Homeಕರ್ನಾಟಕಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87ರಷ್ಟು ಹಣ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ

ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87ರಷ್ಟು ಹಣ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇಕಡ 87.37ರಷ್ಟು ಹಣ ನೀಡುತ್ತಿದ್ದು, ಕೇಂದ್ರ ಸರ್ಕಾರದ ಪಾಲು ಕೇವಲ ಶೇ12.63ರಷ್ಟು ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾನುವಾರ ಮೆಟ್ರೋ ಯೋಜನೆಯ 2ನೇ ಹಂತದ ಹಳದಿ ಮಾರ್ಗದ ಉದ್ಘಾಟನೆ ಹಾಗೂ ಜೆ.ಪಿ ನಗರ 4ನೇ ಹಂತದ ಶಂಕುಸ್ಥಾಪನೆ ನೆರವೇರಿಸಿ ಹಾಗೂ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ಸಹಭಾಗಿತ್ವವೂ ಕೂಡ ಬೆಂಗಳೂರು ಮೆಟ್ರೋ ಯೋಜನೆಯ ಅನುಷ್ಠಾನಕ್ಕೆ ಕಾರಣವಾಗಿದೆ ಎಂದು ಸಿಎಂ ಇದೇ ವೇಳೆ ಹೇಳಿದರು.

ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ಹಣಕಾಸು ಮತ್ತು ತಾಂತ್ರಿಕ ನೆರವು ಒದಗಿಸುತ್ತಿದೆ. ರಾಜ್ಯ ಸರ್ಕಾರ ಯೋಜನೆಯ ಹಂತ 1,2, 2ಎ, 2ಬಿ ಮತ್ತು ಹಂತ 3ರ ಅನುಷ್ಠಾನಕ್ಕೆ ತನ್ನ ಪಾಲಿನ ರೂಪಾಯಿ 25,387 ಕೋಟಿ ಒದಗಿಸಿದೆ. ಇದರೊಂದಿಗೆ ಹೆಚ್ಚುವರಿ ಹಣಕಾಸು ನೆರವಿನ ರೂಪದಲ್ಲಿ ಸಾಲ ಮರುಪಾವತಿಗಾಗಿ ರೂ.3,987 ಕೋಟಿ ನೀಡಿದೆ. ಮೆಟ್ರೋ ಯೋಜನೆಗಳಿಗಾಗಿ ಇದುವರೆಗೂ 59,139 ಕೋಟಿ ರೂ. ಅನುದಾನವನ್ನು ವಿನಿಯೋಗಿಸಲಾಗಿದೆ. ರಾಜ್ಯ ಸರ್ಕಾರದ ಜವಾಬ್ಧಾರಿ ಶೇ. 87.37ರಷ್ಟಿದೆ. ಕೇಂದ್ರ ಸರ್ಕಾರ ತನ್ನ ಖಜಾನೆಯಿಂದ ಕೊಟ್ಟಿರುವುದು ಶೇ. 12.63 ರಷ್ಟು. ಕೇಂದ್ರ ಸರ್ಕಾರ ಒದಗಿಸಿರುವುದು 7,468.86 ಕೋಟಿ ರೂಗಳು ಮಾತ್ರ ಎಂದು ಸಿಎಂ ವಿವರಿಸಿದರು.

ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾಗಳು ಶೇ.50;50 ಅನುಪಾತದಲ್ಲಿ ಹೂಡಿಕೆ ಮಾಡಬೇಕೆಂದು ಒಪ್ಪಂದವಾಗಿದೆ. ಆದರೆ, ಕೇಂದ್ರ ಸರ್ಕಾರದಿಂದ ಈಕ್ವಿಟಿಯ ಹೊರತಾಗಿ ಸಾಲದ ರೂಪದಲ್ಲಿ ಬಂದ ಹಣವನ್ನು ಬಡ್ಡಿ ಸಮೇತ ರಾಜ್ಯ ಸಕಾರ ಹಾಗೂ ಮೆಟ್ರೋ ಸಂಸ್ಥೆಗಳು ತೀರಿಸಬೇಕಾಗಿದೆ. ಇದರಿಂದ ರಾಜ್ಯದ ಮೇಲೆ ಶೇ.87.37ರಷ್ಟು ಭಾರವಿದೆ ಎಂಬುವುದನ್ನು ಪ್ರಧಾನಮಂತ್ರಿಗೆ ಮನವರಿಕೆ ಮಾಡ ಬಯಸುತ್ತೇನೆ ಎಂದು ಸಿಎಂ ಹೇಳಿದರು.

