Homeಕರ್ನಾಟಕಬಸವಣ್ಣರನ್ನು 'ಕರ್ನಾಟಕದ ಸಾಂಸ್ಕೃತಿಕ ನಾಯಕ'ನೆಂದು ಘೋಷಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

ಬಸವಣ್ಣರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ನೆಂದು ಘೋಷಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣ ಅವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

“ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ತೀರ್ಮಾನಿಸಿದೆ. ನಮ್ಮ ಸರ್ಕಾರದ ಈ ತೀರ್ಮಾನ ಮುಖ್ಯಮಂತ್ರಿಯಾದ ನನಗೆ ಅತೀವ ಹೆಮ್ಮೆ ಮತ್ತು ತೃಪ್ತಿಯನ್ನು ಉಂಟು ಮಾಡಿದೆ. ಇದು ಕೇವಲ ಘೋಷಣೆ ಅಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ ಮತ್ತು ಬದ್ದತೆ” ಎಂದು ಸಿಎಂ ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕೆಂದು ನಾಡಿನ ಲಿಂಗಾಯತ ಮಠಗಳ ಸ್ವಾಮಿಗಳು ನನ್ನ ಬಳಿ ಬಂದು ಮನವಿ ಮಾಡಿದ್ದರು. ಇದು ವೈಯಕ್ತಿಕವಾಗಿ ನನ್ನ ಅಪೇಕ್ಷೆಯೂ ಆಗಿತ್ತು. ಸ್ವಾಮಿಗಳ ಈ ಬೇಡಿಕೆಯನ್ನು ಈಡೇರಿಸಿದ ತೃಪ್ತಿ ನಮ್ಮ ಸರ್ಕಾರಕ್ಕೆ ಇದೆ. ಈ ಎಲ್ಲ ಸ್ವಾಮೀಜಿಗಳ ಆಶೀರ್ವಾದ ನಮ್ಮ ಸರ್ಕಾರದ ಮೇಲೆ ಇರಲಿ ಎಂದು ಇದೇ ಸಂದರ್ಭದಲ್ಲಿ ಅರಿಕೆ ಮಾಡಿಕೊಳ್ಳುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ವೈಯಕ್ತಿಕವಾಗಿ ಮತ್ತು ರಾಜಕೀಯವಾಗಿ ಬಸವಣ್ಣ ನನ್ನವೈಚಾರಿಕ ಗುರು. ಬಸವ ಜಯಂತಿಯ ದಿನವೇ ನಾನು ಮೊದಲ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೆ. ಆ ನಿರ್ಧಾರ ಕಾಕತಾಳೀಯವಲ್ಲ, ಉದ್ದೇಶಪೂರ್ವಕವಾದುದು. ಆ ದಿನ ಬಸವಣ್ಣನವರ ಚಿಂತನೆಗಳ ಹಾದಿಯಲ್ಲಿ ನಡೆಯುತ್ತೇನೆ ಎಂದು ನನ್ನ ಮನಸ್ಸಿನೊಳಗೆ ಪ್ರಮಾಣ ಮಾಡಿದ್ದೆ. ಅದರಂತೆ ಬಸವಣ್ಣನವರ ತತ್ವದ ದಾರಿಯಲ್ಲಿಯೇ ನಮ್ಮ ಸರ್ಕಾರ ಈಗಲೂ ಸಾಗುತ್ತಿದೆ. ಈ ಜಾಗೃತಿ ನಮ್ಮ ಸರ್ಕಾರದ ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಇರಬೇಕೆಂಬ ಉದ್ದೇಶದಿಂದಲೇ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕಬೇಕೆಂದು ಆದೇಶಿಸಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

ಅಣ್ಣನ ಅನ್ನದಾಸೋಹದ ಸಂದೇಶಕ್ಕೆ ಅನುಗುಣವಾಗಿ ಮುಖ್ಯಮಂತ್ರಿಯಾದ ಮರುಗಳಿಗೆಯಲ್ಲಿಯೇ ಅನ್ನಭಾಗ್ಯ’ಯೋಜನೆಯನ್ನು ಜಾರಿಗೊಳಿಸಿದೆ. ಈ ಮೂಲಕ ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪ ಕೈಗೊಂಡೆ. ವಿದ್ಯಾರ್ಥಿಗಳಿಗೆ ಬಿಸಿಯೂಟ, ಕ್ಷೀರಭಾಗ್ಯದ ಮೂಲಕ ಹಾಲು, ಇಂದಿರಾ ಕ್ಯಾಂಟೀನ್, ಗರ್ಭಿಣಿ ಮತ್ತು ಬಾಣಂತಿಯರಿಗಾಗಿ ಮಾತೃಪೂರ್ಣ ಯೋಜನೆಗಳು ಬಸವಣ್ಣನವರ ಅನ್ನದಾಸೋಹದ ಚಿಂತನೆಯಿಂದಲೇ ಪ್ರೇರಿತವಾದುದು. ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅವಕಾಶಗಳು ಸಿಗಬೇಕು ಎಂದು ಬಸವಣ್ಣ ಬಯಸಿದ್ದರು. ನಮ್ಮ ಸರ್ಕಾರದ ಯೋಜನೆಗಳತ್ತ ಕಣ್ಣು ಹಾಯಿಸಿದರೆ ಬಸವಣ್ಣನ ಆಶಯಗಳ ಪ್ರಭಾವ ಪ್ರತಿಯೋಜನೆಯಲ್ಲಿಯೂ ಕಾಣಬಹುದು ಎಂದು ಸಿಎಂ ಬರೆದುಕೊಂಡಿದ್ದಾರೆ.

