Homeಕರ್ನಾಟಕಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

- Advertisement -
- Advertisement -

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ ಒಳಮೀಸಲಾತಿ ಕುರಿತ ತನ್ನ ಆದೇಶವನ್ನು ಸಮರ್ಥಿಸಿಕೊಂಡು ಅಫಿಡವಿಟ್‌ ಸಲ್ಲಿಸಿದೆ. ಅಲ್ಲದೇ ರಿಟ್‌ ಅರ್ಜಿಯಲ್ಲಿ ಯಾವುದೇ ಉರುಳಿಲ್ಲ ಹಾಗಾಗಿ ರಿಟ್‌ ಅರ್ಜಿಯನ್ನು ತಿರಸ್ಕರಿಸಬೇಕು ಅಂದು ಮನವಿ ಮಾಡಿದೆ.

ಜಸ್ಟೀಸ್‌ ನಾಗಮೋಹನ್‌ ದಾಸ್‌ ಆಯೋಗವು ಪರಿಶಿಷ್ಟ ಜಾತಿಗಳನ್ನು 5 ಗುಂಪುಗಳಾಗಿ ವಿಂಗಡಿಸಿ ಅಲೆಮಾರಿ ಸಮುದಾಯ ಪ್ರವರ್ಗ ಎ ಎಂದು ವರ್ಗೀಕರಿಸಿ ಶೇ. 1 ಮೀಸಲಾತಿಯನ್ನು ನೀಡಿತ್ತು. ರಾಜ್ಯ ಸರ್ಕಾರದ ಸಚಿವ ಸಂಪುಟವು ಜಸ್ಟೀಸ್‌ ನಾಗಮೋಹನ್‌ದಾಸ್‌ ಆಯೋಗದ ವರದಿಯನ್ನು ಮಾರ್ಪಡಿಸಿ ಮಾದಿಗ ಸಂಬಂಧಿತ ಜಾತಿಗಳನ್ನು ಪ್ರವರ್ಗ-ಎ ಶೇ.6, ಹೊಲೆಯ ಸಂಬಂಧಿತ ಜಾತಿಗಳನ್ನು ಪ್ರವರ್ಗ-ಬಿ ಶೇ.6, ಬೋವಿ, ಕೊರಮ, ಕೊರಚ, ಲಂಬಾಣಿ ಸಮುದಾಯಗಳ ಜೊತೆಗೆ 59 ಅಸ್ಪೃಷ್ಯ ಅಲೆಮಾರಿ ಸಮುದಾಯಗಳನ್ನು ಸೇರಿಸುವ ಮೂಲಕ ಪ್ರವರ್ಗ ಎ ಗುಂಪಿನಲ್ಲಿದ್ದ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿ ಶೇ.5 ಒಳಮೀಸಲಾತಿಯನ್ನು ಕಲ್ಪಿಸಿ ಆದೇಶ ಹೊರಡಿಸಿತ್ತು.

ಜಸ್ಟೀಸ್‌ ನಾಗಮೋಹನ್‌ ದಾಸ್‌ ಆಯೋಗವು ಕೊರಮ, ಕೊರಚ, ಲಂಬಾಣಿ ಸಮುದಾಯಗಳು ಉಳಿದ ಪರಿಶಿಷ್ಟ ಜಾತಿಗಳಿಗಿಂತ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮುಂದುರೆದ ಜಾತಿಗಳಾಗಿದ್ದರಿಂದ ಹಾಗೂ ಸ್ಪೃಶ್ಯ ಸಮುದಾಯಗಳಾಪಗಿವೆ. ಈ ಸಮುದಾಯಗಳನ್ನು ಒಳಮೀಸಲಾತಿ ವರ್ಗೀಕರಣದಲ್ಲಿ ಪ್ರವರ್ಗ ಡಿ ಎಂದು ವರ್ಗೀಕರಿಸಿ ಶೇ. 4 ಒಳಮೀಸಲಾತಿಯನ್ನು ಒದಗಿಸಿತ್ತು. ರಾಜ್ಯ ಸರ್ಕಾರವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದ ಈ ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪರಿಸಿಷ್ಟ ಜಾತಿಗಳಲ್ಲಿಯೇ ಸಾಪೇಕ್ಷವಾಗಿ ಮುಂದುವರೆದ ಸೃಶ್ಯ ಸಮುದಾಯಗಳಾದ ಕೊರಮ, ಕೊರಚ, ಲಂಬಾಣಿ ಸಮುದಾಯಗಳ ಜೊತೆಗೆ ಸೇರಿಸಿರುವುದು ಸಾಮಾಜಿಕ ನ್ಯಾಯವಲ್ಲ ಎಂದು ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಹೈಕೋರ್ಟ್‌ನಲ್ಲಿ 2-12-2025ರಂದು ರಿಟ್‌ ಅರ್ಜಿ (WP 28612/2025) ಸಲ್ಲಿಸಿದ್ದವು.

