ (KARD) ಸರ್ಕಾರವನ್ನು ಆಗ್ರಹಿಸಿದೆ.

KARD, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರಿಗೆ ಬರೆದ ಪತ್ರದಲ್ಲಿ, “ರಾಜ್ಯದ ಹಲವಾರು ಜಿಲ್ಲೆಗಳ ನಿವಾಸಿ (ರೆಸಿಡೆಂಟ್) ವೈದ್ಯರು ಲಸಿಕೆ ವಿಷಯದಲ್ಲಿ ತಮಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಭಾವಿಸಿದ್ದಾರೆ. ಪ್ರಸ್ತುತ, ಕೊವ್ಯಾಕ್ಸಿನ್ ಅನ್ನು ಚಿಕ್ಕಮಗಳೂರು, ಹಾಸನ, ಬಳ್ಳಾರಿ, ಶಿವಮೊಗ್ಗ, ಚಿಕ್ಕಬಳ್ಳಾಪುರ ಮತ್ತು ದಾವಣಗೆರೆಯ ಜಿಲ್ಲಾ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತಿದೆ” ಎಂದು ಬರೆದಿದ್ದಾರೆ.

ಈ ಜಿಲ್ಲೆಗಳ ನಿವಾಸಿ ವೈದ್ಯರಿಗೆ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ಕರ್ನಾಟಕದ ಇತರ ಕೇಂದ್ರಗಳು ಕೋವಿಶೀಲ್ಡ್ ಪಡೆಯುತ್ತಿವೆ.

“ಕೊವಾಕ್ಸಿನ್ ಸ್ವೀಕರಿಸುವ ಮೊದಲು ಕೋವಾಕ್ಸಿನ್‌ನ ವೈದ್ಯಕೀಯ ಪರಿಣಾಮಕಾರಿತ್ವವನ್ನು ಇನ್ನೂ ಸ್ಥಾಪಿಸಲಾಗಿಲ್ಲ ಎಂದು ತಿಳಿಸುವ ಜವಾಬ್ದಾರಿಯನ್ನು ನಮ್ಮ ಮೇಲೆ ಹೊರಿಸಲಾಗಿದ್ದು, ಆ ರೀತಿಯ ಪತ್ರವನ್ನು ನಮ್ಮಿಂದ ಬರೆಸಿಕೊಳ್ಳಲಾಗಿದೆ” ಎಂದು ವೈದ್ಯಕೀಯ ಸಚಿವರಿಗೆ ಬರೆದ ಪತ್ರದಲ್ಲಿ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು: ಸಾವಿಗೆ ಲಸಿಕೆ ಕಾರಣವಲ್ಲ ಎಂದ ಸಚಿವ ಸುಧಾಕರ್

ಲಸಿಕೆ ವಿತರಣೆಯಲ್ಲಿನ ಜವಾಬ್ದಾರಿ ಮತ್ತು ವ್ಯತ್ಯಾಸಗಳು ಬಹಳ ಅನುಮಾನಾಸ್ಪದವೆನಿಸುತ್ತದೆ. ಮತ್ತು ಕೊವ್ಯಾಕ್ಸಿನ್ ಲಸಿಕೆ ಪಡೆಯುವಲ್ಲಿ ನಿವಾಸಿ ವೈದ್ಯರು (ರೆಸಿಡೆಂಟ್ ಡಾಕ್ಟರ್‍ಸ್) ಹಿಂಜರಿಯುತ್ತಿದ್ದಾರೆ. ಶಿವಮೊಗ್ಗ, ಹಾಸನ, ಚಾಮರಾಜನಗರ ಮತ್ತು ಬಳ್ಳಾರಿಯಲ್ಲಿನ ವೈದ್ಯಕೀಯ ಕಾಲೇಜುಗಳ ನಿವಾಸಿ ವೈದ್ಯರು (ರೆಸಿಡೆಂಟ್ ಡಾಕ್ಟರ್‍ಸ್), “ಮೂರನೇ ಹಂತದ ಟ್ರಯಲ್ಸ್ ಪೂರ್ಣಗೊಳಿಸದ ಲಸಿಕೆಯನ್ನು ನೀಡಲು ತೀರ್ಮಾನಿಸಿದ ಸರ್ಕಾರದ ಕ್ರಮ ಕಳವಳಕಾರಿಯಾಗಿದೆ” ಎಂದು ದೂರಿದ್ದಾರೆ.

