Homeಕರ್ನಾಟಕಕುಮಾರಸ್ವಾಮಿ ಸರ್ಕಾರಕ್ಕೆ ಒಂದು ವರ್ಷ ತಿರುತಿರುಗಿ ಅಲ್ಲೇ ನಿಂತಿದೆ: ಇದೆಂತಹ ‘ಚಲನಶೀಲತೆ’?

ಕುಮಾರಸ್ವಾಮಿ ಸರ್ಕಾರಕ್ಕೆ ಒಂದು ವರ್ಷ ತಿರುತಿರುಗಿ ಅಲ್ಲೇ ನಿಂತಿದೆ: ಇದೆಂತಹ ‘ಚಲನಶೀಲತೆ’?

- Advertisement -
- Advertisement -

| ಪಿ.ಕೆ. ಮಲ್ಲನಗೌಡರ್ |

ಆ ಚುನಾವಣಾ ಫಲಿತಾಂಶದಿಂದ ಈ ಚುನಾವಣಾ ಫಲಿತಾಂಶ ಬರುವುದರೊಳಗೆ ಕುಮಾರಸ್ವಾಮಿ ಸರ್ಕಾರಕ್ಕೆ ಒಂದು ವರ್ಷ ತುಂಬಿದ್ದೇ ಗೊತ್ತಾಗಲಿಲ್ಲ! ಈ ಸರ್ಕಾರ ಒಂದರ್ಥದಲ್ಲಿ ‘ಚಲನಶೀಲ’ವೇ ಆಗಿದೆ. ಆದರೆ ಅದು ತಿರುತಿರುಗಿ ಮತ್ತಲ್ಲೇ ನಿಂತಿದೆ. ಹುಟ್ಟಿದಾಗ ಯಾವ ಆತಂಕದಲ್ಲಿತ್ತೋ ಅದೇ ಆತಂಕದಲ್ಲಿ ಸರ್ಕಾರವಿದ್ದರೆ, ಅವತ್ತು ಯಾವ ಭ್ರಮೆಯಲ್ಲಿತ್ತೋ ಅದೇ ಭ್ರಮೆಯಲ್ಲಿ ವಿಪಕ್ಷವಿದೆ!

ಇದು ಕರ್ನಾಟಕದ ಜನರ ದುರಾದೃಷ್ಟ. ಕಳೆದ ಸಲ ಹೊಸ ಸರ್ಕಾರ ಬಂದಾಗ ಅದು ತನ್ನ ಅಸ್ತಿತ್ವ ಕಾಪಾಡಿಕೊಳ್ಳಲೇ ಹೆಣಗಬೇಕಿತ್ತು. ಇದೇ ತಿಂಗಳಲ್ಲಿ ತೀನ್ ದಿನ್ ಕಾ ಸುಲ್ತಾನ್ ಆಗಿ, ಸಂವಿಧಾನಿಕ ನಡೆಯ ಎದುರು ತಲೆಬಾಗಬೇಕಾದ ಯಡಿಯೂರಪ್ಪನವರು ಈಗಲೂ ಜನರ ತೀರ್ಪಿನ ವ್ಯಾಖ್ಯಾನವನ್ನು ಅರಗಿಸಿಕೊಂಡಿಲ್ಲ, ಅವರಿಗೆ 24*7 ಮುಖ್ಯಮಂತ್ರಿ ಕನಸು. ಅದರ ಸುತ್ತಲೇ ಅವರ ಕಾರ್ಯಚಟುವಟಿಕೆ. ಕಳೆದ ಸಲ ಫಲಿತಾಂಶ ಬಂದಾಗಿನಿಂದ ಸಿಎಂ ಆಗುವ ತಮ್ಮ ಹಂಬಲವನ್ನು ಹೈಕಮಾಂಡ್ ಕಾರಣಕ್ಕಾಗಿ ಅದುಮಿಟ್ಟಿದ್ದ ಸಿದ್ದರಾಮಯ್ಯ ಈಗ ಅದನ್ನು ಕಾರ್ಯರೂಪಕ್ಕೆ ತರುವ ಕೆಲಸವನ್ನು ತೆರೆಮರೆಯಲ್ಲಿ ನಡೆಸಿದ್ದಾರೆ.

