Homeಕರ್ನಾಟಕಕಾರ್ಮಿಕರ ದುಡಿಯುವ ಅವಧಿಯನ್ನು 10 ಗಂಟೆಗೆ ಏರಿಸಿದ ರಾಜ್ಯ ಸರ್ಕಾರ: ಕಾರ್ಮಿಕರ ಸಂಘಟನೆಗಳ ವಿರೋಧ

ಕಾರ್ಮಿಕರ ದುಡಿಯುವ ಅವಧಿಯನ್ನು 10 ಗಂಟೆಗೆ ಏರಿಸಿದ ರಾಜ್ಯ ಸರ್ಕಾರ: ಕಾರ್ಮಿಕರ ಸಂಘಟನೆಗಳ ವಿರೋಧ

- Advertisement -
- Advertisement -

ಸರ್ಕಾರಗಳು ಹೇಳಿಕೊಳ್ಳಿಕೊಳ್ಳುತ್ತಿರುವಂತೆ ಲಾಕ್‌ಡೌನ್‌ನಿಂದಾಗಿ ಹಳ್ಳಿಹಿಡಿದಿರುವ ಆರ್ಥಿಕತೆಯನ್ನು ಮೇಲೆತ್ತುವುದಕ್ಕಾಗಿ ಕಾರ್ಮಿಕರನ್ನು ಬಲಿಪಶುಗಳನ್ನಾಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಕಾರ್ಮಿಕರು ಕೆಲಸದ ಅವಧಿಯನ್ನು 8 ಗಂಟೆಯಿಂದ 10 ಗಂಟೆಗೆ ಏರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕಳೆದ ಎರಡು ತಿಂಗಳಿನಿಂದ ರಾಷ್ಟ್ರದಾದ್ಯಂತ ಲಾಕ್‌ಡೌನ್ ಜಾರಿಯಲ್ಲಿದೆ. ಹೀಗಾಗಿ ಕಾರ್ಖಾನೆಗಳನ್ನು ಮುಚ್ಚಲ್ಪಟ್ಟಿದ್ದು ಉತ್ಪಾದನಾ ವಲಯ ಬಹುತೇಕ ಸ್ಥಗಿತವಾಗಿದೆ. ಹೀಗಾಗಿ ಲಾಕ್‌ಡೌನ್ ಅವಧಿ ಮುಗಿದ ನಂತರ ಕಾರ್ಮಿಕರನ್ನು 8 ಗಂಟೆ ಬದಲಿಗೆ 12 ಗಂಟೆ ದುಡಿಸಿಕೊಳ್ಳಬೇಕು ಎಂಬ ಮಾತುಗಳು ಕೇಳಿ ಬಂದಿದ್ದವು.

ಅದರಂತೆ ಮಹಾರಾಷ್ಟ್ರ ಸರ್ಕಾರ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಿಸುತ್ತಿದ್ದಂತೆ, ಕರ್ನಾಟಕ ಸಹ ಇದೇ ನೀತಿಯನ್ನು ಅನುಸರಿಸಿದೆ. ಆದರೆ, ಸರ್ಕಾರದ ಈ ನಿರ್ಧಾರ ಕಾರ್ಮಿಕರ ಸಂಘಟನೆಯವರ ಆಕ್ರೋಶಕ್ಕೆ ಕಾರಣವಾಗಿದೆ.

ಫ್ಯಾಕ್ಟರಿ ಆ್ಯಕ್ಟ್ 1948 ಅಡಿಯಲ್ಲಿ ಆದೇಶ ಹೊರಡಿಸಲಾಗಿದ್ದು, ಸಮಯ ಬದಲಾವಣೆಯನ್ನ ಇಂದಿನಿಂದ ಆಗಸ್ಟ್ ವರೆಗೂ ಮುಂದುವರಿಸುವಂತೆಯೂ ಆದೇಶದಲ್ಲಿ ಸೂಚಿಸಲಾಗಿದೆ. ಇದಲ್ಲದೆ, ಕೆಲ‌ ಷರತ್ತುಗಳನ್ನೂ ವಿಧಿಸಿರುವ ರಾಜ್ಯ ಸರ್ಕಾರ 10 ಗಂಟೆ ಕೆಲಸ ಮಾಡುವವರಿಗೆ ಆಯಾ ಕಂಪನಿಗಳು ಹೆಚ್ಚುವರಿ ಸಂಬಳವನ್ನೂ ನೀಡಬೇಕು ಎಂದು ಆದೇಶಿಸಲಾಗಿದೆ.

“ಕಾರ್ಮಿಕ ಮಂತ್ರಿಗಳು ತ್ರೀ ಪಕ್ಷೀಯ ಸಭೆಗಳನ್ನು ನಡೆಸುತ್ತಾ ಇದ್ದರು ಆ ಸಭೆಗಳಲ್ಲಿ ಮಾಲೀಕರ ಸಂಘಟನೆ ಗಳ ಬೇಡಿಕೆಯಿಲ್ಲದಿದ್ದರೂಕೆಲಸದ ಅವಧಿಯನ್ನು ಹೆಚ್ಚಳ ಮಾಡುವ ಪ್ರಸ್ತಾಪಗಳು ಬಂದವು
ಕೇಂದ್ರ ಕಾರ್ಮಿಕ ಸಂಘಟನೆಗಳು ಕೂಡಲೇ may1,may 18ರಂದು ಪ್ರತಿಭಟನೆ ಗಳನ್ನು ಮಾಡಲಾಗಿತ್ತು,ಮುಖ್ಯ ಮಂತ್ರಿ ಗಳಿಗೆ,ಕಾರ್ಮಿಕ ಮಂತ್ರಿ ಗಳಿಗೆ ,ಪ್ರತಿಪಕ್ಷ ಗಳಿಗೆ ಮನವಿ ಕೊಡಲಾಗಿದೆ ಆದರೆ ಸರ್ವಾದಿಕಾರಕ್ಕೆ ಹೆಸರಾಗಿರುವ ಬಿಜೆಪಿ ಸರ್ಕಾರ ಇಂದು ನಮ್ಮ ನಂಬಿಕೆಗೆ ದ್ರೋಹ ಬಗೆದು ಕಾರ್ಮಿಕರ ರಕ್ತವನ್ನು ಹೀರಲು ಕೆಲಸದ ಅವಧಿಯನ್ನು 8ರಿಂದ 10ಗಂಟೆಗೆ ಹೆಚ್ಚಿಸಿ ಇಂದು ಆದೇಶ ಮಾಡಲಾಗಿದೆ” ಎಂದು ಸಿಐಟಿಯು ಸಂಘಟನೆಯ ಮುಖಂಡೆ ಕೆ.ಎಸ್ ವರಲಕ್ಷ್ಮಿ

ಲಾಕ್‌ಡೌನ್‌ನಿಂದ ಉಂಟಾಗಿರುವ ಉತ್ಪಾದನೆ ಮತ್ತು ಕಾರ್ಮಿಕರ ಕೊರೆತೆಯನ್ನು ನೀಗಿಸುವ ಸಲುವಾಗಿ ಕಾರ್ಮಿಕರನ್ನು ಕಾರ್ಖಾನೆಗಳಲ್ಲಿ 8 ಗಂಟೆ ಬದಲಿಗೆ 12 ಗಂಟೆ ದುಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿದೆ. ಆದರೆ, ಲಾಕ್‌ಡೌನ್‌ಗೂ ಮುಂಚೆಯೇ ದೇಶದ ಆರ್ಥಿಕತೆ ಅಧೋಗತಿಗೆ ತಲುಪಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...