Homeಕರ್ನಾಟಕಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

- Advertisement -
- Advertisement -

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ ಒಳಮೀಸಲಾತಿ ಕುರಿತ ತನ್ನ ಆದೇಶವನ್ನು ಸಮರ್ಥಿಸಿಕೊಂಡು ಅಫಿಡವಿಟ್‌ ಸಲ್ಲಿಸಿದೆ. ಅಲ್ಲದೇ ರಿಟ್‌ ಅರ್ಜಿಯಲ್ಲಿ ಯಾವುದೇ ಉರುಳಿಲ್ಲ ಹಾಗಾಗಿ ರಿಟ್‌ ಅರ್ಜಿಯನ್ನು ತಿರಸ್ಕರಿಸಬೇಕು ಅಂದು ಮನವಿ ಮಾಡಿದೆ.

ಜಸ್ಟೀಸ್‌ ನಾಗಮೋಹನ್‌ ದಾಸ್‌ ಆಯೋಗವು ಪರಿಶಿಷ್ಟ ಜಾತಿಗಳನ್ನು 5 ಗುಂಪುಗಳಾಗಿ ವಿಂಗಡಿಸಿ ಅಲೆಮಾರಿ ಸಮುದಾಯ ಪ್ರವರ್ಗ ಎ ಎಂದು ವರ್ಗೀಕರಿಸಿ ಶೇ. 1 ಮೀಸಲಾತಿಯನ್ನು ನೀಡಿತ್ತು. ರಾಜ್ಯ ಸರ್ಕಾರದ ಸಚಿವ ಸಂಪುಟವು ಜಸ್ಟೀಸ್‌ ನಾಗಮೋಹನ್‌ದಾಸ್‌ ಆಯೋಗದ ವರದಿಯನ್ನು ಮಾರ್ಪಡಿಸಿ ಮಾದಿಗ ಸಂಬಂಧಿತ ಜಾತಿಗಳನ್ನು ಪ್ರವರ್ಗ-ಎ ಶೇ.6, ಹೊಲೆಯ ಸಂಬಂಧಿತ ಜಾತಿಗಳನ್ನು ಪ್ರವರ್ಗ-ಬಿ ಶೇ.6, ಬೋವಿ, ಕೊರಮ, ಕೊರಚ, ಲಂಬಾಣಿ ಸಮುದಾಯಗಳ ಜೊತೆಗೆ 59 ಅಸ್ಪೃಷ್ಯ ಅಲೆಮಾರಿ ಸಮುದಾಯಗಳನ್ನು ಸೇರಿಸುವ ಮೂಲಕ ಪ್ರವರ್ಗ ಎ ಗುಂಪಿನಲ್ಲಿದ್ದ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿ ಶೇ.5 ಒಳಮೀಸಲಾತಿಯನ್ನು ಕಲ್ಪಿಸಿ ಆದೇಶ ಹೊರಡಿಸಿತ್ತು.

ಜಸ್ಟೀಸ್‌ ನಾಗಮೋಹನ್‌ ದಾಸ್‌ ಆಯೋಗವು ಕೊರಮ, ಕೊರಚ, ಲಂಬಾಣಿ ಸಮುದಾಯಗಳು ಉಳಿದ ಪರಿಶಿಷ್ಟ ಜಾತಿಗಳಿಗಿಂತ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮುಂದುರೆದ ಜಾತಿಗಳಾಗಿದ್ದರಿಂದ ಹಾಗೂ ಸ್ಪೃಶ್ಯ ಸಮುದಾಯಗಳಾಪಗಿವೆ. ಈ ಸಮುದಾಯಗಳನ್ನು ಒಳಮೀಸಲಾತಿ ವರ್ಗೀಕರಣದಲ್ಲಿ ಪ್ರವರ್ಗ ಡಿ ಎಂದು ವರ್ಗೀಕರಿಸಿ ಶೇ. 4 ಒಳಮೀಸಲಾತಿಯನ್ನು ಒದಗಿಸಿತ್ತು. ರಾಜ್ಯ ಸರ್ಕಾರವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದ ಈ ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪರಿಸಿಷ್ಟ ಜಾತಿಗಳಲ್ಲಿಯೇ ಸಾಪೇಕ್ಷವಾಗಿ ಮುಂದುವರೆದ ಸೃಶ್ಯ ಸಮುದಾಯಗಳಾದ ಕೊರಮ, ಕೊರಚ, ಲಂಬಾಣಿ ಸಮುದಾಯಗಳ ಜೊತೆಗೆ ಸೇರಿಸಿರುವುದು ಸಾಮಾಜಿಕ ನ್ಯಾಯವಲ್ಲ ಎಂದು ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಹೈಕೋರ್ಟ್‌ನಲ್ಲಿ 2-12-2025ರಂದು ರಿಟ್‌ ಅರ್ಜಿ (WP 28612/2025) ಸಲ್ಲಿಸಿದ್ದವು.

