Homeಕರ್ನಾಟಕಕಾರ್ಮಿಕರ ದುಡಿಯುವ ಅವಧಿಯನ್ನು 10 ಗಂಟೆಗೆ ಏರಿಸಿದ ರಾಜ್ಯ ಸರ್ಕಾರ: ಕಾರ್ಮಿಕರ ಸಂಘಟನೆಗಳ ವಿರೋಧ

ಕಾರ್ಮಿಕರ ದುಡಿಯುವ ಅವಧಿಯನ್ನು 10 ಗಂಟೆಗೆ ಏರಿಸಿದ ರಾಜ್ಯ ಸರ್ಕಾರ: ಕಾರ್ಮಿಕರ ಸಂಘಟನೆಗಳ ವಿರೋಧ

- Advertisement -
- Advertisement -

ಸರ್ಕಾರಗಳು ಹೇಳಿಕೊಳ್ಳಿಕೊಳ್ಳುತ್ತಿರುವಂತೆ ಲಾಕ್‌ಡೌನ್‌ನಿಂದಾಗಿ ಹಳ್ಳಿಹಿಡಿದಿರುವ ಆರ್ಥಿಕತೆಯನ್ನು ಮೇಲೆತ್ತುವುದಕ್ಕಾಗಿ ಕಾರ್ಮಿಕರನ್ನು ಬಲಿಪಶುಗಳನ್ನಾಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಕಾರ್ಮಿಕರು ಕೆಲಸದ ಅವಧಿಯನ್ನು 8 ಗಂಟೆಯಿಂದ 10 ಗಂಟೆಗೆ ಏರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕಳೆದ ಎರಡು ತಿಂಗಳಿನಿಂದ ರಾಷ್ಟ್ರದಾದ್ಯಂತ ಲಾಕ್‌ಡೌನ್ ಜಾರಿಯಲ್ಲಿದೆ. ಹೀಗಾಗಿ ಕಾರ್ಖಾನೆಗಳನ್ನು ಮುಚ್ಚಲ್ಪಟ್ಟಿದ್ದು ಉತ್ಪಾದನಾ ವಲಯ ಬಹುತೇಕ ಸ್ಥಗಿತವಾಗಿದೆ. ಹೀಗಾಗಿ ಲಾಕ್‌ಡೌನ್ ಅವಧಿ ಮುಗಿದ ನಂತರ ಕಾರ್ಮಿಕರನ್ನು 8 ಗಂಟೆ ಬದಲಿಗೆ 12 ಗಂಟೆ ದುಡಿಸಿಕೊಳ್ಳಬೇಕು ಎಂಬ ಮಾತುಗಳು ಕೇಳಿ ಬಂದಿದ್ದವು.

ಅದರಂತೆ ಮಹಾರಾಷ್ಟ್ರ ಸರ್ಕಾರ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಿಸುತ್ತಿದ್ದಂತೆ, ಕರ್ನಾಟಕ ಸಹ ಇದೇ ನೀತಿಯನ್ನು ಅನುಸರಿಸಿದೆ. ಆದರೆ, ಸರ್ಕಾರದ ಈ ನಿರ್ಧಾರ ಕಾರ್ಮಿಕರ ಸಂಘಟನೆಯವರ ಆಕ್ರೋಶಕ್ಕೆ ಕಾರಣವಾಗಿದೆ.

ಫ್ಯಾಕ್ಟರಿ ಆ್ಯಕ್ಟ್ 1948 ಅಡಿಯಲ್ಲಿ ಆದೇಶ ಹೊರಡಿಸಲಾಗಿದ್ದು, ಸಮಯ ಬದಲಾವಣೆಯನ್ನ ಇಂದಿನಿಂದ ಆಗಸ್ಟ್ ವರೆಗೂ ಮುಂದುವರಿಸುವಂತೆಯೂ ಆದೇಶದಲ್ಲಿ ಸೂಚಿಸಲಾಗಿದೆ. ಇದಲ್ಲದೆ, ಕೆಲ‌ ಷರತ್ತುಗಳನ್ನೂ ವಿಧಿಸಿರುವ ರಾಜ್ಯ ಸರ್ಕಾರ 10 ಗಂಟೆ ಕೆಲಸ ಮಾಡುವವರಿಗೆ ಆಯಾ ಕಂಪನಿಗಳು ಹೆಚ್ಚುವರಿ ಸಂಬಳವನ್ನೂ ನೀಡಬೇಕು ಎಂದು ಆದೇಶಿಸಲಾಗಿದೆ.

“ಕಾರ್ಮಿಕ ಮಂತ್ರಿಗಳು ತ್ರೀ ಪಕ್ಷೀಯ ಸಭೆಗಳನ್ನು ನಡೆಸುತ್ತಾ ಇದ್ದರು ಆ ಸಭೆಗಳಲ್ಲಿ ಮಾಲೀಕರ ಸಂಘಟನೆ ಗಳ ಬೇಡಿಕೆಯಿಲ್ಲದಿದ್ದರೂಕೆಲಸದ ಅವಧಿಯನ್ನು ಹೆಚ್ಚಳ ಮಾಡುವ ಪ್ರಸ್ತಾಪಗಳು ಬಂದವು
ಕೇಂದ್ರ ಕಾರ್ಮಿಕ ಸಂಘಟನೆಗಳು ಕೂಡಲೇ may1,may 18ರಂದು ಪ್ರತಿಭಟನೆ ಗಳನ್ನು ಮಾಡಲಾಗಿತ್ತು,ಮುಖ್ಯ ಮಂತ್ರಿ ಗಳಿಗೆ,ಕಾರ್ಮಿಕ ಮಂತ್ರಿ ಗಳಿಗೆ ,ಪ್ರತಿಪಕ್ಷ ಗಳಿಗೆ ಮನವಿ ಕೊಡಲಾಗಿದೆ ಆದರೆ ಸರ್ವಾದಿಕಾರಕ್ಕೆ ಹೆಸರಾಗಿರುವ ಬಿಜೆಪಿ ಸರ್ಕಾರ ಇಂದು ನಮ್ಮ ನಂಬಿಕೆಗೆ ದ್ರೋಹ ಬಗೆದು ಕಾರ್ಮಿಕರ ರಕ್ತವನ್ನು ಹೀರಲು ಕೆಲಸದ ಅವಧಿಯನ್ನು 8ರಿಂದ 10ಗಂಟೆಗೆ ಹೆಚ್ಚಿಸಿ ಇಂದು ಆದೇಶ ಮಾಡಲಾಗಿದೆ” ಎಂದು ಸಿಐಟಿಯು ಸಂಘಟನೆಯ ಮುಖಂಡೆ ಕೆ.ಎಸ್ ವರಲಕ್ಷ್ಮಿ

ಲಾಕ್‌ಡೌನ್‌ನಿಂದ ಉಂಟಾಗಿರುವ ಉತ್ಪಾದನೆ ಮತ್ತು ಕಾರ್ಮಿಕರ ಕೊರೆತೆಯನ್ನು ನೀಗಿಸುವ ಸಲುವಾಗಿ ಕಾರ್ಮಿಕರನ್ನು ಕಾರ್ಖಾನೆಗಳಲ್ಲಿ 8 ಗಂಟೆ ಬದಲಿಗೆ 12 ಗಂಟೆ ದುಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿದೆ. ಆದರೆ, ಲಾಕ್‌ಡೌನ್‌ಗೂ ಮುಂಚೆಯೇ ದೇಶದ ಆರ್ಥಿಕತೆ ಅಧೋಗತಿಗೆ ತಲುಪಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...