Homeಕರ್ನಾಟಕಸದ್ದಿಲ್ಲದೆ ಮುಸ್ಲಿಂ ವಿದ್ಯಾರ್ಥಿಗಳ ಡಾಟಾ ಸಂಗ್ರಹಿಸುತ್ತಿರುವ ರಾಜ್ಯ ಸರ್ಕಾರ!

ಸದ್ದಿಲ್ಲದೆ ಮುಸ್ಲಿಂ ವಿದ್ಯಾರ್ಥಿಗಳ ಡಾಟಾ ಸಂಗ್ರಹಿಸುತ್ತಿರುವ ರಾಜ್ಯ ಸರ್ಕಾರ!

- Advertisement -
- Advertisement -

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ನಿಷೇಧ ಮಾಡಿರುವ ಪ್ರಕರಣದ ವಿರುದ್ದ ಸಲ್ಲಿಸಲಾಗಿರುವ ಅರ್ಜಿ ಇನ್ನೂ ಕೋರ್ಟ್‌ನಲ್ಲಿದೆ. ಈ ನಡುವೆ ರಾಜ್ಯ ಸರ್ಕಾರವು ಖಾಸಗಿ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಿಂದ ವಿಶೇಷವಾಗಿ 1 ರಿಂದ 10 ನೇ ತರಗತಿಗೆ ದಾಖಲಾಗಿರುವ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳ ಡೇಟಾವನ್ನು ಸದ್ದಿಲ್ಲದೆ ಸಂಗ್ರಹಿಸಲು ಹೊರಟಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಗುರುವಾರ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪಡೆದ ಅಂಕಿಅಂಶಗಳ ಪ್ರಕಾರ, ರಾಜ್ಯಾದ್ಯಂತ ವಿವಿಧ ಸರ್ಕಾರಿ ಶಾಲೆಗಳಲ್ಲಿ 17,39,742 ಮುಸ್ಲಿಂ ವಿದ್ಯಾರ್ಥಿಗಳಿದ್ದಾರೆ. ಬೆಂಗಳೂರು ದಕ್ಷಿಣದಲ್ಲಿ 1,55,104 ವಿದ್ಯಾರ್ಥಿಗಳಿದ್ದು ಇದು ಅತಿ ಹೆಚ್ಚು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿರುವ ಪ್ರದೇಶವಾಗಿದೆ. ನಂತರದ ಸ್ಥಾನದಲ್ಲಿ ಕಲಬುರಗಿಯಿದ್ದು, ಇಲ್ಲಿ 1,31,802 ವಿದ್ಯಾರ್ಥಿಗಳಿದ್ದಾರೆ. ಬೆಂಗಳೂರು ಉತ್ತರದಲ್ಲಿ 1,22,993 ವಿದ್ಯಾರ್ಥಿಗಳು ಇದ್ದಾರೆ ಎಂದು ಅಂಕಿಅಂಶಗಳು ಬಹಿರಂಗಪಡಿಸಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ 9,603 ಮುಸ್ಲಿಂ ವಿದ್ಯಾರ್ಥಿಗಳಿದ್ದಾರೆ. ಇದು ರಾಜ್ಯದಲ್ಲೇ ಅತಿ ಕಡಿಮೆ ಮುಸ್ಲಿಂ ವಿದ್ಯಾರ್ಥಿಗಳಿರುವ ಪ್ರದೇಶವಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಯುಪಿ ಚುನಾವಣೆ: 2 ಹಂತಗಳ ಮತದಾನದಲ್ಲಿ ಎಸ್‌ಪಿ ಶತಕ ಬಾರಿಸಿದೆ ಎಂದ ಅಖಿಲೇಶ್ ಯಾದವ್

ಈ ಮಧ್ಯೆ, ತಮ್ಮ ಕಾಲೇಜುಗಳಿಗೆ ದಾಖಲಾದ ಮುಸ್ಲಿಂ ವಿದ್ಯಾರ್ಥಿಗಳ ಸಂಖ್ಯೆಯ ಡೇಟಾವನ್ನು ಸಲ್ಲಿಸಲು ಬೆಂಗಳೂರಿನ ಕೆಲವು ಖಾಸಗಿ ಕಾಲೇಜುಗಳಿಗೆ ಕೇಳಲಾಗಿದೆ ಎಂದು DH ಮೂಲಗಳಲ್ಲಿ ಉಲ್ಲೇಖಿಸಿ ವರದಿ ಮಾಡಿದೆ.

“ನಡೆಯುತ್ತಿರುವ ಹಿಜಾಬ್ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಕಾಲೇಜುಗಳನ್ನು ಸೂಕ್ಷ್ಮ ವಲಯಗಳಾಗಿ ವರ್ಗೀಕರಿಸಲು ಮತ್ತು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲು ಮಾಡುತ್ತಿರುವ ಕಸರತ್ತು ಇದು ಇರಬಹುದು ಎಂದು ನಾವು ಭಾವಿಸಿದ್ದೇವೆ” ಎಂದು ಬೆಂಗಳೂರು ದಕ್ಷಿಣದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರೊಬ್ಬರು ಅಭಿಪ್ರಾಯಪಟ್ಟಿದ್ದಾರೆ ಎಂದು ವರದಿ ಹೇಳಿದೆ.

