Homeಕರ್ನಾಟಕರೈತರ ಮರಣ ಶಾಸನ ಬರೆಯಲು ಕಳ್ಳದಾರಿ ಹಿಡಿದ ರಾಜ್ಯ ಸರ್ಕಾರ: ಸಿದ್ದರಾಮಯ್ಯ

ರೈತರ ಮರಣ ಶಾಸನ ಬರೆಯಲು ಕಳ್ಳದಾರಿ ಹಿಡಿದ ರಾಜ್ಯ ಸರ್ಕಾರ: ಸಿದ್ದರಾಮಯ್ಯ

ಈ ತಿದ್ದುಪಡಿ ಮೂಲಕ ಬಿಎಸ್ವೈ ಸರ್ಕಾರ ಇಡೀ ರೈತ ಸಮುದಾಯವನ್ನು ನಾಶ ಮಾಡಲು ಹೊರಟಿದೆ. ಭವಿಷ್ಯದಲ್ಲಿ ಎಲ್ಲಾ ರೈತರು ಕಾರ್ಪೋರೆಟ್ ಸಂಸ್ಥೆಗಳ ಬಾಗಿಲು ಕಾಯಬೇಕಾದ ಸ್ಥಿತಿ ಬರುತ್ತೆ. ಬಂಡಾವಳಶಾಹಿಗಳು ಭೂಮಿ ತಗೊಂಡು ರಿಯಲ್ ಎಸ್ಟೇಟ್ ಮಾಡ್ತಾರೆ. ಆನಂತರ ಆಹಾರ ಉತ್ಪಾದನೆ ಎಲ್ಲಿ ಆಗುತ್ತೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

- Advertisement -
- Advertisement -

ಭೂ ಸುಧಾರಣಾ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ತಿದ್ದುಪಡಿ ತಂದಿರುವುದು ಕರ್ನಾಟಕದ ಇತಿಹಾಸದಲ್ಲಿ ಕರಾಳದಿನವಾಗಿ ಉಳಿಯಲಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂ ಸುಧಾಕರಣಾ ಕಾಯ್ದೆಗೆ ರಾಜ್ಯ ಸರ್ಕಾರ ಕಳೆದ ಹಲವು ದಿನಗಳಿಂದ ತಿದ್ದುಪಡಿ ತರಲು ಪ್ರಯತ್ನಿಸುತ್ತಿದೆ. ಆದರೆ ವಿರೋಧ ಪಕ್ಷಗಳು, ರೈತರು ಈ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸುತ್ತಲೇ ಇದ್ದಾರೆ. ಆದರೆ, ತೀವ್ರ ವಿರೋಧದ ನಡುವೆಯೂ ಕೊರೋನಾ ಲಾಕ್‌ಡೌನ್ ಸಂದರ್ಭವನ್ನು ಬಳಸಿಕೊಂಡು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ “ಕರ್ನಾಟಕ ಭೂ ಸುಧಾರಣಾ ಕಾಯ್ದೆ”ಗೆ ತಿದ್ದುಪಡಿ ತಂದಿರುವುದು ಸರಿಯಲ್ಲ ಎಂದು ಟೀಕಿಸಿದ್ದಾರೆ.

“ರೈತರ ಮರಣ ಶಾಸನ ಬರೆಯಲು ರಾಜ್ಯ ಸರ್ಕಾರ ಲಾಕ್‌ಡೌನ್ ಸಮಯ ಉಪಯೋಗಯೋಗಿಸಿಕೊಂಡಿದೆ. ಕೊರೋನಾದಂತಹ ಸಂಕಷ್ಟದ ಸಂದರ್ಭದಲ್ಲಿ ಸುಗ್ರೀವಾಜ್ಞೆ ತರುವ ಅಗತ್ಯತೆ ಏನಿತ್ತು? ಕೊರೋನಾ ಸೋಂಕು ಪೀಡಿತ ದೇಶಗಳ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನ, ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ. ಕೊರೊನಾ ವಿರುದ್ಧ ಹೋರಾಡುವುದನ್ನು ಬಿಟ್ಟು ರಾಜ್ಯ ಸರ್ಕಾರ ಕಳ್ಳದಾರಿಯಲ್ಲಿ ಹೊರಟಿದೆ” ಎಂದು ಸಿದ್ದು ಆರೋಪಿಸಿದ್ದಾರೆ.

“ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಯಲ್ಲಿ ಸೆಕ್ಷನ್ 63ಕ್ಕೆ ತಿದ್ದುಪಡಿ ತಂದು ಒಂದು ಕುಟುಂಬಕ್ಕೆ ಇದ್ದ ಮಾರುವ ಮಿತಿಯನ್ನು 118 ಎಕರೆ ಮಿತಿಯನ್ನು 436 ಎಕರೆಗೆ ಏರಿಸಿದ್ದಾರೆ. 436 ಎಕರೆ ಜಮೀನು ಯಾರು ತೆಗೆದುಕೊಳ್ತಾರೆ? ರೈತರು ಅಷ್ಟು ಜಮೀನು ತೆಗೆದುಕೊಳ್ತಾರಾ..? ಬಂಡವಾಳಶಾಹಿಗಳಿಗೆ ಅನುಕೂಲವಾಗಲೇಂದೆ ಈ ತಿದ್ದುಪಡಿ ತರಲಾಗಿದೆ ಎಂದು ಟೀಕಿಸಿದ್ದಾರೆ.

ಈ ತಿದ್ದುಪಡಿ ಮೂಲಕ ಬಿಎಸ್ವೈ ಸರ್ಕಾರ ಇಡೀ ರೈತ ಸಮುದಾಯವನ್ನು ನಾಶ ಮಾಡಲು ಹೊರಟಿದೆ. ಭವಿಷ್ಯದಲ್ಲಿ ಎಲ್ಲಾ ರೈತರು ಕಾರ್ಪೋರೆಟ್ ಸಂಸ್ಥೆಗಳ ಬಾಗಿಲು ಕಾಯಬೇಕಾದ ಸ್ಥಿತಿ ಬರುತ್ತೆ. ಬಂಡಾವಳಶಾಹಿಗಳು ಭೂಮಿ ತಗೊಂಡು ರಿಯಲ್ ಎಸ್ಟೇಟ್ ಮಾಡ್ತಾರೆ. ಆನಂತರ ಆಹಾರ ಉತ್ಪಾದನೆ ಎಲ್ಲಿ ಆಗುತ್ತೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ದೇವರಾಜ ಅರಸು 1974 ರಲ್ಲಿ ಇಡೀ ದೇಶಕ್ಕೆ ಮಾದರಿ ಆಗುವಂತಹ ಕಾಯ್ದೆಯನ್ನು ಜಾರಿಗೊಳಿಸಿದ್ದರು. ದೂರದೃಷ್ಟಿಯ ಅವರ ನಾಯಕತ್ವಕ್ಕೆ ಇಡೀ ದೇಶವೇ ಮೆಚ್ಚುಗೆ ಸೂಚಿಸಿತ್ತು. ಆದರೆ, ಬಿಎಸ್‌ವೈ ಸರ್ಕಾರ ರೈತರ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ. ಭವಿಷ್ಯದಲ್ಲಿ ಕೃಷಿ ಭೂಮಿಗಳು ಕಾರ್ಪೋರೇಟ್ ಸಂಸ್ಥೆಗಳ ಪಾಲಾಗುವಂತೆ ಮಾಡಿದ್ದಾರೆ. ಅವರ ಈ ಕೆಲಸವನ್ನು ರೈತರು ಎಂದೂ ಕ್ಷಮಿಸಲಾರರು” ಎಂದು ಸಿದ್ದು ಹೇಳಿದ್ದಾರೆ.

“ಗಣಿ ಅಕ್ರಮದ ಕುರಿತು ಕಾಂಗ್ರೆಸ್‌ ಹೋರಾಟ ರೂಪಿಸಿದ ರೀತಿಯಲ್ಲೇ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧವೂ ಹೋರಾಟ ನಡೆಸಲು ಚಿಂತನೆ ನಡೆಸಲಾಗಿದೆ. ರಾಜ್ಯದ ಪ್ರತಿ ಹಳ್ಳಿ ಹಳ್ಳಿಯಿಂದಲೂ ರೈತರನ್ನು ಒಗ್ಗೂಡಿಸಿ ಹೋರಾಟವನ್ನು ರೂಪಿಸಲಾಗುವುದು” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.


ಇದನ್ನೂ ಓದಿ: ಹೊಂಬಾಳೆ-1: ದೇಶದ ಅನ್ನದ ಬಟ್ಟಲನ್ನೇ ಮಾರಲು ಹೊರಟರೆ ಕೊನೆಗೆ ಏನು ಉಳಿದೀತು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...