ಹಾಗಾದ್ದ ಮೇಲೆ ಈ ಸರ್ಕಾರಕ್ಕೆ ಒಂದು ವಿಷನ್ ಎಂಬುದು ಇರಲು ಹೇಗೆ ಸಾಧ್ಯ? ಇವರ ಕಿತ್ತಾಟದ ಫಲವೆಂದರೆ, ಈ ವರ್ಷದ ಬಜೆಟ್ ಯಾವುದೇ ರ್ಚೆಯಿಲ್ಲದೇ ಪಾಸಾಗುವ ಮೂಲಕ ಕರ್ನಾಟಕ ವಿಧಾನಸಭಾ ಇತಿಹಾಸದಲ್ಲಿ ದಾಖಲೆ ಬರೆಯಿತು. ಇದಕ್ಕೆ ಮೂರೂ ಪಕ್ಷಗಳೂ ಕಾರಣ. ಒಂದು ರಾಜ್ಯದ ಅಭಿವೃದ್ಧಿಯ, ಯೋಜನೆಗಳ ನೀಲನಕ್ಷೆಯ ವಾರ್ಷಿಕ ಮುನ್ನೋಟ ನೀಡುವ ಬಜೆಟ್ ಬಗ್ಗೆ ಮೂರೂ ಪಕ್ಷಗಳ ನಿಲುವು ಒಂದೇ ಆಗಿರುವಾಗ ಯಾವ ರಚನಾತ್ಮಕ ಕೆಲಸಗಳನ್ನು ನಿರೀಕ್ಷಿಸಲು ಸಾಧ್ಯ?

ತಳಮಟ್ಟದ ಆಡಳಿತ ಕುಸಿತ
ಇಲ್ಲಿ ಯಾವ ಸಚಿವ, ಶಾಸಕರಿಗೂ ಸ್ಥಳಿಯ ಸಮಸ್ಯೆಗಳ ಕಡೆ ಗಮನ ಹರಿಸಲು ಪುರುಸೊತ್ತಿಲ್ಲ. ಎಲ್ಲರಿಗೂ ಈ ಸರ್ಕಾರ ಬೀಳುವುದೋ ಇಲ್ಲವೋ ಎಂಬುದರ ಚಿಂತೆ. ಉಪ ಚುನಾವಣೆಗಳ ಎರಡು ಸೀಟುಗಳು ಬಹುಮುಖ್ಯವಾಗಿದ್ದರಿಂದ ಮೂರೂ ಪಕ್ಷಗಳ ನಾಯಕರು ತಲೆಕೆಡಿಸಿಕೊಂಡು ಭಾಗವಹಿಸಿದರು. ಈಗವರಿಗೆ ಕೇಂದ್ರದಲ್ಲಿ ಯಾವ ಸರ್ಕಾರ ಬರುತ್ತದೆ ಮತ್ತು ಇಲ್ಲೇನಾಗಲಿದೆ ಎಂಬುದಷ್ಟೇ ಚಿಂತೆ. ಇದೇ ಮೇ 29 ಕ್ಕೆ ಸುಮಾರು 15 ಲಕ್ಷ ಮತದಾರರು ಪಾಲ್ಗೊಳ್ಳುವ 69 ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿವೆ. ಮೂರೂ ಪಕ್ಷಗಳ ನಾಯಕರಿಗೆ ಇದರ ಕಡೆ ಪುರುಸೊತ್ತೇ ಇಲ್ಲ. 2018ರ ಅಗಸ್ಟ್‍ನಲ್ಲಿ 109 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿತ್ತು. ಸರ್ಕಾರದ ಮೀಸಲಾತಿ ನಿಗದಿಯಲ್ಲಿ ರೋಸ್ಟರ್ ಅನುಸರಿಸದೇ ಇದ್ದುದರಿಂದ ಹೈಕೋರ್ಟಿನಲ್ಲಿ ಕೆಲವರು ತಡೆಯಾಜ್ಞೆ ತಂದರು. ಆ ತಡೆಯಾಜ್ಞೆ ತೆರವುಗೋಳಿಸುವ ಆಸಕ್ತಿಯೇ ಸರ್ಕಾರಕ್ಕೆ ಇಲ್ಲದ್ದರಿಂದ ಈ 109 ಸ್ಥಳಿಯ ಸಂಸ್ಥೆಗಳಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಇನ್ನೂ ಆಗಿಲ್ಲ. ಆಡಳಿತಾಧಿಕಾರಿಗಳದ್ದೇ ಕಾರುಬಾರು. ಸದ್ಯ ಕುಡಿಯುವ ನೀರಿನ ತೀವ್ರ ಅಭಾವವಿದ್ದು ಇಂತಹ ಕಡೆ ಅಧಿಕಾರಿಗಳು ನೀರು ಪೂರೈಕೆ ನೆಪದಲ್ಲಿ ಹಣ ಮಾಡುತ್ತಿದ್ದಾರೆ. ಬಹುಪಾಲು ಶಾಸಕರು ಬೆಂಗಳೂರಲ್ಲೇ ಇರುವುದರಿಂದ ಸ್ಥಳಿಯ ಸಮಸ್ಯೆಗಳಿಗೆ ಸ್ಪಂದಿಸುವವರೇ ಇಲ್ಲದಂತಾಗಿದೆ.

