Homeಕರ್ನಾಟಕರಾಜ್ಯ ಸರ್ಕಾರ ಈ ಬಾರಿ 'ಎಸ್‌ಸಿಪಿ-ಟಿಎಸ್‌ಪಿ'ಗೆ ₹42,018 ಕೋಟಿ ಒದಗಿಸಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರ ಈ ಬಾರಿ ‘ಎಸ್‌ಸಿಪಿ-ಟಿಎಸ್‌ಪಿ’ಗೆ ₹42,018 ಕೋಟಿ ಒದಗಿಸಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಾಗಿ ನಮ್ಮ ಸರ್ಕಾರ ಈ ಬಾರಿ 42,018 ಕೋಟಿ ರೂಪಾಯಿಗಳನ್ನು ಒದಗಿಸಿದೆ. ನಾವು ಪರಿಶಿಷ್ಟ ಸಮುದಾಯಗಳ ಏಳಿಗೆಯನ್ನು ಪ್ರಾಮಾಣಿಕವಾಗಿ ಬಯಸುವವರು. ನಮ್ಮ ಕಾಳಜಿ ಕೇವಲ ಬಾಯಿ ಮಾತಿನದಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, 2020-21ರಿಂದ 2022-23 ರವರೆಗೆ 3 ವರ್ಷಗಳ ಅವಧಿಯಲ್ಲಿ ಹಿಂದಿನ ಬಿಜೆಪಿ ಸರ್ಕಾರ ಎಸ್‌ಸಿಪಿ ಮತ್ತು ಟಿಎಸ್‌ಪಿಗಾಗಿ 80,415 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಆದರೆ, ನಾವು 2023 ರಿಂದ ಈಗ ಮಂಡಿಸಿರುವ ಬಜೆಟ್‌ವರೆಗೆ 1,15,509 ಕೋಟಿ ರೂಪಾಯಿಗಳನ್ನು ಒದಗಿಸಿದ್ದೇವೆ. ಬಿಜೆಪಿಯ 3 ವರ್ಷಗಳಿಗೆ ಹೋಲಿಸಿದರೆ ನಾವು 35,094 ಕೋಟಿ ರೂಪಾಯಿಗಳನ್ನು ಹೆಚ್ಚಿಗೆ ಒದಗಿಸಿದ್ದೇವೆ. ಶೇ.43.64 ರಷ್ಟು ಹೆಚ್ಚಿನ ಅನುದಾನವನ್ನು ಒದಗಿಸಿದಂತಾಗುತ್ತದೆ. ಒಟ್ಟಾರೆ ಸಮಾಜ ಕಲ್ಯಾಣ ಇಲಾಖೆಗೆ ಶೇ.52.5 ರಷ್ಟು ಹೆಚ್ಚು ಅನುದಾನವನ್ನು ಕೊಟ್ಟಿದ್ದೇವೆ ಎಂದು ವಿವರಿಸಿದರು.

ವಿರೋಧ ಪಕ್ಷದ ನಾಯಕರು ಪ್ರಾಜೆಕ್ಟ್ ಟೈಗರ್ ಮತ್ತು ಪ್ರಾಜೆಕ್ಟ್ ಎಲಿಫೆಂಟ್ ಯೋಜನೆಗೂ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣವನ್ನು ವಿನಿಯೋಗಿಸಲಾಗಿದೆ ಎಂದಿದ್ದಾರೆ. ಆದರೆ, ಇದು ಕೇಂದ್ರ ಸರ್ಕಾರದ ಸಮಸ್ಯೆ. ಕೇಂದ್ರ ಸರ್ಕಾರ ರೂಪಿಸಿರುವ ಕೇಂದ್ರ ಪುರಸ್ಕೃತ ಯೋಜನೆಗೆ ಮ್ಯಾಚಿಂಗ್ ಗ್ರಾಂಟ್ ಒದಗಿಸಿದ್ದೇವೆ ಅಷ್ಟೇ ಎಂದರು.

“ನಮ್ಮದು ಮುಸ್ಲಿಂ ಬಜೆಟ್ ಅಲ್ಲ, ಸರ್ವೋದಯದ ಬಜೆಟ್”

ನಾವು ಬಜೆಟ್‌ ಪುಸ್ತಕದಲ್ಲಿ ಹೇಳಿದ್ದೆವು, ನಮ್ಮ ಉದ್ದೇಶ ಸಮಾಜವನ್ನು ಸೋಷಿಯಲ್ ಡಾರ್ವಿನಿಸಂ ಕಡೆಗೆ ತೆಗೆದುಕೊಂಡು ಹೋಗುವುದಲ್ಲ. ಸಂವಿಧಾನದ ಕಡೆಗೆ ಮುನ್ನಡೆಸುವುದು. ಮನುವಾದವು ಸೋಷಿಯಲ್ ಡಾರ್ವಿನಿಸಮ್ಮನ್ನು ಹೇಳುತ್ತದೆ. ಇದು ಮನುಷ್ಯ ಸಮಾಜಕ್ಕೂ ಅನ್ವಯವಾದರೆ ದಮನಿತ ಸಮುದಾಯಗಳು ಮತ್ತು ಮಹಿಳೆಯರು ಬದುಕುವುದು ಹೇಗೆ? ಈ ವರ್ಗಗಳಿಗೆ ನ್ಯಾಯ ಕೊಡುವುದು ಸಂವಿಧಾನ ಮಾತ್ರ ಎಂದು ಸಿಎಂ ಹೇಳಿದರು.

