Homeಕರ್ನಾಟಕಬಸವಣ್ಣರನ್ನು 'ಕರ್ನಾಟಕದ ಸಾಂಸ್ಕೃತಿಕ ನಾಯಕ'ನೆಂದು ಘೋಷಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

ಬಸವಣ್ಣರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ನೆಂದು ಘೋಷಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣ ಅವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

“ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ತೀರ್ಮಾನಿಸಿದೆ. ನಮ್ಮ ಸರ್ಕಾರದ ಈ ತೀರ್ಮಾನ ಮುಖ್ಯಮಂತ್ರಿಯಾದ ನನಗೆ ಅತೀವ ಹೆಮ್ಮೆ ಮತ್ತು ತೃಪ್ತಿಯನ್ನು ಉಂಟು ಮಾಡಿದೆ. ಇದು ಕೇವಲ ಘೋಷಣೆ ಅಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ ಮತ್ತು ಬದ್ದತೆ” ಎಂದು ಸಿಎಂ ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕೆಂದು ನಾಡಿನ ಲಿಂಗಾಯತ ಮಠಗಳ ಸ್ವಾಮಿಗಳು ನನ್ನ ಬಳಿ ಬಂದು ಮನವಿ ಮಾಡಿದ್ದರು. ಇದು ವೈಯಕ್ತಿಕವಾಗಿ ನನ್ನ ಅಪೇಕ್ಷೆಯೂ ಆಗಿತ್ತು. ಸ್ವಾಮಿಗಳ ಈ ಬೇಡಿಕೆಯನ್ನು ಈಡೇರಿಸಿದ ತೃಪ್ತಿ ನಮ್ಮ ಸರ್ಕಾರಕ್ಕೆ ಇದೆ. ಈ ಎಲ್ಲ ಸ್ವಾಮೀಜಿಗಳ ಆಶೀರ್ವಾದ ನಮ್ಮ ಸರ್ಕಾರದ ಮೇಲೆ ಇರಲಿ ಎಂದು ಇದೇ ಸಂದರ್ಭದಲ್ಲಿ ಅರಿಕೆ ಮಾಡಿಕೊಳ್ಳುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ವೈಯಕ್ತಿಕವಾಗಿ ಮತ್ತು ರಾಜಕೀಯವಾಗಿ ಬಸವಣ್ಣ ನನ್ನವೈಚಾರಿಕ ಗುರು. ಬಸವ ಜಯಂತಿಯ ದಿನವೇ ನಾನು ಮೊದಲ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೆ. ಆ ನಿರ್ಧಾರ ಕಾಕತಾಳೀಯವಲ್ಲ, ಉದ್ದೇಶಪೂರ್ವಕವಾದುದು. ಆ ದಿನ ಬಸವಣ್ಣನವರ ಚಿಂತನೆಗಳ ಹಾದಿಯಲ್ಲಿ ನಡೆಯುತ್ತೇನೆ ಎಂದು ನನ್ನ ಮನಸ್ಸಿನೊಳಗೆ ಪ್ರಮಾಣ ಮಾಡಿದ್ದೆ. ಅದರಂತೆ ಬಸವಣ್ಣನವರ ತತ್ವದ ದಾರಿಯಲ್ಲಿಯೇ ನಮ್ಮ ಸರ್ಕಾರ ಈಗಲೂ ಸಾಗುತ್ತಿದೆ. ಈ ಜಾಗೃತಿ ನಮ್ಮ ಸರ್ಕಾರದ ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಇರಬೇಕೆಂಬ ಉದ್ದೇಶದಿಂದಲೇ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕಬೇಕೆಂದು ಆದೇಶಿಸಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

ಅಣ್ಣನ ಅನ್ನದಾಸೋಹದ ಸಂದೇಶಕ್ಕೆ ಅನುಗುಣವಾಗಿ ಮುಖ್ಯಮಂತ್ರಿಯಾದ ಮರುಗಳಿಗೆಯಲ್ಲಿಯೇ ಅನ್ನಭಾಗ್ಯ’ಯೋಜನೆಯನ್ನು ಜಾರಿಗೊಳಿಸಿದೆ. ಈ ಮೂಲಕ ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪ ಕೈಗೊಂಡೆ. ವಿದ್ಯಾರ್ಥಿಗಳಿಗೆ ಬಿಸಿಯೂಟ, ಕ್ಷೀರಭಾಗ್ಯದ ಮೂಲಕ ಹಾಲು, ಇಂದಿರಾ ಕ್ಯಾಂಟೀನ್, ಗರ್ಭಿಣಿ ಮತ್ತು ಬಾಣಂತಿಯರಿಗಾಗಿ ಮಾತೃಪೂರ್ಣ ಯೋಜನೆಗಳು ಬಸವಣ್ಣನವರ ಅನ್ನದಾಸೋಹದ ಚಿಂತನೆಯಿಂದಲೇ ಪ್ರೇರಿತವಾದುದು. ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅವಕಾಶಗಳು ಸಿಗಬೇಕು ಎಂದು ಬಸವಣ್ಣ ಬಯಸಿದ್ದರು. ನಮ್ಮ ಸರ್ಕಾರದ ಯೋಜನೆಗಳತ್ತ ಕಣ್ಣು ಹಾಯಿಸಿದರೆ ಬಸವಣ್ಣನ ಆಶಯಗಳ ಪ್ರಭಾವ ಪ್ರತಿಯೋಜನೆಯಲ್ಲಿಯೂ ಕಾಣಬಹುದು ಎಂದು ಸಿಎಂ ಬರೆದುಕೊಂಡಿದ್ದಾರೆ.