ಮೆಟ್ರೊ ಹಳದಿ ಮಾರ್ಗದ ಉದ್ಘಾಟನೆಯಿಂದ ಬೆಂಗಳೂರು ಮೆಟ್ರೋ ಒಟ್ಟು 96.10 ಕಿ.ಮೀ ಕಾರ್ಯಾಚರಣೆಯೊಂದಿಗೆ ದಕ್ಷಿಣ ಭಾರತದಲ್ಲಿಯೇ ಅತಿ ಉದ್ದದ ಮೆಟ್ರೊ ಜಾಲದ ಗೌರವಕ್ಕೆ ಪಾತ್ರವಾಗಿದೆ. ಇದು ಪ್ರತಿಯೊಬ್ಬ ಕನ್ನಡಿಗನಿಗೆ ಹೆಮ್ಮೆಯ ಕ್ಷಣವಾಗಿದ್ದು, ಅಭಿವೃದ್ಧಿಯ ಕಡೆಗಿನ ನಮ್ಮ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಸಿಎಂ ತಿಳಿಸಿದರು.

ಇಂದು ಲೋಕಾರ್ಪಣೆಗೊಂಡಿರುವ ರೂ.7,160 ಕೋಟಿ ವೆಚ್ಚದ ಹಳದಿ ಲೇನ್ ಬೆಂಗಳೂರಿನ ಪ್ರಮುಖ ಐಟಿ ಮತ್ತು ತಂತ್ರಜ್ಞಾನ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ವೃತ್ತಿಪರರಿಗೆ, ಉದ್ಯೋಗಿಗಳಿಗೆ, ವಿದ್ಯಾರ್ಥಿಗಳಿಗೆ ಸುರಕ್ಷಿತ ಮತ್ತು ತ್ವರಿತ ಪ್ರಯಾಣವನ್ನು ಖಾತ್ರಿಪಡಿಸುತ್ತದೆ. ಪ್ರತಿನಿತ್ಯ ಸುಮಾರು 3.5 ಲಕ್ಷ ಪ್ರಯಾಣಿಕರು ಹಳದಿ ಲೇನ್ ಬಳಸುವ ನಿರೀಕ್ಷೆಯಿದೆ. ಇದರಿಂದ ಮುಖ್ಯವಾಗಿ ಸೆಂಟ್ರಲ್ ಸಿಲ್ಕ್ ಬೋರ್ಡ್ ಮತ್ತು ಜಯದೇವ ಆಸ್ಪತ್ರೆ ಸುತ್ತಲಿನ ಭಾರೀ ಟ್ರಾಫಿಕ್ ಸಮಸ್ಯೆ ಸುಧಾರಿಸುವ ವಿಶ್ವಾಸ ಹೊಂದಿದ್ದೇವೆ ಎಂದರು.

ಇಂದು ಉದ್ಘಾಟನೆಗೊಂಡಿರುವ ಹಳದಿ ಲೇನ್ ಪ್ರಮುಖ ಬಯೋಟೆಕ್ ಮತ್ತು ಐಟಿ ಹಬ್‌ಗಳನ್ನು ಪರಸ್ಪರ ಜೋಡಿಸುತ್ತದೆ. ಮಾತ್ರವಲ್ಲದೆ ಹಲವು ಪ್ರಮುಖ ಆಸ್ಪತ್ರೆಗಳು ಮತ್ತು ಕೈಗಾರಿಕಾ ವಲಯಗಳಿಗೂ ಸುಲಭದ ಸಂಪರ್ಕ ಸಾಧ್ಯವಾಗಿಸಿದೆ. ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗೆ ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ಮಿಸಲಾಗಿರುವ ಡಬಲ್ ಡೆಕ್ಕರ್ ಫ್ಲೈಓವರ್, ಬೆಂಗಳೂರಿನ ಅತ್ಯಂತ ನಿಬಿಡ ಜಂಕ್ಷನ್‌ಗಳಲ್ಲಿನ ಸಂಚಾರ ವ್ಯವಸ್ಥೆಯನ್ನು ಸುಧಾರಿಸಲಿದೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂಬುವುದಕ್ಕೆ ಇದು ನಿದರ್ಶನವಾಗಿದೆ ಎಂದು ಸಿಎಂ ಹೇಳಿದರು.

