Homeಕರ್ನಾಟಕರೈತರ ಮರಣ ಶಾಸನ ಬರೆಯಲು ಕಳ್ಳದಾರಿ ಹಿಡಿದ ರಾಜ್ಯ ಸರ್ಕಾರ: ಸಿದ್ದರಾಮಯ್ಯ

ರೈತರ ಮರಣ ಶಾಸನ ಬರೆಯಲು ಕಳ್ಳದಾರಿ ಹಿಡಿದ ರಾಜ್ಯ ಸರ್ಕಾರ: ಸಿದ್ದರಾಮಯ್ಯ

ಈ ತಿದ್ದುಪಡಿ ಮೂಲಕ ಬಿಎಸ್ವೈ ಸರ್ಕಾರ ಇಡೀ ರೈತ ಸಮುದಾಯವನ್ನು ನಾಶ ಮಾಡಲು ಹೊರಟಿದೆ. ಭವಿಷ್ಯದಲ್ಲಿ ಎಲ್ಲಾ ರೈತರು ಕಾರ್ಪೋರೆಟ್ ಸಂಸ್ಥೆಗಳ ಬಾಗಿಲು ಕಾಯಬೇಕಾದ ಸ್ಥಿತಿ ಬರುತ್ತೆ. ಬಂಡಾವಳಶಾಹಿಗಳು ಭೂಮಿ ತಗೊಂಡು ರಿಯಲ್ ಎಸ್ಟೇಟ್ ಮಾಡ್ತಾರೆ. ಆನಂತರ ಆಹಾರ ಉತ್ಪಾದನೆ ಎಲ್ಲಿ ಆಗುತ್ತೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

- Advertisement -
- Advertisement -

ಭೂ ಸುಧಾರಣಾ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ತಿದ್ದುಪಡಿ ತಂದಿರುವುದು ಕರ್ನಾಟಕದ ಇತಿಹಾಸದಲ್ಲಿ ಕರಾಳದಿನವಾಗಿ ಉಳಿಯಲಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂ ಸುಧಾಕರಣಾ ಕಾಯ್ದೆಗೆ ರಾಜ್ಯ ಸರ್ಕಾರ ಕಳೆದ ಹಲವು ದಿನಗಳಿಂದ ತಿದ್ದುಪಡಿ ತರಲು ಪ್ರಯತ್ನಿಸುತ್ತಿದೆ. ಆದರೆ ವಿರೋಧ ಪಕ್ಷಗಳು, ರೈತರು ಈ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸುತ್ತಲೇ ಇದ್ದಾರೆ. ಆದರೆ, ತೀವ್ರ ವಿರೋಧದ ನಡುವೆಯೂ ಕೊರೋನಾ ಲಾಕ್‌ಡೌನ್ ಸಂದರ್ಭವನ್ನು ಬಳಸಿಕೊಂಡು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ “ಕರ್ನಾಟಕ ಭೂ ಸುಧಾರಣಾ ಕಾಯ್ದೆ”ಗೆ ತಿದ್ದುಪಡಿ ತಂದಿರುವುದು ಸರಿಯಲ್ಲ ಎಂದು ಟೀಕಿಸಿದ್ದಾರೆ.

“ರೈತರ ಮರಣ ಶಾಸನ ಬರೆಯಲು ರಾಜ್ಯ ಸರ್ಕಾರ ಲಾಕ್‌ಡೌನ್ ಸಮಯ ಉಪಯೋಗಯೋಗಿಸಿಕೊಂಡಿದೆ. ಕೊರೋನಾದಂತಹ ಸಂಕಷ್ಟದ ಸಂದರ್ಭದಲ್ಲಿ ಸುಗ್ರೀವಾಜ್ಞೆ ತರುವ ಅಗತ್ಯತೆ ಏನಿತ್ತು? ಕೊರೋನಾ ಸೋಂಕು ಪೀಡಿತ ದೇಶಗಳ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನ, ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ. ಕೊರೊನಾ ವಿರುದ್ಧ ಹೋರಾಡುವುದನ್ನು ಬಿಟ್ಟು ರಾಜ್ಯ ಸರ್ಕಾರ ಕಳ್ಳದಾರಿಯಲ್ಲಿ ಹೊರಟಿದೆ” ಎಂದು ಸಿದ್ದು ಆರೋಪಿಸಿದ್ದಾರೆ.

“ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಯಲ್ಲಿ ಸೆಕ್ಷನ್ 63ಕ್ಕೆ ತಿದ್ದುಪಡಿ ತಂದು ಒಂದು ಕುಟುಂಬಕ್ಕೆ ಇದ್ದ ಮಾರುವ ಮಿತಿಯನ್ನು 118 ಎಕರೆ ಮಿತಿಯನ್ನು 436 ಎಕರೆಗೆ ಏರಿಸಿದ್ದಾರೆ. 436 ಎಕರೆ ಜಮೀನು ಯಾರು ತೆಗೆದುಕೊಳ್ತಾರೆ? ರೈತರು ಅಷ್ಟು ಜಮೀನು ತೆಗೆದುಕೊಳ್ತಾರಾ..? ಬಂಡವಾಳಶಾಹಿಗಳಿಗೆ ಅನುಕೂಲವಾಗಲೇಂದೆ ಈ ತಿದ್ದುಪಡಿ ತರಲಾಗಿದೆ ಎಂದು ಟೀಕಿಸಿದ್ದಾರೆ.

ಈ ತಿದ್ದುಪಡಿ ಮೂಲಕ ಬಿಎಸ್ವೈ ಸರ್ಕಾರ ಇಡೀ ರೈತ ಸಮುದಾಯವನ್ನು ನಾಶ ಮಾಡಲು ಹೊರಟಿದೆ. ಭವಿಷ್ಯದಲ್ಲಿ ಎಲ್ಲಾ ರೈತರು ಕಾರ್ಪೋರೆಟ್ ಸಂಸ್ಥೆಗಳ ಬಾಗಿಲು ಕಾಯಬೇಕಾದ ಸ್ಥಿತಿ ಬರುತ್ತೆ. ಬಂಡಾವಳಶಾಹಿಗಳು ಭೂಮಿ ತಗೊಂಡು ರಿಯಲ್ ಎಸ್ಟೇಟ್ ಮಾಡ್ತಾರೆ. ಆನಂತರ ಆಹಾರ ಉತ್ಪಾದನೆ ಎಲ್ಲಿ ಆಗುತ್ತೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ದೇವರಾಜ ಅರಸು 1974 ರಲ್ಲಿ ಇಡೀ ದೇಶಕ್ಕೆ ಮಾದರಿ ಆಗುವಂತಹ ಕಾಯ್ದೆಯನ್ನು ಜಾರಿಗೊಳಿಸಿದ್ದರು. ದೂರದೃಷ್ಟಿಯ ಅವರ ನಾಯಕತ್ವಕ್ಕೆ ಇಡೀ ದೇಶವೇ ಮೆಚ್ಚುಗೆ ಸೂಚಿಸಿತ್ತು. ಆದರೆ, ಬಿಎಸ್‌ವೈ ಸರ್ಕಾರ ರೈತರ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ. ಭವಿಷ್ಯದಲ್ಲಿ ಕೃಷಿ ಭೂಮಿಗಳು ಕಾರ್ಪೋರೇಟ್ ಸಂಸ್ಥೆಗಳ ಪಾಲಾಗುವಂತೆ ಮಾಡಿದ್ದಾರೆ. ಅವರ ಈ ಕೆಲಸವನ್ನು ರೈತರು ಎಂದೂ ಕ್ಷಮಿಸಲಾರರು” ಎಂದು ಸಿದ್ದು ಹೇಳಿದ್ದಾರೆ.

“ಗಣಿ ಅಕ್ರಮದ ಕುರಿತು ಕಾಂಗ್ರೆಸ್‌ ಹೋರಾಟ ರೂಪಿಸಿದ ರೀತಿಯಲ್ಲೇ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧವೂ ಹೋರಾಟ ನಡೆಸಲು ಚಿಂತನೆ ನಡೆಸಲಾಗಿದೆ. ರಾಜ್ಯದ ಪ್ರತಿ ಹಳ್ಳಿ ಹಳ್ಳಿಯಿಂದಲೂ ರೈತರನ್ನು ಒಗ್ಗೂಡಿಸಿ ಹೋರಾಟವನ್ನು ರೂಪಿಸಲಾಗುವುದು” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.


ಇದನ್ನೂ ಓದಿ: ಹೊಂಬಾಳೆ-1: ದೇಶದ ಅನ್ನದ ಬಟ್ಟಲನ್ನೇ ಮಾರಲು ಹೊರಟರೆ ಕೊನೆಗೆ ಏನು ಉಳಿದೀತು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...