Homeಕರ್ನಾಟಕಬಸವಣ್ಣರನ್ನು 'ಕರ್ನಾಟಕದ ಸಾಂಸ್ಕೃತಿಕ ನಾಯಕ'ನೆಂದು ಘೋಷಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

ಬಸವಣ್ಣರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ನೆಂದು ಘೋಷಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣ ಅವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

“ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ತೀರ್ಮಾನಿಸಿದೆ. ನಮ್ಮ ಸರ್ಕಾರದ ಈ ತೀರ್ಮಾನ ಮುಖ್ಯಮಂತ್ರಿಯಾದ ನನಗೆ ಅತೀವ ಹೆಮ್ಮೆ ಮತ್ತು ತೃಪ್ತಿಯನ್ನು ಉಂಟು ಮಾಡಿದೆ. ಇದು ಕೇವಲ ಘೋಷಣೆ ಅಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ ಮತ್ತು ಬದ್ದತೆ” ಎಂದು ಸಿಎಂ ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕೆಂದು ನಾಡಿನ ಲಿಂಗಾಯತ ಮಠಗಳ ಸ್ವಾಮಿಗಳು ನನ್ನ ಬಳಿ ಬಂದು ಮನವಿ ಮಾಡಿದ್ದರು. ಇದು ವೈಯಕ್ತಿಕವಾಗಿ ನನ್ನ ಅಪೇಕ್ಷೆಯೂ ಆಗಿತ್ತು. ಸ್ವಾಮಿಗಳ ಈ ಬೇಡಿಕೆಯನ್ನು ಈಡೇರಿಸಿದ ತೃಪ್ತಿ ನಮ್ಮ ಸರ್ಕಾರಕ್ಕೆ ಇದೆ. ಈ ಎಲ್ಲ ಸ್ವಾಮೀಜಿಗಳ ಆಶೀರ್ವಾದ ನಮ್ಮ ಸರ್ಕಾರದ ಮೇಲೆ ಇರಲಿ ಎಂದು ಇದೇ ಸಂದರ್ಭದಲ್ಲಿ ಅರಿಕೆ ಮಾಡಿಕೊಳ್ಳುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ವೈಯಕ್ತಿಕವಾಗಿ ಮತ್ತು ರಾಜಕೀಯವಾಗಿ ಬಸವಣ್ಣ ನನ್ನವೈಚಾರಿಕ ಗುರು. ಬಸವ ಜಯಂತಿಯ ದಿನವೇ ನಾನು ಮೊದಲ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೆ. ಆ ನಿರ್ಧಾರ ಕಾಕತಾಳೀಯವಲ್ಲ, ಉದ್ದೇಶಪೂರ್ವಕವಾದುದು. ಆ ದಿನ ಬಸವಣ್ಣನವರ ಚಿಂತನೆಗಳ ಹಾದಿಯಲ್ಲಿ ನಡೆಯುತ್ತೇನೆ ಎಂದು ನನ್ನ ಮನಸ್ಸಿನೊಳಗೆ ಪ್ರಮಾಣ ಮಾಡಿದ್ದೆ. ಅದರಂತೆ ಬಸವಣ್ಣನವರ ತತ್ವದ ದಾರಿಯಲ್ಲಿಯೇ ನಮ್ಮ ಸರ್ಕಾರ ಈಗಲೂ ಸಾಗುತ್ತಿದೆ. ಈ ಜಾಗೃತಿ ನಮ್ಮ ಸರ್ಕಾರದ ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಇರಬೇಕೆಂಬ ಉದ್ದೇಶದಿಂದಲೇ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕಬೇಕೆಂದು ಆದೇಶಿಸಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

ಅಣ್ಣನ ಅನ್ನದಾಸೋಹದ ಸಂದೇಶಕ್ಕೆ ಅನುಗುಣವಾಗಿ ಮುಖ್ಯಮಂತ್ರಿಯಾದ ಮರುಗಳಿಗೆಯಲ್ಲಿಯೇ ಅನ್ನಭಾಗ್ಯ’ಯೋಜನೆಯನ್ನು ಜಾರಿಗೊಳಿಸಿದೆ. ಈ ಮೂಲಕ ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪ ಕೈಗೊಂಡೆ. ವಿದ್ಯಾರ್ಥಿಗಳಿಗೆ ಬಿಸಿಯೂಟ, ಕ್ಷೀರಭಾಗ್ಯದ ಮೂಲಕ ಹಾಲು, ಇಂದಿರಾ ಕ್ಯಾಂಟೀನ್, ಗರ್ಭಿಣಿ ಮತ್ತು ಬಾಣಂತಿಯರಿಗಾಗಿ ಮಾತೃಪೂರ್ಣ ಯೋಜನೆಗಳು ಬಸವಣ್ಣನವರ ಅನ್ನದಾಸೋಹದ ಚಿಂತನೆಯಿಂದಲೇ ಪ್ರೇರಿತವಾದುದು. ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅವಕಾಶಗಳು ಸಿಗಬೇಕು ಎಂದು ಬಸವಣ್ಣ ಬಯಸಿದ್ದರು. ನಮ್ಮ ಸರ್ಕಾರದ ಯೋಜನೆಗಳತ್ತ ಕಣ್ಣು ಹಾಯಿಸಿದರೆ ಬಸವಣ್ಣನ ಆಶಯಗಳ ಪ್ರಭಾವ ಪ್ರತಿಯೋಜನೆಯಲ್ಲಿಯೂ ಕಾಣಬಹುದು ಎಂದು ಸಿಎಂ ಬರೆದುಕೊಂಡಿದ್ದಾರೆ.

