Homeಕರ್ನಾಟಕಜನಾರ್ದನ ರೆಡ್ಡಿ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿ: ವಿ.ಎಸ್.ಉಗ್ರಪ್ಪ

ಜನಾರ್ದನ ರೆಡ್ಡಿ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿ: ವಿ.ಎಸ್.ಉಗ್ರಪ್ಪ

- Advertisement -
- Advertisement -

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ನ್ಯಾಯಾಲಯ ದೋಷಿಗಳು ಎಂದು ಘೋಷಿಸಿರುವ ಶಾಸಕ ಜನಾರ್ದನ ರೆಡ್ಡಿ ಮತ್ತು ಇತರರ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಆಗ್ರಹಿಸಿದರು.

ಬುಧವಾರ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಅರಿಯರ್ಸ್ ಆಫ್ ಲ್ಯಾಂಡ್ ರೆವಿನ್ಯೂ ಎಂದು ಜನಾರ್ದನ ರೆಡ್ಡಿ ಅವರ ಅಕ್ರಮ ಗಣಿಗಾರಿಕೆ ಲೂಟಿಯನ್ನು ಪರಿಗಣಿಸಿ, ಇದರ ಹಿಂದೆ ಇರುವ ಎಲ್ಲರ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಇದರಿಂದ ಲಾಭ ಪಡೆದ ಅಂದಿನ ರಾಜ್ಯ ಸರ್ಕಾರ ಮುನ್ನಡೆಸುತ್ತಿದ್ದವರು, ಅಧಿಕಾರಿಗಳ ವಿರುದ್ದವೂ ಕ್ರಮ ತೆಗೆದುಕೊಳ್ಳಬೇಕು” ಎಂದರು.

“ನ್ಯಾಯಾಲದ ತೀರ್ಪಿನಿಂದ ಯಾರೆಲ್ಲ ಭ್ರಷ್ಟ, ದುರಂಹಕಾರಿ ರಾಜಕಾರಣಿಗಳು ಇದ್ದಾರೆ, ಅವರು ಒಂದಲ್ಲ ಒಂದು ದಿನ ಕಾನೂನಿನ ಚೌಕಟ್ಟಿನಲ್ಲಿ ಶಿಕ್ಷೆಗೆ ಗುರಿಯಾಗುತ್ತಾರೆ ಎಂಬ ಸಂದೇಶ ಇಡೀ ದೇಶಕ್ಕೆ ಹೋಗಿದೆ” ಎಂದು ಹೇಳಿದರು.

29 ಲಕ್ಷ ಮೆಟ್ರಿಕ್ ಟನ್ ಅದಿರನ್ನು ಜನಾರ್ದನ ರೆಡ್ಡಿ ಮತ್ತು ತಂಡ ಅಕ್ರಮವಾಗಿ ವಿದೇಶಕ್ಕೆ ರಫ್ತು ಮಾಡಿತ್ತು. ಇದರ ಮೌಲ್ಯ 884 ಕೋಟಿ ರೂಪಾಯಿ ಎಂದು ನ್ಯಾಯಾಧೀಶರೇ ಹೇಳಿದ್ದಾರೆ. ಈಗ ಅವರಿಗೆ ಶಿಕ್ಷೆಯಾಗಿದೆ. ಇವರ ಜೊತೆಯಿದ್ದ ಬಿಜೆಪಿ ನಾಯಕರು, ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಬೇಕು ಎಂದು ಉಗ್ರಪ್ಪ ಒತ್ತಾಯಿಸಿದರು.

2000 ದಿಂದ 2006ರ ನಡುವೆ ಅಕ್ರಮ ಗಣಿಗಾರಿಕೆ ನಡೆದಾಗ ರಾಜ್ಯದಲ್ಲಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿತ್ತು. ಅಂದು ಅರಣ್ಯ ಸಚಿವರಾಗಿದ್ದ ಚೆನ್ನಿಗಪ್ಪ ಅವರು ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಆ ಪತ್ರವನ್ನು ಇಟ್ಟುಕೊಂಡು ನಾನು ಸದನದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ದ ಸಿಬಿಐ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದೆ ಎಂದು ನೆನೆದರು.

