Homeಕರ್ನಾಟಕಕುಮಾರಸ್ವಾಮಿ ಸರ್ಕಾರಕ್ಕೆ ಒಂದು ವರ್ಷ ತಿರುತಿರುಗಿ ಅಲ್ಲೇ ನಿಂತಿದೆ: ಇದೆಂತಹ ‘ಚಲನಶೀಲತೆ’?

ಕುಮಾರಸ್ವಾಮಿ ಸರ್ಕಾರಕ್ಕೆ ಒಂದು ವರ್ಷ ತಿರುತಿರುಗಿ ಅಲ್ಲೇ ನಿಂತಿದೆ: ಇದೆಂತಹ ‘ಚಲನಶೀಲತೆ’?

- Advertisement -
- Advertisement -

| ಪಿ.ಕೆ. ಮಲ್ಲನಗೌಡರ್ |

ಆ ಚುನಾವಣಾ ಫಲಿತಾಂಶದಿಂದ ಈ ಚುನಾವಣಾ ಫಲಿತಾಂಶ ಬರುವುದರೊಳಗೆ ಕುಮಾರಸ್ವಾಮಿ ಸರ್ಕಾರಕ್ಕೆ ಒಂದು ವರ್ಷ ತುಂಬಿದ್ದೇ ಗೊತ್ತಾಗಲಿಲ್ಲ! ಈ ಸರ್ಕಾರ ಒಂದರ್ಥದಲ್ಲಿ ‘ಚಲನಶೀಲ’ವೇ ಆಗಿದೆ. ಆದರೆ ಅದು ತಿರುತಿರುಗಿ ಮತ್ತಲ್ಲೇ ನಿಂತಿದೆ. ಹುಟ್ಟಿದಾಗ ಯಾವ ಆತಂಕದಲ್ಲಿತ್ತೋ ಅದೇ ಆತಂಕದಲ್ಲಿ ಸರ್ಕಾರವಿದ್ದರೆ, ಅವತ್ತು ಯಾವ ಭ್ರಮೆಯಲ್ಲಿತ್ತೋ ಅದೇ ಭ್ರಮೆಯಲ್ಲಿ ವಿಪಕ್ಷವಿದೆ!

ಇದು ಕರ್ನಾಟಕದ ಜನರ ದುರಾದೃಷ್ಟ. ಕಳೆದ ಸಲ ಹೊಸ ಸರ್ಕಾರ ಬಂದಾಗ ಅದು ತನ್ನ ಅಸ್ತಿತ್ವ ಕಾಪಾಡಿಕೊಳ್ಳಲೇ ಹೆಣಗಬೇಕಿತ್ತು. ಇದೇ ತಿಂಗಳಲ್ಲಿ ತೀನ್ ದಿನ್ ಕಾ ಸುಲ್ತಾನ್ ಆಗಿ, ಸಂವಿಧಾನಿಕ ನಡೆಯ ಎದುರು ತಲೆಬಾಗಬೇಕಾದ ಯಡಿಯೂರಪ್ಪನವರು ಈಗಲೂ ಜನರ ತೀರ್ಪಿನ ವ್ಯಾಖ್ಯಾನವನ್ನು ಅರಗಿಸಿಕೊಂಡಿಲ್ಲ, ಅವರಿಗೆ 24*7 ಮುಖ್ಯಮಂತ್ರಿ ಕನಸು. ಅದರ ಸುತ್ತಲೇ ಅವರ ಕಾರ್ಯಚಟುವಟಿಕೆ. ಕಳೆದ ಸಲ ಫಲಿತಾಂಶ ಬಂದಾಗಿನಿಂದ ಸಿಎಂ ಆಗುವ ತಮ್ಮ ಹಂಬಲವನ್ನು ಹೈಕಮಾಂಡ್ ಕಾರಣಕ್ಕಾಗಿ ಅದುಮಿಟ್ಟಿದ್ದ ಸಿದ್ದರಾಮಯ್ಯ ಈಗ ಅದನ್ನು ಕಾರ್ಯರೂಪಕ್ಕೆ ತರುವ ಕೆಲಸವನ್ನು ತೆರೆಮರೆಯಲ್ಲಿ ನಡೆಸಿದ್ದಾರೆ.

