Homeಕರ್ನಾಟಕರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲೇ ತೇಲಾಡುತ್ತಿದೆ: ರೈತ ಹೋರಾಟಗಾರ ಬಸವರಾಜಪ್ಪ

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲೇ ತೇಲಾಡುತ್ತಿದೆ: ರೈತ ಹೋರಾಟಗಾರ ಬಸವರಾಜಪ್ಪ

- Advertisement -
- Advertisement -

ದುಡಿಯುವ ವರ್ಗದ ಜನರು, ರೈತರು ಮತ್ತು ಕಾರ್ಮಿಕರನ್ನು ಬೀದಿಗೆ ತಳ್ಳುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರ ತಾನು ನೀಡಿದ್ದ ಎಲ್ಲಾ ಭರವಸೆಗಳನ್ನು ಮರೆತು, ಕೇವಲ ಗ್ಯಾರಂಟಿ ಯೋಜನೆಗಳಲ್ಲೇ ತೇಲಾಡುತ್ತಿದೆ ಎಂದು ರೈತ ಹೋರಾಟಗಾರ ಬಸವರಾಜಪ್ಪ ಹೇಳಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ‘ದುಡಿಯುವ ಜನರ ಮಹಾಧರಣಿ’ಯಲ್ಲಿ ಮಾತನಾಡಿದ ಅವರು, ” ಮೋದಿ ಸರ್ಕಾರ ಬಡವರ ವಿರೋಧಿ, ಬಂಡವಾಳಶಾಹಿ ಪರವಾದ ನೀತಿಗಳನ್ನು ಜಾರಿಗೆ ತಂದು ಅಸಮಾನತೆಯನ್ನು ಸೃಷ್ಠಿ ಮಾಡಿದೆ. ಅಸಮಾನತೆ ತೊರೆದು ಸಮಾನತೆ, ಸಮತಾವಾದ ಆಶಯದೊಂದಿಗೆ ದೇಶದ ಜನರು ಬದುಕಬೇಕೆಂಬ ಆಶಯ ಸ್ವಾತಂತ್ರ್ಯ ಹೋರಾಟದ್ಧಾಗಿತ್ತು. ಅದರೆ, ಇಂದಿನ ಸರ್ಕಾರ ಸ್ವಾತಂತ್ರ್ಯದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ” ಎಂದರು.