ಬಡತನ ನಿವಾರಣೆ, ಕೃಷಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ, ಮಹಿಳಾ ಸಬಲೀಕರಣ, ಉದ್ಯೋಗ ಸೃಷ್ಟಿಗೆ ನಮ್ಮ ಸರ್ಕಾರ ಆದ್ಯತೆ ನೀಡಿ ಅಭಿವೃದ್ಧಿಯ ಜೊತೆಯಲ್ಲಿ ಸಾಮಾಜಿಕ ನ್ಯಾಯವನ್ನು ಬೆಸೆಯುವ ನಮ್ಮ ಕರ್ನಾಟಕ ಅಭಿವೃದ್ಧಿ ಮಾದರಿಯನ್ನು ಇಡೀ ದೇಶ ಚರ್ಚಿಸುತ್ತಿದೆ. ಬಸವಣ್ಣ ಎಂಬ ಜ್ಞಾನಭಂಡಾರದ ಮಾರ್ಗದರ್ಶನ ಇಲ್ಲದೆ ಇದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದು ಸಿಎಂ ಹೇಳಿದ್ದಾರೆ.

ಕನ್ನಡ ಭಾಷೆಯ ಬಗೆಗಿನ ನಮ್ಮ ಸರ್ಕಾರದ ಬದ್ಧತೆಗೂ ಬಸವಣ್ಣನೇ ಪ್ರೇರಕ ಶಕ್ತಿ. ಬಸವಣ್ಣನವರು ಕನ್ನಡವನ್ನು ಅಂದಿನ ಧರ್ಮದ ಭಾಷೆಯಾಗಿ, ವಿಚಾರದ ಭಾಷೆಯಾಗಿ, ಸಂವಹನದ ಭಾಷೆಯಾಗಿ ಬಳಸಿಕೊಳ್ಳುವ ಮೂಲಕ ಕನ್ನಡ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಬೆಲೆ ಕಟ್ಟಲಾರದ್ದು. ಹಾಗೆ ನೋಡಿದರೆ ಕನ್ನಡ ಮಾಧ್ಯಮ ಪರಿಣಾಮಕಾರಿಯಾಗಿ ಜಾರಿಗೆ ಬಂದದ್ದೇ ಹನ್ನೆರಡನೇ ಶತಮಾನದಲ್ಲಿ ಎನ್ನುವುದು ಆಶ್ಚರ್ಯದ ಸಂಗತಿಯಾದರೂ ವಾಸ್ತವ ಎಂದಿದ್ದಾರೆ.

ಅನ್ನದಾಸೋಹ ಮತ್ತು ಜ್ಞಾನದಾಸೋಹದ ಮೂಲಕ ರಾಜ್ಯದ ಲಿಂಗಾಯತ ಮಠಗಳು ನಾಡಿನ ಸರ್ವಾಂಗೀಣ ಏಳಿಗೆಗೆ ಶ್ರಮಿಸುತ್ತಿರುವುದನ್ನು ಕೂಡಾ ನಾನು ಕೃತಜ್ಞತಾ ಭಾವದಿಂದ ಸ್ಮರಿಸುತ್ತೇನೆ. ಬಡತನ ಮತ್ತು ಅಜ್ಞಾನದ ನಿವಾರಣೆಯಲ್ಲಿ ಈ ಮಠಗಳು ವಿಶೇಷ ಪಾತ್ರವಹಿಸಿವೆ. ಶಿಕ್ಷಣ ಪ್ರಸಾರಕ್ಕೆ ಧಾರ್ಮಿಕ ಮಠ ಮಾನ್ಯಗಳು ನೀಡಿರುವ ಕೊಡುಗೆ ಅಪಾರವಾದುದು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆಯನ್ನಷ್ಟೇ ಮಾಡಿ ನಾವು ವಿರಮಿಸುವುದಿಲ್ಲ. ಬಸವ ತತ್ವವನ್ನು ಮನೆಮನೆಗೆ ತಲುಪಿಸುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತೇವೆ. ಸಮಸಮಾಜ ನಿರ್ಮಾಣದ ಬಗ್ಗೆ ಬಸವಣ್ಣ ಕಂಡ ಕನಸನ್ನು ಸಾಕಾರಗೊಳಿಸಲು ಎಲ್ಲರ ಸಹಕಾರ ಇರಲಿ ಎಂದು ಸಿಎಂ ಮನವಿ ಮಾಡಿದ್ದಾರೆ.

ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಸರ್ಕಾರದ ಪರವಾಗಿ ಘೋಷಿಸುವಂತೆ ಮುಖ್ಯಮಂತ್ರಿಗಳಿಗೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದು ಮನವಿ ಮಾಡಿದ್ದರು.

ಇದನ್ನೂ ಓದಿ : ಬಸವಣ್ಣನನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸಿ: ಸಿಎಂಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...