ಹಾಗಾದ್ದ ಮೇಲೆ ಈ ಸರ್ಕಾರಕ್ಕೆ ಒಂದು ವಿಷನ್ ಎಂಬುದು ಇರಲು ಹೇಗೆ ಸಾಧ್ಯ? ಇವರ ಕಿತ್ತಾಟದ ಫಲವೆಂದರೆ, ಈ ವರ್ಷದ ಬಜೆಟ್ ಯಾವುದೇ ರ್ಚೆಯಿಲ್ಲದೇ ಪಾಸಾಗುವ ಮೂಲಕ ಕರ್ನಾಟಕ ವಿಧಾನಸಭಾ ಇತಿಹಾಸದಲ್ಲಿ ದಾಖಲೆ ಬರೆಯಿತು. ಇದಕ್ಕೆ ಮೂರೂ ಪಕ್ಷಗಳೂ ಕಾರಣ. ಒಂದು ರಾಜ್ಯದ ಅಭಿವೃದ್ಧಿಯ, ಯೋಜನೆಗಳ ನೀಲನಕ್ಷೆಯ ವಾರ್ಷಿಕ ಮುನ್ನೋಟ ನೀಡುವ ಬಜೆಟ್ ಬಗ್ಗೆ ಮೂರೂ ಪಕ್ಷಗಳ ನಿಲುವು ಒಂದೇ ಆಗಿರುವಾಗ ಯಾವ ರಚನಾತ್ಮಕ ಕೆಲಸಗಳನ್ನು ನಿರೀಕ್ಷಿಸಲು ಸಾಧ್ಯ?

ತಳಮಟ್ಟದ ಆಡಳಿತ ಕುಸಿತ
ಇಲ್ಲಿ ಯಾವ ಸಚಿವ, ಶಾಸಕರಿಗೂ ಸ್ಥಳಿಯ ಸಮಸ್ಯೆಗಳ ಕಡೆ ಗಮನ ಹರಿಸಲು ಪುರುಸೊತ್ತಿಲ್ಲ. ಎಲ್ಲರಿಗೂ ಈ ಸರ್ಕಾರ ಬೀಳುವುದೋ ಇಲ್ಲವೋ ಎಂಬುದರ ಚಿಂತೆ. ಉಪ ಚುನಾವಣೆಗಳ ಎರಡು ಸೀಟುಗಳು ಬಹುಮುಖ್ಯವಾಗಿದ್ದರಿಂದ ಮೂರೂ ಪಕ್ಷಗಳ ನಾಯಕರು ತಲೆಕೆಡಿಸಿಕೊಂಡು ಭಾಗವಹಿಸಿದರು. ಈಗವರಿಗೆ ಕೇಂದ್ರದಲ್ಲಿ ಯಾವ ಸರ್ಕಾರ ಬರುತ್ತದೆ ಮತ್ತು ಇಲ್ಲೇನಾಗಲಿದೆ ಎಂಬುದಷ್ಟೇ ಚಿಂತೆ. ಇದೇ ಮೇ 29 ಕ್ಕೆ ಸುಮಾರು 15 ಲಕ್ಷ ಮತದಾರರು ಪಾಲ್ಗೊಳ್ಳುವ 69 ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿವೆ. ಮೂರೂ ಪಕ್ಷಗಳ ನಾಯಕರಿಗೆ ಇದರ ಕಡೆ ಪುರುಸೊತ್ತೇ ಇಲ್ಲ. 2018ರ ಅಗಸ್ಟ್‍ನಲ್ಲಿ 109 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿತ್ತು. ಸರ್ಕಾರದ ಮೀಸಲಾತಿ ನಿಗದಿಯಲ್ಲಿ ರೋಸ್ಟರ್ ಅನುಸರಿಸದೇ ಇದ್ದುದರಿಂದ ಹೈಕೋರ್ಟಿನಲ್ಲಿ ಕೆಲವರು ತಡೆಯಾಜ್ಞೆ ತಂದರು. ಆ ತಡೆಯಾಜ್ಞೆ ತೆರವುಗೋಳಿಸುವ ಆಸಕ್ತಿಯೇ ಸರ್ಕಾರಕ್ಕೆ ಇಲ್ಲದ್ದರಿಂದ ಈ 109 ಸ್ಥಳಿಯ ಸಂಸ್ಥೆಗಳಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಇನ್ನೂ ಆಗಿಲ್ಲ. ಆಡಳಿತಾಧಿಕಾರಿಗಳದ್ದೇ ಕಾರುಬಾರು. ಸದ್ಯ ಕುಡಿಯುವ ನೀರಿನ ತೀವ್ರ ಅಭಾವವಿದ್ದು ಇಂತಹ ಕಡೆ ಅಧಿಕಾರಿಗಳು ನೀರು ಪೂರೈಕೆ ನೆಪದಲ್ಲಿ ಹಣ ಮಾಡುತ್ತಿದ್ದಾರೆ. ಬಹುಪಾಲು ಶಾಸಕರು ಬೆಂಗಳೂರಲ್ಲೇ ಇರುವುದರಿಂದ ಸ್ಥಳಿಯ ಸಮಸ್ಯೆಗಳಿಗೆ ಸ್ಪಂದಿಸುವವರೇ ಇಲ್ಲದಂತಾಗಿದೆ.

