Homeಕರ್ನಾಟಕಕಾರ್ಮಿಕರ ದುಡಿಯುವ ಅವಧಿಯನ್ನು 10 ಗಂಟೆಗೆ ಏರಿಸಿದ ರಾಜ್ಯ ಸರ್ಕಾರ: ಕಾರ್ಮಿಕರ ಸಂಘಟನೆಗಳ ವಿರೋಧ

ಕಾರ್ಮಿಕರ ದುಡಿಯುವ ಅವಧಿಯನ್ನು 10 ಗಂಟೆಗೆ ಏರಿಸಿದ ರಾಜ್ಯ ಸರ್ಕಾರ: ಕಾರ್ಮಿಕರ ಸಂಘಟನೆಗಳ ವಿರೋಧ

- Advertisement -
- Advertisement -

ಸರ್ಕಾರಗಳು ಹೇಳಿಕೊಳ್ಳಿಕೊಳ್ಳುತ್ತಿರುವಂತೆ ಲಾಕ್‌ಡೌನ್‌ನಿಂದಾಗಿ ಹಳ್ಳಿಹಿಡಿದಿರುವ ಆರ್ಥಿಕತೆಯನ್ನು ಮೇಲೆತ್ತುವುದಕ್ಕಾಗಿ ಕಾರ್ಮಿಕರನ್ನು ಬಲಿಪಶುಗಳನ್ನಾಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಕಾರ್ಮಿಕರು ಕೆಲಸದ ಅವಧಿಯನ್ನು 8 ಗಂಟೆಯಿಂದ 10 ಗಂಟೆಗೆ ಏರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕಳೆದ ಎರಡು ತಿಂಗಳಿನಿಂದ ರಾಷ್ಟ್ರದಾದ್ಯಂತ ಲಾಕ್‌ಡೌನ್ ಜಾರಿಯಲ್ಲಿದೆ. ಹೀಗಾಗಿ ಕಾರ್ಖಾನೆಗಳನ್ನು ಮುಚ್ಚಲ್ಪಟ್ಟಿದ್ದು ಉತ್ಪಾದನಾ ವಲಯ ಬಹುತೇಕ ಸ್ಥಗಿತವಾಗಿದೆ. ಹೀಗಾಗಿ ಲಾಕ್‌ಡೌನ್ ಅವಧಿ ಮುಗಿದ ನಂತರ ಕಾರ್ಮಿಕರನ್ನು 8 ಗಂಟೆ ಬದಲಿಗೆ 12 ಗಂಟೆ ದುಡಿಸಿಕೊಳ್ಳಬೇಕು ಎಂಬ ಮಾತುಗಳು ಕೇಳಿ ಬಂದಿದ್ದವು.

ಅದರಂತೆ ಮಹಾರಾಷ್ಟ್ರ ಸರ್ಕಾರ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಿಸುತ್ತಿದ್ದಂತೆ, ಕರ್ನಾಟಕ ಸಹ ಇದೇ ನೀತಿಯನ್ನು ಅನುಸರಿಸಿದೆ. ಆದರೆ, ಸರ್ಕಾರದ ಈ ನಿರ್ಧಾರ ಕಾರ್ಮಿಕರ ಸಂಘಟನೆಯವರ ಆಕ್ರೋಶಕ್ಕೆ ಕಾರಣವಾಗಿದೆ.

ಫ್ಯಾಕ್ಟರಿ ಆ್ಯಕ್ಟ್ 1948 ಅಡಿಯಲ್ಲಿ ಆದೇಶ ಹೊರಡಿಸಲಾಗಿದ್ದು, ಸಮಯ ಬದಲಾವಣೆಯನ್ನ ಇಂದಿನಿಂದ ಆಗಸ್ಟ್ ವರೆಗೂ ಮುಂದುವರಿಸುವಂತೆಯೂ ಆದೇಶದಲ್ಲಿ ಸೂಚಿಸಲಾಗಿದೆ. ಇದಲ್ಲದೆ, ಕೆಲ‌ ಷರತ್ತುಗಳನ್ನೂ ವಿಧಿಸಿರುವ ರಾಜ್ಯ ಸರ್ಕಾರ 10 ಗಂಟೆ ಕೆಲಸ ಮಾಡುವವರಿಗೆ ಆಯಾ ಕಂಪನಿಗಳು ಹೆಚ್ಚುವರಿ ಸಂಬಳವನ್ನೂ ನೀಡಬೇಕು ಎಂದು ಆದೇಶಿಸಲಾಗಿದೆ.

“ಕಾರ್ಮಿಕ ಮಂತ್ರಿಗಳು ತ್ರೀ ಪಕ್ಷೀಯ ಸಭೆಗಳನ್ನು ನಡೆಸುತ್ತಾ ಇದ್ದರು ಆ ಸಭೆಗಳಲ್ಲಿ ಮಾಲೀಕರ ಸಂಘಟನೆ ಗಳ ಬೇಡಿಕೆಯಿಲ್ಲದಿದ್ದರೂಕೆಲಸದ ಅವಧಿಯನ್ನು ಹೆಚ್ಚಳ ಮಾಡುವ ಪ್ರಸ್ತಾಪಗಳು ಬಂದವು
ಕೇಂದ್ರ ಕಾರ್ಮಿಕ ಸಂಘಟನೆಗಳು ಕೂಡಲೇ may1,may 18ರಂದು ಪ್ರತಿಭಟನೆ ಗಳನ್ನು ಮಾಡಲಾಗಿತ್ತು,ಮುಖ್ಯ ಮಂತ್ರಿ ಗಳಿಗೆ,ಕಾರ್ಮಿಕ ಮಂತ್ರಿ ಗಳಿಗೆ ,ಪ್ರತಿಪಕ್ಷ ಗಳಿಗೆ ಮನವಿ ಕೊಡಲಾಗಿದೆ ಆದರೆ ಸರ್ವಾದಿಕಾರಕ್ಕೆ ಹೆಸರಾಗಿರುವ ಬಿಜೆಪಿ ಸರ್ಕಾರ ಇಂದು ನಮ್ಮ ನಂಬಿಕೆಗೆ ದ್ರೋಹ ಬಗೆದು ಕಾರ್ಮಿಕರ ರಕ್ತವನ್ನು ಹೀರಲು ಕೆಲಸದ ಅವಧಿಯನ್ನು 8ರಿಂದ 10ಗಂಟೆಗೆ ಹೆಚ್ಚಿಸಿ ಇಂದು ಆದೇಶ ಮಾಡಲಾಗಿದೆ” ಎಂದು ಸಿಐಟಿಯು ಸಂಘಟನೆಯ ಮುಖಂಡೆ ಕೆ.ಎಸ್ ವರಲಕ್ಷ್ಮಿ

ಲಾಕ್‌ಡೌನ್‌ನಿಂದ ಉಂಟಾಗಿರುವ ಉತ್ಪಾದನೆ ಮತ್ತು ಕಾರ್ಮಿಕರ ಕೊರೆತೆಯನ್ನು ನೀಗಿಸುವ ಸಲುವಾಗಿ ಕಾರ್ಮಿಕರನ್ನು ಕಾರ್ಖಾನೆಗಳಲ್ಲಿ 8 ಗಂಟೆ ಬದಲಿಗೆ 12 ಗಂಟೆ ದುಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿದೆ. ಆದರೆ, ಲಾಕ್‌ಡೌನ್‌ಗೂ ಮುಂಚೆಯೇ ದೇಶದ ಆರ್ಥಿಕತೆ ಅಧೋಗತಿಗೆ ತಲುಪಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...