ಆರೋಗ್ಯ ಕಾರ್ಯಕರ್ತರ ಮೇಲೆ ಕೋವಾಕ್ಸಿನ್ ಅನ್ನು “ಪ್ರಾಯೋಗಿಕ ಆಧಾರದ ಮೇಲೆ” ಬಳಸುವುದು ಖಂಡನೀಯ ಎಂದು ಕೆಎಆರ್‌ಡಿ (ಕರ್ನಾಟಕ ಅಸೋಷಿಯೇಷನ್ ಆಫ್ ರೆಸಿಡೆನ್ಸಿಯಲ್ ಡಾಕ್ಟರ್‍ಸ್) ಅಧ್ಯಕ್ಷ ಡಾ. ದಯಾನಂದ್ ಸಾಗರ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಇದಲ್ಲದೆ, ನಮ್ಮಿಂದ ಸಹಿ ಹಾಕುವ ಕಾರ್ಯವನ್ನು ಅನುಮಾನಾಸ್ಪದವಾಗಿ ಮಾಡಿಸಲಾಗಿದೆ. ಅದರಲ್ಲಿನ ಪದಪುಂಜ ಗೊಂದಲದಿಂದ ಕೂಡಿವೆ. ಇದಕ್ಕೆ ಬದಲಾಗಿ, ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಆಯ್ಕೆ ಮಾಡುವ ಆಯ್ಕೆಯನ್ನು ನೀಡಬೇಕು. ಕನಿಷ್ಟ ಮಧ್ಯಂತರ ವಿಶ್ಲೇಷಣೆಯ ಹಂತವನ್ನು ದಾಟಿದ ಲಸಿಕೆಗಳನ್ನು ಸರ್ಕಾರ ನೀಡಬೇಕು ಎಂದು ಅವರು ಹೇಳಿದ್ದಾರೆ. ಕೋವಾಕ್ಸಿನ್‌ನ ಮಧ್ಯಂತರ ವಿಶ್ಲೇಷಣಾ ವರದಿ ಲಭ್ಯವಿಲ್ಲದ ಕಾರಣ ಕೋವಿಶೀಲ್ಡ್‌ಗೆ ಆದ್ಯತೆ ಹೆಚ್ಚಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಕೊರೊನಾ ಲಸಿಕೆ ಪಡೆದ ಆಸ್ಪತ್ರೆಯ ಉದ್ಯೋಗಿ ಸಾವು

ಆದಾಗ್ಯೂ, ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್ ನೀಡಿದ ಅನುಮತಿಯನ್ನು ಉಲ್ಲೇಖಿಸುತ್ತಿರುವ ಆರೋಗ್ಯ ಸಚಿವ ಸುಧಾಕರ್, “ಎರಡೂ ಲಸಿಕೆಗಳು ವಿಶ್ವಾಸಾರ್ಹ, ಆರೋಗ್ಯ ಕಾರ್ಯಕರ್ತರು ಯಾವುದೇ ಆತಂಕವಿಲ್ಲದೆ ಕೊವಾಕ್ಸಿನ್ ತೆಗೆದುಕೊಳ್ಳಬಹುದು” ಎಂದು ಹೇಳುತ್ತಿದ್ದಾರೆ.

ಇದರ ನಡುವೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯು ಬಹಿರಂಗಪಡಿಸಿದ ಮಾಹಿತಿಯು ವ್ಯಾಕ್ಸಿನೇಷನ್ ಚಾಲನೆಯ ಮೊದಲ ಮೂರು ದಿನಗಳಲ್ಲಿ 55,550 ಫಲಾನುಭವಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕಲಾಗಿದೆ ಎಂದು ಹೇಳಿದೆ.

ಸೋಮವಾರ ನಡೆದ ಕೋವಿಡ್ -19 ವ್ಯಾಕ್ಸಿನೇಷನ್ ಚಾಲನೆಯಲ್ಲಿ ಕರ್ನಾಟಕವು ಒಟ್ಟಾರೆ ಶೇಕಡಾ 47 ರಷ್ಟು ವ್ಯಾಪ್ತಿಯನ್ನು ವರದಿ ಮಾಡಿದೆ, ಇದು ಭಾನುವಾರ ಮತ್ತು ಶನಿವಾರದಂದು ನಡೆದ ವ್ಯಾಕಿನೇಷನ್ (ಕ್ರಮವಾಗಿ ಶೇ. 58.4 ಮತ್ತು ಶೇ, 63) ಪ್ರಮಾಣಕ್ಕಿಂತ ಕಡಿಮೆಯಾಗಿದೆ.


ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಲಸಿಕೆ: 51 ಪ್ರತಿಕೂಲ ಪರಿಣಾಮ ಪ್ರಕರಣ, ಒಬ್ಬರ ಸ್ಥಿತಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...