Homeಕರ್ನಾಟಕನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪ್ರಕಟ

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪ್ರಕಟ

- Advertisement -
- Advertisement -

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮುನ್ಸೂಚನೆ ನೀಡಿದೆ.

ರಾಜ್ಯದ 61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳು ಸೇರಿ ಒಟ್ಟು 301 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿಯನ್ನು ನಿಗದಿ ಮಾಡಿ ನಗಾರಭಿವೃದ್ದಿ ಇಲಾಖೆ ಆದೇಶ ಹೊರಡಿಸಿದೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ನಿಗದಿ ಮಾಡಿದ್ದ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿಯಲ್ಲಿನ ಲೋಪ, ಪುನರಾವರ್ತನೆ ಪ್ರಶ್ನಿಸಿ ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ರಾಜ್ಯ ಸರ್ಕಾರ ತಾನು ನಿಗದಿ ಮಾಡಿದ್ದ ಮೀಸಲಾತಿ ಪಟ್ಟಿಯನ್ನು 2022ರ ಸೆಪ್ಟೆಂಬರ್‌ನಲ್ಲಿ ಪ್ರಮಾಣ ಪತ್ರದ ಮೂಲಕ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿತ್ತು. ಪುನರಾವರ್ತನೆಗೆ ಅವಕಾಶ ಇಲ್ಲದಂತೆ ನಿಯಮನುಸಾರವೇ ಎಲ್ಲಾ ವರ್ಗಗಳಿಗೂ ನ್ಯಾಯ ಒದಗಿಸಲಾಗಿದೆ ಎಂದಿತ್ತು.

ಮೀಸಲಾತಿ ಸಂಬಂಧ ಇದ್ದ ಎಲ್ಲಾ ಪ್ರಕರಣಗಳನ್ನು ನ್ಯಾಯಾಲಯ ಇತ್ಯರ್ಥ ಮಾಡಿದ್ದು, ರಾಜ್ಯ ಸರ್ಕಾರ ನಿಗದಿ ಮಾಡಿದ್ದ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪಟ್ಟಿಯನ್ನು ಎತ್ತಿ ಹಿಡಿದಿತ್ತು. ನ್ಯಾಯಾಲಯದ ಅನುಮತಿ ದೊರೆತ ಬೆನ್ನಲ್ಲೇ ಸರ್ಕಾರ ಪಟ್ಟಿ ಪ್ರಕಟಿಸಿದೆ.

ಹೈಕೋರ್ಟ್‌ಗೆ ಮಾಹಿತಿ ನೀಡಿದ ಸರ್ಕಾರ :

ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಲು ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಸಯ್ಯದ್‌ ನಸ್ರುಲ್ಲಾ ಸೇರಿದಂತೆ ಚಿತ್ರದುರ್ಗ, ಬನ್ನೂರು ಮತ್ತು ಕುಶಾಲನಗರ ಸ್ಥಳೀಯ ಸಂಸ್ಥೆಗಳ ಇತರೆ ಚುನಾಯಿತಿ ಪ್ರತಿನಿಧಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ಅವರ ಏಕಸದಸ್ಯ ಪೀಠ ನಡೆಸಿತು.

ರಾಜ್ಯ ಸರ್ಕಾರದ ಪರ ಹಾಜರಾದ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಪ್ರತಿಮಾ ಹೊನ್ನಾಪುರ ಅವರು, ಮೀಸಲು ನಿಗದಿಪಡಿಸಿ ಹೊರಡಿಸಿರುವ ಗೆಜೆಟ್‌ ಅಧಿಸೂಚನೆಯನ್ನು ಪೀಠಕ್ಕೆ ಸಲ್ಲಿಸಿದರು.

ಅಲ್ಲದೆ, ರಾಜ್ಯದ 117 ಪಟ್ಟಣ ಪಂಚಾಯಿತಿ, 123 ಪುರಸಭೆ ಮತ್ತು 61 ನಗರಸಭೆಗಳ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಮೀಸಲು ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ : ಬಾಂಗ್ಲಾದೇಶ | ಮಾಜಿ ಪ್ರಧಾನಿ ಖಾಲಿದಾ ಝಿಯಾ ಬಿಡುಗಡೆಗೆ ಅಧ್ಯಕ್ಷರ ಆದೇಶ : ಇಂದು ಸೇನೆಯಿಂದ ಸರ್ಕಾರ ರಚನೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...