Homeಕರ್ನಾಟಕವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

- Advertisement -
- Advertisement -

ಕರ್ನಾಟಕ ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ರಾಜ್ಯದ 65 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಕರ್ನಾಟಕ ರಾಜ್ಯೋತ್ಸವದಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.  ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸಚಿವ ಸಿ.ಟಿ.ರವಿ ಇಂದು ಬಿಡುಗಡೆಗೊಳಿಸಿದ್ದಾರೆ.

ಈ ಬಾರಿಯ ರಾಜ್ಯೋತ್ಸವ ಪುರಸ್ಕೃತರು

ಸಾಹಿತ್ಯ ಕ್ಷೇತ್ರ: ಪ್ರೊ.ಸಿ.ಪಿ.ಸಿದ್ಧಾಶ್ರಮ (ಧಾರವಾಡ), ವಿ.ಮುನಿ ವೆಂಕಟಪ್ಪ (ಕೋಲಾರ), ರಾಮಣ್ಣ ಬ್ಯಾಟಿ (ಗದಗ), ವಲೇರಿಯನ್ ಡಿಸೋಜ (ವಲ್ಲಿವಗ್ಗ, ದಕ್ಷಿಣ ಕನ್ನಡ), ಡಿ.ಎನ್.ಅಕ್ಕಿ (ಯಾದಗಿರಿ).

ಸಂಗೀತ ಕ್ಷೇತ್ರ: ಹಂಬಯ್ಯ ನೂಲಿ (ರಾಯಚೂರು), ಅನಂತ ತೇರದಾಳ (ಬೆಳಗಾವಿ), ಬಿ.ವಿ.ಶ್ರೀನಿವಾಸ್ ಮತ್ತು ಗಿರಿಜಾ ನಾರಾಯಣ (ಬೆಂಗಳೂರು ನಗರ), ಕೆ.ಲಿಂಗಪ್ಪ ಶೇರಿಗಾರ (ದಕ್ಷಿಣ ಕನ್ನಡ)

ನ್ಯಾಯಾಂಗ ವಿಭಾಗ: ಕೆ.ಎನ್.ಭಟ್ (ಬೆಂಗಳೂರು), ಎಂ.ಕೆ.ವಿಜಯಕುಮಾರ (ಉಡುಪಿ)

ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಮಾಧ್ಯಮ ಕ್ಷೇತ್ರ: ಸಿ.ಮಹೇಶ್ವರನ್ (ಮೈಸೂರು), ಟಿ.ವೆಂಕಟೇಶ್ (ಬೆಂಗಳೂರು ನಗರ)

ಯೋಗ: ಡಾ.ಎ.ಎಸ್.ಚಂದ್ರಶೇಖರ (ಮೈಸೂರು)

ಶಿಕ್ಷಣ ಕ್ಷೇತ್ರ: ಎಂ.ಎನ್.ಷಡಕ್ಷರಿ (ಚಿಕ್ಕಮಗಳೂರು), ಡಾ.ಆರ್.ರಾಮಕೃಷ್ಣ (ಚಾಮರಾಜನಗರ), ಡಾ.ಎಂ.ಜಿ.ಈಶ್ವರಪ್ಪ (ದಾವಣಗೆರೆ), ಡಾ.ಪುಟ್ಟಸಿದ್ದಯ್ಯ (ಮೈಸೂರು), ಅಶೋಕ್ ಶೆಟ್ಟರ್ (ಬೆಳಗಾವಿ), ಡಿ.ಎಸ್.ದಂಡಿನ್ (ಗದಗ)

ಸಂಕೀರ್ಣ: ಡಾ ಕೆ.ವಿ.ರಾಜು (ಕೋಲಾರ), ನಂ.ವೆಂಕೋಬರಾವ್ (ಹಾಸನ), ಡಾ.ಕೆ.ಎಸ್.ರಾಜಣ್ಣ (ಮಂಡ್ಯ), ವಿ.ಲಕ್ಷ್ಮಿನಾರಾಯಣ (ಮಂಡ್ಯ).

ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕ್ರೀಡಾ ಕ್ಷೇತ್ರ: ಹೆಚ್.ಬಿ.ನಂಜೇಗೌಡ (ತುಮಕೂರು), ಉಷಾರಾಣಿ (ಬೆಂಗಳೂರು ನಗರ)

ಸಂಘ-ಸಂಸ್ಥೆ: ಯೂತ್‌ ಫಾರ್ ಸೇವಾ, ಬೆಟರ್‌ ಇಂಡಿಯಾ (ಬೆಂಗಳೂರು ನಗರ), ದೇವದಾಸಿ ಸ್ವಾವಲಂಬನ ಕೇಂದ್ರ (ಬಳ್ಳಾರಿ), ಯುವ ಬ್ರಿಗೇಟ್ (ಬೆಂಗಳೂರು ಗ್ರಾಮಾಂತರ), ಧರ್ಮೋತ್ಥಾನ ಟ್ರಸ್ಟ್ (ಧರ್ಮಸ್ಥಳ)

ಸಮಾಜಸೇವೆ: ಎನ್.ಎಸ್.ಕುಂದರಗಿ ಹೆಗಡೆ (ಉತ್ತರ ಕನ್ನಡ, ಪ್ರೇಮಾ ಕೋದಂಡರಾಮ ಶ್ರೇಷ್ಠಿ, ಮೋಹಿನಿ ಸಿದ್ದೇಗೌಡ (ಚಿಕ್ಕಮಗಳೂರು), ಮಣೆಗಾರ ಮಿರಾನ್ ಸಾಹೇಬ್ (ಉಡುಪಿ).