ಆನಂತರ, ಅಂದಿನ ಸರ್ಕಾರ ಜಸ್ಟೀಸ್ ಯು.ಎಲ್.ಭಟ್ ನೇತೃತ್ವದ ತನಿಖಾ ಆಯೋಗ ನೇಮಕ ಮಾಡಿತು. ಈ ಆಯೋಗವು ಸಿಬಿಐ ತನಿಖೆಗೆ ನೀಡಬೇಕು ಎಂದು ಶಿಫಾರಸ್ಸು ಮಾಡಿತು. ನಾವು ತನಿಖೆಗೆ ಒತ್ತಾಯ ಮಾಡಿದಾಗ ಲೋಕಾಯುಕ್ತ ತನಿಖೆಗೆ ನೀಡಲಾಯಿತು. ಈ ಹೋರಾಟದ ಹಿಂದೆ ಇರುವುದು ಕಾಂಗ್ರೆಸ್ ಪಕ್ಷ, ಕೆ.ಸಿ.ಕೊಂಡಯ್ಯ, ನಾನು ಈ ಹೋರಾಟದ ಹಿಂದೆ ಇದ್ದೆವು. ಆಂದ್ರ ಪ್ರದೇಶದ ಮಲ್ಪನಗುಡಿ, ಕರ್ನಾಟಕದ ತುಮಟಿ, ವಿಠಲಾಪುರ ಮಧ್ಯದ ಸುಮಾರು 32 ಕಿಮೀ ಭೂಭಾಗದಲ್ಲಿರುವ ಉತೃಷ್ಟವಾದ 29 ಲಕ್ಷ ಮೆಟ್ರಿಕ್ ಟನ್ ಅದಿರನ್ನು ಜನಾರ್ದನ ರೆಡ್ಡಿ ಮತ್ತು ತಂಡ ಅಕ್ರಮವಾಗಿ ವಿದೇಶಕ್ಕೆ ರಫ್ತು ಮಾಡಿತ್ತು ಎಂದು ಉಲ್ಲೇಖಿಸಿದರು.

ಅಕ್ರಮ ಗಣಿಗಾರಿಕೆ ಬಗ್ಗೆ ಅತ್ಯಂತ ನಿಖರವಾದ ವರದಿಯನ್ನು ಮಾಡಿದ್ದು ಕಾಂಗ್ರೆಸ್ ಪಕ್ಷ. ನನ್ನ ನೇತೃತ್ವದ ಸತ್ಯಶೋದನಾ ಸಮಿತಿ 2008ರಲ್ಲಿ ಇದನ್ನು ಬಿಡುಗಡೆಗೊಳಿಸಿತ್ತು. ಲೋಕಾಯುಕ್ತದವರು ನನ್ನ ವರದಿಯನ್ನು ಇಟ್ಟುಕೊಂಡು ಪ್ರಾಥಮಿಕ ವರದಿ ನೀಡಿದರು. ಕಾಂಗ್ರೆಸ್ ಪಕ್ಷ ರಿಪಬ್ಲಿಕ್ ಬಳ್ಳಾರಿಯ ವಿರುದ್ದ ಪಾದಯಾತ್ರೆ ನಡೆಸಿ ದೊಡ್ಡ ಹೋರಾಟ ಮಾಡಿತ್ತು. ಯಡಿಯೂರಪ್ಪ ಅವರು ಅಕ್ರಮ ಗಣಿಗಾರಿಕೆ ವಿಚಾರವಾಗಿ ಮಾತನಾಡುವಾಗ ಅಕ್ರಮ ನಡೆದಿಲ್ಲ ಎಂದು ಹೇಳುತ್ತಿದ್ದರು ಎಂದರು.

ಈ ಅಕ್ರಮ ಗಣಿಗಾರಿಕೆ ಹಿಂದೆ ಇದ್ದಿದ್ದೆ ಅಂದಿನ ರಾಜ್ಯ ಸರ್ಕಾರ. ಅಂದು ಶ್ರೀರಾಮುಲು ಅವರು ಅರಣ್ಯ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದ ಬಗ್ಗೆ ದೂರು ದಾಖಲಾಗಿತ್ತು. ಅಂದು ಅಧಿಕಾರದಲ್ಲಿ ಇದ್ದುಕೊಂಡೆ ಅನ್ಯಾಯ ಎಸಗಿದವರಿಗೆ ಇಂದು ತಕ್ಕ ಶಿಕ್ಷೆಯಾಗಿದೆ. ನಾನು ತಯಾರು ಮಾಡಿದ ಸತ್ಯಶೋಧನಾ ವರದಿಯಲ್ಲಿ ಜರ್ನಾರ್ದನ ರೆಡ್ಡಿ ಮತ್ತು ತಂಡದ ಸಂಪೂರ್ಣ ಅಕ್ರಮ, ಅನ್ಯಾಯಗಳನ್ನು ಎಳೆ, ಎಳೆಯಾಗಿ ಬಿಚ್ಚಿಟ್ಟಿದ್ದೇನೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಪ್ರಕಾಶ್ ರಾಥೋಡ್ ಸೇರಿದಂತೆ ಪ್ರಮುಖರು ಇದ್ದರು.

ಕೊಪ್ಪಳ| ಹೇರ್‌ಕಟ್ ಮಾಡುವಂತೆ ದಲಿತರು ಕೇಳಿದ್ದಕ್ಕೆ ಅಂಗಡಿ ಮುಚ್ಚಿದ ಕ್ಷೌರಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...