ವಿಕೇಂದ್ರಿಕರಣದ ನಿರ್ಲಕ್ಷ್ಯ
ಕಳೆದ ಸರ್ಕಾರದ ಅವಧಿಯಲ್ಲಿ ಕೃಷಿ ಸಚಿವರಾಗಿ ತಣ್ಣಗೆ ಅದ್ಭುತ ಸಾಧನೆ ಮಾಡಿದ್ದ ಯುವ ಶಾಸಕ ಈ ಸಲ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಅಂತಹ ಉತ್ಸಾಹವನ್ನೇನೂ ತೋರುತ್ತಿಲ್ಲ. ಅವರ ಪೊಟೆನ್ಸಿಯಲ್‍ಗೆ ಹೋಲಿಸಿದರೆ ಈಗಿನ ಅವರ ಕಾರ್ಯವೈಖರಿ ನೀರಸವಾಗಿದೆ. ಕಳೆದ ಸಲ ಈ ಖಾತೆಗಿದ್ದ ಎಚ್.ಕೆ. ಪಾಟೀಲ ತಳಹಂತದಲಾಗುತ್ತಿದ್ದ ಪ್ರತಿ ಬೆಳವಣಿಗೆ, ಕುಂಠಿತಗಳನ್ನು ಖುದ್ದು ಪರಿಶೀಲಿಸಿ ಎಷ್ಟು ಸಾಧ್ಯವೋ ಅಷ್ಟು ಪರಿಹಾರ ಒದಗಿಸಲು ವಿವಿಧ ಸಚಿವರೊಂದಿಗೆ, ಇಲಾಖೆಗಳೊಂದಿಗೆ ಮಾತಾಡಿ, ಮನವರಿಕೆ ಮಾಡಿಕೊಟ್ಟು ಸಹಕಾರ ಪಡೆಯುತ್ತಿದ್ದರು. ಕೃಷಿಹೊಂಡ ಮತ್ತು ಕೃಷಿ ಉಪಕರಣಗಳ ಬಾಡಿಗೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ತಂದಿದ್ದ ಕೃಷ್ಣ ಭೈರೆಗೌಡರು ಈ ಸಮ್ಮಿಶ್ರ ಜಂಜಾಟದಲ್ಲಿ ಮುಳುಗಿ ಸುಸ್ತಾಗಿಬಿಟ್ಟರೆ? ಸಚಿವರು ಪದೇ ಪದೇ ಮನೆಪಟ್ಟಿ (ತೆರಿಗೆ), ನೀರಿನ ಕರ ವಸೂಲಿ ಸರಿಯಾಗಿ ಮಾಡಿ ಎಂದು ಆದೇಶ ಕೊಡುತ್ತಾರೆ? ಸತತ ಬರದಿಂದ ತತ್ತರಿಸುವ ಪ್ರದೇಶಗಳಲ್ಲಿ ಜನರಿಗೆ ಇದನ್ನೆಲ್ಲ ಭರಿಸಲು ಸಾಧ್ಯವಾ? ಅದರ ಬದಲು, ಸದ್ಯಕ್ಕೆ ಅಂತಹ ಕರಗಳನ್ನು ಸಂಗ್ರಹಿಸುವುದನ್ನು ಮುಂದಕ್ಕೆ ಹಾಕೋಣ ಎಂಬ ಸಾಮಾಜಿಕ ಅರಿವಿನ ಚಿಂತನೆಯನ್ನು ಕೃಷ್ಣ ಭೈರೆಗೌಡರು ಮಾಡಬಹುದಿತ್ತು.