ವೈದ್ಯಕೀಯ: ಡಾ.ಅಶೋಕ್ ಸೊನ್ನದ್ (ಬಾಗಲಕೋಟೆ), ಡಾ.ಬಿ.ಎಸ್.ಶ್ರೀನಾಥ (ಶಿವಮೊಗ್ಗ), ಡಾ.ಎ.ನಾಗರತ್ನ (ಬಳ್ಳಾರಿ), ಡಾ.ವೆಂಕಟಪ್ಪ (ರಾಮನಗರ)

ಕೃಷಿ: ಸುರತ್ ಸಿಂಗ್ ಕನೂರ್ ಸಿಂಗ್ ರಜಪೂತ್ (ಬೀದರ್), ಎಸ್.ವಿ.ಸುಮಂಗಲಮ್ಮ ವೀರಭದ್ರಪ್ಪ (ಚಿತ್ರದುರ್ಗ), ಡಾ.ಸಿದ್ರಾಮಪ್ಪ ಬಸವಂತರಾವ್ ಪಾಟೀಲ್ (ಕಲಬುರ್ಗಿ).

ಪರಿಸರ: ಅಮರ ನಾರಾಯಣ (ಚಿಕ್ಕಬಳ್ಳಾಪುರ), ಎನ್‌.ಡಿ. ಪಾಟೀಲ್ (ವಿಜಯಪುರ)

ವಿಜ್ಞಾನ/ತಂತ್ರಜ್ಞಾನ: ಪ್ರೋ ಉಡುಪಿ ಶ್ರೀನಿವಾಸ, ಡಾ.ಚಿಂದಿ ವಾಸುದೇವಪ್ಪ (ಶಿವಮೊಗ್ಗ)

ಸಹಕಾರ: ಡಾ.ಸಿ.ಎನ್.ಮಂಚೇಗೌಡ (ಬೆಂಗಳೂರು ನಗರ)

ಯಕ್ಷಗಾನ: ಬಂಗಾರ್ ಆಚಾರಿ (ಚಾಮರಾಜನಗರ), ಎಂ.ಕೆ. ರಮೇಶ್ ಆಚಾರ್ಯ (ಶಿವಮೊಗ್ಗ)

ರಂಗಭೂಮಿ: ಅನಸೂಯಮ್ಮ (ಹಾಸನ), ಎಚ್.ಷಡಕ್ಷರಪ್ಪ (ದಾವಣಗೆರೆ), ತಿಪ್ಪೇಸ್ವಾಮಿ (ಚಿತ್ರದುರ್ಗ).

ಚಲನಚಿತ್ರ: ಬಿ.ಎಸ್.ಬಸವರಾಜ್ (ತುಮಕೂರು), ಆಪಾಢಾಂಡ ತಿಮ್ಮಯ್ಯ ರಘು (ಕೊಡಗು).

ಚಿತ್ರಕಲೆ: ಎಂ.ಜೆ.ವಾಚೇದ್‌ಮಠ (ಧಾರವಾಡ)

ಜಾನಪದ: ಗುರುರಾಜ ಹೊಸಕೋಟೆ (ಬಾಗಲಕೋಟೆ), ಡಾ.ಹಂಪನಹಳ್ಳಿ ತಿಮ್ಮೇಗೌಡ (ಹಾಸನ).

ಇದನ್ನೂ ಓದಿ: ಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

ಶಿಲ್ಟಕಲೆ: ಎನ್.ಎಸ್.ಜನಾರ್ದನಮೂರ್ತಿ (ಮೈಸೂರು).

ನೃತ್ಯ: ವಿದುಷಿ ಜ್ಯೋತಿ ಪಟ್ಟಾಭಿರಾಮ್

ಜಾನಪದ/ತೊಗಲು ಗೊಂಬೆಯಾಟ: ಕೇಶಪ್ಪ ಶಿಳ್ಳೇಕ್ಯಾತರ (ಕೊಪ್ಪಳ)

ಈ 65 ಸಾಧಕರಿಗೆ ನವೆಂಬರ್‌ ಒಂದರಂದು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು.


ಇದನ್ನೂ ಓದಿ: ಭಾರತದ ಸಂಸ್ಕೃತಿಯೆಂದರೆ ಕೇವಲ ವೈದಿಕ ಸಂಸ್ಕೃತಿಯೇ?: ಭಾರತೀಯ ಸಂಸ್ಕೃತಿ ಅಧ್ಯಯನದ ಹಿಂದಿನ ಹುನ್ನಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...