Homeಕರ್ನಾಟಕರಾಜ್ಯ ಸರ್ಕಾರ ಈ ಬಾರಿ 'ಎಸ್‌ಸಿಪಿ-ಟಿಎಸ್‌ಪಿ'ಗೆ ₹42,018 ಕೋಟಿ ಒದಗಿಸಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರ ಈ ಬಾರಿ ‘ಎಸ್‌ಸಿಪಿ-ಟಿಎಸ್‌ಪಿ’ಗೆ ₹42,018 ಕೋಟಿ ಒದಗಿಸಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಾಗಿ ನಮ್ಮ ಸರ್ಕಾರ ಈ ಬಾರಿ 42,018 ಕೋಟಿ ರೂಪಾಯಿಗಳನ್ನು ಒದಗಿಸಿದೆ. ನಾವು ಪರಿಶಿಷ್ಟ ಸಮುದಾಯಗಳ ಏಳಿಗೆಯನ್ನು ಪ್ರಾಮಾಣಿಕವಾಗಿ ಬಯಸುವವರು. ನಮ್ಮ ಕಾಳಜಿ ಕೇವಲ ಬಾಯಿ ಮಾತಿನದಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, 2020-21ರಿಂದ 2022-23 ರವರೆಗೆ 3 ವರ್ಷಗಳ ಅವಧಿಯಲ್ಲಿ ಹಿಂದಿನ ಬಿಜೆಪಿ ಸರ್ಕಾರ ಎಸ್‌ಸಿಪಿ ಮತ್ತು ಟಿಎಸ್‌ಪಿಗಾಗಿ 80,415 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಆದರೆ, ನಾವು 2023 ರಿಂದ ಈಗ ಮಂಡಿಸಿರುವ ಬಜೆಟ್‌ವರೆಗೆ 1,15,509 ಕೋಟಿ ರೂಪಾಯಿಗಳನ್ನು ಒದಗಿಸಿದ್ದೇವೆ. ಬಿಜೆಪಿಯ 3 ವರ್ಷಗಳಿಗೆ ಹೋಲಿಸಿದರೆ ನಾವು 35,094 ಕೋಟಿ ರೂಪಾಯಿಗಳನ್ನು ಹೆಚ್ಚಿಗೆ ಒದಗಿಸಿದ್ದೇವೆ. ಶೇ.43.64 ರಷ್ಟು ಹೆಚ್ಚಿನ ಅನುದಾನವನ್ನು ಒದಗಿಸಿದಂತಾಗುತ್ತದೆ. ಒಟ್ಟಾರೆ ಸಮಾಜ ಕಲ್ಯಾಣ ಇಲಾಖೆಗೆ ಶೇ.52.5 ರಷ್ಟು ಹೆಚ್ಚು ಅನುದಾನವನ್ನು ಕೊಟ್ಟಿದ್ದೇವೆ ಎಂದು ವಿವರಿಸಿದರು.

ವಿರೋಧ ಪಕ್ಷದ ನಾಯಕರು ಪ್ರಾಜೆಕ್ಟ್ ಟೈಗರ್ ಮತ್ತು ಪ್ರಾಜೆಕ್ಟ್ ಎಲಿಫೆಂಟ್ ಯೋಜನೆಗೂ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣವನ್ನು ವಿನಿಯೋಗಿಸಲಾಗಿದೆ ಎಂದಿದ್ದಾರೆ. ಆದರೆ, ಇದು ಕೇಂದ್ರ ಸರ್ಕಾರದ ಸಮಸ್ಯೆ. ಕೇಂದ್ರ ಸರ್ಕಾರ ರೂಪಿಸಿರುವ ಕೇಂದ್ರ ಪುರಸ್ಕೃತ ಯೋಜನೆಗೆ ಮ್ಯಾಚಿಂಗ್ ಗ್ರಾಂಟ್ ಒದಗಿಸಿದ್ದೇವೆ ಅಷ್ಟೇ ಎಂದರು.

“ನಮ್ಮದು ಮುಸ್ಲಿಂ ಬಜೆಟ್ ಅಲ್ಲ, ಸರ್ವೋದಯದ ಬಜೆಟ್”

ನಾವು ಬಜೆಟ್‌ ಪುಸ್ತಕದಲ್ಲಿ ಹೇಳಿದ್ದೆವು, ನಮ್ಮ ಉದ್ದೇಶ ಸಮಾಜವನ್ನು ಸೋಷಿಯಲ್ ಡಾರ್ವಿನಿಸಂ ಕಡೆಗೆ ತೆಗೆದುಕೊಂಡು ಹೋಗುವುದಲ್ಲ. ಸಂವಿಧಾನದ ಕಡೆಗೆ ಮುನ್ನಡೆಸುವುದು. ಮನುವಾದವು ಸೋಷಿಯಲ್ ಡಾರ್ವಿನಿಸಮ್ಮನ್ನು ಹೇಳುತ್ತದೆ. ಇದು ಮನುಷ್ಯ ಸಮಾಜಕ್ಕೂ ಅನ್ವಯವಾದರೆ ದಮನಿತ ಸಮುದಾಯಗಳು ಮತ್ತು ಮಹಿಳೆಯರು ಬದುಕುವುದು ಹೇಗೆ? ಈ ವರ್ಗಗಳಿಗೆ ನ್ಯಾಯ ಕೊಡುವುದು ಸಂವಿಧಾನ ಮಾತ್ರ ಎಂದು ಸಿಎಂ ಹೇಳಿದರು.