ಬಡತನ ನಿವಾರಣೆ, ಕೃಷಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ, ಮಹಿಳಾ ಸಬಲೀಕರಣ, ಉದ್ಯೋಗ ಸೃಷ್ಟಿಗೆ ನಮ್ಮ ಸರ್ಕಾರ ಆದ್ಯತೆ ನೀಡಿ ಅಭಿವೃದ್ಧಿಯ ಜೊತೆಯಲ್ಲಿ ಸಾಮಾಜಿಕ ನ್ಯಾಯವನ್ನು ಬೆಸೆಯುವ ನಮ್ಮ ಕರ್ನಾಟಕ ಅಭಿವೃದ್ಧಿ ಮಾದರಿಯನ್ನು ಇಡೀ ದೇಶ ಚರ್ಚಿಸುತ್ತಿದೆ. ಬಸವಣ್ಣ ಎಂಬ ಜ್ಞಾನಭಂಡಾರದ ಮಾರ್ಗದರ್ಶನ ಇಲ್ಲದೆ ಇದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದು ಸಿಎಂ ಹೇಳಿದ್ದಾರೆ.

ಕನ್ನಡ ಭಾಷೆಯ ಬಗೆಗಿನ ನಮ್ಮ ಸರ್ಕಾರದ ಬದ್ಧತೆಗೂ ಬಸವಣ್ಣನೇ ಪ್ರೇರಕ ಶಕ್ತಿ. ಬಸವಣ್ಣನವರು ಕನ್ನಡವನ್ನು ಅಂದಿನ ಧರ್ಮದ ಭಾಷೆಯಾಗಿ, ವಿಚಾರದ ಭಾಷೆಯಾಗಿ, ಸಂವಹನದ ಭಾಷೆಯಾಗಿ ಬಳಸಿಕೊಳ್ಳುವ ಮೂಲಕ ಕನ್ನಡ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಬೆಲೆ ಕಟ್ಟಲಾರದ್ದು. ಹಾಗೆ ನೋಡಿದರೆ ಕನ್ನಡ ಮಾಧ್ಯಮ ಪರಿಣಾಮಕಾರಿಯಾಗಿ ಜಾರಿಗೆ ಬಂದದ್ದೇ ಹನ್ನೆರಡನೇ ಶತಮಾನದಲ್ಲಿ ಎನ್ನುವುದು ಆಶ್ಚರ್ಯದ ಸಂಗತಿಯಾದರೂ ವಾಸ್ತವ ಎಂದಿದ್ದಾರೆ.

ಅನ್ನದಾಸೋಹ ಮತ್ತು ಜ್ಞಾನದಾಸೋಹದ ಮೂಲಕ ರಾಜ್ಯದ ಲಿಂಗಾಯತ ಮಠಗಳು ನಾಡಿನ ಸರ್ವಾಂಗೀಣ ಏಳಿಗೆಗೆ ಶ್ರಮಿಸುತ್ತಿರುವುದನ್ನು ಕೂಡಾ ನಾನು ಕೃತಜ್ಞತಾ ಭಾವದಿಂದ ಸ್ಮರಿಸುತ್ತೇನೆ. ಬಡತನ ಮತ್ತು ಅಜ್ಞಾನದ ನಿವಾರಣೆಯಲ್ಲಿ ಈ ಮಠಗಳು ವಿಶೇಷ ಪಾತ್ರವಹಿಸಿವೆ. ಶಿಕ್ಷಣ ಪ್ರಸಾರಕ್ಕೆ ಧಾರ್ಮಿಕ ಮಠ ಮಾನ್ಯಗಳು ನೀಡಿರುವ ಕೊಡುಗೆ ಅಪಾರವಾದುದು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆಯನ್ನಷ್ಟೇ ಮಾಡಿ ನಾವು ವಿರಮಿಸುವುದಿಲ್ಲ. ಬಸವ ತತ್ವವನ್ನು ಮನೆಮನೆಗೆ ತಲುಪಿಸುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತೇವೆ. ಸಮಸಮಾಜ ನಿರ್ಮಾಣದ ಬಗ್ಗೆ ಬಸವಣ್ಣ ಕಂಡ ಕನಸನ್ನು ಸಾಕಾರಗೊಳಿಸಲು ಎಲ್ಲರ ಸಹಕಾರ ಇರಲಿ ಎಂದು ಸಿಎಂ ಮನವಿ ಮಾಡಿದ್ದಾರೆ.

ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಸರ್ಕಾರದ ಪರವಾಗಿ ಘೋಷಿಸುವಂತೆ ಮುಖ್ಯಮಂತ್ರಿಗಳಿಗೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದು ಮನವಿ ಮಾಡಿದ್ದರು.

ಇದನ್ನೂ ಓದಿ : ಬಸವಣ್ಣನನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸಿ: ಸಿಎಂಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...