ಹೆಚ್ಚುತ್ತಿರುವ ನಗರೀಕರಣ ಮತ್ತು ಜನಸಂಖ್ಯೆ ನಗರದ ರಸ್ತೆಗಳ ಮೇಲೆ ವಿಪರೀತ ಒತ್ತಡವನ್ನು ಹೇರುತ್ತಿದೆ. ಪ್ರತಿದಿನ ಸುಮಾರು 9 ಲಕ್ಷ ಪ್ರಯಾಣಿಕರು ಬೆಂಗಳೂರು ಮೆಟ್ರೋ ಸೇವೆ ಬಳಸುತ್ತಿದ್ದಾರೆ. ಹಳದಿ ಲೇನ್ ಸೇರ್ಪಡೆಯಿಂದ ಪ್ರಯಾಣಿಕರ ಸಂಖ್ಯೆ 12.5 ಲಕ್ಷ ದಾಟುವ ನಿರೀಕ್ಷೆ ಹೊಂದಲಾಗಿದೆ ಎಂದರು.

ಬೆಂಗಳೂರು ಮೆಟ್ರೋ ಹಾದಿಯಲ್ಲಿ ನಾವು ಸಾಗಬೇಕಾದ ದೂರ ಇನ್ನೂ ಬಹಳಷ್ಟಿದೆ. ಎರಡನೇ ಹಂತದ ಮಾರ್ಗದ ಕಾರ್ಯಾಚರಣೆಯೊಂದಿಗೆ, ನಾವು 117 ಕಿ.ಮೀ ಮೆಟ್ರೋ ಸಂಪರ್ಕ ಸಾಧಿಸಲಿದ್ದೇವೆ. ಇದರಿಂದ 15 ಲಕ್ಷ ಮಂದಿ ಮೆಟ್ರೋದಲ್ಲಿ ಪ್ರಯಾಣಿಸಲು ಅವಕಾಶವಾಗಲಿದೆ ಎಂದು ತಿಳಿಸಿದರು.

ಮೆಟ್ರೋ 2ಎ ಮತ್ತು 2ಬಿ ಹಂತದಲ್ಲಿ ಹೊರ ವರ್ತುಲ ರಸ್ತೆ ಮತ್ತು ವಿಮಾನ ನಿಲ್ದಾಣ ಸಂಪರ್ಕಿಸುವ 58 ಕಿ.ಮೀ ಉದ್ದದ ರೂ.15,131 ಕೋಟಿ ವೆಚ್ಚದ ಮಾರ್ಗ 2027ರ ಡಿಸೆಂಬರ್‌ನಲ್ಲಿ ಪೂರ್ಣಗೊಳ್ಳಲಿದೆ. ಈ ಮಾರ್ಗ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬೆಂಗಳೂರು ನಗರವನ್ನು ಜೋಡಿಸಲಿದೆ ಎಂದು ಸಿಎಂ ವಿವರಿಸಿದರು.

