Homeಕರ್ನಾಟಕವಿದ್ಯಾರ್ಥಿ ಸಮುದಾಯಕ್ಕೆ ದ್ರೋಹ ಬಗೆದ ರಾಜ್ಯ ಸರ್ಕಾರ: SFI ಆಕ್ರೋಶ

ವಿದ್ಯಾರ್ಥಿ ಸಮುದಾಯಕ್ಕೆ ದ್ರೋಹ ಬಗೆದ ರಾಜ್ಯ ಸರ್ಕಾರ: SFI ಆಕ್ರೋಶ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ಈ ವರ್ಷದ ಬಜೆಟ್‌ನಲ್ಲಿ ಕೇವಲ 29,688 ಕೋಟಿ ರೂಪಾಯಿ ಅಂದರೆ 11% ಹಣ ಮಾತ್ರ ನೀಡುವುದರ ಮೂಲಕ ತನ್ನ ಶಿಕ್ಷಣ ವಿರೋಧಿ, ವಿದ್ಯಾರ್ಥಿ ದ್ರೋಹಿ ನೀತಿಯನ್ನು ಮುಂದುವರೆಸಿದೆ ಎಂದು ಭಾರತೀಯ ವಿದ್ಯಾರ್ಥಿ ಫಡರೇಷನ್(SFI) ರಾಜ್ಯ ಸಮಿತಿ ಸೋಮವಾರ ಆಕ್ರೋಶ ವ್ಯಕ್ತಪಡಿಸಿದೆ.

ಕಳೆದ ವರ್ಷದ ಬಜೆಟ್ ಗಾತ್ರಕ್ಕೆ ಹೋಲಿಸಿದರೆ ಈ ವರ್ಷದ ಬಜೆಟ್‌ನಲ್ಲಿ 70 ಕೋಟಿ ಹಣ ಅಂದರೆ 0.3% ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಕಡಿತ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಸರ್ಕಾರ ಮತ್ತೆ ಮಠ ಮಾನ್ಯಗಳಿಗೆ, ಜಾತಿವಾರು ಪ್ರತಿಮೆಗಳ ನಿರ್ಮಾಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಹಣವನ್ನು ಮೀಸಲಿಡುವುದರ ಮೂಲಕ ಬಿಜೆಪಿ ಸರ್ಕಾರಕ್ಕೆ ಶಿಕ್ಷಣ ವ್ಯವಸ್ಥೆಯ ಸಮಗ್ರ ಅಭಿವೃದ್ಧಿಯ ಬಗ್ಗೆ ಯಾವುದೇ ದೂರದೃಷ್ಟಿಕೋನ ಮತ್ತು ಅಭಿವೃದ್ಧಿ ಕಣ್ಣೋಟ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತುಪಡಿಸಲಾಗಿದೆ ಎಂದು SFI ಟೀಕಿಸಿದೆ.

ಇದನ್ನೂ ಓದಿ: ದೇವಸ್ಥಾನದ ಕಾಣಿಕ ಡಬ್ಬಿ ಕಳವು: ಬಜರಂಗದಳ ಸಂಚಾಲಕನ ಬಂಧನ

“ಕೊರೋನಾದಿಂದ ಶೈಕ್ಷಣಿಕ ಸಮಸ್ಯೆಗಳು ತೀವ್ರವಾಗಿವೆ. ಈ ಸಂದರ್ಭದಲ್ಲಿ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ಖಾಲಿ ಇರುವ ಶಿಕ್ಷಕ, ಉಪನ್ಯಾಸಕರ ಹುದ್ದೆಗಳ ಭರ್ತಿಯಾಗಬೇಕು, ವಿಶ್ವವಿದ್ಯಾಲಯಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ವಿಶೇಷವಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಉಳಿಸಬೇಕು, ವಿದ್ಯಾರ್ಥಿ ವೇತನ, ಅಗತ್ಯ ತರಗತಿ ಕೊಠಡಿ, ಉಚಿತ ಲ್ಯಾಪ್ಟಾಪ್, ಉಚಿತ ಬಸ್ ಪಾಸ್ , ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಆಹಾರ ಭತ್ಯೆ ಕನಿಷ್ಠ 3500/-ರೂ ಹೆಚ್ಚಿಸಬೇಕೆಂದು ರಾಜ್ಯದ ವಿದ್ಯಾರ್ಥಿ ಸಮುದಾಯವನ್ನು ಸಂಘಟಿಸಿ ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ ನಲ್ಲಿ 30% ಮೀಸಲಿಡಬೇಕು ಎಂದು ಇಡೀ ರಾಜ್ಯಾದ್ಯಂತ ಹೋರಾಟಗಳನ್ನು ನಡೆಸಿದರೂ ರಾಜ್ಯ ಸರ್ಕಾರ ಪರಿಗಣಿಸದೆ ಶಿಕ್ಷಣ ಕ್ಷೇತ್ರಕ್ಕೆ ನಿರ್ಲಕ್ಷ್ಯತೆ ತೋರಿದೆ ಎಂದು SFI ಆರೋಪಿಸಿದೆ.

ಬಿಜೆಪಿ ಸರ್ಕಾರದ ಪ್ರತಿ ಬಾರಿಯೂ ಶಿಕ್ಷಣ ಕ್ಷೇತ್ರಕ್ಕೆ ಹಣ ಕಡಿತ ಮಾಡುವ ಪರಿಪಾಠವನ್ನು ಮುಂದುವರಿಸಿರೋದರಿಂದ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ದ್ರೋಹ ಬಗೆದಿದೆ. ಈ ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಇನ್ನಷ್ಟು ಹೋರಾಟಗಳನ್ನು ತೀವ್ರಗೊಳಿಸಲು ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ SFI ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದೆ.

ಇದನ್ನೂ ಓದಿ: ರಾಜ್ಯಸಭೆ: ಬೆಲೆ ಏರಿಕೆಗಳ ವಿರುದ್ಧ ದನಿ ಎತ್ತಿದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...