Homeಕರ್ನಾಟಕರಾಜ್ಯ ಸರ್ಕಾರ ಈ ಬಾರಿ 'ಎಸ್‌ಸಿಪಿ-ಟಿಎಸ್‌ಪಿ'ಗೆ ₹42,018 ಕೋಟಿ ಒದಗಿಸಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರ ಈ ಬಾರಿ ‘ಎಸ್‌ಸಿಪಿ-ಟಿಎಸ್‌ಪಿ’ಗೆ ₹42,018 ಕೋಟಿ ಒದಗಿಸಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಾಗಿ ನಮ್ಮ ಸರ್ಕಾರ ಈ ಬಾರಿ 42,018 ಕೋಟಿ ರೂಪಾಯಿಗಳನ್ನು ಒದಗಿಸಿದೆ. ನಾವು ಪರಿಶಿಷ್ಟ ಸಮುದಾಯಗಳ ಏಳಿಗೆಯನ್ನು ಪ್ರಾಮಾಣಿಕವಾಗಿ ಬಯಸುವವರು. ನಮ್ಮ ಕಾಳಜಿ ಕೇವಲ ಬಾಯಿ ಮಾತಿನದಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, 2020-21ರಿಂದ 2022-23 ರವರೆಗೆ 3 ವರ್ಷಗಳ ಅವಧಿಯಲ್ಲಿ ಹಿಂದಿನ ಬಿಜೆಪಿ ಸರ್ಕಾರ ಎಸ್‌ಸಿಪಿ ಮತ್ತು ಟಿಎಸ್‌ಪಿಗಾಗಿ 80,415 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಆದರೆ, ನಾವು 2023 ರಿಂದ ಈಗ ಮಂಡಿಸಿರುವ ಬಜೆಟ್‌ವರೆಗೆ 1,15,509 ಕೋಟಿ ರೂಪಾಯಿಗಳನ್ನು ಒದಗಿಸಿದ್ದೇವೆ. ಬಿಜೆಪಿಯ 3 ವರ್ಷಗಳಿಗೆ ಹೋಲಿಸಿದರೆ ನಾವು 35,094 ಕೋಟಿ ರೂಪಾಯಿಗಳನ್ನು ಹೆಚ್ಚಿಗೆ ಒದಗಿಸಿದ್ದೇವೆ. ಶೇ.43.64 ರಷ್ಟು ಹೆಚ್ಚಿನ ಅನುದಾನವನ್ನು ಒದಗಿಸಿದಂತಾಗುತ್ತದೆ. ಒಟ್ಟಾರೆ ಸಮಾಜ ಕಲ್ಯಾಣ ಇಲಾಖೆಗೆ ಶೇ.52.5 ರಷ್ಟು ಹೆಚ್ಚು ಅನುದಾನವನ್ನು ಕೊಟ್ಟಿದ್ದೇವೆ ಎಂದು ವಿವರಿಸಿದರು.

ವಿರೋಧ ಪಕ್ಷದ ನಾಯಕರು ಪ್ರಾಜೆಕ್ಟ್ ಟೈಗರ್ ಮತ್ತು ಪ್ರಾಜೆಕ್ಟ್ ಎಲಿಫೆಂಟ್ ಯೋಜನೆಗೂ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣವನ್ನು ವಿನಿಯೋಗಿಸಲಾಗಿದೆ ಎಂದಿದ್ದಾರೆ. ಆದರೆ, ಇದು ಕೇಂದ್ರ ಸರ್ಕಾರದ ಸಮಸ್ಯೆ. ಕೇಂದ್ರ ಸರ್ಕಾರ ರೂಪಿಸಿರುವ ಕೇಂದ್ರ ಪುರಸ್ಕೃತ ಯೋಜನೆಗೆ ಮ್ಯಾಚಿಂಗ್ ಗ್ರಾಂಟ್ ಒದಗಿಸಿದ್ದೇವೆ ಅಷ್ಟೇ ಎಂದರು.

“ನಮ್ಮದು ಮುಸ್ಲಿಂ ಬಜೆಟ್ ಅಲ್ಲ, ಸರ್ವೋದಯದ ಬಜೆಟ್”

ನಾವು ಬಜೆಟ್‌ ಪುಸ್ತಕದಲ್ಲಿ ಹೇಳಿದ್ದೆವು, ನಮ್ಮ ಉದ್ದೇಶ ಸಮಾಜವನ್ನು ಸೋಷಿಯಲ್ ಡಾರ್ವಿನಿಸಂ ಕಡೆಗೆ ತೆಗೆದುಕೊಂಡು ಹೋಗುವುದಲ್ಲ. ಸಂವಿಧಾನದ ಕಡೆಗೆ ಮುನ್ನಡೆಸುವುದು. ಮನುವಾದವು ಸೋಷಿಯಲ್ ಡಾರ್ವಿನಿಸಮ್ಮನ್ನು ಹೇಳುತ್ತದೆ. ಇದು ಮನುಷ್ಯ ಸಮಾಜಕ್ಕೂ ಅನ್ವಯವಾದರೆ ದಮನಿತ ಸಮುದಾಯಗಳು ಮತ್ತು ಮಹಿಳೆಯರು ಬದುಕುವುದು ಹೇಗೆ? ಈ ವರ್ಗಗಳಿಗೆ ನ್ಯಾಯ ಕೊಡುವುದು ಸಂವಿಧಾನ ಮಾತ್ರ ಎಂದು ಸಿಎಂ ಹೇಳಿದರು.

