Homeಕರ್ನಾಟಕ'ನೈಸ್ ಯೋಜನೆ' ವಶಕ್ಕೆ ಪಡೆಯಿರಿ; ರಾಜ್ಯ ಸರ್ಕಾರಕ್ಕೆ ಮಾಜಿ ಪಿಎಂ ಆಗ್ರಹ

‘ನೈಸ್ ಯೋಜನೆ’ ವಶಕ್ಕೆ ಪಡೆಯಿರಿ; ರಾಜ್ಯ ಸರ್ಕಾರಕ್ಕೆ ಮಾಜಿ ಪಿಎಂ ಆಗ್ರಹ

- Advertisement -
- Advertisement -

ನೈಸ್ ಯೋಜನೆಯನ್ನು (ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸ್) ರಾಜ್ಯ ಸರ್ಕಾರ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ‘ಆ ಕಂಪನಿ ವಶದಲ್ಲಿರುವ 13404 ಎಕರೆಯಷ್ಟು ರೈತರ ಭೂಮಿಯನ್ನು ಸರ್ಕಾರ ಮರು ವಶಪಡಿಸಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಗ್ಗೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರೂ ಅವರು ಈವರೆಗೆ ಯಾವುದೇ ಕ್ರಮ ವಹಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಸಿದ್ದರಾಮಯ್ಯ ಬಡವರ ಪರ ಮಾತನಾಡುತ್ತಾರೆ. ಆ ಯೋಜನೆಯಲ್ಲಿ ಇಷ್ಟೊಂದು ಅಕ್ರಮ ಆಗಿದ್ದರೂ, ಬಡವರ ಭೂಮಿ ಲೂಟಿ ಹೊಡೆಯಲಾಗಿದ್ದರೂ ಏನು ಕ್ರಮ ತೆಗೆದುಕೊಂಡಿಲ್ಲ. ಬಡವರ ಪರ ಮಾತಾಡುವ ಸಿಎಂ ಯಾಕೆ ಕ್ರಮ ತೆಗೆದುಕೊಂಡಿಲ್ಲ’ ಎಂದು ಪ್ರಶ್ನಿಸಿದರು.

‘ಸಿದ್ದರಾಮಯ್ಯ ಅವರು ಎಷ್ಟು ವರ್ಷ ಆಳಿದರೂ ಈ ಕಪ್ಪುಚುಕ್ಕೆಯಿಂದ ಹೊರೆಗೆ ಬರಲು ಸಾಧ್ಯವಿಲ್ಲ. ಇದರ ವಿರುದ್ದ ಅವರು ಕ್ರಮ ತೆಗೆದುಕೊಳ್ಳದೇ ಹೋದರೆ ಅವರ ರಾಜಕೀಯ ಜೀವನಕ್ಕೆ ಇದೇ ಕಪ್ಪುಚುಕ್ಕೆಯಾಗಿ ಉಳಿದು ಹೋಗುತ್ತದೆ’ ಎಂದರು.

‘ನೈಸ್ ರಸ್ತೆ ಯೋಜನೆ ವಿಷಯ ಎಲ್ಲರಿಗೂ ಗೊತ್ತಿದೆ. ಅದರಲ್ಲಿ ಏನೇನು ನಡೆದಿದೆ ಎನ್ನುವುದೂ ತಿಳಿದಿದೆ. ಬಡವರಿಗೆ ಇದರಿಂದ ಅನ್ಯಾಯ ಆಗಿದೆ. ನಮ್ಮ ಪಕ್ಷ ಇದರ ವಿರುದ್ದ ದನಿ ಎತ್ತಿದೆ. ವಿಧಾನಸಭೆಯಲ್ಲೂ ಈ ಬಗ್ಗೆ ಸುದೀರ್ಘ ಚರ್ಚೆ ಆಗಿದೆ. ವಿಧಾನಸಭೆಯಲ್ಲಿ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಸದನ ಸಮಿತಿ ನೇಮಕ ಮಾಡಲಾಗಿತ್ತು. ಆ ಸದನ ಸಮಿತಿ ವರದಿ ಕೊಟ್ಟಿದೆ. ಎಷ್ಟು ಅಕ್ರಮ ಮಾಡಿದೆ, ಈ ಯೋಜನೆಯನ್ನು ಸರ್ಕಾರ ವಶಪಡಿಸಿಕೊಳ್ಳಬೇಕು ಎಂದು ವರದಿ ಕೊಟ್ಟಿದೆ. ಆದರೆ, ಸರ್ಕಾರ ಅಂತಿಮ ನಿರ್ಧಾರ ಮಾಡಿಲ್ಲ. ಇದಕ್ಕೆ ಕಾರಣ ಗೊತ್ತಿಲ್ಲ’ ಎಂದರು.

