Homeಕರ್ನಾಟಕಬೆಳಗಾವಿ: ಮಹಿಳೆ ಮೇಲೆ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

ಬೆಳಗಾವಿ: ಮಹಿಳೆ ಮೇಲೆ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.

ಈ ಕುರಿತು ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ಸಿಐಡಿ ಡಿಜಿಪಿಗೆ ಪತ್ರ ಬರೆದಿದ್ದಾರೆ. ಸಿಐಡಿ ಅಧಿಕಾರಿಗಳು ತನಿಖೆ ಕೈಗೊಂಡಾಗ ಬೆಳಗಾವಿ ನಗರ ಪೊಲೀಸ್ ಆಯುಕ್ತರು ಅವರಿಗೆ ಪ್ರಕರಣದ ಕುರಿತು ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ನಿನ್ನೆ(ಡಿ.17) ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳಗಾವಿಯಲ್ಲಿ ಮಹಿಳೆ ಮೇಲಾದ ದೌರ್ಜನ್ಯ ಪ್ರಕರಣವನ್ನು ಯಾವ ತನಿಖೆಗೆ ಬೇಕಾದರೂ ವಹಿಸಲು ಸಿದ್ದ. ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನಮ್ಮ ಪೊಲೀಸರು ತನಿಖೆ ನಡೆಸಲು ಸಮರ್ಥರಿದ್ದಾರೆ. ಹಾಗಾಗಿ, ಬೇರೆ ಪ್ರಶ್ನೆ ಉದ್ಬವಿಸದು ಎಂದಿದ್ದರು. ಆದರೆ. ಸಂಜೆಯ ವೇಳೆಗೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದೆ ಎಂದು ತಿಳಿದು ಬಂದಿದೆ.

ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ ದೇಶದಾದ್ಯಂತ ಸುದ್ದಿಯಾಗಿದೆ. ಕರ್ನಾಟಕ ಹೈಕೋರ್ಟ್‌ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ರಾಷ್ಟ್ರೀಯ ಮಹಿಳಾ ಆಯೋಗ, ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಹಾಗೂ ಬಿಜೆಪಿಯ ಸತ್ಯಶೋಧನಾ ತಂಡದ ಸದಸ್ಯರು ಶನಿವಾರ ವಂಟಮೂರಿ ಗ್ರಾಮಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸಿಬ್ಬಂದಿ ಭಾನುವಾರ ಬೆಳಿಗ್ಗೆ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಆಯೋಗದ ಅಧಿಕಾರಿಗಳು ಡಿ.18 ಅಥವಾ 19ರಂದು ಬೆಳಗಾವಿಗೆ ಭೇಟಿ ನೀಡುವ ಸಾಧ್ಯತೆ ಇದೆ.

ಬಿಜೆಪಿಯಿಂದ ಸತ್ಯಶೋಧನೆ:

ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ತಮ್ಮ ಪಕ್ಷದಿಂದ ಪ್ರಕರಣದ ಸತ್ಯಶೋಧನೆಗೆ ತಂಡ ರಚಿಸಿದ್ದರು. ಈ ತಂಡ ಶನಿವಾರ ವಂಟಮೂರಿ ಗ್ರಾಮಕ್ಕೆ ಭೇಟಿ ನೀಡಿ ಘಟನೆಯ ಕುರಿತು ಮಾಹಿತಿ ಕಲೆ ಹಾಕಿದೆ.

ಸಂತ್ರಸ್ತ ಮಹಿಳೆ ಚಿಕಿತ್ಸೆ ಪಡೆಯುತ್ತಿರುವ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಆಕೆಯ ಆರೋಗ್ಯ ವಿಚಾರಿಸಿದೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸತ್ಯಶೋಧನಾ ಸಮಿತಿ ಸದಸ್ಯೆ, ಬಿಜೆಪಿ ಸಂಸದೆ ಸುನಿತಾ ದುಗ್ಗಲ್, ಘಟನಾ ಸ್ಥಳಕ್ಕೆ ಭೇಟಿ ನೀಡದ, ಸಂಸತ್ರಸ್ತ ಮಹಿಳೆಗೆ ಸಾಂತ್ವನ ಹೇಳದ ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಯ ಕ್ಷಮೆ ಕೇಳಬೇಕು. ನೊಂದ ಮಹಿಳೆಗೆ ಸರ್ಕಾರದ ದುಡ್ಡು ಬೇಡ, ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ಕೊಡಿಸಲಿ ಎಂದು ಹೇಳಿದ್ದರು.

ಘಟನೆಯನ್ನು ರಾಜ್ಯ ಸರ್ಕಾರದ ವಿರುದ್ದ ರಾಜಕೀಯ ಅಸ್ತ್ರವಾಗಿ ಬಳಸಿಕೊಂಡಿರುವ ಬಿಜೆಪಿ, ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಕೆಲವೆಡೆ ಈಗಾಗಲೇ ಪ್ರತಿಭಟನೆಗಳು ನಡೆದಿವೆ.