ವಿದ್ಯುತ್ ಖಾಸಗೀಕರಣ ನೀತಿಯನ್ನು ಜಾರಿಗೆ ತರಲ್ಲವೆಂದು ಲಿಖಿತವಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ, ಈಗ ತನ್ನ ಮಾತನ್ನು ತಪ್ಪುತ್ತಿದೆ. ಕೇಂದ್ರವು ರಾಮ ಮಂದಿರದ ಹೆಸರಿನಲ್ಲಿ ಚುನಾವಣೆ ಎದುರಿಸುತ್ತಿದೆ. 2014ರಲ್ಲಿ ರಾಮ ಮಂದಿರ ಕಟ್ಟುತ್ತೇವೆ ಎಂದಿದ್ದರು. ಈಗ ಅದನ್ನು ಉದ್ಘಾಟನೆ ಮಾಡ್ತೀವಿ, ಉಚಿತವಾಗಿ ಅಯೋಧ್ಯೆಗೆ ಕರೆದುಕೊಂಡು ಹೋಗ್ತಿವಿ ಎಂದು ಹೇಳಿಕೊಳ್ಳುತ್ತಿದೆ. ಮಂದಿರ ಕಟ್ಟುವುದರಿಂದ ರೈತರ, ಬಡವರ ಸಮಸ್ಯೆಗಳ ಪರಿಹಾರ ಆಗುತ್ತವೆ ಎನ್ನುವುದಾದರೆ ಜಿಲ್ಲೆಗೊಂದು, ತಾಲೂಕಿಗೊಂದು ಮಂದಿರ ಕಟ್ಟಬಹುದು. ಆದರೆ, ಮಂದಿರ ಕಟ್ಟುವುದರಿಂದ ಸಂಪತ್ತು ಸೃಷ್ಟಿಯಾಗುವುದಿಲ್ಲ. ದೇಶದ ಜನರ ದುಡಿಮೆಯಿಂದ ಸಂಪತ್ತು ಬರುತ್ತದೆ. ಆ ಸಂಪತ್ತು ಮೋದಿ ಸ್ನೇಹಿತರ ಬಳಿ ಕ್ರೋಢೀಕರಣ ಆಗುತ್ತದೆ” ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಜನರನ್ನು ಬೀದಿ ಪಾಲು ಮಾಡುವಂತಹ ನೀತಿಗಳನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿತ್ತು. ಕಳೆದ ಚುನಾವಣೆಯಲ್ಲಿ ಜನರು ಅವರಿಗೆ ತಕ್ಕ ಪಾಠವನ್ನು ಕಲಿಸಿದ್ದಾರೆ. ವಿಧಾನಸಭಾ ಚುನಾವಣೆಯ ಸಮಯದಲ್ಲಿ ರಾಜಕೀಯ ಪಕ್ಷಗಳ ಮುಂದೆ 35 ಹಕ್ಕೊತ್ತಾಯಗಳನ್ನು ಸಂಯುಕ್ತ ಹೋರಾಟ ಸಮಿತಿ ಮುಂದಿಟ್ಟಿತ್ತು. ಅವುಗಳನ್ನು ತಮ್ಮ ಭರವಸೆಗಳಲ್ಲಿ ಸೇರಿಸಿಕೊಳ್ಳುವವರಿಗೆ ಮತವೆಂದು ಕರೆ ಕೊಟ್ಟಿತ್ತು. ನಮ್ಮ ಹಕ್ಕೊತ್ತಾಯಗಳನ್ನು ಒಪ್ಪಿಕೊಂಡಿದ್ದ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್‌ ಸರ್ಕಾರ ಬಂದು ಆರು ತಿಂಗಳಾಗಿವೆ. ಅದರೂ, ರೈತ, ಕಾರ್ಮಿಕ, ದಲಿತ, ಯುವಜನ ವಿರೋಧಿ ನೀತಿಗಳನ್ನು ಹಿಂಪಡೆಯುವಲ್ಲಿ, ಜನಪರ ನೀತಿಗಳನ್ನು ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಕೇವಲ ಗ್ಯಾರಂಟಿ ಯೋಜನೆಗಳಲ್ಲೇ ತೇಲಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಬರ ಉಂಟಾಗಿದೆ. ಇನ್ನೂ ಬರ ಪರಿಹಾರ ನೀಡಿಲ್ಲ. ಒಂದು ಹೆಕ್ಟೇರ್‌ಗೆ ಕನಿಷ್ಠ 40,000 ರೂ. ಪರಿಹಾರ ನೀಡಬೇಕು. ರೈತರು, ಕಾರ್ಮಿಕರು ಗುಳೆ ಹೋಗುವುದನ್ನು ತಪ್ಪಿಸಿ, ಆಯಾ ಗ್ರಾಮಗಳಲ್ಲಿ ಉದ್ಯೋಗ ನೀಡುವ ಕೆಲಸವನ್ನು ಸರ್ಕಾರ ಮಾಡಬೇಕು. ಜಾತಿ ಪ್ರಮಾಣ ಪತ್ರ, ಪಹಣಿ, ಆದಾಯ ದೃಢೀಕರಣ ಪತ್ರ ಪಡೆಯಲು ಶುಲ್ಕವನ್ನು ಹೆಚ್ಚಿಸಲಾಗಿದೆ. ಅದನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ರಾಮಮಂದಿರ ತೆರೆದ ತಕ್ಷಣ ಮತ್ತೆ ಅಧಿಕಾರಕ್ಕೆ ಬರ್ತೀವಿ ಅಂತ ಬಿಜೆಪಿ ಭಾವಿಸಿದೆ. ಅದರೆ, ಅವರು ಜನರನ್ನು ಕಡೆಗಣಿಸಿದರೆ ಅವರಿಗೆ ರಾಜ್ಯದಲ್ಲಾದ ಪರಿಸ್ಥಿತಿಯೇ ಎದುರಾಗುತ್ತದ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ : 2024ರಲ್ಲಿ ಬಿಜೆಪಿ ಗೆದ್ದರೆ ಭಾರತ ಸೋಲುತ್ತದೆ: ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...