2023 ಅಕ್ಟೋಬರ್ 19 ರಂದು ನಾನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೆ. ನೈಸ್ ವಿಚಾರವಾಗಿ ಕ್ರಮಕ್ಕೆ ಆಗ್ರಹಿಸಿದ್ದೆ. ಈ ಬಗ್ಗೆ ಖುದ್ದು ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೇನೆ ಎಂದು ಮಾಹಿತಿ ನೀಡಿದ ಮಾಜಿ ಪ್ರಧಾನಿಗಳು, ತಾವು ಬರೆದಿದ್ದ ಪತ್ರವನ್ನು ಮಾಧ್ಯಮಗೋಷ್ಟಿಯಲ್ಲಿ ಬಿಡುಗಡೆ ಮಾಡಿದರು.

‘13404 ಎಕರೆಯಷ್ಟು ರೈತರ ಭೂಮಿಯನ್ನು ನೈಸ್ ವಶಪಡಿಸಿಕೊಂಡಿದೆ. ಅದನ್ನು ಸರ್ಕಾರ ಮರು ವಶಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದೆ. ಈ ಯೋಜನೆಯ ಮೌಲ್ಯ 7 ಸಾವಿರ ಕೋಟಿ ಎಂದು ಸದನ ಸಮಿತಿಯೇ ವರದಿ ಕೊಟ್ಟಿದೆ; ಅಧಿಕಾರಿಗಳೇ ಈ ವರದಿ ಕೊಟ್ಟಿದ್ದಾರೆ. ಹಿಂದೆ ಸೋನಿಯಾ ಗಾಂಧಿ ಅವರ ಬಳಿಯು ಈ ಯೋಜನೆಯ ಅಕ್ರಮಗಳ ಚರ್ಚೆ ಆಗಿದೆ. ಧರ್ಮಸಿಂಗ್ ಅವರ ಕಾಲದಲ್ಲಿಯೂ ಚರ್ಚೆ ಆಗಿತ್ತು. ಆಗ ಸೋನಿಯಾಗಾಂಧಿ ಅವರು ಧರ್ಮಸಿಂಗ್ ಅವರಿಗೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದರು’ ಎಂದು ಮಾಜಿ ಪ್ರಧಾನಿಗಳು ಹೇಳಿದರು.

‘ನಾನು ಜೀವನದಲ್ಲಿ ಒಂದೇ ಒಂದು ತಪ್ಪು ಮಾಡಿದೆ. ಒಳ್ಳೆಯ ರಸ್ತೆ ಆಗುತ್ತದೆ ಎಂಬ ಮಹಾತ್ವಕಾಂಕ್ಷೆಯಿಂದ ಮಾಡಿದೆ. ಮೈಸೂರಿಗೆ ಒಂದು ಗಂಟೆಯಲ್ಲಿ ಹೋಗಬಹುದು ಎಂಧೂ ಇದನ್ನು ಮಾಡಿದೆ. ಆದರೆ, ದೊಡ್ಡ ಪೆಟ್ಟು ಕೊಟ್ಟರು ಮಹಾನುಭಾವ ಸಿದ್ದರಾಮಯ್ಯನವರು ಇದನ್ನು ಸರಿ ಮಾಡಲಿ. ನಮ್ಮ ಪಕ್ಷ ನೈಸ್ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ನಾನು ನಮ್ಮ ಪಕ್ಷ, ರೈತರು, ಬಡವರ ಪರ ಹೋರಾಟ ಮಾಡುತ್ತೇವೆ’ ಎಂದು ಹೇಳಿದರು.

ದನ್ನೂ ಓದಿ; ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...