ನಾವು ಸಂವಿಧಾನದ ಆಶಯಗಳ ಹಾದಿಯಲ್ಲಿ ಮುನ್ನಡೆಯುತ್ತಿದ್ದೇವೆ. ಹಾಗಾಗಿ ನಾವು ಸರ್ವೋದಯವಾಗಲಿ ಸರ್ವರಲಿ ಎಂಬುದನ್ನು ಮಾತಿಗೋಸ್ಕರ ಬಳಸುವುದಿಲ್ಲ. ಬದಲಾಗಿ ಅದನ್ನು ನಮ್ಮ ಸಿದ್ಧಾಂತವಾಗಿಸಿಕೊಂಡು ಕೆಲಸ ಮಾಡುತ್ತಿದ್ದೇವೆ. ನಮ್ಮದು ಮುಸ್ಲಿಂ ಬಜೆಟ್ ಅಲ್ಲ, ಸರ್ವೋದಯದ ಬಜೆಟ್ ಎಂದು ಎಂದರು.

ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ

2025-26ನೇ ಸಾಲಿನಲ್ಲಿ 4,09,549 ಕೋಟಿ ರೂ. ಗಾತ್ರದ ಬಜೆಟ್ಟನ್ನು ನಾನು ಮಂಡಿಸಿದ್ದೇನೆ. 2024-25ನೇ ಸಾಲಿನ ಆಯವ್ಯಯಕ್ಕೆ ಹೋಲಿಸಿದರೆ 2025-26ನೇ ಸಾಲಿನಲ್ಲಿ ನಮ್ಮ ರಾಜ್ಯದ ಬಜೆಟ್ ಗಾತ್ರ ಶೇ.10.3 ರಷ್ಟು ಹೆಚ್ಚಿನ ಬೆಳವಣಿಗೆ ಕಂಡಿದೆ. ಜನಸಂಖ್ಯೆಯ ಗಾತ್ರದಲ್ಲಿ ಕರ್ನಾಟಕವು 8ನೇ ಸ್ಥಾನದಲ್ಲಿದೆ. ತೆರಿಗೆ ಸಂಗ್ರಹಿಸಿಕೊಡುವ ವಿಚಾರದಲ್ಲಿ ಕರ್ನಾಟಕವು 2ನೇ ಸ್ಥಾನದಲ್ಲಿದೆ. ಜಿಎಸ್‌ಡಿಪಿಯಲ್ಲಿ ಕರ್ನಾಟಕವು ಮಹಾರಾಷ್ಟ್ರ ತಮಿಳುನಾಡಿನ ನಂತರ 3ನೇ ಸ್ಥಾನದಲ್ಲಿದೆ. ಆದರೆ, 2025-26ನೇ ಸಾಲಿನ ನಮ್ಮ ಬಜೆಟ್ ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡಿನ ನಂತರ 5ನೇ ದೊಡ್ಡ ಬಜೆಟ್ ಎಂದು ಸಿಎಂ ಹೇಳಿದರು.

ಇದೇ ಸಂದರ್ಭದಲ್ಲಿ, 2025-26ನೇ ಸಾಲಿಗೆ ಸಂಬಂಧಿಸಿದಂತೆ ಕೇಂದ್ರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಗಾತ್ರ 50.65 ಲಕ್ಷ ಕೋಟಿ ರೂ. 2024-25 ರಲ್ಲಿ 48.21 ಲಕ್ಷ ಕೋಟಿ ರೂ.ಗಳಷ್ಟಿತ್ತು. ಕೇಂದ್ರದ ಬಜೆಟ್ ಬೆಳವಣಿಗೆ ಶೇ. 5.06 ರಷ್ಟು ಮಾತ್ರ. ಇದರಲ್ಲಿ ಹಣದುಬ್ಬರವನ್ನು ಕಳೆದರೆ, ಕೇಂದ್ರದ ಬಜೆಟ್ಟಿನ ಗಾತ್ರ ನಕಾರಾತ್ಮಕವಾಗುತ್ತದೆ ಎಂದರು.

‘ದ್ವೇಷ ರಾಜಕಾರಣ’ ಕುಮಾರಸ್ವಾಮಿ ಅವರ ಡಿಎನ್‌ಎಯಲ್ಲೆ ಇದೆ: ಡಿ.ಕೆ. ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...