Homeಕರ್ನಾಟಕ'ನೈಸ್ ಯೋಜನೆ' ವಶಕ್ಕೆ ಪಡೆಯಿರಿ; ರಾಜ್ಯ ಸರ್ಕಾರಕ್ಕೆ ಮಾಜಿ ಪಿಎಂ ಆಗ್ರಹ

‘ನೈಸ್ ಯೋಜನೆ’ ವಶಕ್ಕೆ ಪಡೆಯಿರಿ; ರಾಜ್ಯ ಸರ್ಕಾರಕ್ಕೆ ಮಾಜಿ ಪಿಎಂ ಆಗ್ರಹ

- Advertisement -
- Advertisement -

ನೈಸ್ ಯೋಜನೆಯನ್ನು (ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸ್) ರಾಜ್ಯ ಸರ್ಕಾರ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ‘ಆ ಕಂಪನಿ ವಶದಲ್ಲಿರುವ 13404 ಎಕರೆಯಷ್ಟು ರೈತರ ಭೂಮಿಯನ್ನು ಸರ್ಕಾರ ಮರು ವಶಪಡಿಸಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಗ್ಗೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರೂ ಅವರು ಈವರೆಗೆ ಯಾವುದೇ ಕ್ರಮ ವಹಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಸಿದ್ದರಾಮಯ್ಯ ಬಡವರ ಪರ ಮಾತನಾಡುತ್ತಾರೆ. ಆ ಯೋಜನೆಯಲ್ಲಿ ಇಷ್ಟೊಂದು ಅಕ್ರಮ ಆಗಿದ್ದರೂ, ಬಡವರ ಭೂಮಿ ಲೂಟಿ ಹೊಡೆಯಲಾಗಿದ್ದರೂ ಏನು ಕ್ರಮ ತೆಗೆದುಕೊಂಡಿಲ್ಲ. ಬಡವರ ಪರ ಮಾತಾಡುವ ಸಿಎಂ ಯಾಕೆ ಕ್ರಮ ತೆಗೆದುಕೊಂಡಿಲ್ಲ’ ಎಂದು ಪ್ರಶ್ನಿಸಿದರು.

‘ಸಿದ್ದರಾಮಯ್ಯ ಅವರು ಎಷ್ಟು ವರ್ಷ ಆಳಿದರೂ ಈ ಕಪ್ಪುಚುಕ್ಕೆಯಿಂದ ಹೊರೆಗೆ ಬರಲು ಸಾಧ್ಯವಿಲ್ಲ. ಇದರ ವಿರುದ್ದ ಅವರು ಕ್ರಮ ತೆಗೆದುಕೊಳ್ಳದೇ ಹೋದರೆ ಅವರ ರಾಜಕೀಯ ಜೀವನಕ್ಕೆ ಇದೇ ಕಪ್ಪುಚುಕ್ಕೆಯಾಗಿ ಉಳಿದು ಹೋಗುತ್ತದೆ’ ಎಂದರು.

‘ನೈಸ್ ರಸ್ತೆ ಯೋಜನೆ ವಿಷಯ ಎಲ್ಲರಿಗೂ ಗೊತ್ತಿದೆ. ಅದರಲ್ಲಿ ಏನೇನು ನಡೆದಿದೆ ಎನ್ನುವುದೂ ತಿಳಿದಿದೆ. ಬಡವರಿಗೆ ಇದರಿಂದ ಅನ್ಯಾಯ ಆಗಿದೆ. ನಮ್ಮ ಪಕ್ಷ ಇದರ ವಿರುದ್ದ ದನಿ ಎತ್ತಿದೆ. ವಿಧಾನಸಭೆಯಲ್ಲೂ ಈ ಬಗ್ಗೆ ಸುದೀರ್ಘ ಚರ್ಚೆ ಆಗಿದೆ. ವಿಧಾನಸಭೆಯಲ್ಲಿ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಸದನ ಸಮಿತಿ ನೇಮಕ ಮಾಡಲಾಗಿತ್ತು. ಆ ಸದನ ಸಮಿತಿ ವರದಿ ಕೊಟ್ಟಿದೆ. ಎಷ್ಟು ಅಕ್ರಮ ಮಾಡಿದೆ, ಈ ಯೋಜನೆಯನ್ನು ಸರ್ಕಾರ ವಶಪಡಿಸಿಕೊಳ್ಳಬೇಕು ಎಂದು ವರದಿ ಕೊಟ್ಟಿದೆ. ಆದರೆ, ಸರ್ಕಾರ ಅಂತಿಮ ನಿರ್ಧಾರ ಮಾಡಿಲ್ಲ. ಇದಕ್ಕೆ ಕಾರಣ ಗೊತ್ತಿಲ್ಲ’ ಎಂದರು.