ವಿದ್ಯಾರ್ಥಿಗಳ ದತ್ತಾಂಶ ಸಂಗ್ರಹದ ಹಿಂದಿನ ಕಾರಣದ ಬಗ್ಗೆ ಅಧಿಕಾರಗಳೊಂದಿಗೆ ಪ್ರಶ್ನಿಸಿದಾಗ, ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನ ಮತ್ತು ಉಚ್ಚ ನ್ಯಾಯಾಲಯದ ವಿಚಾರಣೆ ಹಿನ್ನಲೆಯಲ್ಲಿ ಸಂಗ್ರಹಿಸಲಾಗುತ್ತಿದೆ ಎಂದು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. “ವಿಧಾನ ಮಂಡಲ ಅಧಿವೇಶ ನಡೆಯುತ್ತಿರುವುದರಿಂದ ಚುನಾಯಿತ ಪ್ರತಿನಿಧಿಗಳು ಡೇಟಾವನ್ನು ಕೇಳಬಹುದು ಹಾಗೂ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಇದು ಬೇಕಾಗಬಹುದು” ಎಂದು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ’: ಮೋದಿ ವಿರುದ್ಧ ಮಾಜಿ ಪಿಎಂ ಮನಮೋಹನ್ ಸಿಂಗ್ ಕಿಡಿ

ಈ ಕುರಿತು ಸ್ಪಷ್ಟನೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್, ದಿನನಿತ್ಯ ಮಾಧ್ಯಮ ವರದಿಗಳು ತಪ್ಪುದಾರಿಗೆ ಎಳೆಯುತ್ತಿವೆ. ಈ ಅಂಕಿಅಂಶಗಳನ್ನು ಎದುರಿಸಲು ಡೇಟಾವನ್ನು ಸಂಗ್ರಹಿಸಲಾಗುತ್ತಿದೆ ಎಂದು ಡಿಎಚ್‌ಗೆ ತಿಳಿಸಿದ್ದಾರೆ. “ಪ್ರತಿದಿನ, ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳು ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಧಿಕ್ಕರಿಸಿ ಮನೆಗೆ ಮರಳಿದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆಯ ವಿವಿಧ ಅಂಕಿಅಂಶಗಳೊಂದಿಗೆ ಸಮಸ್ಯೆಯನ್ನು ವರದಿ ಮಾಡುತ್ತಿವೆ. ವಿದ್ಯಾರ್ಥಿಗಳು ಈ ಸಮಸ್ಯೆಯಿಂದ ನಿಜವಾಗಿಯೂ ತೊಂದರೆಗೀಡಾಗಿದ್ದಾರೆಯೇ ಅಥವಾ ಅಧ್ಯಯನದ ಮೇಲೆ ಕೇಂದ್ರೀಕರಿಸಿದ್ದಾರೆಯೇ ಎಂದು ನೋಡುವುದು ನಮ್ಮ ಉದ್ದೇಶವಾಗಿತ್ತು. ಸುತ್ತಲೂ ಏನು ನಡೆಯುತ್ತಿದೆ ಎಂಬುದರ ಬಗ್ಗೆ ಗಮನವಿಲ್ಲದೆ ಎಷ್ಟು ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುತ್ತಿದ್ದಾರೆ ಎಂಬುದನ್ನು ನಾವು ತಿಳಿದುಕೊಳ್ಳಲು ಬಯಸಿದ್ದೇವೆ” ಎಂದು ಸಚಿವರು ಹೇಳಿದ್ದಾರೆ.

ಗುರುವಾರದಂದು ರಾಜ್ಯದ 14 ಶಾಲೆಗಳಲ್ಲಿ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಧಿಕ್ಕರಿಸಿದ ಒಟ್ಟು 162 ವಿದ್ಯಾರ್ಥಿನಿಯರನ್ನು ಮನೆಗೆ ಕಳುಹಿಸಲಾಗಿದೆ ಎಂದು ಇಲಾಖೆಯ ಅಂಕಿಅಂಶಗಳು ಹೇಳಿವೆ. “ಬೀದರ್ ಒಂದರಲ್ಲೇ, ಹೈಕೋರ್ಟ್ ನಿರ್ದೇಶನವನ್ನು ಧಿಕ್ಕರಿಸಿದ ಮತ್ತು ತರಗತಿಯೊಳಗೆ ಹಿಜಾಬ್ ತೆಗೆಯಲು ನಿರಾಕರಿಸಿದ ಏಳು ಶಾಲೆಗಳ 114 ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ. ಅದೇ ರೀತಿ ಶಿವಮೊಗ್ಗದ ಮೂರು ಶಾಲೆಗಳ 20 ವಿದ್ಯಾರ್ಥಿಗಳು, ಚಿತ್ರದುರ್ಗದ ಎರಡು ಶಾಲೆಗಳಲ್ಲಿ 18 ವಿದ್ಯಾರ್ಥಿನಿಯರು ಮತ್ತು ಚಿಕ್ಕಮಗಳೂರಿನ ಶಾಲೆಯಲ್ಲಿ ಎಂಟು ಮತ್ತು ಚಿಕ್ಕಬಳ್ಳಾಪುರದ ಇಬ್ಬರು ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಡಿಎಚ್‌ ವರದಿ ಮಾಡಿದೆ.

ಇದನ್ನೂ ಓದಿ: ಹಿಜಾಬ್ ಸಮಸ್ಯೆಯಲ್ಲ: ಬಡತನ, ನಿರುದ್ಯೋಗ, ದೇಶದ ಅಭಿವೃದ್ದಿ ಬಗ್ಗೆ ಚರ್ಚಿಸೋಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...