Homeಮುಖಪುಟದಾಸ್ತಾನಿದ್ದರೂ ಶಾಲಾ ಮಕ್ಕಳಿಗೆ ಸಾರವರ್ಧಿತ ಊಟ ನೀಡದ ರಾಜ್ಯ ಸರ್ಕಾರಗಳು: ಕೇಂದ್ರ ಶಿಕ್ಷಣ ಸಚಿವಾಲಯ ಅಸಮಾಧಾನ

ದಾಸ್ತಾನಿದ್ದರೂ ಶಾಲಾ ಮಕ್ಕಳಿಗೆ ಸಾರವರ್ಧಿತ ಊಟ ನೀಡದ ರಾಜ್ಯ ಸರ್ಕಾರಗಳು: ಕೇಂದ್ರ ಶಿಕ್ಷಣ ಸಚಿವಾಲಯ ಅಸಮಾಧಾನ

- Advertisement -
- Advertisement -

ಸಾಕಷ್ಟು ದಾಸ್ತಾನುಗಳಿದ್ದರೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಸಾರವರ್ಧಿತ (fortified) ಅಕ್ಕಿಯ ಬಳಕೆಯನ್ನು ಕಡಿಮೆ ಮಾಡಿರುವ ಬಗ್ಗೆ ಒಕ್ಕೂಟ ಸರ್ಕಾರವು ಅಸಮಾಧಾನ ವ್ಯಕ್ತಪಡಿಸಿದ್ದು, ಸಾರವರ್ಧಿತ ಅಕ್ಕಿಯ ಬಳಕೆಯನ್ನು ತ್ವರಿತವಾಗಿ ಹೆಚ್ಚಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.

ಒಕ್ಕೂಟ ಸರ್ಕಾರದ ಶಿಕ್ಷಣ ಸಚಿವಾಲಯವು ಅಕ್ಟೋಬರ್ 20 ರಂದು ಈ ವಿಷಯದ ಕುರಿತು ರಾಜ್ಯಗಳಿಗೆ ಪತ್ರ ಬರೆದಿದೆ. ಪತ್ರದಲ್ಲಿ, “ಪ್ರಧಾನ ಮಂತ್ರಿಗಳು ನಿಗದಿಪಡಿಸಿದ ಗುರಿಯನ್ನು ಗಮನದಲ್ಲಿಟ್ಟುಕೊಂಡು, ಸಾರವರ್ಧಿತ ಅಕ್ಕಿ ದಾಸ್ತಾನು ಬಳಕೆಯನ್ನು ತ್ವರಿತಗೊಳಿಸಬೇಕು” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಂಟಿ ಕಾರ್ಯದರ್ಶಿ ಆರ್‌ಸಿ ಮೀನಾ ಅವರು ರಾಜ್ಯ ಶಿಕ್ಷಣ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ‘Tika ಉತ್ಸವ’ ಆಯ್ತು, ಇನ್ನು ‘ತಿಥಿ ಭೋಜನ’!: ಬಿಸಿಯೂಟ ಹೆಸರು ಬದಲಾವಣೆ ಬಗ್ಗೆ ನೆಟ್ಟಿಗರು

ಮಧ್ಯಾಹ್ನದ ಊಟದ ಯೋಜನೆಯನ್ನು ಸೆಪ್ಟೆಂಬರ್‌ನಲ್ಲಿ ಪಿಎಂ ಪೋಷಣ್ ಎಂದು ಮರುನಾಮಕರಣ ಮಾಡಲಾಗಿದೆ. ಈ ವರ್ಷದ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು 2024 ರ ವೇಳೆಗೆ ಪಡಿತರ ಯೋಜನೆ ಮತ್ತು ಮಧ್ಯಾಹ್ನದ ಊಟ ಯೋಜನೆ ಮತ್ತು ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್) ಅಡಿಯಲ್ಲಿ ಸಾರೀಕೃತ ಅಕ್ಕಿಯನ್ನು ಮಾತ್ರವೇ ವಿತರಿಸಲಾಗುವುದು ಎಂದು ಘೋಷಿಸಿದ್ದರು.

“ಬಡ ಮಹಿಳೆಯರು ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ಅಗತ್ಯ ಪೋಷಕಾಂಶಗಳ ಕೊರತೆಯು ಕಂಡುಬರುತ್ತಿದೆ. ಇದು ಅವರ ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಗೆ ಪ್ರಮುಖ ಅಡೆತಡೆಗಳನ್ನು ಒಡ್ಡುತ್ತದೆ…” ಎಂದು ಪ್ರಧಾನಿ ಹೇಳಿದ್ದರು.

ಸರ್ಕಾರದ ದಾಖಲೆಗಳ ಪ್ರಕಾರ, ಪಿಎಂ ಪೋಷಣ್ ಮತ್ತು ಐಸಿಡಿಎಸ್ ಯೋಜನೆಗಳ ಅಡಿಯಲ್ಲಿ ಕ್ರಮವಾಗಿ 1.05 ಮತ್ತು 6.36 ಎಲ್ಎಂಟಿ (ಲಕ್ಷ ಮೆಟ್ರಿಕ್ ಟನ್) ಸಾರವರ್ಧಿತ ಅಕ್ಕಿಯನ್ನು ಹಂಚಿಕೆ ಮಾಡಲಾಗಿದೆ. ಆದರೆ ಇದುವರೆಗೆ ಕ್ರಮವಾಗಿ 0.57 ಎಲ್‌ಎಂಟಿ ಮತ್ತು 2.09 ಎಲ್‌ಎಂಟಿ ಮಾತ್ರ ರಾಜ್ಯಗಳಿಂದ ಬಳಲ್ಪಟ್ಟಿವೆ. PM ಪೋಷಣ್ ಅಡಿಯಲ್ಲಿ ಅಕ್ಟೋಬರ್-ಮಾರ್ಚ್ ಅವಧಿಯಲ್ಲಿ ಒಟ್ಟು 13.9 LMT ಅಕ್ಕಿಯ ಹಂಚಿಕೆಯಾಗಿದೆ.

‘‘ಸಾಕಷ್ಟು ಪ್ರಮಾಣದಲ್ಲಿ ಸಾರವರ್ಧಿತ ಅಕ್ಕಿ ಲಭ್ಯವಿದ್ದರೂ” ಶಿಕ್ಷಣ ಸಚಿವಾಲಯದ ನಿರ್ದೇಶನಗಳ ಕೊರತೆಯಿಂದಾಗಿ ರಾಜ್ಯಗಳು ತಮ್ಮ ಪಾಲನ್ನು ಬಳಸುತ್ತಿಲ್ಲ ಎಂದು FCI ಒಕ್ಕೂಟ ಸರ್ಕಾರಕ್ಕೆ ತಿಳಿಸಿದೆ.

ಇದನ್ನೂ ಓದಿ: ‘ಪಿಎಂ ಪೋಶನ್’: ಬಿಸಿಯೂಟ ಯೋಜನೆಯ ಹೆಸರು ಬದಲಿಸಿದ ಒಕ್ಕೂಟ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...