Homeಕರ್ನಾಟಕಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87ರಷ್ಟು ಹಣ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ

ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87ರಷ್ಟು ಹಣ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇಕಡ 87.37ರಷ್ಟು ಹಣ ನೀಡುತ್ತಿದ್ದು, ಕೇಂದ್ರ ಸರ್ಕಾರದ ಪಾಲು ಕೇವಲ ಶೇ12.63ರಷ್ಟು ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾನುವಾರ ಮೆಟ್ರೋ ಯೋಜನೆಯ 2ನೇ ಹಂತದ ಹಳದಿ ಮಾರ್ಗದ ಉದ್ಘಾಟನೆ ಹಾಗೂ ಜೆ.ಪಿ ನಗರ 4ನೇ ಹಂತದ ಶಂಕುಸ್ಥಾಪನೆ ನೆರವೇರಿಸಿ ಹಾಗೂ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ಸಹಭಾಗಿತ್ವವೂ ಕೂಡ ಬೆಂಗಳೂರು ಮೆಟ್ರೋ ಯೋಜನೆಯ ಅನುಷ್ಠಾನಕ್ಕೆ ಕಾರಣವಾಗಿದೆ ಎಂದು ಸಿಎಂ ಇದೇ ವೇಳೆ ಹೇಳಿದರು.

ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ಹಣಕಾಸು ಮತ್ತು ತಾಂತ್ರಿಕ ನೆರವು ಒದಗಿಸುತ್ತಿದೆ. ರಾಜ್ಯ ಸರ್ಕಾರ ಯೋಜನೆಯ ಹಂತ 1,2, 2ಎ, 2ಬಿ ಮತ್ತು ಹಂತ 3ರ ಅನುಷ್ಠಾನಕ್ಕೆ ತನ್ನ ಪಾಲಿನ ರೂಪಾಯಿ 25,387 ಕೋಟಿ ಒದಗಿಸಿದೆ. ಇದರೊಂದಿಗೆ ಹೆಚ್ಚುವರಿ ಹಣಕಾಸು ನೆರವಿನ ರೂಪದಲ್ಲಿ ಸಾಲ ಮರುಪಾವತಿಗಾಗಿ ರೂ.3,987 ಕೋಟಿ ನೀಡಿದೆ. ಮೆಟ್ರೋ ಯೋಜನೆಗಳಿಗಾಗಿ ಇದುವರೆಗೂ 59,139 ಕೋಟಿ ರೂ. ಅನುದಾನವನ್ನು ವಿನಿಯೋಗಿಸಲಾಗಿದೆ. ರಾಜ್ಯ ಸರ್ಕಾರದ ಜವಾಬ್ಧಾರಿ ಶೇ. 87.37ರಷ್ಟಿದೆ. ಕೇಂದ್ರ ಸರ್ಕಾರ ತನ್ನ ಖಜಾನೆಯಿಂದ ಕೊಟ್ಟಿರುವುದು ಶೇ. 12.63 ರಷ್ಟು. ಕೇಂದ್ರ ಸರ್ಕಾರ ಒದಗಿಸಿರುವುದು 7,468.86 ಕೋಟಿ ರೂಗಳು ಮಾತ್ರ ಎಂದು ಸಿಎಂ ವಿವರಿಸಿದರು.

ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾಗಳು ಶೇ.50;50 ಅನುಪಾತದಲ್ಲಿ ಹೂಡಿಕೆ ಮಾಡಬೇಕೆಂದು ಒಪ್ಪಂದವಾಗಿದೆ. ಆದರೆ, ಕೇಂದ್ರ ಸರ್ಕಾರದಿಂದ ಈಕ್ವಿಟಿಯ ಹೊರತಾಗಿ ಸಾಲದ ರೂಪದಲ್ಲಿ ಬಂದ ಹಣವನ್ನು ಬಡ್ಡಿ ಸಮೇತ ರಾಜ್ಯ ಸಕಾರ ಹಾಗೂ ಮೆಟ್ರೋ ಸಂಸ್ಥೆಗಳು ತೀರಿಸಬೇಕಾಗಿದೆ. ಇದರಿಂದ ರಾಜ್ಯದ ಮೇಲೆ ಶೇ.87.37ರಷ್ಟು ಭಾರವಿದೆ ಎಂಬುವುದನ್ನು ಪ್ರಧಾನಮಂತ್ರಿಗೆ ಮನವರಿಕೆ ಮಾಡ ಬಯಸುತ್ತೇನೆ ಎಂದು ಸಿಎಂ ಹೇಳಿದರು.

