Homeಮುಖಪುಟರಾಜ್ಯ ಸರ್ಕಾರವೂ ಕೃಷಿ ಕಾಯ್ದೆಗಳನ್ನು ಹಿಂಪಡೆಯಲಿ: ಬೆಂಗಳೂರಿನಿಂದ ಮೈಸೂರಿಗೆ ಬೈಕ್ ಜಾಥ

ರಾಜ್ಯ ಸರ್ಕಾರವೂ ಕೃಷಿ ಕಾಯ್ದೆಗಳನ್ನು ಹಿಂಪಡೆಯಲಿ: ಬೆಂಗಳೂರಿನಿಂದ ಮೈಸೂರಿಗೆ ಬೈಕ್ ಜಾಥ

ನಾವು ಹಿಂದೆ ಕಾಲುಗಳಲ್ಲಿ ನಡೆದು ಹೋರಾಟ ಮಾಡುತ್ತಿದ್ದೆವು. ಈಗ ಬೇಗ ತಲುಪಬೇಕಿರುವ ಕಾರಣ ಕಾರು ಮತ್ತು ಬೈಕುಗಳಲ್ಲಿ ಜಾಥ ಮಾಡುತ್ತಿದ್ದೇವೆ. ಅನ್ನ ತಿನ್ನುವ ಪ್ರತಿಯೊಬ್ಬರು ರೈತ ಹೋರಾಟವನ್ನು ಬೆಂಬಲಿಸಬೇಕು - ಬಿ.ಟಿ ಲಲಿತಾ ನಾಯಕ್

- Advertisement -
- Advertisement -

ರಾಜ್ಯದಲ್ಲಿಯೂ ರೈತವಿರೋಧಿ ಕಾಯ್ದೆ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು ಮತ್ತು ದೇಶಾದ್ಯಂತ ಎಂಎಸ್‌ಪಿ ಕಾನೂನುಬದ್ಧಗೊಳಿಸುವಂತೆ ಒತ್ತಾಯಿಸಿ ಇಂದು ಕರ್ನಾಟಕ ಜನಶಕ್ತಿ ಸಂಘಟನೆಯು ಬೆಂಗಳೂರಿನಿಂದ ಮೈಸೂರುವರೆಗೆ ಬೈಕ್ ಮತ್ತು ಕಾರ್ ಜಾಥ ನಡೆಸಿತು.

ಕರಾಳ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯುವುದಾಗಿ ಪ್ರಧಾನಿ ಮೋದಿಯವರು ಮಾಡಿರುವ ಘೋಷಣೆ ದೇಶದ ರೈತರ ಚಾರಿತ್ರಿಕ ಹೋರಾಟಕ್ಕೆ ಸಂದ ಬಾರಿ ದೊಡ್ಡ ವಿಜಯವಾಗಿದೆ. ಆದರೆ ಪ್ರಧಾನಿ ಮೋದಿಯವರು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಕಾನೂನು ರಚನೆಯ ಬಗ್ಗೆ ಹಾಗು ವಿದ್ಯುತ್ ಕ್ಷೇತ್ರದ ಸಂಪೂರ್ಣ ಖಾಸಗಿಕರಣಕ್ಕೆ ಅವಕಾಶ ಮಾಡಿಕೊಡುವ ವಿದ್ಯುತ್ ಮಸೂದೆ-2020 ರ ವಾಪಸಾತಿಯ ಬಗ್ಗೆ ಮೌನ ವಹಿಸಿದ್ದಾರೆ. ಈ ಬೇಡಿಕೆಗಳನ್ನು ಸಹ ಈಡೇರಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮೋದಿಯವರು ಕೃಷಿ ಕಾಯ್ದೆಗಳ ವಾಪಸಾತಿಯ ಬಗ್ಗೆ ಮಾಡಿರುವ ಘೋಷಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆಗಳ ತಿದ್ದುಪಡಿಗಳನ್ನು ಕೂಡಲೇ ರದ್ದು ಮಾಡಬೇಕೆಂದು ಒತ್ತಾಯಿಸಲಾಯಿತು.