ವಿಕೇಂದ್ರಿಕರಣದ ನಿರ್ಲಕ್ಷ್ಯ
ಕಳೆದ ಸರ್ಕಾರದ ಅವಧಿಯಲ್ಲಿ ಕೃಷಿ ಸಚಿವರಾಗಿ ತಣ್ಣಗೆ ಅದ್ಭುತ ಸಾಧನೆ ಮಾಡಿದ್ದ ಯುವ ಶಾಸಕ ಈ ಸಲ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಅಂತಹ ಉತ್ಸಾಹವನ್ನೇನೂ ತೋರುತ್ತಿಲ್ಲ. ಅವರ ಪೊಟೆನ್ಸಿಯಲ್‍ಗೆ ಹೋಲಿಸಿದರೆ ಈಗಿನ ಅವರ ಕಾರ್ಯವೈಖರಿ ನೀರಸವಾಗಿದೆ. ಕಳೆದ ಸಲ ಈ ಖಾತೆಗಿದ್ದ ಎಚ್.ಕೆ. ಪಾಟೀಲ ತಳಹಂತದಲಾಗುತ್ತಿದ್ದ ಪ್ರತಿ ಬೆಳವಣಿಗೆ, ಕುಂಠಿತಗಳನ್ನು ಖುದ್ದು ಪರಿಶೀಲಿಸಿ ಎಷ್ಟು ಸಾಧ್ಯವೋ ಅಷ್ಟು ಪರಿಹಾರ ಒದಗಿಸಲು ವಿವಿಧ ಸಚಿವರೊಂದಿಗೆ, ಇಲಾಖೆಗಳೊಂದಿಗೆ ಮಾತಾಡಿ, ಮನವರಿಕೆ ಮಾಡಿಕೊಟ್ಟು ಸಹಕಾರ ಪಡೆಯುತ್ತಿದ್ದರು. ಕೃಷಿಹೊಂಡ ಮತ್ತು ಕೃಷಿ ಉಪಕರಣಗಳ ಬಾಡಿಗೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ತಂದಿದ್ದ ಕೃಷ್ಣ ಭೈರೆಗೌಡರು ಈ ಸಮ್ಮಿಶ್ರ ಜಂಜಾಟದಲ್ಲಿ ಮುಳುಗಿ ಸುಸ್ತಾಗಿಬಿಟ್ಟರೆ? ಸಚಿವರು ಪದೇ ಪದೇ ಮನೆಪಟ್ಟಿ (ತೆರಿಗೆ), ನೀರಿನ ಕರ ವಸೂಲಿ ಸರಿಯಾಗಿ ಮಾಡಿ ಎಂದು ಆದೇಶ ಕೊಡುತ್ತಾರೆ? ಸತತ ಬರದಿಂದ ತತ್ತರಿಸುವ ಪ್ರದೇಶಗಳಲ್ಲಿ ಜನರಿಗೆ ಇದನ್ನೆಲ್ಲ ಭರಿಸಲು ಸಾಧ್ಯವಾ? ಅದರ ಬದಲು, ಸದ್ಯಕ್ಕೆ ಅಂತಹ ಕರಗಳನ್ನು ಸಂಗ್ರಹಿಸುವುದನ್ನು ಮುಂದಕ್ಕೆ ಹಾಕೋಣ ಎಂಬ ಸಾಮಾಜಿಕ ಅರಿವಿನ ಚಿಂತನೆಯನ್ನು ಕೃಷ್ಣ ಭೈರೆಗೌಡರು ಮಾಡಬಹುದಿತ್ತು.