ಬಡತನ ನಿವಾರಣೆ, ಕೃಷಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ, ಮಹಿಳಾ ಸಬಲೀಕರಣ, ಉದ್ಯೋಗ ಸೃಷ್ಟಿಗೆ ನಮ್ಮ ಸರ್ಕಾರ ಆದ್ಯತೆ ನೀಡಿ ಅಭಿವೃದ್ಧಿಯ ಜೊತೆಯಲ್ಲಿ ಸಾಮಾಜಿಕ ನ್ಯಾಯವನ್ನು ಬೆಸೆಯುವ ನಮ್ಮ ಕರ್ನಾಟಕ ಅಭಿವೃದ್ಧಿ ಮಾದರಿಯನ್ನು ಇಡೀ ದೇಶ ಚರ್ಚಿಸುತ್ತಿದೆ. ಬಸವಣ್ಣ ಎಂಬ ಜ್ಞಾನಭಂಡಾರದ ಮಾರ್ಗದರ್ಶನ ಇಲ್ಲದೆ ಇದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದು ಸಿಎಂ ಹೇಳಿದ್ದಾರೆ.

ಕನ್ನಡ ಭಾಷೆಯ ಬಗೆಗಿನ ನಮ್ಮ ಸರ್ಕಾರದ ಬದ್ಧತೆಗೂ ಬಸವಣ್ಣನೇ ಪ್ರೇರಕ ಶಕ್ತಿ. ಬಸವಣ್ಣನವರು ಕನ್ನಡವನ್ನು ಅಂದಿನ ಧರ್ಮದ ಭಾಷೆಯಾಗಿ, ವಿಚಾರದ ಭಾಷೆಯಾಗಿ, ಸಂವಹನದ ಭಾಷೆಯಾಗಿ ಬಳಸಿಕೊಳ್ಳುವ ಮೂಲಕ ಕನ್ನಡ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಬೆಲೆ ಕಟ್ಟಲಾರದ್ದು. ಹಾಗೆ ನೋಡಿದರೆ ಕನ್ನಡ ಮಾಧ್ಯಮ ಪರಿಣಾಮಕಾರಿಯಾಗಿ ಜಾರಿಗೆ ಬಂದದ್ದೇ ಹನ್ನೆರಡನೇ ಶತಮಾನದಲ್ಲಿ ಎನ್ನುವುದು ಆಶ್ಚರ್ಯದ ಸಂಗತಿಯಾದರೂ ವಾಸ್ತವ ಎಂದಿದ್ದಾರೆ.

ಅನ್ನದಾಸೋಹ ಮತ್ತು ಜ್ಞಾನದಾಸೋಹದ ಮೂಲಕ ರಾಜ್ಯದ ಲಿಂಗಾಯತ ಮಠಗಳು ನಾಡಿನ ಸರ್ವಾಂಗೀಣ ಏಳಿಗೆಗೆ ಶ್ರಮಿಸುತ್ತಿರುವುದನ್ನು ಕೂಡಾ ನಾನು ಕೃತಜ್ಞತಾ ಭಾವದಿಂದ ಸ್ಮರಿಸುತ್ತೇನೆ. ಬಡತನ ಮತ್ತು ಅಜ್ಞಾನದ ನಿವಾರಣೆಯಲ್ಲಿ ಈ ಮಠಗಳು ವಿಶೇಷ ಪಾತ್ರವಹಿಸಿವೆ. ಶಿಕ್ಷಣ ಪ್ರಸಾರಕ್ಕೆ ಧಾರ್ಮಿಕ ಮಠ ಮಾನ್ಯಗಳು ನೀಡಿರುವ ಕೊಡುಗೆ ಅಪಾರವಾದುದು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆಯನ್ನಷ್ಟೇ ಮಾಡಿ ನಾವು ವಿರಮಿಸುವುದಿಲ್ಲ. ಬಸವ ತತ್ವವನ್ನು ಮನೆಮನೆಗೆ ತಲುಪಿಸುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತೇವೆ. ಸಮಸಮಾಜ ನಿರ್ಮಾಣದ ಬಗ್ಗೆ ಬಸವಣ್ಣ ಕಂಡ ಕನಸನ್ನು ಸಾಕಾರಗೊಳಿಸಲು ಎಲ್ಲರ ಸಹಕಾರ ಇರಲಿ ಎಂದು ಸಿಎಂ ಮನವಿ ಮಾಡಿದ್ದಾರೆ.

ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಸರ್ಕಾರದ ಪರವಾಗಿ ಘೋಷಿಸುವಂತೆ ಮುಖ್ಯಮಂತ್ರಿಗಳಿಗೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದು ಮನವಿ ಮಾಡಿದ್ದರು.

ಇದನ್ನೂ ಓದಿ : ಬಸವಣ್ಣನನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸಿ: ಸಿಎಂಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...