ಮಾಜಿ ಸಚಿವೆ, ಹೋರಾಟಗಾರ್ತಿ ಬಿ.ಟಿ ಲಲಿತಾ ನಾಯಕ್ ಮಾತನಾಡಿ, “ನಾವು ಹಿಂದೆ ಕಾಲುಗಳಲ್ಲಿ ನಡೆದು ಹೋರಾಟ ಮಾಡುತ್ತಿದ್ದೆವು. ಈಗ ಬೇಗ ತಲುಪಬೇಕಿರುವ ಕಾರಣ ಕಾರು ಮತ್ತು ಬೈಕುಗಳಲ್ಲಿ ಜಾಥ ಮಾಡುತ್ತಿದ್ದೇವೆ. ಅನ್ನ ತಿನ್ನುವ ಪ್ರತಿಯೊಬ್ಬರು ರೈತ ಹೋರಾಟವನ್ನು ಬೆಂಬಲಿಸಬೇಕು” ಎಂದರು.

ಕರ್ನಾಟಕ ಜನಶಕ್ತಿಯ ಗೌರವಾಧ್ಯಕ್ಷರಾದ ಗೌರಿಯವರು ಮಾತನಾಡಿ, “ಇಂದು ನವೆಂಬರ್ 26 ಸಂವಿಧಾನ ಜಾರಿಗೆ ಬಂದ ದಿನ ಯುವಜನರು ಹೋರಾಟದಲ್ಲಿ ಭಾಗವಹಿಸಿರುವುದು ಆಶಾದಾಯಕ ಬೆಳವಣಿಗೆ. ಇದೇ ಯುವಜನರು ಕರ್ನಾಟಕ ಹಳ್ಳಿ ಹಳ್ಳಿಗಳಿಗೆ ತೆರಳಿ ಕೃಷಿ ಕಾಯ್ದೆಗಳ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸಿದರು. ಅವರ ಹೋರಾಟಕ್ಕೆ ಜಯವಾಗಿದೆ. ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ. ಆದರೆ ಕರ್ನಾಟಕದ ಮೂರು ಕಾಯ್ದೆಗಳು ಮತ್ತು ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯನ್ನು ವಾಪಸ್ ಪಡೆಯುವವರೆಗೂ ಹೋರಾಟ ಮುಂದುವರೆಸುತ್ತೇವೆ” ಎಂದರು.

ಬೈಕ್ ಜಾಥವು ರಾಮನಗರ ತಲುಪಿ ಅಲ್ಲಿ ರಸ್ತೆ ತಡೆ ನಡೆಸುತ್ತಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರ ಜೊತೆಗೂಡಿತು. ರಾಮನಗರದಲ್ಲಿ ಹೋರಾಟಗಾರರಾದ ನೂರ್ ಶ್ರೀಧರ್ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾದ ಅನಸೂಯಮ್ಮ ಅರಳಾಳುಸಂದ್ರ ಮಾತನಾಡಿದರು.

ನಂತರ ಬೈಕ್ ಜಾಥ ಶ್ರೀರಂಗಪಟ್ಟಣ ತಲುಪಿ ಹೆದ್ದಾರಿ ಬಂದ್ ನಡೆಸುತ್ತಿದ್ದ ರೈತರ ಜೊತೆ ಸೇರಿತು. ಇಂದು ಬೆಳಿಗ್ಗೆಯಿಂದಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆದ್ದಾರಿ ಬಂದ್ ಆರಂಭವಾಗಿದೆ.

ಇದನ್ನೂ ಓದಿ; ಸರ್ವಾಧಿಕಾರದ ಅಹಂ ಮುರಿದ ಸಮರ ಸತ್ಯಾಗ್ರಹ: ನೂರ್ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...