ಕಳೆದ ಸರ್ಕಾರದ ಅವಧಿಯಲ್ಲಿ ಗ್ರಾಪಂಗಳಿಗೆ ಅವರ ವ್ಯಾಪ್ತಿಯಲ್ಲಿನ ಮೊಬೈಲ್ ಟವರ್, ಗಾಳಿ ವಿದ್ಯುತ್ ಯಂತ್ರಗಳ ಕಂಪನಿಗಳಿಂದ ತೆರಿಗೆ ಪಡೆಯುವ ಅಧಿಕಾರ ನೀಡಲಾಗಿದೆ. ಆದರೆ ದೂರದಲ್ಲೆಲ್ಲೋ ಹೆಡ್ ಆಫೀಸ್ ಹೊಂದಿರುವ ಈ ಕಂಪನಿಗಳು 9-10 ನೋಟಿಸ್ ಕೊಟ್ಟರೂ ಉತ್ತರಿಸುತ್ತಿಲ್ಲ. ಸೀದಾ ಈ ಕಂಪನಿಗಳ ರಾಜ್ಯ ಪ್ರತಿನಿಧಿಗಳಿಗೆ ಜಾಡಿಸಿ ಸರಿ ದಾರಿಗೆ ತರುವ ಬದಲು ಸಂಕಷ್ಟದಲ್ಲಿರುವ ಜನರಿಂದ ಕರ ವಸೂಲಿಗೆ ಒತ್ತಾಯಿಸುತ್ತಿದ್ದಾರೆ ಸಚಿವರು.

ಇದನ್ನು ಓದಿ: ರಾಜ್ಯ ಸರ್ಕಾರದ ಭವಿಷ್ಯ ನಿಂತಿರುವುದು ಈ ನಾಲ್ಕು ಅಂಶಗಳ ಮೇಲೆ.

ಎಲ್ಲವನ್ನೂ ಅವರು ಜಿಲ್ಲಾ ಪಂಚಾಯತಿ ಸಿಇಒಗಳ ಉಸಾಬರಿಗೆ ನೀಡಿದ ಪರಿಣಾಮವಾಗಿ, ಇವತ್ತು ಗ್ರಾಮಗ್ರಾಮಗಳಲ್ಲಿ ಕುಡಿಯುವ ನೀರಿಗೆ ತಾತ್ವಾರ. ಈಗ ಅಧಿಕಾರಿಗಳು ಬಾವಿ ತೋಡಲು ಹೊರಟಿದ್ದಾರೆ.

ಇಂತಹ ಸಂದರ್ಭದಲ್ಲಿ ಕಂದಾಯ ಇಲಾಖೆ, ಕೃಷಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಸಚಿವರ ನಡುವೆ ಸಮನ್ವಯವಿರಬೇಕಿತ್ತು. ಸದಾ ಕೈಗಾರಿಕೆ, ಮೂಲ ಸೌಕರ್ಯ ಸಚಿರಾಗಿದ್ದ ಆರ್‍ವಿ.. ದೇಶಪಾಂಡೆಯವರಿಗೆ ಕಂದಾಯ ಖಾತೆ ಒಗ್ಗುತ್ತಿಲ್ಲವೇನೋ? ಆದರೆ ಈ ಇಲಾಖೆಯ ‘ಆದಾಯ’ ಖುಷಿ ಕೊಡುತ್ತದೆ, ಆದರೆ ತಳಮಟ್ಟಕ್ಕೆ ಇಳಿದು ಕೆಲಸ ಮಾಡಲ್ಲ ಅಂದರೆ ಹೇಗೆ?

ಪ್ರಾಥಮಿಕ ಶಿಕ್ಷಣಕ್ಕೆ ಸಚಿವರೇ ಇಲ್ಲ!

ಇವತ್ತು ನಮ್ಮ ಸರ್ಕಾರಿ ಶಾಲೆಗಳು ದೊಡ್ಡ ಬಿಕ್ಕಟ್ಟನ್ನು ಎದುರಿಸುತ್ತಿವೆ. ಆದರೆ, ಸದ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕೆಂದು ಪ್ರತ್ಯೇಕ ಸಚಿವರಿಲ್ಲ! ಅಂದರೆ ಅದು ಪರೋಕ್ಷವಾಗಿ ಮುಖ್ಯಮಂತ್ರಿ ಬಳಿಯೇ ಇದೆ ಎಂದರ್ಥ. ಕಳೆದ ಅಕ್ಟೋಬರ್‍ನಲ್ಲಿ ಬಿಎಸ್‍ಪಿಯ ಎನ್ ಮಹೇಶ್ ಅವರ ಪಾರ್ಟಿ ಹೈಕಮಾಂಡ್ ಆದೇಶದಂತೆ ಪ್ರಾಥಮಿಕ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ಮೇಲೆ, ಈ ಇಲಾಖೆಗೆ ಈಗ ಸಚಿವರೇ ಇಲ್ಲ! ಈ ಬಗ್ಗೆ ಕಾಂಗ್ರೆಸ್‍ಗೂ ಚಿಂತೆಯಿಲ್ಲ, ವಿಪಕ್ಷಕ್ಕೆ ಇದು ಮುಖ್ಯ ವಿಷಯವೇ ಅಲ್ಲ!

