Homeಕರ್ನಾಟಕಐಪಿಎಸ್ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದತಿ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ: ನಾಳೆ ವಿಚಾರಣೆ

ಐಪಿಎಸ್ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದತಿ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ: ನಾಳೆ ವಿಚಾರಣೆ

- Advertisement -
- Advertisement -

ಹಿರಿಯ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ವಿಕಾಸ್ ಅವರ ಅಮಾನತು ರದ್ದುಪಡಿಸಿರುವ ಕೇಂದ್ರೀಯ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ಆದೇಶವನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬುಧವಾರ(ಜು.2)  ಪ್ರಶ್ನಿಸಿದೆ.

ವಿಚಾರಣೆ ಆರಂಭವಾಗುತ್ತಿದ್ದಂತೆ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ಪ್ರಕರಣವನ್ನು ನ್ಯಾಯಮೂರ್ತಿಗಳಾದ ಎಸ್‌ ಜಿ ಪಂಡಿತ್‌ ಮತ್ತುಟಿ ಎಂ.ನದಾಫ್‌ ಅವರ ವಿಭಾಗೀಯ ಪೀಠದ ಮುಂದೆ ಉಲ್ಲೇಖಿಸಿ, ತುರ್ತಾಗಿ ಅರ್ಜಿ ವಿಚಾರಣೆ ನಡೆಸಬೇಕು ಎಂದು ಕೋರಿದರು.

ಆಗ ಪೀಠವು ಅರ್ಜಿಯಲ್ಲಿನ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಸರ್ಕಾರಕ್ಕೆ ಸೂಚಿಸಿ, ನಾಳೆ ವಿಚಾರಣೆ ನಡೆಸುವುದಾಗಿ ತಿಳಿಸಿತು.

ಪೊಲೀಸ್‌ ಮಹಾನಿರ್ದೇಶಕರ ವರದಿ ಆಧರಿಸಿ, ಮೇಲ್ನೋಟಕ್ಕೆ ಕರ್ತವ್ಯ ಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಸಿಎಟಿಗೆ ಮುಚ್ಚಿದ ಲಕೋಟೆಯಲ್ಲಿ ಜೂನ್‌ 3 ಮತ್ತು 4ರಂದು ನಡೆದಿರುವ ಘಟನೆಯ ಮಾಹಿತಿಯನ್ನು ಸಲ್ಲಿಕೆ ಮಾಡಲಾಗಿದೆ. ಅದನ್ನು ಪರಿಗಣಿಸದೇ ಆದೇಶ ಮಾಡಿದೆ. ಮ್ಯಾಜಿಸ್ಟೀರಿಯಲ್‌ ತನಿಖೆ ಮತ್ತು ನ್ಯಾಯಾಂಗ ತನಿಖಾ ಆಯೋಗ ರಚಿಸಿರುವುದನ್ನು ಸಿಎಟಿಯು ತಪ್ಪಾಗಿ ಅರ್ಥೈಸಿದ್ದು, ಸರ್ಕಾರವು ಕಾಲ್ತುಳಿತಕ್ಕೆ ಯಾರು ಕಾರಣ ಎಂಬುದನ್ನು ಇನ್ನಷ್ಟೇ ಪತ್ತೆಹಚ್ಚಬೇಕಿದೆ ಎಂಬುವುದಾಗಿ ಹೇಳಿದೆ ಎಂದು ನಿರ್ಧಾರಕ್ಕೆ ಬಂದಿದೆ ಎಂದು ಸಿಎಟಿ ಆದೇಶಕ್ಕೆ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.

ಘಟನೆಯ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಿದ್ದು, ಕೇಂದ್ರ ಸರ್ಕಾರವು ವಿಕಾಸ್‌ ಕುಮಾರ್‌ ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಆದೇಶಿಸಿದೆ. ಇದು ಸಿಎಟಿಯಲ್ಲಿ ತೀರ್ಪು ಕಾಯ್ದಿರಿಸಿದ ಬಳಿಕ ನಡೆದಿರುವ ಘಟನೆಯಾಗಿದ್ದು, ಅದನ್ನು ಮೆಮೊದ ಮೂಲಕ ಸಿಎಟಿ ಗಮನಕ್ಕೆ ತರಲಾಗಿತ್ತು. ಇದನ್ನೂ ಸಿಎಟಿಯು ಪರಿಗಣಿಸಿಲ್ಲ. ಈ ಹಂತದಲ್ಲಿ ಅಧಿಕಾರಿಗಳ ಅಮಾನತನ್ನು ತೆರವು ಮಾಡುವುದರಿಂದ ತನಿಖೆಯ ಮೇಲೆ ಪರಿಣಾಮ ಉಂಟಾಗುತ್ತದೆ. ಇದು ಸಾಕ್ಷಿಗಳ ಪರಿಶೀಲನೆಗೆ ಸಮಸ್ಯೆ ಉಂಟು ಮಾಡಲಿದ್ದು, ಸಾಕ್ಷ್ಯ ತಿರುಚುವ ಸಾಧ್ಯತೆ ಇರುತ್ತದೆ. ಹೀಗಾಗಿ, ಅಧಿಕಾರಿಗಳನ್ನು ಸೇವೆಯಿಂದ ಹೊರಗಿಡುವುದು ಅಗತ್ಯವಾಗಿದೆ ಎಂದು ಎಜಿ ಪೀಠಕ್ಕೆ ವಿವರಿಸಿದ್ದಾರೆ.

ಜೂನ್ 4ರಂದು ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ್ದರು. ಈ ದುರಂತಕ್ಕೆ ಹೊಣೆಮಾಡಿ ಸರ್ಕಾರ ಅಮಾನತು ಮಾಡಿದ ಪೊಲೀಸ್ ಅಧಿಕಾರಿಗಳಲ್ಲಿ ವಿಕಾಸ್ ಕುಮಾರ್ ಕೂಡ ಒಬ್ಬರು.

ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಭದ್ರತಾ ಉಸ್ತುವಾರಿ ವಹಿಸಿದ್ದ ವಿಕಾಸ್ ಕುಮಾರ್ ಅವರನ್ನು ಬೇಜವ್ದಾರಿಯ ಕಾರಣ ನೀಡಿ ಸರ್ಕಾರ ಅಮಾನತು ಮಾಡಿತ್ತು.

ಇದನ್ನು ಪ್ರಶ್ನಿಸಿ ವಿಕಾಸ್ ಕುಮಾರ್ ಸಿಎಟಿ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಸರ್ಕಾರದ ಆದೇಶ ರದ್ದುಗೊಳಿಸಿ ಆದೇಶಿಸಿದೆ. ಅಲ್ಲದೆ, ಅವರನ್ನು ಮೂಲಸ್ಥಾನಕ್ಕೆ ಮರು ನೇಮಿಸಲು ಮತ್ತು ಹಿಂದಿನ ಎಲ್ಲಾ ಭತ್ಯೆ, ಸೌಲಭ್ಯ ಒದಗಿಸಲು ಸೂಚಿಸಿದೆ.

Courtesy : barandbench.com

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಐಪಿಎಸ್‌ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಗೊಳಿಸಿದ ಸಿಎಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...