ಸರ್ಕಾರವು ತನ್ನ ಅಫಿಡವಿಟ್‌ನಲ್ಲಿ, ಅಲೆಮಾರಿ ಸಮುದಾಗಳಿಗೆ ಶೇ. 1 ಒಳಮೀಸಲಾತಿಯಿಂದ ಹೆಚ್ಚಿನ ಲಾಭ ಸಿಗುವುದಿಲ್ಲ ಹಾಗಾಗಿ ಪ್ರವರ್ಗ ಸಿಗೆ ಸೇರಿಸಲಾಗಿದೆ ಎಂದು ವಾದಿಸಿದೆ. ಅಲ್ಲದೇ ಅಲೆಮಾರಿ ಸಮುದಾಯಗಳಲ್ಲಿ ಕೆಲವು ಜಾತಿಗಳು ಶೈಕ್ಷಣಿಕವಾಗಿ ಹಾಗೂ ಭೂಮಿಯ ಒಡೆತನದಲ್ಲಿ ಜಸ್ಟೀಸ್‌ ನಾಗಮೋಹನ್‌ ದಾಸ್‌ ವರದಿಯಲ್ಲಿನ ಪ್ರವರ್ಗ-ಡಿ ಜಾತಿಗಳಿಗಿಂತ ಹಿಂದುಳಿದಿಲ್ಲ ಎಂದು ವಾದಿಸಿದೆ.

ಸರ್ಕಾರ ತನ್ನ ಅಫಿಡವಿಟ್‌ನಲ್ಲಿ ಅಲೆಮಾರಿ ಸಮುದಾಯಗಳಲ್ಲಿನ 5 ಜಾತಿಗಳಾದ ಬುಡ್ಗ ಜಂಗಮ, ಚನ್ನ ದಾಸರ್ , ಹೊಲೆಯ ದಾಸರ್, ಸಿಳ್ಳೆಕ್ಯಾತ , ಸುಡುಗಾಡು ಸಿದ್ದ ಸಮುದಾಯಗಳು ಸಾಪೇಕ್ಷವಾಗಿ ಉಳಿದ ಜಾತಿಗಳಿಗಿಂತ ಹಿಂದುಳಿದಿಲ್ಲ ಎಂದು ಹೇಳುತ್ತಾ ಉಳಿದ 54 ಜಾತಿಗಳನ್ನು ಸಾಪೇಕ್ಷವಾಗಿ ಮುಂದುವರೆದ ಸಮುದಾಯಗಳ ಜೊತೆಗೆ ಸೇರಿಸಿರುವುದರ ಕುರಿತು ರಾಜ್ಯ ಸರ್ಕಾರ ಯಾವುದೇ ಸಮರ್ತನೆಯನ್ನು ಮಾಡಿಕೊಳ್ಳಲಿಲ್ಲ.

ಇದರ ಮೂಲಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಪ್ರಾಶಸ್ತ್ಯದ ಒಳಮೀಸಲಾತಿಯನು ನಿರಾಕರಿಸಿದೆ.

#InternalReservation #Untouchable #Nomadic #SCReservation #Karnataka #ಅಸ್ಪೃಶ್ಯಅಲೆಮಾರಿಸಮುದಾಯಗಳು #ಒಳಮೀಸಲಾತಿ #ಹೈಕೋರ್ಟ್‌ #HighCourt

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...