ರೆಸಾರ್ಟಿನಿಂದ ರೆಸಾರ್ಟಿಗೆ: ಇದೇ ‘ಚಲನಶೀಲತೆ’!
ಹಾಗಂತ ಈ ಸರ್ಕಾರ ಕೆಲಸವೇ ಮಾಡಿಲ್ಲ ಅಂತಲ್ಲ. ಸಾಲಮನ್ನಾ ವಿಷಯದಲ್ಲಿ ಅನಗತ್ಯ ರೂಲ್ಸ್ ಮಾಡಿ ವಿಳಂಬ ಮಾಡಿದೆಯಾದರೂ, ಅದರ ಸಾಧನೆ ಈ ವಿಷಯದಲ್ಲಿ ಪರವಾಗಿಲ್ಲ. ಆದರೆ ನೀರಾವರಿ ಯೋಜನೆಗಳಲ್ಲಿ ತುಂಬ ಹಿಂದಿದೆ. ಜಲ ಸಂಪನ್ಮೂಲ ಸಚಿವರಿಗೆ ಉಪ ಚುನಾವಣೆ ಉಸ್ತುವಾರಿ, ಬೇರೆ ಜಿಲ್ಲೆಗಳಲ್ಲಿ ಮೂಗು ತೂರಿಸುವುದು, ತಮ್ಮ ಕೇಸುಗಳನ್ನು ಫೈಟು ಮಾಡುವುದೇ ದೊಡ್ಡ ಕೆಲಸ. ಅವರ ಬಳಿ ನೀರಾವರಿ ಕುರಿತಂತೆ ಮುನ್ನೋಟವಿರಲಿ, ಆಕ್ತಿಯೂ ಇಲ್ಲ. ಈಗ ಚಾಲ್ತಿಯಲ್ಲಿರುವ ಯೋಜನೆಗಳಿಂದ ಅವರಿಗೆ ಬರಬೇಕಾದದ್ದು ಬಂದರೆ ಮುಗೀತು. ಪ್ರತಿ ಕ್ಯಾಬಿನೆಟ್ ಸಭೆಯಲ್ಲೂ ಲೋಕೋಪಯೋಗಿ ಸಚಿವ ರೇವಣ್ಣರಿಗೆ ವಿಶೇಷ ಅನುದಾನಗಳು. ಅವರ ಪಾಲಿಗೆ ‘ಲೋಕ’ ಅಂದರೆ ಹಾಸನ ಜಿಲ್ಲೆಯಷ್ಟೇ!

ಇಡೀ ಒಂದು ವರ್ಷದ ಚಿತ್ರಣ ನೋಡಲು ಹೊರಟರೆ ಆಪರೇಷನ್ ಕಮಲ, ಅದನ್ನು ತಡೆಯಲು ಹೆಣಗಾಟ, ಶಾಸಕರು ರೆಸಾರ್ಟಿನಿಂದ ರೆಸಾರ್ಟಿಗೆ ಅಲೆಯುವ ದೃಶ್ಯಗಳೇ ಜನರ ಕಣ್ಮುಂದೆ ಬರುತ್ತಿವೆ.
ಇದು ಕೇವಲ ಕುಮಾರಸ್ವಾಮಿ ಸರ್ಕಾರದ ವಿಫಲತೆಯಲ್ಲ, ರಾಜ್ಯದ ಮೂರೂ ಪ್ರಮುಖ ಪಾರ್ಟಿಗಳ ವಿಫಲತೆ ಕೂಡ.

ಇದನ್ನು ಓದಿ: ರಾಜ್ಯದ ಸಮ್ಮಿಶ್ರ ಸರ್ಕಾರ ಬೀಳತ್ತೋ? ಕೊಡವಿಕೊಂಡು ಏಳತ್ತೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...