ಮೆಟ್ರೊ ಹಳದಿ ಮಾರ್ಗದ ಉದ್ಘಾಟನೆಯಿಂದ ಬೆಂಗಳೂರು ಮೆಟ್ರೋ ಒಟ್ಟು 96.10 ಕಿ.ಮೀ ಕಾರ್ಯಾಚರಣೆಯೊಂದಿಗೆ ದಕ್ಷಿಣ ಭಾರತದಲ್ಲಿಯೇ ಅತಿ ಉದ್ದದ ಮೆಟ್ರೊ ಜಾಲದ ಗೌರವಕ್ಕೆ ಪಾತ್ರವಾಗಿದೆ. ಇದು ಪ್ರತಿಯೊಬ್ಬ ಕನ್ನಡಿಗನಿಗೆ ಹೆಮ್ಮೆಯ ಕ್ಷಣವಾಗಿದ್ದು, ಅಭಿವೃದ್ಧಿಯ ಕಡೆಗಿನ ನಮ್ಮ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಸಿಎಂ ತಿಳಿಸಿದರು.

ಇಂದು ಲೋಕಾರ್ಪಣೆಗೊಂಡಿರುವ ರೂ.7,160 ಕೋಟಿ ವೆಚ್ಚದ ಹಳದಿ ಲೇನ್ ಬೆಂಗಳೂರಿನ ಪ್ರಮುಖ ಐಟಿ ಮತ್ತು ತಂತ್ರಜ್ಞಾನ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ವೃತ್ತಿಪರರಿಗೆ, ಉದ್ಯೋಗಿಗಳಿಗೆ, ವಿದ್ಯಾರ್ಥಿಗಳಿಗೆ ಸುರಕ್ಷಿತ ಮತ್ತು ತ್ವರಿತ ಪ್ರಯಾಣವನ್ನು ಖಾತ್ರಿಪಡಿಸುತ್ತದೆ. ಪ್ರತಿನಿತ್ಯ ಸುಮಾರು 3.5 ಲಕ್ಷ ಪ್ರಯಾಣಿಕರು ಹಳದಿ ಲೇನ್ ಬಳಸುವ ನಿರೀಕ್ಷೆಯಿದೆ. ಇದರಿಂದ ಮುಖ್ಯವಾಗಿ ಸೆಂಟ್ರಲ್ ಸಿಲ್ಕ್ ಬೋರ್ಡ್ ಮತ್ತು ಜಯದೇವ ಆಸ್ಪತ್ರೆ ಸುತ್ತಲಿನ ಭಾರೀ ಟ್ರಾಫಿಕ್ ಸಮಸ್ಯೆ ಸುಧಾರಿಸುವ ವಿಶ್ವಾಸ ಹೊಂದಿದ್ದೇವೆ ಎಂದರು.

ಇಂದು ಉದ್ಘಾಟನೆಗೊಂಡಿರುವ ಹಳದಿ ಲೇನ್ ಪ್ರಮುಖ ಬಯೋಟೆಕ್ ಮತ್ತು ಐಟಿ ಹಬ್‌ಗಳನ್ನು ಪರಸ್ಪರ ಜೋಡಿಸುತ್ತದೆ. ಮಾತ್ರವಲ್ಲದೆ ಹಲವು ಪ್ರಮುಖ ಆಸ್ಪತ್ರೆಗಳು ಮತ್ತು ಕೈಗಾರಿಕಾ ವಲಯಗಳಿಗೂ ಸುಲಭದ ಸಂಪರ್ಕ ಸಾಧ್ಯವಾಗಿಸಿದೆ. ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗೆ ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ಮಿಸಲಾಗಿರುವ ಡಬಲ್ ಡೆಕ್ಕರ್ ಫ್ಲೈಓವರ್, ಬೆಂಗಳೂರಿನ ಅತ್ಯಂತ ನಿಬಿಡ ಜಂಕ್ಷನ್‌ಗಳಲ್ಲಿನ ಸಂಚಾರ ವ್ಯವಸ್ಥೆಯನ್ನು ಸುಧಾರಿಸಲಿದೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂಬುವುದಕ್ಕೆ ಇದು ನಿದರ್ಶನವಾಗಿದೆ ಎಂದು ಸಿಎಂ ಹೇಳಿದರು.

