Homeಕರ್ನಾಟಕರೈತರ ಮರಣ ಶಾಸನ ಬರೆಯಲು ಕಳ್ಳದಾರಿ ಹಿಡಿದ ರಾಜ್ಯ ಸರ್ಕಾರ: ಸಿದ್ದರಾಮಯ್ಯ

ರೈತರ ಮರಣ ಶಾಸನ ಬರೆಯಲು ಕಳ್ಳದಾರಿ ಹಿಡಿದ ರಾಜ್ಯ ಸರ್ಕಾರ: ಸಿದ್ದರಾಮಯ್ಯ

ಈ ತಿದ್ದುಪಡಿ ಮೂಲಕ ಬಿಎಸ್ವೈ ಸರ್ಕಾರ ಇಡೀ ರೈತ ಸಮುದಾಯವನ್ನು ನಾಶ ಮಾಡಲು ಹೊರಟಿದೆ. ಭವಿಷ್ಯದಲ್ಲಿ ಎಲ್ಲಾ ರೈತರು ಕಾರ್ಪೋರೆಟ್ ಸಂಸ್ಥೆಗಳ ಬಾಗಿಲು ಕಾಯಬೇಕಾದ ಸ್ಥಿತಿ ಬರುತ್ತೆ. ಬಂಡಾವಳಶಾಹಿಗಳು ಭೂಮಿ ತಗೊಂಡು ರಿಯಲ್ ಎಸ್ಟೇಟ್ ಮಾಡ್ತಾರೆ. ಆನಂತರ ಆಹಾರ ಉತ್ಪಾದನೆ ಎಲ್ಲಿ ಆಗುತ್ತೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

- Advertisement -
- Advertisement -

ಭೂ ಸುಧಾರಣಾ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ತಿದ್ದುಪಡಿ ತಂದಿರುವುದು ಕರ್ನಾಟಕದ ಇತಿಹಾಸದಲ್ಲಿ ಕರಾಳದಿನವಾಗಿ ಉಳಿಯಲಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂ ಸುಧಾಕರಣಾ ಕಾಯ್ದೆಗೆ ರಾಜ್ಯ ಸರ್ಕಾರ ಕಳೆದ ಹಲವು ದಿನಗಳಿಂದ ತಿದ್ದುಪಡಿ ತರಲು ಪ್ರಯತ್ನಿಸುತ್ತಿದೆ. ಆದರೆ ವಿರೋಧ ಪಕ್ಷಗಳು, ರೈತರು ಈ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸುತ್ತಲೇ ಇದ್ದಾರೆ. ಆದರೆ, ತೀವ್ರ ವಿರೋಧದ ನಡುವೆಯೂ ಕೊರೋನಾ ಲಾಕ್‌ಡೌನ್ ಸಂದರ್ಭವನ್ನು ಬಳಸಿಕೊಂಡು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ “ಕರ್ನಾಟಕ ಭೂ ಸುಧಾರಣಾ ಕಾಯ್ದೆ”ಗೆ ತಿದ್ದುಪಡಿ ತಂದಿರುವುದು ಸರಿಯಲ್ಲ ಎಂದು ಟೀಕಿಸಿದ್ದಾರೆ.

“ರೈತರ ಮರಣ ಶಾಸನ ಬರೆಯಲು ರಾಜ್ಯ ಸರ್ಕಾರ ಲಾಕ್‌ಡೌನ್ ಸಮಯ ಉಪಯೋಗಯೋಗಿಸಿಕೊಂಡಿದೆ. ಕೊರೋನಾದಂತಹ ಸಂಕಷ್ಟದ ಸಂದರ್ಭದಲ್ಲಿ ಸುಗ್ರೀವಾಜ್ಞೆ ತರುವ ಅಗತ್ಯತೆ ಏನಿತ್ತು? ಕೊರೋನಾ ಸೋಂಕು ಪೀಡಿತ ದೇಶಗಳ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನ, ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ. ಕೊರೊನಾ ವಿರುದ್ಧ ಹೋರಾಡುವುದನ್ನು ಬಿಟ್ಟು ರಾಜ್ಯ ಸರ್ಕಾರ ಕಳ್ಳದಾರಿಯಲ್ಲಿ ಹೊರಟಿದೆ” ಎಂದು ಸಿದ್ದು ಆರೋಪಿಸಿದ್ದಾರೆ.

“ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಯಲ್ಲಿ ಸೆಕ್ಷನ್ 63ಕ್ಕೆ ತಿದ್ದುಪಡಿ ತಂದು ಒಂದು ಕುಟುಂಬಕ್ಕೆ ಇದ್ದ ಮಾರುವ ಮಿತಿಯನ್ನು 118 ಎಕರೆ ಮಿತಿಯನ್ನು 436 ಎಕರೆಗೆ ಏರಿಸಿದ್ದಾರೆ. 436 ಎಕರೆ ಜಮೀನು ಯಾರು ತೆಗೆದುಕೊಳ್ತಾರೆ? ರೈತರು ಅಷ್ಟು ಜಮೀನು ತೆಗೆದುಕೊಳ್ತಾರಾ..? ಬಂಡವಾಳಶಾಹಿಗಳಿಗೆ ಅನುಕೂಲವಾಗಲೇಂದೆ ಈ ತಿದ್ದುಪಡಿ ತರಲಾಗಿದೆ ಎಂದು ಟೀಕಿಸಿದ್ದಾರೆ.

ಈ ತಿದ್ದುಪಡಿ ಮೂಲಕ ಬಿಎಸ್ವೈ ಸರ್ಕಾರ ಇಡೀ ರೈತ ಸಮುದಾಯವನ್ನು ನಾಶ ಮಾಡಲು ಹೊರಟಿದೆ. ಭವಿಷ್ಯದಲ್ಲಿ ಎಲ್ಲಾ ರೈತರು ಕಾರ್ಪೋರೆಟ್ ಸಂಸ್ಥೆಗಳ ಬಾಗಿಲು ಕಾಯಬೇಕಾದ ಸ್ಥಿತಿ ಬರುತ್ತೆ. ಬಂಡಾವಳಶಾಹಿಗಳು ಭೂಮಿ ತಗೊಂಡು ರಿಯಲ್ ಎಸ್ಟೇಟ್ ಮಾಡ್ತಾರೆ. ಆನಂತರ ಆಹಾರ ಉತ್ಪಾದನೆ ಎಲ್ಲಿ ಆಗುತ್ತೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ದೇವರಾಜ ಅರಸು 1974 ರಲ್ಲಿ ಇಡೀ ದೇಶಕ್ಕೆ ಮಾದರಿ ಆಗುವಂತಹ ಕಾಯ್ದೆಯನ್ನು ಜಾರಿಗೊಳಿಸಿದ್ದರು. ದೂರದೃಷ್ಟಿಯ ಅವರ ನಾಯಕತ್ವಕ್ಕೆ ಇಡೀ ದೇಶವೇ ಮೆಚ್ಚುಗೆ ಸೂಚಿಸಿತ್ತು. ಆದರೆ, ಬಿಎಸ್‌ವೈ ಸರ್ಕಾರ ರೈತರ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ. ಭವಿಷ್ಯದಲ್ಲಿ ಕೃಷಿ ಭೂಮಿಗಳು ಕಾರ್ಪೋರೇಟ್ ಸಂಸ್ಥೆಗಳ ಪಾಲಾಗುವಂತೆ ಮಾಡಿದ್ದಾರೆ. ಅವರ ಈ ಕೆಲಸವನ್ನು ರೈತರು ಎಂದೂ ಕ್ಷಮಿಸಲಾರರು” ಎಂದು ಸಿದ್ದು ಹೇಳಿದ್ದಾರೆ.

“ಗಣಿ ಅಕ್ರಮದ ಕುರಿತು ಕಾಂಗ್ರೆಸ್‌ ಹೋರಾಟ ರೂಪಿಸಿದ ರೀತಿಯಲ್ಲೇ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧವೂ ಹೋರಾಟ ನಡೆಸಲು ಚಿಂತನೆ ನಡೆಸಲಾಗಿದೆ. ರಾಜ್ಯದ ಪ್ರತಿ ಹಳ್ಳಿ ಹಳ್ಳಿಯಿಂದಲೂ ರೈತರನ್ನು ಒಗ್ಗೂಡಿಸಿ ಹೋರಾಟವನ್ನು ರೂಪಿಸಲಾಗುವುದು” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.


ಇದನ್ನೂ ಓದಿ: ಹೊಂಬಾಳೆ-1: ದೇಶದ ಅನ್ನದ ಬಟ್ಟಲನ್ನೇ ಮಾರಲು ಹೊರಟರೆ ಕೊನೆಗೆ ಏನು ಉಳಿದೀತು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...