ಹಂತ-3ರ 44.65 ಕಿ.ಮೀ ಉದ್ದದ ರೂ.15,611 ಕೋಟಿ ಹೂಡಿಕೆಯ ಮಾರ್ಗ ಬೆಂಗಳೂರು ನಗರದ ಸಂಪರ್ಕ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಲಿದೆ. ಇದರ ಸಿವಿಲ್ ಕಾಮಗಾರಿಗಳು ಸದ್ಯದಲ್ಲಿಯೇ ಆರಂಭವಾಗಲಿದೆ. ಮೆಟ್ರೋ ಹಂತ 4ರಲ್ಲಿ 53 ಕಿ.ಮೀ ಉದ್ದದ ಡಬಲ್ ಡೆಕ್ಕರ್-ಕಂ-ಮೆಟ್ರೋ ಮಾರ್ಗ ನಿರ್ಮಾಣದ ಕಾರ್ಯಸಾಧ್ಯತಾ ವರದಿ (Feasibility Report) ಸಿದ್ಧಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸಿಎಂ ಹೇಳಿದರು.

2030ರ ವೇಳೆಗೆ ಬೆಂಗಳೂರು ನಗರದಲ್ಲಿ 220 ಕಿ.ಮೀ ಉದ್ದದ ಮೆಟ್ರೋ ಮಾರ್ಗ ಪೂರ್ಣಗೊಳಿಸಿ. 30 ಲಕ್ಷ ಜನರು ಪ್ರಯಾಣಿಸಲು ಮೂಲಸೌಕರ್ಯ ಕಲ್ಪಿಸುವುದು ನಮ್ಮ ಬದ್ಧತೆಯಾಗಿದೆ. ಮೆಟ್ರೋ ನಿಲ್ದಾಣಗಳ ನಿರ್ಮಾಣದಲ್ಲಿ ಇನ್ಫೋಸಿಸ್ ಫೌಂಡೇಶನ್, ಬಯೋಕಾನ್ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್‌ ನಂತಹ ಖಾಸಗಿ ಸಂಸ್ಥೆಗಳು ಕೈ ಜೋಡಿಸಿವೆ. ಬೆಂಗಳೂರಿನ ಅಭಿವೃದ್ಧಿ ಕಾರ್ಯಗಳಲ್ಲಿ ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವ ಮುಂದಿನ ದಿನಗಳಲ್ಲಿ ಇನ್ನಷ್ಟು ಸದೃಢಗೊಳ್ಳುವ ವಿಶ್ವಾಸ ನನಗಿದೆ ಎಂದರು.

ನಮ್ಮ ರಾಜ್ಯವು ದೇಶದ ಐಟಿ ರಫ್ತಿನಲ್ಲಿ ಶೇ.35-40 ರಷ್ಟು ಕೊಡುಗೆ ಕೊಡುತ್ತಿದೆ. ಇದರಲ್ಲಿ ಬೆಂಗಳೂರಿನ ಪಾಲು ದೊಡ್ಡದು. ಎಲೆಕ್ಟ್ರಾನಿಕ್ಸ್ ಮತ್ತು ಸಂಶೋಧನೆ ಹಾಗೂ ಅಭಿವೃದ್ಧಿಯ ರಫ್ತಿನಲ್ಲಿ ಶೇ.40ಕ್ಕೂ ಹೆಚ್ಚಿನ ಪಾಲು ರಾಜ್ಯದ್ದಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರವು 1.35 ಲಕ್ಷ ಕೋಟಿ ರೂಗಳಿಗೂ ಅಧಿಕ ಮೊತ್ತದ ಯೋಜನೆಗಳನ್ನು ರೂಪಿಸಿ ಸಂಪನ್ಮೂಲಗಳನ್ನು ವಿನಿಯೋಗಿಸಿ ಬೆಂಗಳೂರನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ ಮಾಡುತ್ತಿದ್ದೇವೆ. ಈಗಾಗಲೇ ಅನೇಕ ಯೋಜನೆಗಳು ಕಾರ್ಯಗತಗೊಳ್ಳುತ್ತಿವೆ. ದೇಶದ ಆರ್ಥಿಕತೆಗೆ ಬೃಹತ್ ಕೊಡುಗೆ ಕೊಡುತ್ತಿರುವ ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರವೂ ಸಹ ಕೈ ಜೋಡಿಸಬೇಕೆಂದು ವಿನಂತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮತಗಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...