Homeಕರ್ನಾಟಕಕಾರ್ಮಿಕರ ದುಡಿಯುವ ಅವಧಿಯನ್ನು 10 ಗಂಟೆಗೆ ಏರಿಸಿದ ರಾಜ್ಯ ಸರ್ಕಾರ: ಕಾರ್ಮಿಕರ ಸಂಘಟನೆಗಳ ವಿರೋಧ

ಕಾರ್ಮಿಕರ ದುಡಿಯುವ ಅವಧಿಯನ್ನು 10 ಗಂಟೆಗೆ ಏರಿಸಿದ ರಾಜ್ಯ ಸರ್ಕಾರ: ಕಾರ್ಮಿಕರ ಸಂಘಟನೆಗಳ ವಿರೋಧ

- Advertisement -
- Advertisement -

ಸರ್ಕಾರಗಳು ಹೇಳಿಕೊಳ್ಳಿಕೊಳ್ಳುತ್ತಿರುವಂತೆ ಲಾಕ್‌ಡೌನ್‌ನಿಂದಾಗಿ ಹಳ್ಳಿಹಿಡಿದಿರುವ ಆರ್ಥಿಕತೆಯನ್ನು ಮೇಲೆತ್ತುವುದಕ್ಕಾಗಿ ಕಾರ್ಮಿಕರನ್ನು ಬಲಿಪಶುಗಳನ್ನಾಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಕಾರ್ಮಿಕರು ಕೆಲಸದ ಅವಧಿಯನ್ನು 8 ಗಂಟೆಯಿಂದ 10 ಗಂಟೆಗೆ ಏರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕಳೆದ ಎರಡು ತಿಂಗಳಿನಿಂದ ರಾಷ್ಟ್ರದಾದ್ಯಂತ ಲಾಕ್‌ಡೌನ್ ಜಾರಿಯಲ್ಲಿದೆ. ಹೀಗಾಗಿ ಕಾರ್ಖಾನೆಗಳನ್ನು ಮುಚ್ಚಲ್ಪಟ್ಟಿದ್ದು ಉತ್ಪಾದನಾ ವಲಯ ಬಹುತೇಕ ಸ್ಥಗಿತವಾಗಿದೆ. ಹೀಗಾಗಿ ಲಾಕ್‌ಡೌನ್ ಅವಧಿ ಮುಗಿದ ನಂತರ ಕಾರ್ಮಿಕರನ್ನು 8 ಗಂಟೆ ಬದಲಿಗೆ 12 ಗಂಟೆ ದುಡಿಸಿಕೊಳ್ಳಬೇಕು ಎಂಬ ಮಾತುಗಳು ಕೇಳಿ ಬಂದಿದ್ದವು.

ಅದರಂತೆ ಮಹಾರಾಷ್ಟ್ರ ಸರ್ಕಾರ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಿಸುತ್ತಿದ್ದಂತೆ, ಕರ್ನಾಟಕ ಸಹ ಇದೇ ನೀತಿಯನ್ನು ಅನುಸರಿಸಿದೆ. ಆದರೆ, ಸರ್ಕಾರದ ಈ ನಿರ್ಧಾರ ಕಾರ್ಮಿಕರ ಸಂಘಟನೆಯವರ ಆಕ್ರೋಶಕ್ಕೆ ಕಾರಣವಾಗಿದೆ.

ಫ್ಯಾಕ್ಟರಿ ಆ್ಯಕ್ಟ್ 1948 ಅಡಿಯಲ್ಲಿ ಆದೇಶ ಹೊರಡಿಸಲಾಗಿದ್ದು, ಸಮಯ ಬದಲಾವಣೆಯನ್ನ ಇಂದಿನಿಂದ ಆಗಸ್ಟ್ ವರೆಗೂ ಮುಂದುವರಿಸುವಂತೆಯೂ ಆದೇಶದಲ್ಲಿ ಸೂಚಿಸಲಾಗಿದೆ. ಇದಲ್ಲದೆ, ಕೆಲ‌ ಷರತ್ತುಗಳನ್ನೂ ವಿಧಿಸಿರುವ ರಾಜ್ಯ ಸರ್ಕಾರ 10 ಗಂಟೆ ಕೆಲಸ ಮಾಡುವವರಿಗೆ ಆಯಾ ಕಂಪನಿಗಳು ಹೆಚ್ಚುವರಿ ಸಂಬಳವನ್ನೂ ನೀಡಬೇಕು ಎಂದು ಆದೇಶಿಸಲಾಗಿದೆ.

“ಕಾರ್ಮಿಕ ಮಂತ್ರಿಗಳು ತ್ರೀ ಪಕ್ಷೀಯ ಸಭೆಗಳನ್ನು ನಡೆಸುತ್ತಾ ಇದ್ದರು ಆ ಸಭೆಗಳಲ್ಲಿ ಮಾಲೀಕರ ಸಂಘಟನೆ ಗಳ ಬೇಡಿಕೆಯಿಲ್ಲದಿದ್ದರೂಕೆಲಸದ ಅವಧಿಯನ್ನು ಹೆಚ್ಚಳ ಮಾಡುವ ಪ್ರಸ್ತಾಪಗಳು ಬಂದವು
ಕೇಂದ್ರ ಕಾರ್ಮಿಕ ಸಂಘಟನೆಗಳು ಕೂಡಲೇ may1,may 18ರಂದು ಪ್ರತಿಭಟನೆ ಗಳನ್ನು ಮಾಡಲಾಗಿತ್ತು,ಮುಖ್ಯ ಮಂತ್ರಿ ಗಳಿಗೆ,ಕಾರ್ಮಿಕ ಮಂತ್ರಿ ಗಳಿಗೆ ,ಪ್ರತಿಪಕ್ಷ ಗಳಿಗೆ ಮನವಿ ಕೊಡಲಾಗಿದೆ ಆದರೆ ಸರ್ವಾದಿಕಾರಕ್ಕೆ ಹೆಸರಾಗಿರುವ ಬಿಜೆಪಿ ಸರ್ಕಾರ ಇಂದು ನಮ್ಮ ನಂಬಿಕೆಗೆ ದ್ರೋಹ ಬಗೆದು ಕಾರ್ಮಿಕರ ರಕ್ತವನ್ನು ಹೀರಲು ಕೆಲಸದ ಅವಧಿಯನ್ನು 8ರಿಂದ 10ಗಂಟೆಗೆ ಹೆಚ್ಚಿಸಿ ಇಂದು ಆದೇಶ ಮಾಡಲಾಗಿದೆ” ಎಂದು ಸಿಐಟಿಯು ಸಂಘಟನೆಯ ಮುಖಂಡೆ ಕೆ.ಎಸ್ ವರಲಕ್ಷ್ಮಿ

ಲಾಕ್‌ಡೌನ್‌ನಿಂದ ಉಂಟಾಗಿರುವ ಉತ್ಪಾದನೆ ಮತ್ತು ಕಾರ್ಮಿಕರ ಕೊರೆತೆಯನ್ನು ನೀಗಿಸುವ ಸಲುವಾಗಿ ಕಾರ್ಮಿಕರನ್ನು ಕಾರ್ಖಾನೆಗಳಲ್ಲಿ 8 ಗಂಟೆ ಬದಲಿಗೆ 12 ಗಂಟೆ ದುಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿದೆ. ಆದರೆ, ಲಾಕ್‌ಡೌನ್‌ಗೂ ಮುಂಚೆಯೇ ದೇಶದ ಆರ್ಥಿಕತೆ ಅಧೋಗತಿಗೆ ತಲುಪಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...