Homeಕರ್ನಾಟಕಜನಾರ್ದನ ರೆಡ್ಡಿ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿ: ವಿ.ಎಸ್.ಉಗ್ರಪ್ಪ

ಜನಾರ್ದನ ರೆಡ್ಡಿ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿ: ವಿ.ಎಸ್.ಉಗ್ರಪ್ಪ

- Advertisement -
- Advertisement -

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ನ್ಯಾಯಾಲಯ ದೋಷಿಗಳು ಎಂದು ಘೋಷಿಸಿರುವ ಶಾಸಕ ಜನಾರ್ದನ ರೆಡ್ಡಿ ಮತ್ತು ಇತರರ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಆಗ್ರಹಿಸಿದರು.

ಬುಧವಾರ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಅರಿಯರ್ಸ್ ಆಫ್ ಲ್ಯಾಂಡ್ ರೆವಿನ್ಯೂ ಎಂದು ಜನಾರ್ದನ ರೆಡ್ಡಿ ಅವರ ಅಕ್ರಮ ಗಣಿಗಾರಿಕೆ ಲೂಟಿಯನ್ನು ಪರಿಗಣಿಸಿ, ಇದರ ಹಿಂದೆ ಇರುವ ಎಲ್ಲರ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಇದರಿಂದ ಲಾಭ ಪಡೆದ ಅಂದಿನ ರಾಜ್ಯ ಸರ್ಕಾರ ಮುನ್ನಡೆಸುತ್ತಿದ್ದವರು, ಅಧಿಕಾರಿಗಳ ವಿರುದ್ದವೂ ಕ್ರಮ ತೆಗೆದುಕೊಳ್ಳಬೇಕು” ಎಂದರು.

“ನ್ಯಾಯಾಲದ ತೀರ್ಪಿನಿಂದ ಯಾರೆಲ್ಲ ಭ್ರಷ್ಟ, ದುರಂಹಕಾರಿ ರಾಜಕಾರಣಿಗಳು ಇದ್ದಾರೆ, ಅವರು ಒಂದಲ್ಲ ಒಂದು ದಿನ ಕಾನೂನಿನ ಚೌಕಟ್ಟಿನಲ್ಲಿ ಶಿಕ್ಷೆಗೆ ಗುರಿಯಾಗುತ್ತಾರೆ ಎಂಬ ಸಂದೇಶ ಇಡೀ ದೇಶಕ್ಕೆ ಹೋಗಿದೆ” ಎಂದು ಹೇಳಿದರು.

29 ಲಕ್ಷ ಮೆಟ್ರಿಕ್ ಟನ್ ಅದಿರನ್ನು ಜನಾರ್ದನ ರೆಡ್ಡಿ ಮತ್ತು ತಂಡ ಅಕ್ರಮವಾಗಿ ವಿದೇಶಕ್ಕೆ ರಫ್ತು ಮಾಡಿತ್ತು. ಇದರ ಮೌಲ್ಯ 884 ಕೋಟಿ ರೂಪಾಯಿ ಎಂದು ನ್ಯಾಯಾಧೀಶರೇ ಹೇಳಿದ್ದಾರೆ. ಈಗ ಅವರಿಗೆ ಶಿಕ್ಷೆಯಾಗಿದೆ. ಇವರ ಜೊತೆಯಿದ್ದ ಬಿಜೆಪಿ ನಾಯಕರು, ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಬೇಕು ಎಂದು ಉಗ್ರಪ್ಪ ಒತ್ತಾಯಿಸಿದರು.

2000 ದಿಂದ 2006ರ ನಡುವೆ ಅಕ್ರಮ ಗಣಿಗಾರಿಕೆ ನಡೆದಾಗ ರಾಜ್ಯದಲ್ಲಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿತ್ತು. ಅಂದು ಅರಣ್ಯ ಸಚಿವರಾಗಿದ್ದ ಚೆನ್ನಿಗಪ್ಪ ಅವರು ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಆ ಪತ್ರವನ್ನು ಇಟ್ಟುಕೊಂಡು ನಾನು ಸದನದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ದ ಸಿಬಿಐ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದೆ ಎಂದು ನೆನೆದರು.

