Homeಕರ್ನಾಟಕರಾಜ್ಯ ಸರ್ಕಾರ ಈ ಬಾರಿ 'ಎಸ್‌ಸಿಪಿ-ಟಿಎಸ್‌ಪಿ'ಗೆ ₹42,018 ಕೋಟಿ ಒದಗಿಸಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರ ಈ ಬಾರಿ ‘ಎಸ್‌ಸಿಪಿ-ಟಿಎಸ್‌ಪಿ’ಗೆ ₹42,018 ಕೋಟಿ ಒದಗಿಸಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಾಗಿ ನಮ್ಮ ಸರ್ಕಾರ ಈ ಬಾರಿ 42,018 ಕೋಟಿ ರೂಪಾಯಿಗಳನ್ನು ಒದಗಿಸಿದೆ. ನಾವು ಪರಿಶಿಷ್ಟ ಸಮುದಾಯಗಳ ಏಳಿಗೆಯನ್ನು ಪ್ರಾಮಾಣಿಕವಾಗಿ ಬಯಸುವವರು. ನಮ್ಮ ಕಾಳಜಿ ಕೇವಲ ಬಾಯಿ ಮಾತಿನದಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, 2020-21ರಿಂದ 2022-23 ರವರೆಗೆ 3 ವರ್ಷಗಳ ಅವಧಿಯಲ್ಲಿ ಹಿಂದಿನ ಬಿಜೆಪಿ ಸರ್ಕಾರ ಎಸ್‌ಸಿಪಿ ಮತ್ತು ಟಿಎಸ್‌ಪಿಗಾಗಿ 80,415 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಆದರೆ, ನಾವು 2023 ರಿಂದ ಈಗ ಮಂಡಿಸಿರುವ ಬಜೆಟ್‌ವರೆಗೆ 1,15,509 ಕೋಟಿ ರೂಪಾಯಿಗಳನ್ನು ಒದಗಿಸಿದ್ದೇವೆ. ಬಿಜೆಪಿಯ 3 ವರ್ಷಗಳಿಗೆ ಹೋಲಿಸಿದರೆ ನಾವು 35,094 ಕೋಟಿ ರೂಪಾಯಿಗಳನ್ನು ಹೆಚ್ಚಿಗೆ ಒದಗಿಸಿದ್ದೇವೆ. ಶೇ.43.64 ರಷ್ಟು ಹೆಚ್ಚಿನ ಅನುದಾನವನ್ನು ಒದಗಿಸಿದಂತಾಗುತ್ತದೆ. ಒಟ್ಟಾರೆ ಸಮಾಜ ಕಲ್ಯಾಣ ಇಲಾಖೆಗೆ ಶೇ.52.5 ರಷ್ಟು ಹೆಚ್ಚು ಅನುದಾನವನ್ನು ಕೊಟ್ಟಿದ್ದೇವೆ ಎಂದು ವಿವರಿಸಿದರು.

ವಿರೋಧ ಪಕ್ಷದ ನಾಯಕರು ಪ್ರಾಜೆಕ್ಟ್ ಟೈಗರ್ ಮತ್ತು ಪ್ರಾಜೆಕ್ಟ್ ಎಲಿಫೆಂಟ್ ಯೋಜನೆಗೂ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣವನ್ನು ವಿನಿಯೋಗಿಸಲಾಗಿದೆ ಎಂದಿದ್ದಾರೆ. ಆದರೆ, ಇದು ಕೇಂದ್ರ ಸರ್ಕಾರದ ಸಮಸ್ಯೆ. ಕೇಂದ್ರ ಸರ್ಕಾರ ರೂಪಿಸಿರುವ ಕೇಂದ್ರ ಪುರಸ್ಕೃತ ಯೋಜನೆಗೆ ಮ್ಯಾಚಿಂಗ್ ಗ್ರಾಂಟ್ ಒದಗಿಸಿದ್ದೇವೆ ಅಷ್ಟೇ ಎಂದರು.

“ನಮ್ಮದು ಮುಸ್ಲಿಂ ಬಜೆಟ್ ಅಲ್ಲ, ಸರ್ವೋದಯದ ಬಜೆಟ್”

ನಾವು ಬಜೆಟ್‌ ಪುಸ್ತಕದಲ್ಲಿ ಹೇಳಿದ್ದೆವು, ನಮ್ಮ ಉದ್ದೇಶ ಸಮಾಜವನ್ನು ಸೋಷಿಯಲ್ ಡಾರ್ವಿನಿಸಂ ಕಡೆಗೆ ತೆಗೆದುಕೊಂಡು ಹೋಗುವುದಲ್ಲ. ಸಂವಿಧಾನದ ಕಡೆಗೆ ಮುನ್ನಡೆಸುವುದು. ಮನುವಾದವು ಸೋಷಿಯಲ್ ಡಾರ್ವಿನಿಸಮ್ಮನ್ನು ಹೇಳುತ್ತದೆ. ಇದು ಮನುಷ್ಯ ಸಮಾಜಕ್ಕೂ ಅನ್ವಯವಾದರೆ ದಮನಿತ ಸಮುದಾಯಗಳು ಮತ್ತು ಮಹಿಳೆಯರು ಬದುಕುವುದು ಹೇಗೆ? ಈ ವರ್ಗಗಳಿಗೆ ನ್ಯಾಯ ಕೊಡುವುದು ಸಂವಿಧಾನ ಮಾತ್ರ ಎಂದು ಸಿಎಂ ಹೇಳಿದರು.