ನಾವು ಸಂವಿಧಾನದ ಆಶಯಗಳ ಹಾದಿಯಲ್ಲಿ ಮುನ್ನಡೆಯುತ್ತಿದ್ದೇವೆ. ಹಾಗಾಗಿ ನಾವು ಸರ್ವೋದಯವಾಗಲಿ ಸರ್ವರಲಿ ಎಂಬುದನ್ನು ಮಾತಿಗೋಸ್ಕರ ಬಳಸುವುದಿಲ್ಲ. ಬದಲಾಗಿ ಅದನ್ನು ನಮ್ಮ ಸಿದ್ಧಾಂತವಾಗಿಸಿಕೊಂಡು ಕೆಲಸ ಮಾಡುತ್ತಿದ್ದೇವೆ. ನಮ್ಮದು ಮುಸ್ಲಿಂ ಬಜೆಟ್ ಅಲ್ಲ, ಸರ್ವೋದಯದ ಬಜೆಟ್ ಎಂದು ಎಂದರು.

ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ

2025-26ನೇ ಸಾಲಿನಲ್ಲಿ 4,09,549 ಕೋಟಿ ರೂ. ಗಾತ್ರದ ಬಜೆಟ್ಟನ್ನು ನಾನು ಮಂಡಿಸಿದ್ದೇನೆ. 2024-25ನೇ ಸಾಲಿನ ಆಯವ್ಯಯಕ್ಕೆ ಹೋಲಿಸಿದರೆ 2025-26ನೇ ಸಾಲಿನಲ್ಲಿ ನಮ್ಮ ರಾಜ್ಯದ ಬಜೆಟ್ ಗಾತ್ರ ಶೇ.10.3 ರಷ್ಟು ಹೆಚ್ಚಿನ ಬೆಳವಣಿಗೆ ಕಂಡಿದೆ. ಜನಸಂಖ್ಯೆಯ ಗಾತ್ರದಲ್ಲಿ ಕರ್ನಾಟಕವು 8ನೇ ಸ್ಥಾನದಲ್ಲಿದೆ. ತೆರಿಗೆ ಸಂಗ್ರಹಿಸಿಕೊಡುವ ವಿಚಾರದಲ್ಲಿ ಕರ್ನಾಟಕವು 2ನೇ ಸ್ಥಾನದಲ್ಲಿದೆ. ಜಿಎಸ್‌ಡಿಪಿಯಲ್ಲಿ ಕರ್ನಾಟಕವು ಮಹಾರಾಷ್ಟ್ರ ತಮಿಳುನಾಡಿನ ನಂತರ 3ನೇ ಸ್ಥಾನದಲ್ಲಿದೆ. ಆದರೆ, 2025-26ನೇ ಸಾಲಿನ ನಮ್ಮ ಬಜೆಟ್ ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡಿನ ನಂತರ 5ನೇ ದೊಡ್ಡ ಬಜೆಟ್ ಎಂದು ಸಿಎಂ ಹೇಳಿದರು.

ಇದೇ ಸಂದರ್ಭದಲ್ಲಿ, 2025-26ನೇ ಸಾಲಿಗೆ ಸಂಬಂಧಿಸಿದಂತೆ ಕೇಂದ್ರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಗಾತ್ರ 50.65 ಲಕ್ಷ ಕೋಟಿ ರೂ. 2024-25 ರಲ್ಲಿ 48.21 ಲಕ್ಷ ಕೋಟಿ ರೂ.ಗಳಷ್ಟಿತ್ತು. ಕೇಂದ್ರದ ಬಜೆಟ್ ಬೆಳವಣಿಗೆ ಶೇ. 5.06 ರಷ್ಟು ಮಾತ್ರ. ಇದರಲ್ಲಿ ಹಣದುಬ್ಬರವನ್ನು ಕಳೆದರೆ, ಕೇಂದ್ರದ ಬಜೆಟ್ಟಿನ ಗಾತ್ರ ನಕಾರಾತ್ಮಕವಾಗುತ್ತದೆ ಎಂದರು.

‘ದ್ವೇಷ ರಾಜಕಾರಣ’ ಕುಮಾರಸ್ವಾಮಿ ಅವರ ಡಿಎನ್‌ಎಯಲ್ಲೆ ಇದೆ: ಡಿ.ಕೆ. ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...