ಸರ್ಕಾರವು ತನ್ನ ಅಫಿಡವಿಟ್‌ನಲ್ಲಿ, ಅಲೆಮಾರಿ ಸಮುದಾಗಳಿಗೆ ಶೇ. 1 ಒಳಮೀಸಲಾತಿಯಿಂದ ಹೆಚ್ಚಿನ ಲಾಭ ಸಿಗುವುದಿಲ್ಲ ಹಾಗಾಗಿ ಪ್ರವರ್ಗ ಸಿಗೆ ಸೇರಿಸಲಾಗಿದೆ ಎಂದು ವಾದಿಸಿದೆ. ಅಲ್ಲದೇ ಅಲೆಮಾರಿ ಸಮುದಾಯಗಳಲ್ಲಿ ಕೆಲವು ಜಾತಿಗಳು ಶೈಕ್ಷಣಿಕವಾಗಿ ಹಾಗೂ ಭೂಮಿಯ ಒಡೆತನದಲ್ಲಿ ಜಸ್ಟೀಸ್‌ ನಾಗಮೋಹನ್‌ ದಾಸ್‌ ವರದಿಯಲ್ಲಿನ ಪ್ರವರ್ಗ-ಡಿ ಜಾತಿಗಳಿಗಿಂತ ಹಿಂದುಳಿದಿಲ್ಲ ಎಂದು ವಾದಿಸಿದೆ.

ಸರ್ಕಾರ ತನ್ನ ಅಫಿಡವಿಟ್‌ನಲ್ಲಿ ಅಲೆಮಾರಿ ಸಮುದಾಯಗಳಲ್ಲಿನ 5 ಜಾತಿಗಳಾದ ಬುಡ್ಗ ಜಂಗಮ, ಚನ್ನ ದಾಸರ್ , ಹೊಲೆಯ ದಾಸರ್, ಸಿಳ್ಳೆಕ್ಯಾತ , ಸುಡುಗಾಡು ಸಿದ್ದ ಸಮುದಾಯಗಳು ಸಾಪೇಕ್ಷವಾಗಿ ಉಳಿದ ಜಾತಿಗಳಿಗಿಂತ ಹಿಂದುಳಿದಿಲ್ಲ ಎಂದು ಹೇಳುತ್ತಾ ಉಳಿದ 54 ಜಾತಿಗಳನ್ನು ಸಾಪೇಕ್ಷವಾಗಿ ಮುಂದುವರೆದ ಸಮುದಾಯಗಳ ಜೊತೆಗೆ ಸೇರಿಸಿರುವುದರ ಕುರಿತು ರಾಜ್ಯ ಸರ್ಕಾರ ಯಾವುದೇ ಸಮರ್ತನೆಯನ್ನು ಮಾಡಿಕೊಳ್ಳಲಿಲ್ಲ.

ಇದರ ಮೂಲಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಪ್ರಾಶಸ್ತ್ಯದ ಒಳಮೀಸಲಾತಿಯನು ನಿರಾಕರಿಸಿದೆ.

#InternalReservation #Untouchable #Nomadic #SCReservation #Karnataka #ಅಸ್ಪೃಶ್ಯಅಲೆಮಾರಿಸಮುದಾಯಗಳು #ಒಳಮೀಸಲಾತಿ #ಹೈಕೋರ್ಟ್‌ #HighCourt

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...