ನಾವು ಸಂವಿಧಾನದ ಆಶಯಗಳ ಹಾದಿಯಲ್ಲಿ ಮುನ್ನಡೆಯುತ್ತಿದ್ದೇವೆ. ಹಾಗಾಗಿ ನಾವು ಸರ್ವೋದಯವಾಗಲಿ ಸರ್ವರಲಿ ಎಂಬುದನ್ನು ಮಾತಿಗೋಸ್ಕರ ಬಳಸುವುದಿಲ್ಲ. ಬದಲಾಗಿ ಅದನ್ನು ನಮ್ಮ ಸಿದ್ಧಾಂತವಾಗಿಸಿಕೊಂಡು ಕೆಲಸ ಮಾಡುತ್ತಿದ್ದೇವೆ. ನಮ್ಮದು ಮುಸ್ಲಿಂ ಬಜೆಟ್ ಅಲ್ಲ, ಸರ್ವೋದಯದ ಬಜೆಟ್ ಎಂದು ಎಂದರು.

ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ

2025-26ನೇ ಸಾಲಿನಲ್ಲಿ 4,09,549 ಕೋಟಿ ರೂ. ಗಾತ್ರದ ಬಜೆಟ್ಟನ್ನು ನಾನು ಮಂಡಿಸಿದ್ದೇನೆ. 2024-25ನೇ ಸಾಲಿನ ಆಯವ್ಯಯಕ್ಕೆ ಹೋಲಿಸಿದರೆ 2025-26ನೇ ಸಾಲಿನಲ್ಲಿ ನಮ್ಮ ರಾಜ್ಯದ ಬಜೆಟ್ ಗಾತ್ರ ಶೇ.10.3 ರಷ್ಟು ಹೆಚ್ಚಿನ ಬೆಳವಣಿಗೆ ಕಂಡಿದೆ. ಜನಸಂಖ್ಯೆಯ ಗಾತ್ರದಲ್ಲಿ ಕರ್ನಾಟಕವು 8ನೇ ಸ್ಥಾನದಲ್ಲಿದೆ. ತೆರಿಗೆ ಸಂಗ್ರಹಿಸಿಕೊಡುವ ವಿಚಾರದಲ್ಲಿ ಕರ್ನಾಟಕವು 2ನೇ ಸ್ಥಾನದಲ್ಲಿದೆ. ಜಿಎಸ್‌ಡಿಪಿಯಲ್ಲಿ ಕರ್ನಾಟಕವು ಮಹಾರಾಷ್ಟ್ರ ತಮಿಳುನಾಡಿನ ನಂತರ 3ನೇ ಸ್ಥಾನದಲ್ಲಿದೆ. ಆದರೆ, 2025-26ನೇ ಸಾಲಿನ ನಮ್ಮ ಬಜೆಟ್ ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡಿನ ನಂತರ 5ನೇ ದೊಡ್ಡ ಬಜೆಟ್ ಎಂದು ಸಿಎಂ ಹೇಳಿದರು.

ಇದೇ ಸಂದರ್ಭದಲ್ಲಿ, 2025-26ನೇ ಸಾಲಿಗೆ ಸಂಬಂಧಿಸಿದಂತೆ ಕೇಂದ್ರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಗಾತ್ರ 50.65 ಲಕ್ಷ ಕೋಟಿ ರೂ. 2024-25 ರಲ್ಲಿ 48.21 ಲಕ್ಷ ಕೋಟಿ ರೂ.ಗಳಷ್ಟಿತ್ತು. ಕೇಂದ್ರದ ಬಜೆಟ್ ಬೆಳವಣಿಗೆ ಶೇ. 5.06 ರಷ್ಟು ಮಾತ್ರ. ಇದರಲ್ಲಿ ಹಣದುಬ್ಬರವನ್ನು ಕಳೆದರೆ, ಕೇಂದ್ರದ ಬಜೆಟ್ಟಿನ ಗಾತ್ರ ನಕಾರಾತ್ಮಕವಾಗುತ್ತದೆ ಎಂದರು.

‘ದ್ವೇಷ ರಾಜಕಾರಣ’ ಕುಮಾರಸ್ವಾಮಿ ಅವರ ಡಿಎನ್‌ಎಯಲ್ಲೆ ಇದೆ: ಡಿ.ಕೆ. ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...