ಹೆಚ್ಚುತ್ತಿರುವ ನಗರೀಕರಣ ಮತ್ತು ಜನಸಂಖ್ಯೆ ನಗರದ ರಸ್ತೆಗಳ ಮೇಲೆ ವಿಪರೀತ ಒತ್ತಡವನ್ನು ಹೇರುತ್ತಿದೆ. ಪ್ರತಿದಿನ ಸುಮಾರು 9 ಲಕ್ಷ ಪ್ರಯಾಣಿಕರು ಬೆಂಗಳೂರು ಮೆಟ್ರೋ ಸೇವೆ ಬಳಸುತ್ತಿದ್ದಾರೆ. ಹಳದಿ ಲೇನ್ ಸೇರ್ಪಡೆಯಿಂದ ಪ್ರಯಾಣಿಕರ ಸಂಖ್ಯೆ 12.5 ಲಕ್ಷ ದಾಟುವ ನಿರೀಕ್ಷೆ ಹೊಂದಲಾಗಿದೆ ಎಂದರು.

ಬೆಂಗಳೂರು ಮೆಟ್ರೋ ಹಾದಿಯಲ್ಲಿ ನಾವು ಸಾಗಬೇಕಾದ ದೂರ ಇನ್ನೂ ಬಹಳಷ್ಟಿದೆ. ಎರಡನೇ ಹಂತದ ಮಾರ್ಗದ ಕಾರ್ಯಾಚರಣೆಯೊಂದಿಗೆ, ನಾವು 117 ಕಿ.ಮೀ ಮೆಟ್ರೋ ಸಂಪರ್ಕ ಸಾಧಿಸಲಿದ್ದೇವೆ. ಇದರಿಂದ 15 ಲಕ್ಷ ಮಂದಿ ಮೆಟ್ರೋದಲ್ಲಿ ಪ್ರಯಾಣಿಸಲು ಅವಕಾಶವಾಗಲಿದೆ ಎಂದು ತಿಳಿಸಿದರು.

ಮೆಟ್ರೋ 2ಎ ಮತ್ತು 2ಬಿ ಹಂತದಲ್ಲಿ ಹೊರ ವರ್ತುಲ ರಸ್ತೆ ಮತ್ತು ವಿಮಾನ ನಿಲ್ದಾಣ ಸಂಪರ್ಕಿಸುವ 58 ಕಿ.ಮೀ ಉದ್ದದ ರೂ.15,131 ಕೋಟಿ ವೆಚ್ಚದ ಮಾರ್ಗ 2027ರ ಡಿಸೆಂಬರ್‌ನಲ್ಲಿ ಪೂರ್ಣಗೊಳ್ಳಲಿದೆ. ಈ ಮಾರ್ಗ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬೆಂಗಳೂರು ನಗರವನ್ನು ಜೋಡಿಸಲಿದೆ ಎಂದು ಸಿಎಂ ವಿವರಿಸಿದರು.