ಕಳೆದ ಸರ್ಕಾರದ ಅವಧಿಯಲ್ಲಿ ಗ್ರಾಪಂಗಳಿಗೆ ಅವರ ವ್ಯಾಪ್ತಿಯಲ್ಲಿನ ಮೊಬೈಲ್ ಟವರ್, ಗಾಳಿ ವಿದ್ಯುತ್ ಯಂತ್ರಗಳ ಕಂಪನಿಗಳಿಂದ ತೆರಿಗೆ ಪಡೆಯುವ ಅಧಿಕಾರ ನೀಡಲಾಗಿದೆ. ಆದರೆ ದೂರದಲ್ಲೆಲ್ಲೋ ಹೆಡ್ ಆಫೀಸ್ ಹೊಂದಿರುವ ಈ ಕಂಪನಿಗಳು 9-10 ನೋಟಿಸ್ ಕೊಟ್ಟರೂ ಉತ್ತರಿಸುತ್ತಿಲ್ಲ. ಸೀದಾ ಈ ಕಂಪನಿಗಳ ರಾಜ್ಯ ಪ್ರತಿನಿಧಿಗಳಿಗೆ ಜಾಡಿಸಿ ಸರಿ ದಾರಿಗೆ ತರುವ ಬದಲು ಸಂಕಷ್ಟದಲ್ಲಿರುವ ಜನರಿಂದ ಕರ ವಸೂಲಿಗೆ ಒತ್ತಾಯಿಸುತ್ತಿದ್ದಾರೆ ಸಚಿವರು.

ಇದನ್ನು ಓದಿ: ರಾಜ್ಯ ಸರ್ಕಾರದ ಭವಿಷ್ಯ ನಿಂತಿರುವುದು ಈ ನಾಲ್ಕು ಅಂಶಗಳ ಮೇಲೆ.

ಎಲ್ಲವನ್ನೂ ಅವರು ಜಿಲ್ಲಾ ಪಂಚಾಯತಿ ಸಿಇಒಗಳ ಉಸಾಬರಿಗೆ ನೀಡಿದ ಪರಿಣಾಮವಾಗಿ, ಇವತ್ತು ಗ್ರಾಮಗ್ರಾಮಗಳಲ್ಲಿ ಕುಡಿಯುವ ನೀರಿಗೆ ತಾತ್ವಾರ. ಈಗ ಅಧಿಕಾರಿಗಳು ಬಾವಿ ತೋಡಲು ಹೊರಟಿದ್ದಾರೆ.

ಇಂತಹ ಸಂದರ್ಭದಲ್ಲಿ ಕಂದಾಯ ಇಲಾಖೆ, ಕೃಷಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಸಚಿವರ ನಡುವೆ ಸಮನ್ವಯವಿರಬೇಕಿತ್ತು. ಸದಾ ಕೈಗಾರಿಕೆ, ಮೂಲ ಸೌಕರ್ಯ ಸಚಿರಾಗಿದ್ದ ಆರ್‍ವಿ.. ದೇಶಪಾಂಡೆಯವರಿಗೆ ಕಂದಾಯ ಖಾತೆ ಒಗ್ಗುತ್ತಿಲ್ಲವೇನೋ? ಆದರೆ ಈ ಇಲಾಖೆಯ ‘ಆದಾಯ’ ಖುಷಿ ಕೊಡುತ್ತದೆ, ಆದರೆ ತಳಮಟ್ಟಕ್ಕೆ ಇಳಿದು ಕೆಲಸ ಮಾಡಲ್ಲ ಅಂದರೆ ಹೇಗೆ?

ಪ್ರಾಥಮಿಕ ಶಿಕ್ಷಣಕ್ಕೆ ಸಚಿವರೇ ಇಲ್ಲ!

ಇವತ್ತು ನಮ್ಮ ಸರ್ಕಾರಿ ಶಾಲೆಗಳು ದೊಡ್ಡ ಬಿಕ್ಕಟ್ಟನ್ನು ಎದುರಿಸುತ್ತಿವೆ. ಆದರೆ, ಸದ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕೆಂದು ಪ್ರತ್ಯೇಕ ಸಚಿವರಿಲ್ಲ! ಅಂದರೆ ಅದು ಪರೋಕ್ಷವಾಗಿ ಮುಖ್ಯಮಂತ್ರಿ ಬಳಿಯೇ ಇದೆ ಎಂದರ್ಥ. ಕಳೆದ ಅಕ್ಟೋಬರ್‍ನಲ್ಲಿ ಬಿಎಸ್‍ಪಿಯ ಎನ್ ಮಹೇಶ್ ಅವರ ಪಾರ್ಟಿ ಹೈಕಮಾಂಡ್ ಆದೇಶದಂತೆ ಪ್ರಾಥಮಿಕ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ಮೇಲೆ, ಈ ಇಲಾಖೆಗೆ ಈಗ ಸಚಿವರೇ ಇಲ್ಲ! ಈ ಬಗ್ಗೆ ಕಾಂಗ್ರೆಸ್‍ಗೂ ಚಿಂತೆಯಿಲ್ಲ, ವಿಪಕ್ಷಕ್ಕೆ ಇದು ಮುಖ್ಯ ವಿಷಯವೇ ಅಲ್ಲ!