ಕೋರ್ಟ್‌ ಆದೇಶ ಉಲ್ಲಂಘಿಸಿದ ಬಿಜೆಪಿ: ಸಿಎಂ ಸಿದ್ದರಾಮಯ್ಯ

ಸಂತ್ರಸ್ತ ಮಹಿಳೆಯನ್ನು ಭೇಟಿಯಾಗದಂತೆ ಹೈಕೋರ್ಟ್‌ ಆದೇಶವಿದ್ದರೂ, ಬಿಜೆಪಿಯವರು ಸತ್ಯಶೋಧನೆಯ ಹೆಸರಿನಲ್ಲಿ ಮಹಿಳೆಯನ್ನು ಭೇಟಿಯಾಗಿ ಕೋರ್ಟ್‌ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಮಹಿಳೆಯು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸಂದರ್ಶಕರ ಭೇಟಿಯು ಆಕೆಯ ಆರೋಗ್ಯ ಹಾಗೂ ಚಿಕಿತ್ಸೆಯ ಮೇಲೆ ಪರಿಣಾಮ ಬೀರಲಿದೆ. ಹಾಗಾಗಿ, ಮಹಿಳೆಯ ಹಿತದೃಷ್ಟಿಯಿಂದ ಸಂದರ್ಶಕರ ಭೇಟಿಯನ್ನು ನಿರ್ಬಂಧಿಸುವುದು ಅಗತ್ಯ ಎಂದು ತಾನು ಭಾವಿಸುವುದಾಗಿ ಹೈಕೋರ್ಟ್ ಹೇಳಿದೆ.

ಯಾವುದೇ ವ್ಯಕ್ತಿ, ಸಮೂಹ, ಗುಂಪು, ಸಂಘಟನೆ, ರಾಜಕೀಯ ಪಕ್ಷಗಳು ಹಾಗೂ ಇನ್ನಿತರರು ಮಹಿಳೆಯ ಚಿಕಿತ್ಸೆಯ ಹೊಣೆ ಹೊತ್ತಿರುವ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯವರ ಪೂರ್ವ ಲಿಖಿತ ಅನುಮತಿ ಇಲ್ಲದೇ ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಬಾರದು ಎಂದು ಹೈಕೋರ್ಟ್ ಆದೇಶಿಸಿತ್ತು.

ಹೀಗಿದ್ದರೂ ಒಂದು‌ ಅಮಾನುಷ ಘಟನೆಯನ್ನು ರಾಜಕೀಯ ಲಾಭಕ್ಕೆ ಬಳಸುವ ದುರ್ಬುದ್ಧಿ ತೋರಿರುವ ಬಿಜೆಪಿ ನಾಯಕರು ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ, ನಿರ್ದೇಶನಗಳನ್ನು ಗಾಳಿಗೆ ತೂರಿ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ. ಸಂತ್ರಸ್ತೆಯ ಸೂಕ್ಷ್ಮ ಮಾನಸಿಕ ಸ್ಥಿತಿಯ ಬಗ್ಗೆ ಎಳ್ಳಷ್ಟೂ ಗೌರವವಿಲ್ಲದ ಸಂವೇದನಾಶೂನ್ಯ ಬಿಜೆಪಿ ನಾಯಕರು ಹಾಗೂ ಅವರ ಬೆನ್ನಿಗೆ ನಿಂತು ಚಿತಾವಣೆ ನಡೆಸುತ್ತಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ನಡೆ-ನುಡಿಯನ್ನು ನಾಗರಿಕ‌ ಸಮಾಜ ಖಂಡಿಸಬೇಕಾಗಿದೆ ಎಂದಿದ್ದಾರೆ.

ಬಿಜೆಪಿಯ ಸತ್ಯಶೋಧನಾ ತಂಡ ಮಣಿಪುರಕ್ಕೆ ಯಾಕೆ ಹೋಗಿಲ್ಲ?

ಬೆಳಗಾವಿಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಸತ್ಯಶೋಧನಾ ತಂಡ ರಚಿಸಿದ ಬೆನ್ನಲ್ಲೇ ಕಾಂಗ್ರೆಸ್ ಹಲವು ಪ್ರಶ್ನೆಗಳನ್ನು ಮುಂದಿಟ್ಟಿತ್ತು. ಬೆಳಗಾವಿಯ ಮಹಿಳೆಯ ಬೆತ್ತಲೆ ಪ್ರಕರಣದಲ್ಲಿ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಂಡಿದೆ. ಸಂತ್ರಸ್ತ ಮಹಿಳೆಗೆ 5 ಲಕ್ಷ ರೂಪಾಯಿ ಪರಿಹಾರ ನೀಡಿದೆ. ಸಂತ್ರಸ್ತೆಯ ರಕ್ಷಣೆಗೆ ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಬದ್ದವಾಗಿದೆ. ಜೆಪಿ ನಡ್ಡಾ ಅವರೇ, ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆ ಮಾಡಿದಾಗ ನಿಮ್ಮ ಸತ್ಯಶೋಧನೆ ತಂಡ ಹೋಗಲಿಲ್ಲವೇಕೆ? ಉತ್ತರ ಪ್ರದೇಶದ ದಲಿತರ ಮೇಲೆ ಮೂತ್ರ ವಿಸರ್ಜನೆ ಮಾಡಿದಾಗ ಸತ್ಯಶೋಧನೆ ಮಾಡಲಿಲ್ಲವೇಕೆ? ಮಧ್ಯಪ್ರದೇಶದಲ್ಲಿ ಬಾಲಕಿಯನ್ನು ಅತ್ಯಾಚಾರವೆಸಗಿ ಬೆತ್ತಲೆ ಮಾಡಿ ರಸ್ತೆಗೆ ಅಟ್ಟಿದಾಗ ಹೋಗಲಿಲ್ಲವೇಕೆ? ಹತ್ರಾಸ್ ನಲ್ಲಿ ಬಿಜೆಪಿ ಶಾಸಕನೇ ಅತ್ಯಾಚಾರ ಮಾಡಿದಾಗ, ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾಗ ನಿಮಗೆ ಮಹಿಳೆಯರ ಬಗ್ಗೆ ಕಾಳಜಿ ಹುಟ್ಟಲಿಲ್ಲ ಏಕೆ? ಅಲ್ಲೆಲ್ಲಾ ಇದ್ದಿದ್ದು ನಿಮ್ಮದೇ ಸರ್ಕಾರ ಎಂಬ ಕಾರಣಕ್ಕೆ, ರಾಜಕೀಯ ಮಾಡಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಸತ್ಯಶೋಧನೆ ಮಾಡುವ ಮನಸಾಗಲಿಲ್ಲವೇ? ಸಂಸತ್ ದಾಳಿ ಪ್ರಕರಣದಿಂದ ಪ್ರತಾಪ್ ಸಿಂಹನನ್ನು ರಕ್ಷಿಸಲು ಈಗ ಸದಾರಮೆ ನಾಟಕ ಶುರು ಮಾಡಿದ ಬಿಜೆಪಿಗೆ ನೈತಿಕತೆ ಎಂಬ ಪದದ ಅರ್ಥವೇ ಗೊತ್ತಿಲ್ಲ ಎಂದು ಎಕ್ಸ್‌ನಲ್ಲಿ ಹೇಳಿತ್ತು.

ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳೇನು?

ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶಿಸಿದೆ

ಘಟನೆ ನಡೆದ ಮರು ದಿನವೇ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಹಿಳೆಯ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಗೆ ತೆರಳಿ ಸಂತ್ರಸ್ತೆಗೆ ಧೈರ್ಯ ತುಂಬಿದ್ದಾರೆ.

ಪ್ರಕರಣ ಸಂಬಂಧ ಕಾಕತಿ ಪೊಲೀಸರು ಶನಿವಾರದವರೆಗೆ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರಂಭದಲ್ಲಿ ಬಂಧಿತರಾದ ಯುವತಿಯ ತಂದೆ, ತಾಯಿ, ಅಜ್ಜಿ ಮತ್ತು ಸಂಬಂಧಿಕರನ್ನು ಡಿ.21ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ದೌರ್ಜ್ಯಕ್ಕೊಳಗಾದ ಮಹಿಳೆಗೆ 2.03 ಎಕರೆ ಜಮೀನು ಮಂಜೂರು ಮಾಡಿ ರಾಜ್ಯ ಸರ್ಕಾರದ ಆದೇಶಿಸಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಜಮೀನು ಮಂಜೂರಾತಿ ಜೊತೆಗೆ ಮಹಿಳೆಗೆ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಧನ ಘೋಷಿಸಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ:

ಬೆಳಗಾವಿ ಹೊರ ವಲಯದ ವಂಟಮೂರಿ ಗ್ರಾಮದ ನಾಯಕ್‌ ಸಮುದಾಯಕ್ಕೆ ಸೇರಿದ ದುಂಡಪ್ಪ (24) ಮತ್ತು ಪ್ರಿಯಾಂಕಾ (18)ಪರಸ್ಪರ ಪ್ರೀತಿಸುತಿದ್ದರು. ಡಿಸೆಂಬರ್ 11ರಂದು ಭಾನುವಾರ ರಾತ್ರಿ ಇಬ್ಬರು ಮನೆ ಬಿಟ್ಟು ಓಡಿ ಹೋಗಿದ್ದಾರೆ. ಇದರಿಂದ ಕೋಪಗೊಂಡ ಯುವತಿಯ ಸಂಬಂಧಿಕರು, ಯುವಕನ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಯುವಕನ ತಾಯಿ ಮೇಲೆ ಹಲ್ಲೆ ನಡೆಸಿ, ಆಕೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಹಲ್ಲೆಗೊಳಗಾದ ಮಹಿಳೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಕರಣ: ವಸತಿ ಶಾಲೆಯ ಪ್ರಾಂಶುಪಾಲರ ಸಹಿತ ಮೂವರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...