ಹಂತ-3ರ 44.65 ಕಿ.ಮೀ ಉದ್ದದ ರೂ.15,611 ಕೋಟಿ ಹೂಡಿಕೆಯ ಮಾರ್ಗ ಬೆಂಗಳೂರು ನಗರದ ಸಂಪರ್ಕ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಲಿದೆ. ಇದರ ಸಿವಿಲ್ ಕಾಮಗಾರಿಗಳು ಸದ್ಯದಲ್ಲಿಯೇ ಆರಂಭವಾಗಲಿದೆ. ಮೆಟ್ರೋ ಹಂತ 4ರಲ್ಲಿ 53 ಕಿ.ಮೀ ಉದ್ದದ ಡಬಲ್ ಡೆಕ್ಕರ್-ಕಂ-ಮೆಟ್ರೋ ಮಾರ್ಗ ನಿರ್ಮಾಣದ ಕಾರ್ಯಸಾಧ್ಯತಾ ವರದಿ (Feasibility Report) ಸಿದ್ಧಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸಿಎಂ ಹೇಳಿದರು.

2030ರ ವೇಳೆಗೆ ಬೆಂಗಳೂರು ನಗರದಲ್ಲಿ 220 ಕಿ.ಮೀ ಉದ್ದದ ಮೆಟ್ರೋ ಮಾರ್ಗ ಪೂರ್ಣಗೊಳಿಸಿ. 30 ಲಕ್ಷ ಜನರು ಪ್ರಯಾಣಿಸಲು ಮೂಲಸೌಕರ್ಯ ಕಲ್ಪಿಸುವುದು ನಮ್ಮ ಬದ್ಧತೆಯಾಗಿದೆ. ಮೆಟ್ರೋ ನಿಲ್ದಾಣಗಳ ನಿರ್ಮಾಣದಲ್ಲಿ ಇನ್ಫೋಸಿಸ್ ಫೌಂಡೇಶನ್, ಬಯೋಕಾನ್ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್‌ ನಂತಹ ಖಾಸಗಿ ಸಂಸ್ಥೆಗಳು ಕೈ ಜೋಡಿಸಿವೆ. ಬೆಂಗಳೂರಿನ ಅಭಿವೃದ್ಧಿ ಕಾರ್ಯಗಳಲ್ಲಿ ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವ ಮುಂದಿನ ದಿನಗಳಲ್ಲಿ ಇನ್ನಷ್ಟು ಸದೃಢಗೊಳ್ಳುವ ವಿಶ್ವಾಸ ನನಗಿದೆ ಎಂದರು.

ನಮ್ಮ ರಾಜ್ಯವು ದೇಶದ ಐಟಿ ರಫ್ತಿನಲ್ಲಿ ಶೇ.35-40 ರಷ್ಟು ಕೊಡುಗೆ ಕೊಡುತ್ತಿದೆ. ಇದರಲ್ಲಿ ಬೆಂಗಳೂರಿನ ಪಾಲು ದೊಡ್ಡದು. ಎಲೆಕ್ಟ್ರಾನಿಕ್ಸ್ ಮತ್ತು ಸಂಶೋಧನೆ ಹಾಗೂ ಅಭಿವೃದ್ಧಿಯ ರಫ್ತಿನಲ್ಲಿ ಶೇ.40ಕ್ಕೂ ಹೆಚ್ಚಿನ ಪಾಲು ರಾಜ್ಯದ್ದಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರವು 1.35 ಲಕ್ಷ ಕೋಟಿ ರೂಗಳಿಗೂ ಅಧಿಕ ಮೊತ್ತದ ಯೋಜನೆಗಳನ್ನು ರೂಪಿಸಿ ಸಂಪನ್ಮೂಲಗಳನ್ನು ವಿನಿಯೋಗಿಸಿ ಬೆಂಗಳೂರನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ ಮಾಡುತ್ತಿದ್ದೇವೆ. ಈಗಾಗಲೇ ಅನೇಕ ಯೋಜನೆಗಳು ಕಾರ್ಯಗತಗೊಳ್ಳುತ್ತಿವೆ. ದೇಶದ ಆರ್ಥಿಕತೆಗೆ ಬೃಹತ್ ಕೊಡುಗೆ ಕೊಡುತ್ತಿರುವ ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರವೂ ಸಹ ಕೈ ಜೋಡಿಸಬೇಕೆಂದು ವಿನಂತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮತಗಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...