ರೆಸಾರ್ಟಿನಿಂದ ರೆಸಾರ್ಟಿಗೆ: ಇದೇ ‘ಚಲನಶೀಲತೆ’!
ಹಾಗಂತ ಈ ಸರ್ಕಾರ ಕೆಲಸವೇ ಮಾಡಿಲ್ಲ ಅಂತಲ್ಲ. ಸಾಲಮನ್ನಾ ವಿಷಯದಲ್ಲಿ ಅನಗತ್ಯ ರೂಲ್ಸ್ ಮಾಡಿ ವಿಳಂಬ ಮಾಡಿದೆಯಾದರೂ, ಅದರ ಸಾಧನೆ ಈ ವಿಷಯದಲ್ಲಿ ಪರವಾಗಿಲ್ಲ. ಆದರೆ ನೀರಾವರಿ ಯೋಜನೆಗಳಲ್ಲಿ ತುಂಬ ಹಿಂದಿದೆ. ಜಲ ಸಂಪನ್ಮೂಲ ಸಚಿವರಿಗೆ ಉಪ ಚುನಾವಣೆ ಉಸ್ತುವಾರಿ, ಬೇರೆ ಜಿಲ್ಲೆಗಳಲ್ಲಿ ಮೂಗು ತೂರಿಸುವುದು, ತಮ್ಮ ಕೇಸುಗಳನ್ನು ಫೈಟು ಮಾಡುವುದೇ ದೊಡ್ಡ ಕೆಲಸ. ಅವರ ಬಳಿ ನೀರಾವರಿ ಕುರಿತಂತೆ ಮುನ್ನೋಟವಿರಲಿ, ಆಕ್ತಿಯೂ ಇಲ್ಲ. ಈಗ ಚಾಲ್ತಿಯಲ್ಲಿರುವ ಯೋಜನೆಗಳಿಂದ ಅವರಿಗೆ ಬರಬೇಕಾದದ್ದು ಬಂದರೆ ಮುಗೀತು. ಪ್ರತಿ ಕ್ಯಾಬಿನೆಟ್ ಸಭೆಯಲ್ಲೂ ಲೋಕೋಪಯೋಗಿ ಸಚಿವ ರೇವಣ್ಣರಿಗೆ ವಿಶೇಷ ಅನುದಾನಗಳು. ಅವರ ಪಾಲಿಗೆ ‘ಲೋಕ’ ಅಂದರೆ ಹಾಸನ ಜಿಲ್ಲೆಯಷ್ಟೇ!

ಇಡೀ ಒಂದು ವರ್ಷದ ಚಿತ್ರಣ ನೋಡಲು ಹೊರಟರೆ ಆಪರೇಷನ್ ಕಮಲ, ಅದನ್ನು ತಡೆಯಲು ಹೆಣಗಾಟ, ಶಾಸಕರು ರೆಸಾರ್ಟಿನಿಂದ ರೆಸಾರ್ಟಿಗೆ ಅಲೆಯುವ ದೃಶ್ಯಗಳೇ ಜನರ ಕಣ್ಮುಂದೆ ಬರುತ್ತಿವೆ.
ಇದು ಕೇವಲ ಕುಮಾರಸ್ವಾಮಿ ಸರ್ಕಾರದ ವಿಫಲತೆಯಲ್ಲ, ರಾಜ್ಯದ ಮೂರೂ ಪ್ರಮುಖ ಪಾರ್ಟಿಗಳ ವಿಫಲತೆ ಕೂಡ.

ಇದನ್ನು ಓದಿ: ರಾಜ್ಯದ ಸಮ್ಮಿಶ್ರ ಸರ್ಕಾರ ಬೀಳತ್ತೋ? ಕೊಡವಿಕೊಂಡು ಏಳತ್ತೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...