2023 ಅಕ್ಟೋಬರ್ 19 ರಂದು ನಾನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೆ. ನೈಸ್ ವಿಚಾರವಾಗಿ ಕ್ರಮಕ್ಕೆ ಆಗ್ರಹಿಸಿದ್ದೆ. ಈ ಬಗ್ಗೆ ಖುದ್ದು ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೇನೆ ಎಂದು ಮಾಹಿತಿ ನೀಡಿದ ಮಾಜಿ ಪ್ರಧಾನಿಗಳು, ತಾವು ಬರೆದಿದ್ದ ಪತ್ರವನ್ನು ಮಾಧ್ಯಮಗೋಷ್ಟಿಯಲ್ಲಿ ಬಿಡುಗಡೆ ಮಾಡಿದರು.

‘13404 ಎಕರೆಯಷ್ಟು ರೈತರ ಭೂಮಿಯನ್ನು ನೈಸ್ ವಶಪಡಿಸಿಕೊಂಡಿದೆ. ಅದನ್ನು ಸರ್ಕಾರ ಮರು ವಶಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದೆ. ಈ ಯೋಜನೆಯ ಮೌಲ್ಯ 7 ಸಾವಿರ ಕೋಟಿ ಎಂದು ಸದನ ಸಮಿತಿಯೇ ವರದಿ ಕೊಟ್ಟಿದೆ; ಅಧಿಕಾರಿಗಳೇ ಈ ವರದಿ ಕೊಟ್ಟಿದ್ದಾರೆ. ಹಿಂದೆ ಸೋನಿಯಾ ಗಾಂಧಿ ಅವರ ಬಳಿಯು ಈ ಯೋಜನೆಯ ಅಕ್ರಮಗಳ ಚರ್ಚೆ ಆಗಿದೆ. ಧರ್ಮಸಿಂಗ್ ಅವರ ಕಾಲದಲ್ಲಿಯೂ ಚರ್ಚೆ ಆಗಿತ್ತು. ಆಗ ಸೋನಿಯಾಗಾಂಧಿ ಅವರು ಧರ್ಮಸಿಂಗ್ ಅವರಿಗೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದರು’ ಎಂದು ಮಾಜಿ ಪ್ರಧಾನಿಗಳು ಹೇಳಿದರು.

‘ನಾನು ಜೀವನದಲ್ಲಿ ಒಂದೇ ಒಂದು ತಪ್ಪು ಮಾಡಿದೆ. ಒಳ್ಳೆಯ ರಸ್ತೆ ಆಗುತ್ತದೆ ಎಂಬ ಮಹಾತ್ವಕಾಂಕ್ಷೆಯಿಂದ ಮಾಡಿದೆ. ಮೈಸೂರಿಗೆ ಒಂದು ಗಂಟೆಯಲ್ಲಿ ಹೋಗಬಹುದು ಎಂಧೂ ಇದನ್ನು ಮಾಡಿದೆ. ಆದರೆ, ದೊಡ್ಡ ಪೆಟ್ಟು ಕೊಟ್ಟರು ಮಹಾನುಭಾವ ಸಿದ್ದರಾಮಯ್ಯನವರು ಇದನ್ನು ಸರಿ ಮಾಡಲಿ. ನಮ್ಮ ಪಕ್ಷ ನೈಸ್ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ನಾನು ನಮ್ಮ ಪಕ್ಷ, ರೈತರು, ಬಡವರ ಪರ ಹೋರಾಟ ಮಾಡುತ್ತೇವೆ’ ಎಂದು ಹೇಳಿದರು.

ದನ್ನೂ ಓದಿ; ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...