Homeಕರ್ನಾಟಕಐಪಿಎಸ್ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದತಿ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ: ನಾಳೆ ವಿಚಾರಣೆ

ಐಪಿಎಸ್ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದತಿ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ: ನಾಳೆ ವಿಚಾರಣೆ

- Advertisement -
- Advertisement -

ಹಿರಿಯ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ವಿಕಾಸ್ ಅವರ ಅಮಾನತು ರದ್ದುಪಡಿಸಿರುವ ಕೇಂದ್ರೀಯ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ಆದೇಶವನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬುಧವಾರ(ಜು.2)  ಪ್ರಶ್ನಿಸಿದೆ.

ವಿಚಾರಣೆ ಆರಂಭವಾಗುತ್ತಿದ್ದಂತೆ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ಪ್ರಕರಣವನ್ನು ನ್ಯಾಯಮೂರ್ತಿಗಳಾದ ಎಸ್‌ ಜಿ ಪಂಡಿತ್‌ ಮತ್ತುಟಿ ಎಂ.ನದಾಫ್‌ ಅವರ ವಿಭಾಗೀಯ ಪೀಠದ ಮುಂದೆ ಉಲ್ಲೇಖಿಸಿ, ತುರ್ತಾಗಿ ಅರ್ಜಿ ವಿಚಾರಣೆ ನಡೆಸಬೇಕು ಎಂದು ಕೋರಿದರು.

ಆಗ ಪೀಠವು ಅರ್ಜಿಯಲ್ಲಿನ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಸರ್ಕಾರಕ್ಕೆ ಸೂಚಿಸಿ, ನಾಳೆ ವಿಚಾರಣೆ ನಡೆಸುವುದಾಗಿ ತಿಳಿಸಿತು.

ಪೊಲೀಸ್‌ ಮಹಾನಿರ್ದೇಶಕರ ವರದಿ ಆಧರಿಸಿ, ಮೇಲ್ನೋಟಕ್ಕೆ ಕರ್ತವ್ಯ ಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಸಿಎಟಿಗೆ ಮುಚ್ಚಿದ ಲಕೋಟೆಯಲ್ಲಿ ಜೂನ್‌ 3 ಮತ್ತು 4ರಂದು ನಡೆದಿರುವ ಘಟನೆಯ ಮಾಹಿತಿಯನ್ನು ಸಲ್ಲಿಕೆ ಮಾಡಲಾಗಿದೆ. ಅದನ್ನು ಪರಿಗಣಿಸದೇ ಆದೇಶ ಮಾಡಿದೆ. ಮ್ಯಾಜಿಸ್ಟೀರಿಯಲ್‌ ತನಿಖೆ ಮತ್ತು ನ್ಯಾಯಾಂಗ ತನಿಖಾ ಆಯೋಗ ರಚಿಸಿರುವುದನ್ನು ಸಿಎಟಿಯು ತಪ್ಪಾಗಿ ಅರ್ಥೈಸಿದ್ದು, ಸರ್ಕಾರವು ಕಾಲ್ತುಳಿತಕ್ಕೆ ಯಾರು ಕಾರಣ ಎಂಬುದನ್ನು ಇನ್ನಷ್ಟೇ ಪತ್ತೆಹಚ್ಚಬೇಕಿದೆ ಎಂಬುವುದಾಗಿ ಹೇಳಿದೆ ಎಂದು ನಿರ್ಧಾರಕ್ಕೆ ಬಂದಿದೆ ಎಂದು ಸಿಎಟಿ ಆದೇಶಕ್ಕೆ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.

ಘಟನೆಯ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಿದ್ದು, ಕೇಂದ್ರ ಸರ್ಕಾರವು ವಿಕಾಸ್‌ ಕುಮಾರ್‌ ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಆದೇಶಿಸಿದೆ. ಇದು ಸಿಎಟಿಯಲ್ಲಿ ತೀರ್ಪು ಕಾಯ್ದಿರಿಸಿದ ಬಳಿಕ ನಡೆದಿರುವ ಘಟನೆಯಾಗಿದ್ದು, ಅದನ್ನು ಮೆಮೊದ ಮೂಲಕ ಸಿಎಟಿ ಗಮನಕ್ಕೆ ತರಲಾಗಿತ್ತು. ಇದನ್ನೂ ಸಿಎಟಿಯು ಪರಿಗಣಿಸಿಲ್ಲ. ಈ ಹಂತದಲ್ಲಿ ಅಧಿಕಾರಿಗಳ ಅಮಾನತನ್ನು ತೆರವು ಮಾಡುವುದರಿಂದ ತನಿಖೆಯ ಮೇಲೆ ಪರಿಣಾಮ ಉಂಟಾಗುತ್ತದೆ. ಇದು ಸಾಕ್ಷಿಗಳ ಪರಿಶೀಲನೆಗೆ ಸಮಸ್ಯೆ ಉಂಟು ಮಾಡಲಿದ್ದು, ಸಾಕ್ಷ್ಯ ತಿರುಚುವ ಸಾಧ್ಯತೆ ಇರುತ್ತದೆ. ಹೀಗಾಗಿ, ಅಧಿಕಾರಿಗಳನ್ನು ಸೇವೆಯಿಂದ ಹೊರಗಿಡುವುದು ಅಗತ್ಯವಾಗಿದೆ ಎಂದು ಎಜಿ ಪೀಠಕ್ಕೆ ವಿವರಿಸಿದ್ದಾರೆ.

ಜೂನ್ 4ರಂದು ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ್ದರು. ಈ ದುರಂತಕ್ಕೆ ಹೊಣೆಮಾಡಿ ಸರ್ಕಾರ ಅಮಾನತು ಮಾಡಿದ ಪೊಲೀಸ್ ಅಧಿಕಾರಿಗಳಲ್ಲಿ ವಿಕಾಸ್ ಕುಮಾರ್ ಕೂಡ ಒಬ್ಬರು.

ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಭದ್ರತಾ ಉಸ್ತುವಾರಿ ವಹಿಸಿದ್ದ ವಿಕಾಸ್ ಕುಮಾರ್ ಅವರನ್ನು ಬೇಜವ್ದಾರಿಯ ಕಾರಣ ನೀಡಿ ಸರ್ಕಾರ ಅಮಾನತು ಮಾಡಿತ್ತು.

ಇದನ್ನು ಪ್ರಶ್ನಿಸಿ ವಿಕಾಸ್ ಕುಮಾರ್ ಸಿಎಟಿ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಸರ್ಕಾರದ ಆದೇಶ ರದ್ದುಗೊಳಿಸಿ ಆದೇಶಿಸಿದೆ. ಅಲ್ಲದೆ, ಅವರನ್ನು ಮೂಲಸ್ಥಾನಕ್ಕೆ ಮರು ನೇಮಿಸಲು ಮತ್ತು ಹಿಂದಿನ ಎಲ್ಲಾ ಭತ್ಯೆ, ಸೌಲಭ್ಯ ಒದಗಿಸಲು ಸೂಚಿಸಿದೆ.

Courtesy : barandbench.com

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಐಪಿಎಸ್‌ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಗೊಳಿಸಿದ ಸಿಎಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...