ಆನಂತರ, ಅಂದಿನ ಸರ್ಕಾರ ಜಸ್ಟೀಸ್ ಯು.ಎಲ್.ಭಟ್ ನೇತೃತ್ವದ ತನಿಖಾ ಆಯೋಗ ನೇಮಕ ಮಾಡಿತು. ಈ ಆಯೋಗವು ಸಿಬಿಐ ತನಿಖೆಗೆ ನೀಡಬೇಕು ಎಂದು ಶಿಫಾರಸ್ಸು ಮಾಡಿತು. ನಾವು ತನಿಖೆಗೆ ಒತ್ತಾಯ ಮಾಡಿದಾಗ ಲೋಕಾಯುಕ್ತ ತನಿಖೆಗೆ ನೀಡಲಾಯಿತು. ಈ ಹೋರಾಟದ ಹಿಂದೆ ಇರುವುದು ಕಾಂಗ್ರೆಸ್ ಪಕ್ಷ, ಕೆ.ಸಿ.ಕೊಂಡಯ್ಯ, ನಾನು ಈ ಹೋರಾಟದ ಹಿಂದೆ ಇದ್ದೆವು. ಆಂದ್ರ ಪ್ರದೇಶದ ಮಲ್ಪನಗುಡಿ, ಕರ್ನಾಟಕದ ತುಮಟಿ, ವಿಠಲಾಪುರ ಮಧ್ಯದ ಸುಮಾರು 32 ಕಿಮೀ ಭೂಭಾಗದಲ್ಲಿರುವ ಉತೃಷ್ಟವಾದ 29 ಲಕ್ಷ ಮೆಟ್ರಿಕ್ ಟನ್ ಅದಿರನ್ನು ಜನಾರ್ದನ ರೆಡ್ಡಿ ಮತ್ತು ತಂಡ ಅಕ್ರಮವಾಗಿ ವಿದೇಶಕ್ಕೆ ರಫ್ತು ಮಾಡಿತ್ತು ಎಂದು ಉಲ್ಲೇಖಿಸಿದರು.

ಅಕ್ರಮ ಗಣಿಗಾರಿಕೆ ಬಗ್ಗೆ ಅತ್ಯಂತ ನಿಖರವಾದ ವರದಿಯನ್ನು ಮಾಡಿದ್ದು ಕಾಂಗ್ರೆಸ್ ಪಕ್ಷ. ನನ್ನ ನೇತೃತ್ವದ ಸತ್ಯಶೋದನಾ ಸಮಿತಿ 2008ರಲ್ಲಿ ಇದನ್ನು ಬಿಡುಗಡೆಗೊಳಿಸಿತ್ತು. ಲೋಕಾಯುಕ್ತದವರು ನನ್ನ ವರದಿಯನ್ನು ಇಟ್ಟುಕೊಂಡು ಪ್ರಾಥಮಿಕ ವರದಿ ನೀಡಿದರು. ಕಾಂಗ್ರೆಸ್ ಪಕ್ಷ ರಿಪಬ್ಲಿಕ್ ಬಳ್ಳಾರಿಯ ವಿರುದ್ದ ಪಾದಯಾತ್ರೆ ನಡೆಸಿ ದೊಡ್ಡ ಹೋರಾಟ ಮಾಡಿತ್ತು. ಯಡಿಯೂರಪ್ಪ ಅವರು ಅಕ್ರಮ ಗಣಿಗಾರಿಕೆ ವಿಚಾರವಾಗಿ ಮಾತನಾಡುವಾಗ ಅಕ್ರಮ ನಡೆದಿಲ್ಲ ಎಂದು ಹೇಳುತ್ತಿದ್ದರು ಎಂದರು.

ಈ ಅಕ್ರಮ ಗಣಿಗಾರಿಕೆ ಹಿಂದೆ ಇದ್ದಿದ್ದೆ ಅಂದಿನ ರಾಜ್ಯ ಸರ್ಕಾರ. ಅಂದು ಶ್ರೀರಾಮುಲು ಅವರು ಅರಣ್ಯ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದ ಬಗ್ಗೆ ದೂರು ದಾಖಲಾಗಿತ್ತು. ಅಂದು ಅಧಿಕಾರದಲ್ಲಿ ಇದ್ದುಕೊಂಡೆ ಅನ್ಯಾಯ ಎಸಗಿದವರಿಗೆ ಇಂದು ತಕ್ಕ ಶಿಕ್ಷೆಯಾಗಿದೆ. ನಾನು ತಯಾರು ಮಾಡಿದ ಸತ್ಯಶೋಧನಾ ವರದಿಯಲ್ಲಿ ಜರ್ನಾರ್ದನ ರೆಡ್ಡಿ ಮತ್ತು ತಂಡದ ಸಂಪೂರ್ಣ ಅಕ್ರಮ, ಅನ್ಯಾಯಗಳನ್ನು ಎಳೆ, ಎಳೆಯಾಗಿ ಬಿಚ್ಚಿಟ್ಟಿದ್ದೇನೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಪ್ರಕಾಶ್ ರಾಥೋಡ್ ಸೇರಿದಂತೆ ಪ್ರಮುಖರು ಇದ್ದರು.

ಕೊಪ್ಪಳ| ಹೇರ್‌ಕಟ್ ಮಾಡುವಂತೆ ದಲಿತರು ಕೇಳಿದ್ದಕ್ಕೆ ಅಂಗಡಿ ಮುಚ್ಚಿದ ಕ್ಷೌರಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...