Homeಕರ್ನಾಟಕನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪ್ರಕಟ

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪ್ರಕಟ

- Advertisement -
- Advertisement -

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮುನ್ಸೂಚನೆ ನೀಡಿದೆ.

ರಾಜ್ಯದ 61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳು ಸೇರಿ ಒಟ್ಟು 301 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿಯನ್ನು ನಿಗದಿ ಮಾಡಿ ನಗಾರಭಿವೃದ್ದಿ ಇಲಾಖೆ ಆದೇಶ ಹೊರಡಿಸಿದೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ನಿಗದಿ ಮಾಡಿದ್ದ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿಯಲ್ಲಿನ ಲೋಪ, ಪುನರಾವರ್ತನೆ ಪ್ರಶ್ನಿಸಿ ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ರಾಜ್ಯ ಸರ್ಕಾರ ತಾನು ನಿಗದಿ ಮಾಡಿದ್ದ ಮೀಸಲಾತಿ ಪಟ್ಟಿಯನ್ನು 2022ರ ಸೆಪ್ಟೆಂಬರ್‌ನಲ್ಲಿ ಪ್ರಮಾಣ ಪತ್ರದ ಮೂಲಕ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿತ್ತು. ಪುನರಾವರ್ತನೆಗೆ ಅವಕಾಶ ಇಲ್ಲದಂತೆ ನಿಯಮನುಸಾರವೇ ಎಲ್ಲಾ ವರ್ಗಗಳಿಗೂ ನ್ಯಾಯ ಒದಗಿಸಲಾಗಿದೆ ಎಂದಿತ್ತು.

ಮೀಸಲಾತಿ ಸಂಬಂಧ ಇದ್ದ ಎಲ್ಲಾ ಪ್ರಕರಣಗಳನ್ನು ನ್ಯಾಯಾಲಯ ಇತ್ಯರ್ಥ ಮಾಡಿದ್ದು, ರಾಜ್ಯ ಸರ್ಕಾರ ನಿಗದಿ ಮಾಡಿದ್ದ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪಟ್ಟಿಯನ್ನು ಎತ್ತಿ ಹಿಡಿದಿತ್ತು. ನ್ಯಾಯಾಲಯದ ಅನುಮತಿ ದೊರೆತ ಬೆನ್ನಲ್ಲೇ ಸರ್ಕಾರ ಪಟ್ಟಿ ಪ್ರಕಟಿಸಿದೆ.

ಹೈಕೋರ್ಟ್‌ಗೆ ಮಾಹಿತಿ ನೀಡಿದ ಸರ್ಕಾರ :

ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಲು ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಸಯ್ಯದ್‌ ನಸ್ರುಲ್ಲಾ ಸೇರಿದಂತೆ ಚಿತ್ರದುರ್ಗ, ಬನ್ನೂರು ಮತ್ತು ಕುಶಾಲನಗರ ಸ್ಥಳೀಯ ಸಂಸ್ಥೆಗಳ ಇತರೆ ಚುನಾಯಿತಿ ಪ್ರತಿನಿಧಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ಅವರ ಏಕಸದಸ್ಯ ಪೀಠ ನಡೆಸಿತು.

ರಾಜ್ಯ ಸರ್ಕಾರದ ಪರ ಹಾಜರಾದ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಪ್ರತಿಮಾ ಹೊನ್ನಾಪುರ ಅವರು, ಮೀಸಲು ನಿಗದಿಪಡಿಸಿ ಹೊರಡಿಸಿರುವ ಗೆಜೆಟ್‌ ಅಧಿಸೂಚನೆಯನ್ನು ಪೀಠಕ್ಕೆ ಸಲ್ಲಿಸಿದರು.

ಅಲ್ಲದೆ, ರಾಜ್ಯದ 117 ಪಟ್ಟಣ ಪಂಚಾಯಿತಿ, 123 ಪುರಸಭೆ ಮತ್ತು 61 ನಗರಸಭೆಗಳ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಮೀಸಲು ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ : ಬಾಂಗ್ಲಾದೇಶ | ಮಾಜಿ ಪ್ರಧಾನಿ ಖಾಲಿದಾ ಝಿಯಾ ಬಿಡುಗಡೆಗೆ ಅಧ್ಯಕ್ಷರ ಆದೇಶ : ಇಂದು ಸೇನೆಯಿಂದ ಸರ್ಕಾರ ರಚನೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...