Homeಮುಖಪುಟದಾಸ್ತಾನಿದ್ದರೂ ಶಾಲಾ ಮಕ್ಕಳಿಗೆ ಸಾರವರ್ಧಿತ ಊಟ ನೀಡದ ರಾಜ್ಯ ಸರ್ಕಾರಗಳು: ಕೇಂದ್ರ ಶಿಕ್ಷಣ ಸಚಿವಾಲಯ ಅಸಮಾಧಾನ

ದಾಸ್ತಾನಿದ್ದರೂ ಶಾಲಾ ಮಕ್ಕಳಿಗೆ ಸಾರವರ್ಧಿತ ಊಟ ನೀಡದ ರಾಜ್ಯ ಸರ್ಕಾರಗಳು: ಕೇಂದ್ರ ಶಿಕ್ಷಣ ಸಚಿವಾಲಯ ಅಸಮಾಧಾನ

- Advertisement -
- Advertisement -

ಸಾಕಷ್ಟು ದಾಸ್ತಾನುಗಳಿದ್ದರೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಸಾರವರ್ಧಿತ (fortified) ಅಕ್ಕಿಯ ಬಳಕೆಯನ್ನು ಕಡಿಮೆ ಮಾಡಿರುವ ಬಗ್ಗೆ ಒಕ್ಕೂಟ ಸರ್ಕಾರವು ಅಸಮಾಧಾನ ವ್ಯಕ್ತಪಡಿಸಿದ್ದು, ಸಾರವರ್ಧಿತ ಅಕ್ಕಿಯ ಬಳಕೆಯನ್ನು ತ್ವರಿತವಾಗಿ ಹೆಚ್ಚಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.

ಒಕ್ಕೂಟ ಸರ್ಕಾರದ ಶಿಕ್ಷಣ ಸಚಿವಾಲಯವು ಅಕ್ಟೋಬರ್ 20 ರಂದು ಈ ವಿಷಯದ ಕುರಿತು ರಾಜ್ಯಗಳಿಗೆ ಪತ್ರ ಬರೆದಿದೆ. ಪತ್ರದಲ್ಲಿ, “ಪ್ರಧಾನ ಮಂತ್ರಿಗಳು ನಿಗದಿಪಡಿಸಿದ ಗುರಿಯನ್ನು ಗಮನದಲ್ಲಿಟ್ಟುಕೊಂಡು, ಸಾರವರ್ಧಿತ ಅಕ್ಕಿ ದಾಸ್ತಾನು ಬಳಕೆಯನ್ನು ತ್ವರಿತಗೊಳಿಸಬೇಕು” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಂಟಿ ಕಾರ್ಯದರ್ಶಿ ಆರ್‌ಸಿ ಮೀನಾ ಅವರು ರಾಜ್ಯ ಶಿಕ್ಷಣ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ‘Tika ಉತ್ಸವ’ ಆಯ್ತು, ಇನ್ನು ‘ತಿಥಿ ಭೋಜನ’!: ಬಿಸಿಯೂಟ ಹೆಸರು ಬದಲಾವಣೆ ಬಗ್ಗೆ ನೆಟ್ಟಿಗರು

ಮಧ್ಯಾಹ್ನದ ಊಟದ ಯೋಜನೆಯನ್ನು ಸೆಪ್ಟೆಂಬರ್‌ನಲ್ಲಿ ಪಿಎಂ ಪೋಷಣ್ ಎಂದು ಮರುನಾಮಕರಣ ಮಾಡಲಾಗಿದೆ. ಈ ವರ್ಷದ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು 2024 ರ ವೇಳೆಗೆ ಪಡಿತರ ಯೋಜನೆ ಮತ್ತು ಮಧ್ಯಾಹ್ನದ ಊಟ ಯೋಜನೆ ಮತ್ತು ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್) ಅಡಿಯಲ್ಲಿ ಸಾರೀಕೃತ ಅಕ್ಕಿಯನ್ನು ಮಾತ್ರವೇ ವಿತರಿಸಲಾಗುವುದು ಎಂದು ಘೋಷಿಸಿದ್ದರು.

“ಬಡ ಮಹಿಳೆಯರು ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ಅಗತ್ಯ ಪೋಷಕಾಂಶಗಳ ಕೊರತೆಯು ಕಂಡುಬರುತ್ತಿದೆ. ಇದು ಅವರ ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಗೆ ಪ್ರಮುಖ ಅಡೆತಡೆಗಳನ್ನು ಒಡ್ಡುತ್ತದೆ…” ಎಂದು ಪ್ರಧಾನಿ ಹೇಳಿದ್ದರು.

ಸರ್ಕಾರದ ದಾಖಲೆಗಳ ಪ್ರಕಾರ, ಪಿಎಂ ಪೋಷಣ್ ಮತ್ತು ಐಸಿಡಿಎಸ್ ಯೋಜನೆಗಳ ಅಡಿಯಲ್ಲಿ ಕ್ರಮವಾಗಿ 1.05 ಮತ್ತು 6.36 ಎಲ್ಎಂಟಿ (ಲಕ್ಷ ಮೆಟ್ರಿಕ್ ಟನ್) ಸಾರವರ್ಧಿತ ಅಕ್ಕಿಯನ್ನು ಹಂಚಿಕೆ ಮಾಡಲಾಗಿದೆ. ಆದರೆ ಇದುವರೆಗೆ ಕ್ರಮವಾಗಿ 0.57 ಎಲ್‌ಎಂಟಿ ಮತ್ತು 2.09 ಎಲ್‌ಎಂಟಿ ಮಾತ್ರ ರಾಜ್ಯಗಳಿಂದ ಬಳಲ್ಪಟ್ಟಿವೆ. PM ಪೋಷಣ್ ಅಡಿಯಲ್ಲಿ ಅಕ್ಟೋಬರ್-ಮಾರ್ಚ್ ಅವಧಿಯಲ್ಲಿ ಒಟ್ಟು 13.9 LMT ಅಕ್ಕಿಯ ಹಂಚಿಕೆಯಾಗಿದೆ.

‘‘ಸಾಕಷ್ಟು ಪ್ರಮಾಣದಲ್ಲಿ ಸಾರವರ್ಧಿತ ಅಕ್ಕಿ ಲಭ್ಯವಿದ್ದರೂ” ಶಿಕ್ಷಣ ಸಚಿವಾಲಯದ ನಿರ್ದೇಶನಗಳ ಕೊರತೆಯಿಂದಾಗಿ ರಾಜ್ಯಗಳು ತಮ್ಮ ಪಾಲನ್ನು ಬಳಸುತ್ತಿಲ್ಲ ಎಂದು FCI ಒಕ್ಕೂಟ ಸರ್ಕಾರಕ್ಕೆ ತಿಳಿಸಿದೆ.

ಇದನ್ನೂ ಓದಿ: ‘ಪಿಎಂ ಪೋಶನ್’: ಬಿಸಿಯೂಟ ಯೋಜನೆಯ ಹೆಸರು ಬದಲಿಸಿದ ಒಕ್ಕೂಟ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...