Homeಕರ್ನಾಟಕಕೊರೊನಾ ಬಿಕ್ಕಟ್ಟು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಡಿ. ಕೆ. ಶಿವಕುಮಾರ್

ಕೊರೊನಾ ಬಿಕ್ಕಟ್ಟು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಡಿ. ಕೆ. ಶಿವಕುಮಾರ್

- Advertisement -
- Advertisement -

ಸರ್ಕಾರ ಕೊರೊನಾವನ್ನು ನಿಭಾಯಿಸಲು ಎಲ್ಲ ರೀತಿಯಲ್ಲೂ ವಿಫಲವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಬೆಂಗಳೂರಿನಲ್ಲಿ ಹೇಳಿದ್ದಾರೆ.

ಚೀನಾ ಗಡಿಯಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಗೌರವ ನಮನ ಸಲ್ಲಿಸಿದ ನಂತರ ಡಿ.ಕೆ ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿ ಮಾಡುವುದು, ಬಿಡುವುದು ಸರ್ಕಾರಕ್ಕೆ ಬಿಟ್ಟ ವಿಚಾರ. ಈ ವಿಚಾರವಾಗಿ ನಮ್ಮ ಶಾಸಕರು ಹಾಗೂ ವಿರೋಧ ಪಕ್ಷದ ನಾಯಕರು ಕೂತು ಚರ್ಚಿಸಿದ್ದು, ಈ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ. ಸರ್ಕಾರ ನೀಡುವ ಆದೇಶ ಪಾಲಿಸುತ್ತೇವೆ. ಈ ವಿಚಾರದಲ್ಲಿ ನಮಗೆ ಈವರೆಗೂ ಸರ್ಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ ಎಂದಿದ್ದಾರೆ.

“ಕೋವಿಡ್ ವಿಚಾರ ನಿಭಾಯಿಸಲು ಸರ್ಕಾರ ಎಲ್ಲ ರೀತಿಯಲ್ಲೂ ವಿಫಲವಾಗಿದ್ದು, ಜನರಿಗೆ ರಕ್ಷಣೆ ನೀಡಲು ಆಗುತ್ತಿಲ್ಲ. ಲಾಕ್ ಡೌನ್ ಸಂದರ್ಭದಲ್ಲಿ ಸಿಕ್ಕ ಎರಡು ಮೂರು ತಿಂಗಳ ಕಾಲಾವಕಾಶವನ್ನು ಬಳಸಿಕೊಳ್ಳಲು ಸರ್ಕಾರ ಎಡವಿದೆ. ಪರಿಣಾಮವಾಗಿ ಸೋಂಕು ಹೆಚ್ಚಾಗಿದ್ದು, ಈಗ ಶಾಸಕರನ್ನು ಕರೆದು ಸಭೆ ನಡೆಸಿದರೆ ಯಾವುದೇ ಪ್ರಯೋಜನವಿಲ್ಲ.” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿ.ಕೆ ಶಿವಕುಮಾರ್ ಯಾರು ಅಂತಾ ಕೇಳಿದವರು ಇಂದು ಶಾಸಕರ ಸಭೆ ಮಾಡಿದ್ದೇಕೆ?

ಕನಕಪುರ ಲಾಕ್ ಡೌನ್ ಕುರಿತು ಸ್ಪಷ್ಟನೆ ನೀಡಿದ ಅವರು, ಅದು ಎಲ್ಲರ ತೀರ್ಮಾನಗಳನ್ನು ಒಳಗೊಂಡಿತ್ತು ಎಂದು ಹೇಳಿದ್ದಾರೆ.

“ನಾನು ನನ್ನ ಕ್ಷೇತ್ರದ ಜನರ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಂಡರೆ ಡಿಸಿಎಂ ಡಿ.ಕೆ ಶಿವಕುಮಾರ್ ಯಾರು ಎಂದು ಕೇಳುತ್ತಾರೆ. ಡಿ.ಕೆ ಶಿವಕುಮಾರ್ ಯಾರು ಎಂದವರು ಈಗ ಯಾಕೆ ಶಾಸಕರ ಜತೆ ಚರ್ಚೆ ಮಾಡುತ್ತಿದ್ದಾರೆ? ಕನಕಪುರ ಲಾಕ್ ಡೌನ್ ಕುರಿತು ಸಂಸದರು, ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯ ಅಧಿಕಾರಿ, ಆಯುಕ್ತರನ್ನು ಒಳಗೊಂಡಂತೆ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ಮಾಡಿದ್ದೆ” ಎಂದು ಅವರು ಹೇಳಿದ್ದಾರೆ.

ಕೊರೋನಾ ವಿಚಾರವಾಗಿ ಚರ್ಚೆ ನಡೆಸಲು ವಿಶೇಷ ಅಧಿವೇಶನ ನಡೆಸಿ ಎಂದು ನಾವು ಕೇಳಿದ್ದೇವೆ. ಅಧಿವೇಶನದಲ್ಲಿ ಸರ್ಕಾರ ತನ್ನ ಕ್ರಮಗಳ ಕುರಿತು ಶ್ವೇತಪತ್ರ ಹೊರಡಿಸಲಿ ಎಂದು ಹೇಳಿದ್ದೇವೆ. ಈ ವಿಚಾರವಾಗಿ ನಮ್ಮ ಅಭಿಪ್ರಾಯವನ್ನು ಸರ್ಕಾರಕ್ಕೆ ತಿಳಿಸಬಹುದು. ಆದರೆ ಸರ್ಕಾರ ನಮ್ಮ ಮಾತುಗಳನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ, ಅಧಿವೇಶನ ಕರೆಯುತ್ತಿಲ್ಲ ಎಂದು ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ.


ಓದಿ: ಹಳೆ ಕಾಂಗ್ರೆಸ್ ಸಂಸ್ಕೃತಿ + ದುಡ್ಡು ಎಂಬ ಡಿಕೆಶಿ ಮಾದರಿ ವರ್ಕ್‌ಔಟ್ ಆಗುತ್ತಾ?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...