ನಾವು ಸಂವಿಧಾನದ ಆಶಯಗಳ ಹಾದಿಯಲ್ಲಿ ಮುನ್ನಡೆಯುತ್ತಿದ್ದೇವೆ. ಹಾಗಾಗಿ ನಾವು ಸರ್ವೋದಯವಾಗಲಿ ಸರ್ವರಲಿ ಎಂಬುದನ್ನು ಮಾತಿಗೋಸ್ಕರ ಬಳಸುವುದಿಲ್ಲ. ಬದಲಾಗಿ ಅದನ್ನು ನಮ್ಮ ಸಿದ್ಧಾಂತವಾಗಿಸಿಕೊಂಡು ಕೆಲಸ ಮಾಡುತ್ತಿದ್ದೇವೆ. ನಮ್ಮದು ಮುಸ್ಲಿಂ ಬಜೆಟ್ ಅಲ್ಲ, ಸರ್ವೋದಯದ ಬಜೆಟ್ ಎಂದು ಎಂದರು.

ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ

2025-26ನೇ ಸಾಲಿನಲ್ಲಿ 4,09,549 ಕೋಟಿ ರೂ. ಗಾತ್ರದ ಬಜೆಟ್ಟನ್ನು ನಾನು ಮಂಡಿಸಿದ್ದೇನೆ. 2024-25ನೇ ಸಾಲಿನ ಆಯವ್ಯಯಕ್ಕೆ ಹೋಲಿಸಿದರೆ 2025-26ನೇ ಸಾಲಿನಲ್ಲಿ ನಮ್ಮ ರಾಜ್ಯದ ಬಜೆಟ್ ಗಾತ್ರ ಶೇ.10.3 ರಷ್ಟು ಹೆಚ್ಚಿನ ಬೆಳವಣಿಗೆ ಕಂಡಿದೆ. ಜನಸಂಖ್ಯೆಯ ಗಾತ್ರದಲ್ಲಿ ಕರ್ನಾಟಕವು 8ನೇ ಸ್ಥಾನದಲ್ಲಿದೆ. ತೆರಿಗೆ ಸಂಗ್ರಹಿಸಿಕೊಡುವ ವಿಚಾರದಲ್ಲಿ ಕರ್ನಾಟಕವು 2ನೇ ಸ್ಥಾನದಲ್ಲಿದೆ. ಜಿಎಸ್‌ಡಿಪಿಯಲ್ಲಿ ಕರ್ನಾಟಕವು ಮಹಾರಾಷ್ಟ್ರ ತಮಿಳುನಾಡಿನ ನಂತರ 3ನೇ ಸ್ಥಾನದಲ್ಲಿದೆ. ಆದರೆ, 2025-26ನೇ ಸಾಲಿನ ನಮ್ಮ ಬಜೆಟ್ ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡಿನ ನಂತರ 5ನೇ ದೊಡ್ಡ ಬಜೆಟ್ ಎಂದು ಸಿಎಂ ಹೇಳಿದರು.

ಇದೇ ಸಂದರ್ಭದಲ್ಲಿ, 2025-26ನೇ ಸಾಲಿಗೆ ಸಂಬಂಧಿಸಿದಂತೆ ಕೇಂದ್ರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಗಾತ್ರ 50.65 ಲಕ್ಷ ಕೋಟಿ ರೂ. 2024-25 ರಲ್ಲಿ 48.21 ಲಕ್ಷ ಕೋಟಿ ರೂ.ಗಳಷ್ಟಿತ್ತು. ಕೇಂದ್ರದ ಬಜೆಟ್ ಬೆಳವಣಿಗೆ ಶೇ. 5.06 ರಷ್ಟು ಮಾತ್ರ. ಇದರಲ್ಲಿ ಹಣದುಬ್ಬರವನ್ನು ಕಳೆದರೆ, ಕೇಂದ್ರದ ಬಜೆಟ್ಟಿನ ಗಾತ್ರ ನಕಾರಾತ್ಮಕವಾಗುತ್ತದೆ ಎಂದರು.

‘ದ್ವೇಷ ರಾಜಕಾರಣ’ ಕುಮಾರಸ್ವಾಮಿ ಅವರ ಡಿಎನ್‌ಎಯಲ್ಲೆ ಇದೆ: ಡಿ.ಕೆ. ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...